MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಜೀವಂತ ಕಾಡಾನೆಯ ದಂತ ಕತ್ತರಿಸಿದ ಕರ್ನಾಟಕ ಅರಣ್ಯ ಇಲಾಖೆ

ಜೀವಂತ ಕಾಡಾನೆಯ ದಂತ ಕತ್ತರಿಸಿದ ಕರ್ನಾಟಕ ಅರಣ್ಯ ಇಲಾಖೆ

ಚಾಮರಾಜನಗರ (ಮೇ 19): ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಜೀವಂತ ಆನೆಯ ದಂತವನ್ನು ಕತ್ತರಿಸುವ ಮೂಲಕ ಮೊದಲ ಬಾರಿಗೆ ಇತಿಹಾಸವನ್ನು ಬರೆದಿದೆ. ಜೀವಂತ ಆನೆಯ ದಂತವನ್ನು ಅರ್ಧ ಭಾಗ ಕತ್ತರಿಸಿ ತೆಗೆಯುವುದಕ್ಕೆ ದಂತಮೋಚನ ಎಂದು ಹೇಳಲಾಗುತ್ತದೆ.

2 Min read
Author : Sathish Kumar KH
| Updated : May 20 2024, 12:34 PM IST
Share this Photo Gallery
  • FB
  • TW
  • Linkdin
  • Whatsapp
17

ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿರುವ ಕಾಡಾನೆಗೆ ಆಪರೇಷನ್ ದಂತಮೋಚನ ಮಾಡಲಾಗಿದೆ. ರಾಜ್ಯ ಅರಣ್ಯ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೀವಂತ ಕಾಡಾನೆಯೊಂದಕ್ಕೆ ದಂತ ಮೋಚನ ಮಾಡಲಾಗಿದೆ. 

27

ಬಂಡೀಪುರ ಅರಣ್ಯದ ಗಡಿಯಲ್ಲಿರುವ ರೈತರ ಜಮೀನುಗಳಿಗೆ ನಿತ್ಯ ಲಗ್ಗೆ ಇಟ್ಟು, ಕೃಷಿ ಬೆಳೆಗಳನ್ನು ತಿಂದು ನಾಶ ಮಾಡುತ್ತಿದ್ದ ಗಂಡು ಕಾಡಾನೆಯ ಉಪಟಳಕ್ಕೆ ರೈತರು ಬೇಸತ್ತಿದ್ದರು.

37

ಬಂಡೀಪುರ ಅರಣ್ಯದ ಗಡಿ ಭಾಗದ ಹಳ್ಳಿಗಳಾದ ಹಂಗಳ, ಕಲೀಗೌಡನಹಳ್ಳಿ, ದೇವರಹಳ್ಳಿ ಮೊದಲಾದ ಗ್ರಾಮಗಳಲ್ಲಿ ಈ ಕಾಡಾನೆಯ ಉಪಟಳ ಮಿತಿ ಮೀರಿದ್ದು, ಆನೆಯನ್ನು ಹಿಡಿಯುವಂತೆ ರೈತರು ಪಟ್ಟು ಹಿಡಿದಿದ್ದರು.

47

ರೈತರ ಬೆಳೆಗಳನ್ನು ತಿನ್ನಲು ಆಗಮಿಸುತ್ತಿದ್ದ ಆನೆಯ ಮೇಲೆ ಕಣ್ಣಿಟ್ಟ ಅರಣ್ಯ ಅಧಿಕಾರಿಗಳು, ಅದನ್ನು ಸೆರೆ ಹಿಡಿದಿದ್ದಾರೆ. ಆದರೆ, ಬಲಿಷ್ಠ ಕಾಡಾನೆ ಆಹಾರಕ್ಕಾಗಿ ಅರಣ್ಯದಿಂದ ಹೊರಬರಲು ಕಾರಣವೇನೆಂದು  ವೈಜ್ಞಾನಿಕ ವಿಶ್ಲೇಷಣೆ  ಮಾಡಿದ್ದಾರೆ.

57

ಆಗ ಗಂಡಾನೆಗೆ ಬಹುದೊಡ್ಡದಾಗಿ ಉದ್ದವಾಗಿ ಅಡ್ಡಾದಿಡ್ಡಿ ಬೆಳೆದುಕೊಂಡಿದ್ದ ಆನೆಯ ದಂತಗಳು ಒಂದಕ್ಕೊಂದು ಕತ್ತರಿಯಂತೆ ಹೆಣೆದುಕೊಂಡಿದ್ದವು. ಇದರಿಂದ ದಂತದ ಒಳಗೆ ಆನೆಯ ಸೊಂಡಿಲು ಸಿಕ್ಕಿಕೊಂಡಿದೆ. ಕಾಡಲ್ಲಿರುವ ಗಿಡ-ಮರಗಳಲ್ಲಿನ ಸೊಪ್ಪು ಹಾಗೂ ಎತ್ತರದಲ್ಲಿರುವ ಬಿದಿರಿನ ಹುಲ್ಲು ಕಿತ್ತುಕೊಂಡು ತಿನ್ನಲು ಸಾಧ್ಯವಾಗದೇ ಬಳಲುತ್ತಿತ್ತು. ಇನ್ನು ಬೇಸಿಗೆ ಹಿನ್ನೆಲೆಯಲ್ಲಿ ನೆಲದಲ್ಲಿ ಬೆಳೆಯುವ ಹುಲ್ಲು ಸಿಗದೇ ಕಾಡಾನೆ ರೈತರ ಜಮೀನುಗಳಿಗೆ ಬಂದು ಬೆಳೆಗಳನ್ನು ತಿಂದು ಹೋಗುತ್ತಿತ್ತು.
 

67

ನೆಲಮಟ್ಟದಲ್ಲಿ ಬೆಳೆದ ಕಬ್ಬು , ಬಾಳೆ ಗಿಡ, ಟೊಮ್ಯಾಟೊ ಮತ್ತಿತರ ತರಕಾರಿ ಬೆಳೆಗಳನ್ನು ಸುಲಭವಾಗಿ ತಿಂದು ಆನೆ ಹಸಿವು ನೀಗಿಸಿಕೊಳ್ಳುತ್ತಿತ್ತು. ಇದನ್ನೇ ನಿತ್ಯ ಅಭ್ಯಾಸ ಮಾಡಿಕೊಂಡಿದ್ದ ಗಂಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ. ನಂತರ, ಕಾಡಾನೆಗೆ ಅಡ್ಡಾದಿಡ್ಡಿ ಬೆಳೆದಿದ್ದ ದಂತಗಳನ್ನು ಕತ್ತರಿಸಿ ಸುಲಭವಾಗಿ ಸೊಂಡಿಲು  ಹೊರಚಾಚಾಲು ಅನುವು ಮಾಡಿಕೊಡಲಾಗಿದೆ. ಈ ಮೂಲಕ ಆನೆಯು ಸೊಂಡಿಲಿನ್ನು ಮೇಲೆತ್ತಿ ಸೊಪ್ಪುಗಳನ್ನು ಕಿತ್ತು ತಿನ್ನುವುದಕ್ಕೆ ಅಭ್ಯಾಸವನ್ನು ಮಾಡಿಸಲಾಗಿದೆ.

77

ಆನೆಯ ದಂತ ಕತ್ತರಿಸಿದ ಬಳಿಕ ಅದನ್ನು ಕಬಿನಿ ಹಿನ್ನೀರಿನ ಗುಂಡ್ರೆ ವಲಯ ಅರಣ್ಯಕ್ಕೆ ಬಿಡುಗಡೆ ಮಾಡಲಾಗಿದೆ. ಇದೀಗ ಕಾಡಿನಲ್ಲಿ  ಆನೆಯು ಸರಾಗವಾಗಿ ಸೊಪ್ಪು ಸೆದೆ ಮೇಯ್ದುಕೊಂಡು ಓಡಾಡಿಕೊಂಡಿದೆ. ಇನ್ನು ಹಲವು ದಿನಗಳ ಕಾಲ ಆನೆಯ ಸಂಚಾರದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ನಿಗಾ ಇಟ್ಟಿದ್ದು, ಆನೆ ನಾಡಿನತ್ತ ಮುಖ ಮಾಡಿಲ್ಲ. ದಂತ ಮೋಚನದಿಂದ ಒಂದೆಡೆ ಕಾಡಾನೆ ದಾಳಿಯಿಂದ ಬೆಳೆಗಳಿಗೆ ರಕ್ಷಣೆ ಸಿಕ್ಕಿದ್ದು, ಕಾಡಾನೆಗಿದ್ದ ದಂತ ಸಮಸ್ಯೆಗೂ ಪರಿಹಾರ ಸಿಕ್ಕಂತಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.

Latest Videos
Recommended Stories
Recommended image1
ಬೈಕ್ ಶೋರೂಮ್‌ಗಳಿಂದ ಮಹಾ ವಂಚನೆ: ಸಬ್ಸಿಡಿ ಸಿಗುತ್ತೆ ಅಂತ ಸಾಲ ಮಾಡಿಸಿ ಬೈಕ್: 3250 ಜನರಿಗೆ 35 ಕೋಟಿ ರೂ ವಂಚನೆ
Recommended image2
ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
Recommended image3
ಹಣ್ಣು ಬದಲು ಬಟ್ಟೆ ಸಂಗ್ರಹಿಸಿದ್ದ ಕೋಲ್ಡ್‌ ಸ್ಟೋರೇಜ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved