MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • Gruhalakshmi Scheme Update: ಗೃಹಲಕ್ಷ್ಮಿಗೆ ಹೊಸ ಅರ್ಜಿ ಸಲ್ಲಿಕೆ ಕೈಬಿಟ್ಟ ಸರ್ಕಾರ, ಕೇವಲ ಮರು ಪರಿಶೀಲನೆ!

Gruhalakshmi Scheme Update: ಗೃಹಲಕ್ಷ್ಮಿಗೆ ಹೊಸ ಅರ್ಜಿ ಸಲ್ಲಿಕೆ ಕೈಬಿಟ್ಟ ಸರ್ಕಾರ, ಕೇವಲ ಮರು ಪರಿಶೀಲನೆ!

ಕರ್ನಾಟಕ ಸರ್ಕಾರವು 'ಗೃಹಲಕ್ಷ್ಮಿ' (Gruhalakhsmi) ಯೋಜನೆಯಲ್ಲಿನ ಆರ್ಥಿಕ ಸೋರಿಕೆ ತಡೆಯಲು ಮುಂದಾಗಿದೆ. ಹೊಸ ಅರ್ಜಿ ಸಲ್ಲಿಕೆಗೆ ಸಾರ್ವಜನಿಕ ವಿರೋಧದ ಹಿನ್ನೆಲೆಯಲ್ಲಿ ಅದನ್ನ ಕೈಬಿಟ್ಟು, ಕಡ್ಡಾಯ ದಾಖಲೆಗಳೊಂದಿಗೆ ಕೇವಲ 'ಮರು ಪರಿಶೀಲನೆ' ನಡೆಸಲು ತೀರ್ಮಾನಿಸಲಾಗಿದೆ.

2 Min read
Author : Sathish Kumar KH
Published : Jun 19 2026, 07:30 PM IST
Share this Photo Gallery
  • FB
  • TW
  • Linkdin
  • Whatsapp
15
ಗೃಹಲಕ್ಷ್ಮಿಗೆ ಹೊಸ ಅರ್ಜಿ ಬೇಕಿಲ್ಲ
Image Credit : Asianet News

ಗೃಹಲಕ್ಷ್ಮಿಗೆ ಹೊಸ ಅರ್ಜಿ ಬೇಕಿಲ್ಲ

ಬೆಂಗಳೂರು (ಜೂ.19): ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾಗಿರುವ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಈಗ ಮಹತ್ವದ ಬದಲಾವಣೆಯಾಗುತ್ತಿದೆ. ಯೋಜನೆಯಲ್ಲಿ ಆಗುತ್ತಿರುವ ಆರ್ಥಿಕ ಸೋರಿಕೆಯನ್ನು ತಡೆಯಲು ಸರ್ಕಾರ ಈಗ ಪಣ ತೊಟ್ಟಿದ್ದು, ಫಲಾನುಭವಿಗಳ ಪಟ್ಟಿಯನ್ನು ಶುದ್ಧೀಕರಿಸಲು ಮುಂದಾಗಿದೆ. ಆದರೆ, ಸಾರ್ವಜನಿಕರ ವಿರೋಧದ ಹಿನ್ನೆಲೆಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ 'ಮರು ಪರಿಶೀಲನೆ' (Re-verification) ನಡೆಸಲು ಸರ್ಕಾರ ತೀರ್ಮಾನಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸತ್ತವರ ಖಾತೆಗೂ ಜಮೆಯಾಗುತ್ತಿದೆ ಹಣ!
Image Credit : stockPhoto

ಸತ್ತವರ ಖಾತೆಗೂ ಜಮೆಯಾಗುತ್ತಿದೆ ಹಣ!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಪತ್ರ ಬರೆದು, ಮಾರ್ಚ್ 2026ರ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಮರಣ ಹೊಂದಿರುವ ಸುಮಾರು 1,95,224 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇನ್ನೂ ತಲಾ 2,000 ರೂ.ಗಳಂತೆ ಹಣ ಜಮೆಯಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 39.05 ಕೋಟಿ ರೂ. ಹಾಗೂ ವಾರ್ಷಿಕವಾಗಿ 468.54 ಕೋಟಿ ರೂ.ಗಳಷ್ಟು ಬೃಹತ್ ಮೊತ್ತ ಪೋಲಾಗುತ್ತಿದೆ. ಈ ಆರ್ಥಿಕ ನಷ್ಟವನ್ನು ತಡೆಯಲು ಕೂಡಲೇ ಅನರ್ಹರನ್ನು ಪಟ್ಟಿಯಿಂದ ತೆಗೆದುಹಾಕಬೇಕಿದೆ ಎಂದು ಹೇಳಿದ್ದರು.

Related Articles

Related image1
ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯಲ್ಲಿ ಬದಲಾವಣೆ? ಸಿಎಂಗೆ ಪತ್ರ ಬರೆದ ಗ್ಯಾರಂಟಿ ಉಪಾಧ್ಯಕ್ಷ ಗೂಳಿಗೌಡ!
Related image2
ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ; ಫಲಾನುಭವಿಗಳು ನಾಡಕಚೇರಿಗೆ ಅಲೆದಾಡಬೇಡಿ!
35
ಮರು ಪರಿಶೀಲನಾ ಅರ್ಜಿ ಸಲ್ಲಿಕೆ
Image Credit : Asianet News

ಮರು ಪರಿಶೀಲನಾ ಅರ್ಜಿ ಸಲ್ಲಿಕೆ

ಇದನ್ನು ಗಂಭೀರವಾಗಿ ಪರಿಗಣಿಸಿ ನೂತನ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಪೋಲಾಗುತ್ತಿರುವ ಹಣವನ್ನು ಉಳಿಸಲು, ಗೃಹಲಕ್ಷ್ಮಿ ಯೋಜನೆಯ ಎಲ್ಲ ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಯೋಚಿಸಿತ್ತು. ಅದರಲ್ಲಿ ಅರ್ಹವಲ್ಲ ಎಲ್ಲರನ್ನೂ ಯೋಜನೆಯಿಂದ ಕೈಬಿಡಲು ತೀರ್ಮಾನಿಸಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ, ಈಗಿರುವ ಹೊಸ ಅರ್ಜಿಯನ್ನು ಪಡೆಯದೇ ಮರು ಪರಿಶೀಲನೆ ಅರ್ಜಿಯನ್ನು ಪಡೆಯುವುದಕ್ಕೆ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮರು ಪರಿಶೀಲನಾ ಅರ್ಜಿಗಳನ್ನು ಪಡೆಯಲು ಅಧಿಕಾರಿಗಳು ಮಾದರಿ ಸಿದ್ಧಪಡಿಸಿದ್ದಾರೆ. ಈ ಬಾರಿ ಫಲಾನುಭವಿಗಳು ಈ ಕೆಳಗಿನ ದಾಖಲೆಗಳನ್ನು ನೀಡುವುದು ಕಡ್ಡಾಯವಾಗಲಿದೆ.

45
ಮರು ಪರಿಶೀಲನೆಗೆ ಬೇಕಿರುವ ದಾಖಲೆಗಳೇನು?
Image Credit : our own

ಮರು ಪರಿಶೀಲನೆಗೆ ಬೇಕಿರುವ ದಾಖಲೆಗಳೇನು?

ಆಧಾರ್ ಕಾರ್ಡ್

ಮತದಾರರ ಗುರುತಿನ ಚೀಟಿ (Voter ID)

ಪಡಿತರ ಚೀಟಿ (Ration Card)

ಆಧಾರ್ ಜೊತೆಗೆ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಲಿಂಕ್ ಮಾಡುವ ಮೂಲಕ ನಕಲಿ ಅಥವಾ ಮೃತ ಫಲಾನುಭವಿಗಳನ್ನು ಸುಲಭವಾಗಿ ಗುರುತಿಸಲು ಸರ್ಕಾರ ಯೋಜಿಸಿದೆ. ಈಗಾಗಲೇ ಸಿದ್ಧಪಡಿಸಲಾದ ಮರುಪರಿಶೀಲನಾ ಅರ್ಜಿಯ ಮಾದರಿಯನ್ನು ಇಂದು ನಡೆದ ಸಭೆಯಲ್ಲಿ ಸಿಎಂ ಹಾಗೂ ಸಚಿವರಿಗೆ ತೋರಿಸಲಾಗಿದ್ದು, ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

55
ಪಂಚ ಗ್ಯಾರಂಟಿಗಳ ಮೇಲೆ ಸರ್ಕಾರದ ಖರ್ಚು ಎಷ್ಟು?
Image Credit : our own

ಪಂಚ ಗ್ಯಾರಂಟಿಗಳ ಮೇಲೆ ಸರ್ಕಾರದ ಖರ್ಚು ಎಷ್ಟು?

ರಾಜ್ಯ ಸರ್ಕಾರವು ಈವರೆಗೆ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಒಟ್ಟು 1,38,270.21 ಕೋಟಿ ರೂಪಾಯಿಗಳನ್ನು ವ್ಯಯಿಸಿದೆ. ಅವುಗಳ ವಿವರ ಹೀಗಿದೆ:

ಗೃಹಲಕ್ಷ್ಮಿ: 1.24 ಕೋಟಿ ಮಹಿಳೆಯರಿಗೆ ಒಟ್ಟು 72,253 ಕೋಟಿ ರೂ. ಸಂದಾಯವಾಗಿದೆ.

ಗೃಹಜ್ಯೋತಿ: 1.64 ಕೋಟಿ ಜನರಿಗೆ 26,115 ಕೋಟಿ ರೂ. ಮೌಲ್ಯದ ಉಚಿತ ವಿದ್ಯುತ್ ನೀಡಲಾಗಿದೆ.

ಅನ್ನಭಾಗ್ಯ: ಈವರೆಗೆ ಒಟ್ಟು 18,897 ಕೋಟಿ ರೂ. ಪಾವತಿಸಲಾಗಿದೆ.

ಶಕ್ತಿ ಯೋಜನೆ: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ 19,890 ಕೋಟಿ ರೂ. ವೆಚ್ಚವಾಗಿದೆ.

ಯುವನಿಧಿ: ನಿರುದ್ಯೋಗಿಗಳಿಗೆ 1,115 ಕೋಟಿ ರೂ. ಸಂದಾಯವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಗೃಹಲಕ್ಷ್ಮಿ ಯೋಜನೆ
ಕರ್ನಾಟಕ ಸುದ್ದಿ
ಗ್ಯಾರಂಟಿ ಯೋಜನೆಗಳು
ಡಿ.ಕೆ. ಶಿವಕುಮಾರ್

Latest Videos
Recommended Stories
Recommended image1
ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ, ವಿಧಾನಸಭೆಯಲ್ಲಿ ಸಿಎಂ ವಿಜಯ್ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ!
Recommended image2
NEET UG 2026 Re-exam Bengaluru: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ, ಕಠಿಣ ರೂಲ್ಸ್ ಜಾರಿ
Recommended image3
ತಿರುಪತಿಗೆ ಹೋಗುವ ರಾಜ್ಯದ ಭಕ್ತರಿಗೆ ಗುಡ್‌ನ್ಯೂಸ್‌, KSTDC ಸುಪರ್ದಿಗೆ ಕರ್ನಾಟಕ ಭವನದ 350 ರೂಮ್‌!
Related Stories
Recommended image1
ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯಲ್ಲಿ ಬದಲಾವಣೆ? ಸಿಎಂಗೆ ಪತ್ರ ಬರೆದ ಗ್ಯಾರಂಟಿ ಉಪಾಧ್ಯಕ್ಷ ಗೂಳಿಗೌಡ!
Recommended image2
ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ; ಫಲಾನುಭವಿಗಳು ನಾಡಕಚೇರಿಗೆ ಅಲೆದಾಡಬೇಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved