MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಯುದ್ಧ ವಿಮಾನ ಕ್ಯಾಂಪಸ್‌ ಕರ್ನಾಟಕದಲ್ಲಿ ಸ್ಥಾಪಿಸಲು ಕೇಂದ್ರಕ್ಕೆ ಬಲವಾದ ಮನವಿ, 650ಎಕರೆ ಭೂಮಿ ನೀಡಲು ರಾಜ್ಯ ಸಿದ್ಧತೆ

ಯುದ್ಧ ವಿಮಾನ ಕ್ಯಾಂಪಸ್‌ ಕರ್ನಾಟಕದಲ್ಲಿ ಸ್ಥಾಪಿಸಲು ಕೇಂದ್ರಕ್ಕೆ ಬಲವಾದ ಮನವಿ, 650ಎಕರೆ ಭೂಮಿ ನೀಡಲು ರಾಜ್ಯ ಸಿದ್ಧತೆ

ಮಧ್ಯಮ ಸ್ತರದ ಯುದ್ಧ ವಿಮಾನ  ನಿರ್ಮಾಣ ಯೋಜನೆಯನ್ನು ರಾಜ್ಯದಲ್ಲಿ ಸ್ಥಾಪಿಸಲು ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಬಲವಾದ ಪ್ರಸ್ತಾವನೆ ಸಲ್ಲಿಸಿದೆ.  ರಾಜ್ಯದ ಬಲಿಷ್ಠ ವೈಮಾಂತರಿಕ್ಷ ಪರಿಸರ ವ್ಯವಸ್ಥೆ ಮತ್ತು ಯೋಜನೆಗೆ 650ಎಕರೆ ಭೂಮಿ ನೀಡುವ ಸಿದ್ಧತೆಯನ್ನು ವಿವರಿಸಿ ರಕ್ಷಣಾ ಸಚಿವರಿಗೆ ಪತ್ರ ಬರೆದಿದೆ.

2 Min read
Author : Gowthami K
Published : May 17 2026, 07:34 PM IST
Share this Photo Gallery
  • FB
  • TW
  • Linkdin
  • Whatsapp
17
ವಿಮಾನ ನಿರ್ಮಾಣ ಯೋಜನೆಗಾಗಿ ಕರ್ನಾಟಕವನ್ನು ಪರಿಗಣಿಸುವಂತೆ ಮನವಿ
Image Credit : Asianet News

ವಿಮಾನ ನಿರ್ಮಾಣ ಯೋಜನೆಗಾಗಿ ಕರ್ನಾಟಕವನ್ನು ಪರಿಗಣಿಸುವಂತೆ ಮನವಿ

ಬೆಂಗಳೂರು:ರಕ್ಷಣಾ ಇಲಾಖೆಯ ಏರೋನಾಟಿಕಲ್‌ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಮೂಲಕ ಸ್ಥಾಪಿಸಲು ಉದ್ದೇಶಿಸಿರುವ ಮಧ್ಯಮ ಸ್ತರದ ಯುದ್ಧ ವಿಮಾನ (ಎಎಂಸಿಎ) ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಸ್ಥಾಪಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರದ ಮುಂದೆ ಬಲವಾದ ಮನವಿ ಸಲ್ಲಿಸಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು, ಈ ಯೋಜನೆಗಾಗಿ ಕರ್ನಾಟಕವನ್ನು ಪರಿಗಣಿಸುವಂತೆ ವಿನಂತಿಸಿದ್ದಾರೆ. ಪತ್ರದಲ್ಲಿ ಅವರು ಕರ್ನಾಟಕದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ಬಲವನ್ನು ವಿವರವಾಗಿ ಪ್ರಸ್ತಾಪಿಸಿದ್ದು, ದೇಶದ ಈ ಕ್ಷೇತ್ರಕ್ಕೆ ರಾಜ್ಯವು ಸುಮಾರು ಶೇ.65ರಷ್ಟು ಕೊಡುಗೆ ನೀಡುತ್ತಿರುವುದನ್ನು ಉಲ್ಲೇಖಿಸಿದ್ದಾರೆ. ಇದರಿಂದಾಗಿ ಎಎಂಸಿಎಂತಹ ರಾಷ್ಟ್ರೀಯ ಮಹತ್ವದ ಯೋಜನೆಗೆ ಕರ್ನಾಟಕ ಅತ್ಯಂತ ಸೂಕ್ತವಾದ ಸ್ಥಳವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred
27
650 ಎಕರೆ ಭೂಮಿ ನೀಡಲು ಸಿದ್ಧತೆ
Image Credit : Asianet News

650 ಎಕರೆ ಭೂಮಿ ನೀಡಲು ಸಿದ್ಧತೆ

ಎಎಂಸಿಎ ಯೋಜನೆಗೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ವಿವರಿಸಿದ ಸಚಿವರು, ಯುದ್ಧ ವಿಮಾನಗಳ ಉತ್ಪಾದನೆ, ಅಸೆಂಬ್ಲಿ ಮತ್ತು ಸಂಬಂಧಿತ ಸೌಲಭ್ಯಗಳಿಗಾಗಿ ಸುಮಾರು 300 ಎಕರೆ ಭೂಮಿ ಅಗತ್ಯವಿದ್ದು, ಪ್ರತ್ಯೇಕ ರನ್‌ವೇ ನಿರ್ಮಾಣಕ್ಕಾಗಿ ಹೆಚ್ಚುವರಿ 350 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಒದಗಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಸುಮಾರು 650 ಎಕರೆ ಭೂಮಿಯನ್ನು ಶೀಘ್ರವಾಗಿ ಗುರುತಿಸಿ ಹಂಚಿಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related Articles

Related image1
ಅಮೆರಿಕಾದ F-35 ಯುದ್ಧ ವಿಮಾನಕ್ಕೂ ಹೊಡೆಯಿತಾ ಇರಾನ್: ಅಮೆರಿಕಾ ಹೇಳಿದ್ದೇನು?
Related image2
Iran-India Love story: ಮಧ್ಯಪ್ರಾಚ್ಯ ಯುದ್ಧದಿಂದ ವಿಮಾನ ರದ್ದು, ಕೊಡಗಿನಲ್ಲಿ ಸಿಲುಕಿದ ಇರಾನ್ ದಂಪತಿ!
37
ಬಲವಾದ ವೈಮಾಂತರಿಕ್ಷ ಪರಿಸರ ವ್ಯವಸ್ಥೆ
Image Credit : Getty

ಬಲವಾದ ವೈಮಾಂತರಿಕ್ಷ ಪರಿಸರ ವ್ಯವಸ್ಥೆ

ಕರ್ನಾಟಕವು ಭಾರತದ ಅತ್ಯಂತ ಪ್ರಮುಖ ಏರೋಸ್ಪೇಸ್ ಕ್ಲಸ್ಟರ್‌ಗಳಿಗೆ ನೆಲೆಯಾಗಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಇಸ್ರೋ, ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL), ಡಿಆರ್‌ಡಿಒ (DARE, GTRE, ADE ಘಟಕಗಳೊಂದಿಗೆ), ಬಿಇಎಂಎಲ್ ಹಾಗೂ ಬಿಇಎಲ್ ಸೇರಿದಂತೆ ಪ್ರಮುಖ ಸಂಸ್ಥೆಗಳು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ, ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA)ಯ ಪ್ರಧಾನ ಕಚೇರಿಯೂ ಬೆಂಗಳೂರಲ್ಲೇ ಇರುವುದರಿಂದ, ಇದರ ವಿಸ್ತರಣೆಗೆ ಕರ್ನಾಟಕ ಸ್ವಾಭಾವಿಕ ಆಯ್ಕೆಯಾಗುತ್ತದೆ ಎಂದು ಪಾಟೀಲ್ ಹೇಳಿದ್ದಾರೆ.

47
ಖಾಸಗಿ ಕಂಪನಿಗಳ ಸಹಭಾಗಿತ್ವ
Image Credit : X-@S_HajjS

ಖಾಸಗಿ ಕಂಪನಿಗಳ ಸಹಭಾಗಿತ್ವ

ರಾಜ್ಯದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (TASL) ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಏರೋಸ್ಪೇಸ್ ಘಟಕವನ್ನು ಸ್ಥಾಪಿಸಿದ್ದು, ಏರ್‌ಬಸ್ ಮತ್ತು ಬೋಯಿಂಗ್ ಸಂಸ್ಥೆಗಳು ಬೆಂಗಳೂರಿನಲ್ಲಿ ತಮ್ಮ ಅತಿದೊಡ್ಡ ಎಂಜಿನಿಯರಿಂಗ್ ಹಾಗೂ ಸಂಶೋಧನಾ ಕೇಂದ್ರಗಳನ್ನು ನಡೆಸುತ್ತಿವೆ. ಇತ್ತೀಚೆಗೆ ಕಾಲಿನ್ಸ್ ಏರೋಸ್ಪೇಸ್ ಕೂಡ ತನ್ನ ಕಾರ್ಯಾಚರಣೆ ಕೇಂದ್ರವನ್ನು ಇಲ್ಲಿ ಆರಂಭಿಸಿದೆ. ಇದಲ್ಲದೆ, 2,000ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (SMEs) ನಿಖರ ಉತ್ಪಾದನೆ, ಏವಿಯಾನಿಕ್ಸ್ ಹಾಗೂ ಉಪವ್ಯವಸ್ಥೆಗಳ ಏಕೀಕರಣದಲ್ಲಿ ಮಹತ್ವದ ಪಾತ್ರವಹಿಸುತ್ತಿವೆ.

57
ಸಂಶೋಧನೆ ಮತ್ತು ಪ್ರತಿಭೆಯ ಕೇಂದ್ರ
Image Credit : ANI

ಸಂಶೋಧನೆ ಮತ್ತು ಪ್ರತಿಭೆಯ ಕೇಂದ್ರ

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಏರೋಸ್ಪೇಸ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರಮುಖ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವಾಗಿದ್ದು, ಎಡಿಎ, ಡಿಆರ್‌ಡಿಒ ಮತ್ತು ಎಚ್‌ಎಎಲ್ ಸಂಸ್ಥೆಗಳಿಗೆ ತಜ್ಞ ಮಾನವ ಸಂಪನ್ಮೂಲ ಒದಗಿಸುತ್ತಿದೆ. ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL) ಕೂಡ ದೇಶದ ಪ್ರಮುಖ ಸಂಶೋಧನಾ ಸಂಸ್ಥೆಗಳಲ್ಲೊಂದು.

67
ರಾಜ್ಯದ ಭವಿಷ್ಯ ದೃಷ್ಟಿ
Image Credit : X-@IAF_MCC

ರಾಜ್ಯದ ಭವಿಷ್ಯ ದೃಷ್ಟಿ

ಕರ್ನಾಟಕ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ (2022–27) ಅಡಿಯಲ್ಲಿ ರಾಜ್ಯವು ಐದು ವಿಶೇಷ ಏರೋಸ್ಪೇಸ್ ಮತ್ತು ರಕ್ಷಣಾ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಐದು ವರ್ಷಗಳಲ್ಲಿ 6 ಬಿಲಿಯನ್ ಡಾಲರ್ ಹೂಡಿಕೆ ಆಕರ್ಷಿಸಿ ಸುಮಾರು 70,000 ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ಎಎಂಸಿಎ ಯೋಜನೆಯು ರಾಷ್ಟ್ರೀಯ ಭದ್ರತೆ ಮತ್ತು ತಾಂತ್ರಿಕ ಪ್ರಗತಿಗೆ ಅತ್ಯಂತ ಮಹತ್ವದ್ದಾಗಿದ್ದು, ಅದರ ಯಶಸ್ವಿ ಅನುಷ್ಠಾನಕ್ಕೆ ಕರ್ನಾಟಕವು ಸಮಗ್ರ ಮತ್ತು ಬಲಿಷ್ಠ ನೆಲೆಯಾಗಿ ಕಾರ್ಯನಿರ್ವಹಿಸಬಲ್ಲದು ಎಂದು ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

77
 ಕೇಂದ್ರದೊಂದಿಗೆ ಸಮನ್ವಯಕ್ಕೆ ಸಿದ್ಧತೆ
Image Credit : X- Eastern Naval Command

ಕೇಂದ್ರದೊಂದಿಗೆ ಸಮನ್ವಯಕ್ಕೆ ಸಿದ್ಧತೆ

ಎಎಂಸಿಎ ಯೋಜನೆಯ ಯಶಸ್ಸಿಗೆ ನಾವು ರಕ್ಷಣಾ ಸಚಿವಾಲಯ ಮತ್ತು ಎಡಿಎ ಜೊತೆ ಸಮನ್ವಯವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದ್ದೇವೆ. ಅಗತ್ಯ ಮೂಲಸೌಕರ್ಯ, ಸಂಪರ್ಕ ವ್ಯವಸ್ಥೆಗಳು ಹಾಗೂ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ,” ಎಂದು ಸಚಿವರು ತಿಳಿಸಿದ್ದಾರೆ. ಈ ಮೂಲಕ, ದೇಶದ ಅತ್ಯಂತ ಮಹತ್ವದ ರಕ್ಷಣಾ ಯೋಜನೆಗಳಲ್ಲಿ ಒಂದಾದ ಎಎಂಸಿಎ ನಿರ್ಮಾಣವನ್ನು ಕರ್ನಾಟಕಕ್ಕೆ ತರಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ನಡೆಸುತ್ತಿರುವುದು ಸ್ಪಷ್ಟವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕರ್ನಾಟಕ ಸುದ್ದಿ
ಬಾಹ್ಯಾಕಾಶ ನಿಲ್ದಾಣ
ರಕ್ಷಣಾ ಷೇರುಗಳು
ಎಂ. ಬಿ. ಪಾಟೀಲ್

Latest Videos
Recommended Stories
Recommended image1
ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ದಿನಸಿ ದರ ಹೆಚ್ಚಳ
Recommended image2
Dclutter App: ಬೆಂಗಳೂರಿಗರಿಗೆ ಗುಡ್‌ನ್ಯೂಸ್! ಹಳೆಯ ಬೆಡ್‌, ಸೋಫಾ, ಟಿವಿ ತೊಲಗಿಸಲು ಈಗ ಆ್ಯಪ್ ಸಾಕು!
Recommended image3
ಜೈಲಿನಲ್ಲಿ ನಟ ದರ್ಶನ್‌ಗೆ ಏನೆಲ್ಲಾ ಸವಲತ್ತು ಸಿಕ್ತಿದೆ? ಕಾರಗೃಹದಿಂದ ಸುಪ್ರೀಂ ಕೋರ್ಟ್‌ಗೆ ಕಂಪ್ಲೀಟ್ ವರದಿ
Related Stories
Recommended image1
ಅಮೆರಿಕಾದ F-35 ಯುದ್ಧ ವಿಮಾನಕ್ಕೂ ಹೊಡೆಯಿತಾ ಇರಾನ್: ಅಮೆರಿಕಾ ಹೇಳಿದ್ದೇನು?
Recommended image2
Iran-India Love story: ಮಧ್ಯಪ್ರಾಚ್ಯ ಯುದ್ಧದಿಂದ ವಿಮಾನ ರದ್ದು, ಕೊಡಗಿನಲ್ಲಿ ಸಿಲುಕಿದ ಇರಾನ್ ದಂಪತಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved