MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಸುಳ್ಳು ಸುದ್ದಿಗೆ 7 ವರ್ಷ ಸೆರೆಮನೆ 10 ಲಕ್ಷ ದಂಡ, ತಪ್ಪು ಮಾಹಿತಿಗೂ ಜೈಲು ಶಿಕ್ಷೆ: ಮಸೂದೆ ಮಂಡಿಸಿದ ಕರ್ನಾಟಕ!

ಸುಳ್ಳು ಸುದ್ದಿಗೆ 7 ವರ್ಷ ಸೆರೆಮನೆ 10 ಲಕ್ಷ ದಂಡ, ತಪ್ಪು ಮಾಹಿತಿಗೂ ಜೈಲು ಶಿಕ್ಷೆ: ಮಸೂದೆ ಮಂಡಿಸಿದ ಕರ್ನಾಟಕ!

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಂಚುವವರಿಗೆ ಕರ್ನಾಟಕ ಸರ್ಕಾರ 7 ವರ್ಷ ಜೈಲು ಶಿಕ್ಷೆ ವಿಧಿಸುವ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ. ಈ ಕಾನೂನು ಡಿಜಿಟಲ್ ಮಾಧ್ಯಮಗಳಿಗೂ ಅನ್ವಯಿಸುತ್ತದೆ.

2 Min read
Gowthami K
Published : Jun 22 2025, 03:49 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Gemini

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ (Fake News ) ಹಾಗೂ ತಪ್ಪು ಮಾಹಿತಿ ಬೇಕಾಬಿಟ್ಟಿ ಹಂಚುವಿಕೆ ಸಾಮಾನ್ಯವಾಗುತ್ತಿದೆ. ಇಂತಹ ಅಪಾಯಕಾರಿಯಾದ ಬೆಳವಣಿಗೆಯನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸೋಷಿಯಲ್ ಮೀಡಿಯಾದಲ್ಲಿ ತಪ್ಪು ಮಾಹಿತಿ ಹಂಚಿದರೆ, ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ₹10 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿರುವ ಹೊಸ ಕಾನೂನು ಜಾರಿಗೆ ಬರಲಿದೆ. ‘ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ’ ಈಗಾಗಲೇ ಸಿದ್ಧವಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿದೆ. ಸಾರ್ವಜನಿಕ ಶಾಂತಿ, ಭದ್ರತೆ ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಯಾವುದೇ ಪೋಸ್ಟ್ ಅಥವಾ ಮಾಹಿತಿ ಹಂಚಿದರೆ, ಸಂಬಂಧಿಸಿದ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಬಹುದು ಎಂಬುದು ಈ ಮಸೂದೆಯ ಮುಖ್ಯ ಅಂಶವಾಗಿದೆ.

25
Image Credit : Getty

ಈ ಹೊಸ ಕಾನೂನಿನಡಿಯಲ್ಲಿ, ಕರ್ನಾಟಕ ಸರ್ಕಾರ ವಿಶೇಷ ನಿಯಂತ್ರಣ ಮಂಡಳಿಯನ್ನು ರಚಿಸಲು ನಿರ್ಧರಿಸಿದೆ. ಇದರ ಅಧ್ಯಕ್ಷತೆಯನ್ನು ಒಬ್ಬ ಸಚಿವರು ವಹಿಸಲಿದ್ದು, ಒಟ್ಟು ಆರು ಮಂದಿ ಸದಸ್ಯರನ್ನೊಳಗೊಂಡ ಸಮಿತಿ ಕಾರ್ಯನಿರ್ವಹಿಸಲಿದೆ. ಈ ಕಾನೂನು ಸಾಮಾಜಿಕ ಮಾಧ್ಯಮಗಳಿಗೆ ಮಾತ್ರವಲ್ಲದೆ, ಎಲ್ಲಾ ಡಿಜಿಟಲ್ ಮಾಧ್ಯಮಗಳಿಗೂ ಅನ್ವಯವಾಗಲಿದೆ. ತಪ್ಪು ಮಾಹಿತಿ ಹಂಚುವವರನ್ನು ಗುರುತಿಸಲು ಹಾಗೂ ತನಿಖೆ ನಡೆಸಲು ಸರ್ಕಾರ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಲು ಯೋಜನೆ ರೂಪಿಸಿದೆ. ಇದರಿಂದ ಜನರ ಭದ್ರತೆ ಮತ್ತು ಮಾಹಿತಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಲು ನೆರವಾಗುತ್ತದೆ.

Related Articles

Related image1
Google Twitter ಭಾರತ ಬಗ್ಗೆ ನಕಲಿ ಸುದ್ದಿಯಿಂದ ಕೆಟ್ಟ ಹೆಸರು, ಸುಳ್ಳು ಸುದ್ದಿ ತಡೆಯದ ಗೂಗಲ್‌, ಟ್ವೀಟರ್‌ಗೆ ಕೇಂದ್ರ ತರಾಟೆ!
Related image2
ಸುಳ್ಳುಸುದ್ದಿ ತಡೆಗೆ ತಲೆಯೆತ್ತಲಿದೆ ಸಿಐಡಿ ಘಟಕ: ಫೇಕ್‌ ನ್ಯೂಸ್‌ ಹಾವಳಿಗೆ ಕಡಿವಾಣ ಹಾಕಲು ಸಿಎಂ ಸೂಚನೆ
35
Image Credit : Asianet News

ಸಾಮಾನ್ಯ ರೀತಿಯ ತಪ್ಪು ಮಾಹಿತಿಗೆ ಕನಿಷ್ಠ 2 ರಿಂದ ಗರಿಷ್ಠ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ, ಪ್ರತಿದಿನ ₹25,000 ವರೆಗಿನ ದಂಡವನ್ನು ವಿಧಿಸುವ ಯೋಜನೆ ಈ ಮಸೂದೆಯಲ್ಲಿ ಒಳಗೊಂಡಿದೆ. ಈ ಪ್ರಕರಣಗಳನ್ನು ತ್ವರಿತವಾಗಿ ನಿಭಾಯಿಸಲು ಸರ್ಕಾರ ವಿಶೇಷ ನ್ಯಾಯಾಲಯಗಳ ಸ್ಥಾಪನೆಯತ್ತ ಮುಂದಾಗಿದೆ.

ಈ ಮಸೂದೆ cognisable (ವಾರಂಟ್ ಇಲ್ಲದ ಬಂಧನ) ಮತ್ತು non-bailable (ಜಾಮೀನು ರಹಿತ ) ಎಂದು ಗುರುತಿಸಲಾಗಿದ್ದು, ತಪ್ಪಿತಸ್ಥರಿಗೆ ಸುಲಭವಾಗಿ ಜಾಮೀನು ದೊರೆಯುವ ಸಾಧ್ಯತೆ ಇರುವುದಿಲ್ಲ. ಕಂಪನಿಗಳು ಅಥವಾ ಸಂಸ್ಥೆಗಳ ಮೂಲಕ ಕೂಡ ಸುಳ್ಳು ಮಾಹಿತಿ ಹಬ್ಬಿಸಿದರೆ, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ. ಈ ನೂತನ ಕಾನೂನು ಮೂಲಕ, ಸಮಾಜದಲ್ಲಿ ಖಚಿತ ಮತ್ತು ನಿಖರವಾದ ಮಾಹಿತಿ ಹಂಚಿಕೆಗೆ ಪ್ರೋತ್ಸಾಹ ಸಿಗಲಿದೆ ಎನ್ನುವ ನಿರೀಕ್ಷೆ ಇದೆ. ಇದರಿಂದ ತಪ್ಪು ಸುದ್ದಿಯಿಂದ ಉಂಟಾಗುವ ಗೊಂದಲಗಳು, ಅಪಪ್ರಚಾರ ಮತ್ತು ಭಯಭೀತಿಯನ್ನು ಕಡಿಮೆ ಮಾಡುವಲ್ಲಿ ಸಹಕಾರ ದೊರೆಯಲಿದೆ.

45
Image Credit : Asianet News

ಈ ಮಸೂದೆಯ ಪ್ರಕಾರ, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ಶಾಂತಿ ಅಥವಾ ಚುನಾವಣೆಗಳ ಪಾರದರ್ಶಕತೆಗೆ ಹಾನಿಯುಂಟುಮಾಡುವ ನಕಲಿ ಮಾಹಿತಿ ಅಥವಾ ಸುಳ್ಳು ಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹಂಚಿದರೆ, ಆರೋಪಿಗೆ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹10 ಲಕ್ಷದವರೆಗೆ ದಂಡ ಅಥವಾ ಈ ಎರಡೂ ವಿಧಿಸಬಹುದಾಗಿದೆ. ರಾಜ್ಯದ ಪ್ರಜೆಗಳನ್ನು ಗುರಿಯಾಗಿಸಿಕೊಂಡು ನಕಲಿ ಸುದ್ದಿಯನ್ನು ರಾಜ್ಯದ ಹೊರಗಿನಿಂದ ಹಂಚಿದರೂ ಕೂಡ ಈ ಕಾನೂನು ಅನ್ವಯವಾಗುತ್ತದೆ.

55
Image Credit : Asianet News

ಚುನಾವಣೆಗಳ ಪ್ರಕ್ರಿಯೆಗೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಅಡ್ಡಿಯುಂಟುಮಾಡುವ ನಕಲಿ ಸುದ್ದಿಯನ್ನು ಹಂಚಿದರೆ ಕನಿಷ್ಠ ಎರಡು ವರ್ಷಗಳಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆಯೊಂದಿಗೆ ಆರ್ಥಿಕ ದಂಡವನ್ನು ವಿಧಿಸಬಹುದಾಗಿದೆ. ಇದರ ಜೊತೆಗೆ, ಇಂತಹ ಸುಳ್ಳು ಮಾಹಿತಿಯ ಹರಡುವಿಕೆಗೆ ಸಹಕಾರ ನೀಡಿದವರು ಅಥವಾ ಪ್ರೋತ್ಸಾಹಿಸಿದವರಿಗೂ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಮಸೂದೆ ಅವಕಾಶ ಮಾಡಿಕೊಡುತ್ತದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿಗಳ ಹರಡುವಿಕೆಯನ್ನು ಸಂಪೂರ್ಣವಾಗಿ ತಡೆಯುವುದು ಈ ಕಾನೂನಿನ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಸರ್ಕಾರ "ನಕಲಿ ಸುದ್ದಿ ನಿಯಂತ್ರಣ ಪ್ರಾಧಿಕಾರ" ಎಂಬ ನಿಗಮಿತ ಸಂಸ್ಥೆಯನ್ನು ಸ್ಥಾಪಿಸಿ, ಇಂತಹ ಅಕ್ರಮಗಳನ್ನು ನಿಗಾವಹಿಸಲು ಕ್ರಮ ಕೈಗೊಳ್ಳಲಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಭಾರತ ಸುದ್ದಿ
ಸಾಮಾಜಿಕ ಮಾಧ್ಯಮ
ಫೇಸ್ಬುಕ್
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved