MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು, ಬೆಂಗಳೂರಿನಿಂದ ಯಾವ ಜಿಲ್ಲೆಗೆ ಸೇವೆ?

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು, ಬೆಂಗಳೂರಿನಿಂದ ಯಾವ ಜಿಲ್ಲೆಗೆ ಸೇವೆ?

ಕರ್ನಾಟಕದ ಮೂಲೆ ಮೂಲೆಗೆ ಸಂಪರ್ಕ ಕಲ್ಪಿಸಲು ಇದೀಗ ಮತ್ತೊಂದು ವಂದೇ ಭಾರತ್ ರೈಲು ಸೇವೆ ಆರಂಭಿಸಲಾಗುತ್ತಿದೆ. ಇದು ಕರ್ನಾಟಕದ 11ನೇ ವಂದೇ ಭಾರತ್ ರೈಲಾಗಿದೆ. ಹೊಸ ವಂದೇ ಭಾರತ್ ರೈಲು ಬೆಂಗಳೂರು ಹಾಗೂ ಈ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ.

2 Min read
Chethan Kumar
Published : May 08 2025, 05:38 PM IST
Share this Photo Gallery
  • FB
  • TW
  • Linkdin
  • Whatsapp
16

ಭಾರತದಲ್ಲಿ ರೈಲು ಸೇವೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಮೂಲೆ ಮೂಲೆಗೆ ರೈಲು ಸಂಪರ್ಕ ಕಲ್ಪಿಸಲಾಗುತ್ತದೆ. ಹೆಚ್ಚಿನ ಪ್ರಯಾಣಿಕರು, ಬೇಡಿಕೆ ತಕ್ಕಂತೆ ರೈಲು ಸೇವೆ ವಿಸ್ತರಿಸಲಾಗುತ್ತಿದೆ. ಇದರ ಜೊತೆಗೆ ಆರಾಮದಾಯಕ ಪ್ರಯಾಣಕ್ಕಾಗಿ ವಂದೇ ಭಾರತ್ ರೈಲು ಸೇವೆಯನ್ನು ನೀಡಲಾಗುತ್ತಿದೆ. ಇದೀಗ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು ಸೇವೆ ಲಭ್ಯವಾಗುತ್ತಿದೆ.

26

ಕೇಂದ್ರ ರೈಲ್ವೇ ಇಲಾಖೆ ಇದೀಗ ಕರ್ನಾಟಕಕ್ಕೆ 11ನೇ ವಂದೇ ಭಾರತ್ ರೈಲು ಸೇವೆ ನೀಡಿದೆ. ವಿಶೇಷ ಅಂದರೆ ಇದು ಯಾವುದೇ ವಂದೇ ಭಾರತ್ ರೈಲನ್ನು ವಿಸ್ತರಣೆ ಮಾಡಿದ ಯೋಜನೆಯಲ್ಲಿ. ಹೊಸ ವಂದೇ ಭಾರತ್ ರೈಲು ಸೇವೆ ಆಗಿದೆ. ಪ್ರಮುಖವಾಗಿ ಉತ್ತರ ಕರ್ನಾಟಕದ ಭಾಗದ ಜನರಿಗೆ ಈ ವಂದೇ ಭಾರತ್ ರೈಲು ನೆರವಾಗಲಿದೆ.  ಕಾರಣ ಈ ರೈಲು ಬೆಂಗಳೂರು-ಬೆಳಗಾವಿ ಸಂಪರ್ಕಿಸಲಿದೆ.

Related Articles

Related image1
ಮಂಗಳೂರು-ಮುಂಬೈ ಇನ್ನು ಕೇವಲ 12 ಗಂಟೆ, ಶೀಘ್ರದಲ್ಲೇ ಹೊಸ ವಂದೇ ಭಾರತ್ ರೈಲು
Related image2
160 ಕಿಮೀ ಸಾಮರ್ಥ್ಯದ ವಂದೇ ಭಾರತ್ ರೈಲು ಕಡಿಮೆ ವೇಗದಲ್ಲಿ ಚಲಿಸೋದ್ಯಾಕೆ?
36

ಬೆಂಗಳೂರು-ಬೆಳಗಾವಿ ಹಾಗೂ ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸೇವೆಗೆ ಕೇಂದ್ರ ರೈಲ್ವೇ ಇಲಾಖೆ ಅಸ್ತು ಎಂದಿದೆ. ಈ ಹಿಂದೆ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿ ವರೆಗೆ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆಧರೆ ಇದು ವಿಸ್ತರಣೆ ಅಲ್ಲ, ಹೊಸ ರೈಲು ಸೇವೆಯಾಗಿದೆ. ಹೀಗಾಗಿ ಬೆಂಗಳೂರು-ಬೆಳಗಾವಿ ನಡುವೆ ಪ್ರಯಾಣ ಮಾಡುವವರಿಗೆ ಮತ್ತಷ್ಟು ಅನುಕೂಲವಾಗಲಿದೆ.

46
vande bharat 02.jpg

vande bharat 02.jpg

8 ಕೋಚ್‌ಗಳ ವಂದೇ ಭಾರತ್ ರೈಲು ಸೇವೆ ಬೆಂಗಳೂರು-ಬೆಳಗಾವಿ ನಡುವೆ ಸೇವೆ ನೀಡಲಿದೆ. ಪ್ರಯಾಣಿರ ಸಂಖ್ಯೆ, ಬೇಡಿಕೆ ಆಧರಿಸಿ ಕೋಚ್ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಸೌತ್ ವೆ್ಸ್ಟರ್ನ್ ರೈಲ್ವೇ ಪಿಆರ್‌ಒ ಮಂಜುನಾಥ್ ಕನಮಾಡಿ ಹೇಳಿದ್ದಾರೆ. ಗಂಟಗೆ 110 ಕಿ.ಮೀ ವೇಗದಲ್ಲಿ ಈ ವಂದೇ ಭಾರತ್ ರೈಲು ಸಂಚರಿಸಲಿದೆ. 610.6 ಕಿಲೋಮೀಟರ್ ದೂರವನ್ನು 7 ಗಂಟೆ 55 ನಿಮಿಷದಲ್ಲಿ ತಲುಪಲಿದೆ ಎಂದಿದ್ದಾರೆ.

56

ಸದ್ಯ ಬೆಂಗಳೂರು ಬೆಳಗಾವಿ ನಡುವಿನ ರೈಲು ಸರಿಸುಮಾರ 10 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ವಂದೇ ಭಾರತ್ ಸರಿಸುಮಾರು 8 ಗಂಟೆ ಸಮಯದಲ್ಲಿ ತಲುಪಲಿದೆ. ಬೆಳಗ್ಗೆ ಬೆಳಗಾವಿಯಿಂದ ಹೊರಟ ರೈಲು ಸಂಜೆ ಬೆಂಗಳೂರು ತಲುಪಲಿದೆ. ಇನ್ನು ಬೆಂಗಳೂರಿನಿಂದ ಮಧ್ಯಾಹ್ನದ ಬಳಿಕ ಹೊರಟು ರಾತ್ರಿ ವೇಳೆ ಬೆಳಗಾವಿ ತಲುಪಲಿದೆ ಎಂದು ಮಂಜನಾಥ್ ಕನಮಾಡಿ ಹೇಳಿದ್ದಾರೆ.

66

ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು  ಲೊಂಡಾ, ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ತುಮಕೂರು, ಹಾಗೂ ಯಶವಂತಪುರ ನಿಲ್ದಾಣಗಲ್ಲಿ ನಿಲುಗೆಡೆಯಾಗಲಿದೆ. ಚೇರ್ ಕಾರ್ ಟಿಕೆಟ್ ಬೆಲೆ 1,500 ಎಂದು ಅಂದಾಜಿಸಲಾಗಿದ್ದು, ಎಕ್ಸಿಕ್ಯೂಟೀವ್ ಕ್ಲಾಸ್ ಬೆಲೆ 2,500 ರೂಪಾಯಿ ಎಂದು ಅಂದಾಜಿಸಲಾಗಿದೆ. 

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ವಂದೇ ಭಾರತ್ ಎಕ್ಸ್‌ಪ್ರೆಸ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved