MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಶಿವಮೊಗ್ಗ, ಮಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆರಾಯ: ವಿಮಾನ ಲ್ಯಾಂಡಿಂಗ್ ಸಮಸ್ಯೆ, ಮನೆಗಳು ವಿನಾಶ!

ಶಿವಮೊಗ್ಗ, ಮಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆರಾಯ: ವಿಮಾನ ಲ್ಯಾಂಡಿಂಗ್ ಸಮಸ್ಯೆ, ಮನೆಗಳು ವಿನಾಶ!

ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮುಂಗಾರು ಪೂರ್ವ ಮಳೆಯು ಹಾನಿ ಮಾಡಿದೆ. ಮಂಗಳೂರಿನಲ್ಲಿ ವಿಮಾನ ಸಂಚಾರ ವ್ಯತ್ಯಯ, ಯಾದಗಿರಿಯಲ್ಲಿ ಮನೆಗಳಿಗೆ ಹಾನಿ ಹಾಗೂ ಹಲವೆಡೆ ವಿದ್ಯುತ್ ಕಡಿತದಂತಹ ಅವಾಂತರ ಸೃಷ್ಟಿಸಿದೆ. ಎಲ್ಲಿ ಏನೇನು ಹಾನಿಯಾಗಿದೆ ತಿಳಿಯಲು ಓದಿ.

2 Min read
Author : Sathish Kumar KH
Published : May 14 2026, 09:03 PM IST
Share this Photo Gallery
  • FB
  • TW
  • Linkdin
  • Whatsapp
17
ಗುರುವಾರ ಸಂಜೆ 4 ಜಿಲ್ಲೆಗಳಲ್ಲಿ ಮಳೆ ಅಬ್ಬರ
Image Credit : Asianet News

ಗುರುವಾರ ಸಂಜೆ 4 ಜಿಲ್ಲೆಗಳಲ್ಲಿ ಮಳೆ ಅಬ್ಬರ

ಬೆಂಗಳೂರು/ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡುತ್ತಿರುವ ಬಿಸಿಲಿನಿಂದ ಬೆಂದು ಹೋಗಿದ್ದ ಕರ್ನಾಟಕದ ಜನತೆಗೆ ವರುಣದೇವ ತಂಪೆರೆದಿದ್ದಾನೆ. ಆದರೆ, ರಾಜ್ಯದ ಹಲವೆಡೆ ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಒಂದೆಡೆ ಮಳೆ ಖುಷಿ ನೀಡಿದರೆ, ಮತ್ತೊಂದೆಡೆ ಅಪಾರ ಹಾನಿ ಉಂಟುಮಾಡಿದೆ. ವಿಶೇಷವಾಗಿ ಮಂಗಳೂರು, ಯಾದಗಿರಿ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ರೌದ್ರಾವತಾರ ಕಂಡುಬಂದಿದೆ.

Add Asianetnews Kannada as a Preferred SourcegooglePreferred
27
ಮಂಗಳೂರು ಏರ್ ಪೋರ್ಟ್ ನಲ್ಲಿ ಆತಂಕದ ಕ್ಷಣಗಳು:
Image Credit : Asianet News

ಮಂಗಳೂರು ಏರ್ ಪೋರ್ಟ್ ನಲ್ಲಿ ಆತಂಕದ ಕ್ಷಣಗಳು:

ಕರಾವಳಿ ನಗರಿ ಮಂಗಳೂರಿನಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ರನ್ ವೇ ಸರಿಯಾಗಿ ಕಾಣಿಸದ ಹಿನ್ನೆಲೆಯಲ್ಲಿ ಎರಡು ವಿಮಾನಗಳು ಇಳಿಯಲಾಗದೆ ವಿಟ್ಲ ಸಮೀಪದ ಆಕಾಶದಲ್ಲಿ ಸುದೀರ್ಘ ಕಾಲ ಸುತ್ತಾಡುತ್ತಿವೆ. ಇದರಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

Related Articles

Related image1
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಳೆ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Related image2
ಮೇ 16ಕ್ಕೆ ಮಾನ್ಸೂನ್ ಎಂಟ್ರಿ: ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?
37
ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ತಗಡಿನ ಸೂರುಗಳು ಹಾರಾಟ!
Image Credit : Asianet News

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ತಗಡಿನ ಸೂರುಗಳು ಹಾರಾಟ!

ಯಾದಗಿರಿ ಜಿಲ್ಲೆಯಾದ್ಯಂತ ಭಾರಿ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ. ಯಾದಗಿರಿ ನಗರ, ಶಹಾಪುರ ಮತ್ತು ಸುರಪುರ ತಾಲೂಕುಗಳಲ್ಲಿ ವರುಣನ ಆರ್ಭಟ ಜೋರಾಗಿತ್ತು. ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ ಬಿರುಗಾಳಿಯ ರಭಸಕ್ಕೆ ಮನೆಗಳ ಮೇಲ್ಛಾವಣಿಯ ತಗಡುಗಳು ನೂರಾರು ಅಡಿ ದೂರಕ್ಕೆ ಹಾರಿ ಹೋಗಿವೆ. 

47
ವಿದ್ಯುತ್ ಸಂಪರ್ಕ ಕಡಿತ
Image Credit : Asianet News

ವಿದ್ಯುತ್ ಸಂಪರ್ಕ ಕಡಿತ

ಯಾದಗಿರಿ ಜಿಲ್ಲೆಯಾದ್ಯಂತ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಸಮವಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ಮಳೆ ತಂಪು ನೀಡಿದೆಯಾದರೂ, ಬಡ ಕುಟುಂಬಗಳ ಆಸ್ತಿಪಾಸ್ತಿಗೆ ಹಾನಿಯಾಗಿರುವುದು ನೋವು ತಂದಿದೆ.

57
ಮಲೆನಾಡಿನಲ್ಲೂ ವರುಣನ ಕೃಪೆ:
Image Credit : Asianet News

ಮಲೆನಾಡಿನಲ್ಲೂ ವರುಣನ ಕೃಪೆ:

ಶಿವಮೊಗ್ಗದಲ್ಲಿ ಹಲವು ದಿನಗಳ ಸುದೀರ್ಘ ಕಾಯುವಿಕೆಯ ನಂತರ ಮಳೆರಾಯ ಧರೆಗಿಳಿದಿದ್ದಾನೆ. ಸಂಜೆ 6 ಗಂಟೆಯ ಸುಮಾರಿಗೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇಳೆ ತಂಪಾಗಿದೆ. ಆದರೆ, ದಿಢೀರ್ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡುವಂತಾಯಿತು.

67
ಉತ್ತರ ಕನ್ನಡದಲ್ಲಿ ಗುಡುಗು-ಮಿಂಚಿನ ಆರ್ಭಟ:
Image Credit : Asianet News

ಉತ್ತರ ಕನ್ನಡದಲ್ಲಿ ಗುಡುಗು-ಮಿಂಚಿನ ಆರ್ಭಟ:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಭಾರಿ ಮಳೆಯಾಗುತ್ತಿದೆ. ಸಂಜೆ 7 ಗಂಟೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿಯ ಜನರಿಗೆ ಸೆಕೆಯಿಂದ ಮುಕ್ತಿ ಸಿಕ್ಕಿದೆ. ಜಿಲ್ಲೆಯ ಹೊನ್ನಾವರ ಮತ್ತು ಕುಮಟಾ ತಾಲೂಕುಗಳಲ್ಲೂ ಮೋಡಕವಿದ ವಾತಾವರಣವಿದ್ದು, ರಾತ್ರಿಯ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

77
ಮುಂಗಾರು ಪೂರ್ವ ಮಳೆ ಚುರುಕು
Image Credit : Asianet News

ಮುಂಗಾರು ಪೂರ್ವ ಮಳೆ ಚುರುಕು

ಒಟ್ಟಾರೆಯಾಗಿ, ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಗುಡುಗು ಸಿಡಿಲಿನ ಸಂದರ್ಭದಲ್ಲಿ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಮಳೆ
ಮಳೆ
ಮಂಗಳೂರು
ವಿಮಾನಯಾನ ಸಂಸ್ಥೆಗಳು
ಯಾದಗಿರಿ

Latest Videos
Recommended Stories
Recommended image1
ಉತ್ತರ ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಬೆಳಗಾವಿ - ಚರ್ಲಪಲ್ಲಿ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲು ಖಾಯಂ!
Recommended image2
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಳೆ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Recommended image3
ಕೆಸಿ ವೇಣುಗೋಪಾಲ್‌ಗೆ ತಪ್ಪಿದ ಕೇರಳ ಸಿಎಂ ಪಟ್ಟ: ಕೈ ಹೈಕಮಾಂಡ್ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ಟಬುರಾವ್ ಆಕ್ರೋಶ!
Related Stories
Recommended image1
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಳೆ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Recommended image2
ಮೇ 16ಕ್ಕೆ ಮಾನ್ಸೂನ್ ಎಂಟ್ರಿ: ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved