MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Raksha Bandhan Wishes
Toxic OTT Release Date
ICC Test Rankings
Mekedatu Project
Nepal-tibet Floods
New Financial Rules September
Bengaluru Airport Gold Smuggling
Bengaluru Development Authority
Mangaluru Railway station
CJ Roy Death Case
Hosapete to Arasikere Train
  • Home
  • News
  • State
  • ಕೊಡಗಿನಲ್ಲಿ ತಣ್ಣಗಾಗದ ವಸ್ತ್ರ ಸಂಹಿತೆ ದಂಗಲ್ ಕಿಚ್ಚು; ಎರಡು ಸಮುದಾಯ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ನಿಂದನೆ

ಕೊಡಗಿನಲ್ಲಿ ತಣ್ಣಗಾಗದ ವಸ್ತ್ರ ಸಂಹಿತೆ ದಂಗಲ್ ಕಿಚ್ಚು; ಎರಡು ಸಮುದಾಯ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ನಿಂದನೆ

 ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಮಹಾಮೃತ್ಯುಂಜಯ ದೇವಾಲಯದಲ್ಲಿ ಶುರುವಾದ ವಸ್ತ್ರ ಸಂಹಿತೆ ಕಿತ್ತಾಟದ ಕಾವು ಇನ್ನೂ ತಣ್ಣಗಾಗದೆ ಬೂದಿಮುಚ್ಚಿದ ಕೆಂಡದಂತಾಗಿದೆ. - ವರದಿ :ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

2 Min read
Author : Suvarna News
Published : Jan 02 2025, 10:16 PM IST
Share this Photo Gallery
  • FB
  • TW
  • Linkdin
  • Whatsapp
13

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಮಹಾಮೃತ್ಯುಂಜಯ ದೇವಾಲಯದಲ್ಲಿ ಶುರುವಾದ ವಸ್ತ್ರ ಸಂಹಿತೆ ಕಿತ್ತಾಟದ ಕಾವು ಇನ್ನೂ ತಣ್ಣಗಾಗದೆ ಬೂದಿಮುಚ್ಚಿದ ಕೆಂಡದಂತೆ ಇದೆ. ಸಮಿತಿ ಸ್ಥಾಪನೆಗಾಗಿ ಸಮಿತಿಯೊಂದನ್ನು ರಚಿಸಿ ಅದನ್ನು ಸರಿಪಡಿಸುವ ಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ. ಇದೀಗ ಕೊಡವ ಹಾಗೂ ಅರೆಭಾಷೆ ಗೌಡ ಎರಡು ಸಮುದಾಯಗಳ ನಡುವೆ ಜಾತಿ ನಿಂದನೆ, ಮಕ್ಕಳು ಮಹಿಳೆಯರ ನಿಂದನೆ ಮಾಡುವ ಹಂತಕ್ಕೆ ತಲುಪಿದ್ದು ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವಿನ ಶಾಂತಿ ಸಹಬಾಳ್ವೆ ಎನ್ನುವುದು ವೈಷಮ್ಯಕ್ಕೆ ತಿರುಗಿದೆ. 

ಹೌದು ಕೊಡವ ಸಮುದಾಯದವರನ್ನು, ಅವರ ಆಚಾರ ವಿಚಾರಗಳನ್ನು ಹಾಗೂ ಅವರ ಮಹಿಳೆಯರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ನಿಂದಿಸಲಾಗುತ್ತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಕೊಡವ ಸಮುದಾಯದ ಕೆಲ ಯುವಕರು ಅರೆಭಾಷೆ ಗೌಡ ಸಮುದಾಯದ ಜನರನ್ನು, ಅವರ ಆಚಾರ, ವಿಚಾರಗಳನ್ನು, ಅವರ ಹೆಣ್ಣುಮಕ್ಕಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೀನಾಯವಾಗಿ ನಿಂದಿಸಲಾಗುತ್ತಿದೆ. ಹೀಗಾಗಿ ಪರಸ್ಪರರ ವಿರುದ್ಧ ಎರಡು ಸಮುದಾಯಗಳಿಂದಲೂ ಪೊಲೀಸರಿಗೆ ದೂರು ನೀಡಲಾಗಿದೆ. ಕಟ್ಟೆಮಾಡುವಿನ ಮಹಾಮೃತ್ಯುಂಜಯ ದೇವಾಲಯಕ್ಕೆ ಕೊಡವರು ತಮ್ಮ ಸಾಂಪ್ರದಾಯಿಕ ಉಡುಗೆಯಾದ ಕುಪ್ಯೆಚಾಲೆ ತೊಟ್ಟು ಬಂದಿದ್ದನ್ನು ದೇವಾಲಯ ಸಮಿತಿಯು ತಡೆದಿತ್ತು.

ಬಳಿಕ ಅದು ಕೊಡವ ಮತ್ತು ಅರೆಭಾಷೆ ಗೌಡ ಸಮುದಾಯಗಳ ನಡುವಿನ ಗಲಾಟೆಯಾಗಿ ಬಲಾಗಿತ್ತು. ಅದಾದ ಬಳಿಕ ಕುಶಾಲನಗರದ ಅನುದೀಪ್ ಎಂಬ ಹಾಗೂ ಅಯ್ಯಪ್ಪ ಎಂಬ ವ್ಯಕ್ತಿಗಳಿಬ್ಬರೂ ಕೊಡವ ಹಾಗೂ ಅರೆಭಾಷೆ ಗೌಡ ಸಮುದಾಯಗಳ ವಿರುದ್ಧ ಪರಸ್ಪರ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿ ಸಮಾಜಿಕ ಜಾಲತಾಣಗಳಲ್ಲಿ ಮೆಸೇಜ್ಗಳನ್ನು ಹರಿಬಿಟ್ಟಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23

ಸದ್ಯ ಇವರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ಜನವರಿ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆದರೆ ಇದು ಅಷ್ಟಕ್ಕೇ ನಿಂತಿಲ್ಲ, ಬದಲಾಗಿ ಮತ್ತಷ್ಟು ಜನರು ಎರಡು ಸಮುದಾಯಗಳ ವಿರುದ್ಧ ಪರಸ್ಪರ ಕೀಳು ಭಾಷೆಗಳನ್ನು ಬಳಸಿ ನಿಂದಿಸಿ ಆಡಿಯೋ ಮೆಸೇಜ್ಗಳನ್ನು ಹಾಕುತ್ತಲೇ ಇದ್ದಾರೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವಿನ ಸಾಮರಸ್ಯ ದಿನದಿಂದ ದಿನಕ್ಕೆ ಮತ್ತಷ್ಟು ಹಾಳಾಗುತ್ತಲೇ ಇದೆ. ಡಿಸೆಂಬರ್ 28 ರಂದು ಗಲಾಟೆ ನಡೆದ ಬಳಿಕ 30 ರಂದು ಜಿಲ್ಲಾಡಳಿತ ದೇವಾಲಯದ ಸುತ್ತ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿತ್ತು. ಜೊತೆಗೆ ಅಂದೇ ಎರಡು ಸಮುದಾಯಗಳ ಕರೆದು ಜಿಲ್ಲಾಡಳಿತ ಶಾಂತಿ ಸಭೆ ನಡೆಸಿ ಗೊಂದಲ ನಿವಾರಣೆಗೆ ಪ್ರಯತ್ನಿಸಿತ್ತು.

ಇದೀಗ ಮತ್ತೆ ಎರಡು ಸಮುದಾಯಗಳ ನಡುವೆ ಇಂತಹದ್ದೇ ಸಾಮಾಜಿಕ ಜಾಲತಾಣದ ಸಮರ ಮುಂದುವರೆದಿದ್ದು ಬುಧವಾರವೂ ಕೂಡ ಅರೆಭಾಷೆ ಗೌಡ ಸಮುದಾಯದ ಜನರು ಸಾಮಾಜಿಕ ಜಾಲತಾಣಗಳಲ್ಲಿ ನಿಂತಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

33

ನೂರಾರು ಸಂಖ್ಯೆಯಲ್ಲಿ ಎಸ್ಪಿ ಕಚೇರಿ ಎದುರು ಜಮಾಯಿಸಿದ ಅರೆಭಾಷೆ ಗೌಡ ಸಮುದಾಯದ ಜನರು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹೀಗೆ ಇದು ಮುಂದುವರಿಯುತ್ತಲೇ ಇರುವುದರಿಂದ ಐದು ದಿನಗಳ ಕಾಲ ಸಮಯಾವಕಾಶ ನೀಡಿ ಒಂದು ನಿರ್ಧಾರಕ್ಕೆ ಬರುವಂತೆ ಎರಡು ಸಮುದಾಯಗಳಿಗೆ ಸೂಚಿಸಿದ್ದ ಜಿಲ್ಲಾಡಳಿತ ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯಗಳು ಪರಸ್ಪರ ನಿಂದಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನವರಿ 2 ರಂದು ಕೊನೆಗೊಳ್ಳಬೇಕಾಗಿದ್ದ ನಿಷೇಧಾಜ್ಞೆಯನ್ನು 7 ನೇ ತಾರೀಖಿನವರೆಗೆ ವಿಸ್ತರಣೆ ಮಾಡಿದೆ.

ಈ ಕುರಿತು ಮಾತನಾಡಿರುವ ಕೊಡಗು ಎಸ್ಪಿ ರಾಮರಾಜನ್ ಕೆ. ಅವರು ಇರಡು ಸಮುದಾಯಗಳನ್ನು ಇದನ್ನು ನಿಲ್ಲಿಸಬೇಕು. ಯಾರೆ ಆದರೂ ಈ ರೀತಿ ನಿಂದಿಸುವ ಕೆಲಸ ಮಾಡಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ. ಜೊತೆಗೆ ಎರಡು ಸಮುದಾಯಗಳ ಮುಖಂಡರು ಯಾರೋ ಕಿಡಿಗೇಡಿಗಳು ಮಾಡುವ ತಪ್ಪಿಗೆ ಇಡೀ ಸಮುದಾಯಗಳ ತೊಂದರೆ ಅನುಭವಿಸುವಂತೆ ಆಗಿವೆ. ಇದನ್ನು ಬಿಡಬೇಕು, ಇಲ್ಲದಿದ್ದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ಕೊಡಗು

Latest Videos
Recommended Stories
Recommended image1
ರಾಜ್ಯದ 101 ಬರಪೀಡಿತ ತಾಲೂಕು ಘೋಷಣೆ ಮಾಡಿದ ಸರ್ಕಾರ; ನಿಮ್ಮ ತಾಲೂಕಿದೆಯಾ ಚೆಕ್ ಮಾಡಿ, ಪರಿಹಾರ ಪಡೆಯಿರಿ!
Recommended image2
ಕನ್ನಡಿಗರ ಕುಡಿಯುವ ಕಾವೇರಿ ನೀರು ಕಿತ್ತುಕೊಂಡು, ರೈತರ ಬೆಳೆಗಳಿಗೆ ನೀರು ಹರಿಸುತ್ತಿರುವ ತಮಿಳುನಾಡು ಸರ್ಕಾರ!
Recommended image3
ಮೇಕೆದಾಟು ಜಲಾಶಯಕ್ಕೆ 8 ತಿಂಗಳಲ್ಲಿ ಶಂಕುಸ್ಥಾಪನೆ; ತಮಿಳುನಾಡು ಮನವೊಲಿಸಲು ನಾನೇ ಹೋಗ್ತೀನಿ-ಚಲುವರಾಯಸ್ವಾಮಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved