MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • BREAKING: ಕೊಡಗಿನ ದುಬಾರೆ ಶಿಬಿರದಲ್ಲಿ ಸಾಕಾನೆಗಳ ನಡುವೆ ಕಾಳಗ; ಆನೆ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ಬಲಿ!

BREAKING: ಕೊಡಗಿನ ದುಬಾರೆ ಶಿಬಿರದಲ್ಲಿ ಸಾಕಾನೆಗಳ ನಡುವೆ ಕಾಳಗ; ಆನೆ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ಬಲಿ!

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಸಾಕಾನೆಗಳ ನಡುವೆ ನಡೆದ ಕಾಳಗದಲ್ಲಿ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆನೆಗಳಿಗೆ ಸ್ನಾನ ಮಾಡಿಸುವ ವೇಳೆ 'ಮಾರ್ತಾಂಡ' ಮತ್ತು 'ಕಂಜನ್' ಎಂಬ ಆನೆಗಳ ನಡುವೆ ಘರ್ಷಣೆ ಉಂಟಾಗಿ ಈ ದುರಂತ ಸಂಭವಿಸಿದೆ.

2 Min read
Author : Sathish Kumar KH
| Updated : May 18 2026, 02:52 PM IST
Share this Photo Gallery
  • FB
  • TW
  • Linkdin
  • Whatsapp
15
ಆನೆಗೆ ಸಿಲುಕಿ ಮಹಿಳೆ ಸಾವು
Image Credit : Asianet News

ಆನೆಗೆ ಸಿಲುಕಿ ಮಹಿಳೆ ಸಾವು

ಕೊಡಗು (ಮೇ 18): ಪ್ರಕೃತಿ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರು ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಬಲಿಯಾದ ದಾರುಣ ಘಟನೆ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ ಮೂಲದ ಜಿನ್ನು (33) ಎಂಬ ಮಹಿಳೆ ಆನೆಗಳ ನಡುವಿನ ಜಗಳದ ವೇಳೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Add Asianetnews Kannada as a Preferred SourcegooglePreferred
25
ಘಟನೆ ಹಿನ್ನೆಲೆ
Image Credit : Asianet News

ಘಟನೆ ಹಿನ್ನೆಲೆ

ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ದುಬಾರೆ ಶಿಬಿರದಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ (Elephant Bathing) ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಶಿಬಿರದ ಸಾಕಾನೆಗಳಾದ 'ಮಾರ್ತಾಂಡ' ಮತ್ತು 'ಕಂಜನ್' ಎಂಬ ಎರಡು ಆನೆಗಳನ್ನು ನದಿಗೆ ಕರೆತರಲಾಗಿತ್ತು. ಮಾವುತ ಗೌಸ್ ಅವರು ಮಾರ್ತಾಂಡ ಆನೆಯನ್ನು ಸ್ನಾನ ಮಾಡಿಸಲು ನೀರಿಗೆ ಇಳಿಸುತ್ತಿದ್ದರು. ಈ ವೇಳೆ ಮಾರ್ತಾಂಡ ಆನೆಯನ್ನು ನೀರಿಗೆ ಸ್ವಲ್ಪ ಜೋರಾಗಿ ಇಳಿಸಿದಾಗ (ಬೀಳಿಸಿದಾಗ), ಅದು ಪಕ್ಕದಲ್ಲಿದ್ದ ಕಂಜನ್ ಆನೆಗೆ ತಗುಲಿದೆ ಎನ್ನಲಾಗಿದೆ.

Related Articles

Related image1
ಕೊಡಗು ಪ್ರವಾಸಿಗರ ಗಮನಕ್ಕೆ: ಮೇ 6 ರಂದು ವಿಶ್ವಪ್ರಸಿದ್ಧ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವೇಶ ಬಂದ್!
Related image2
ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
35
ಸಿಡಿದೆದ್ದ ಕಂಜನ್, ಬಲಿಯಾದ ಪ್ರವಾಸಿ ಮಹಿಳೆ
Image Credit : Asianet News

ಸಿಡಿದೆದ್ದ ಕಂಜನ್, ಬಲಿಯಾದ ಪ್ರವಾಸಿ ಮಹಿಳೆ

ತನ್ನ ದೇಹಕ್ಕೆ ಮಾರ್ತಾಂಡ ಆನೆ ಸ್ಪರ್ಶಿಸುತ್ತಿದ್ದಂತೆಯೇ ಕಂಜನ್ ಆನೆ ವಿಪರೀತ ಆಕ್ರೋಶಗೊಂಡಿದೆ. ತಕ್ಷಣವೇ ಮಾರ್ತಾಂಡನ ಮೇಲೆ ದಾಳಿ ಮಾಡಲು ಮುಂದಾಗಿದೆ. ಈ ಎರಡು ಬೃಹತ್ ಆನೆಗಳ ನಡುವೆ ಇದ್ದಕ್ಕಿದ್ದಂತೆ ಶುರುವಾದ ಈ ಘರ್ಷಣೆಯಿಂದಾಗಿ ಅಲ್ಲಿದ್ದ ಪ್ರವಾಸಿಗರು ದಿಕ್ಕಾಪಾಲಾಗಿ ಓಡತೊಡಗಿದ್ದಾರೆ. ಆದರೆ, ದುರದೃಷ್ಟವಶಾತ್ ಪ್ರವಾಸಿ ಮಹಿಳೆ ಜಿನ್ನು ಅವರು ಆನೆಗಳ ಜಗಳದ ರಭಸಕ್ಕೆ ಸಿಲುಕಿದ್ದಾರೆ. ಆನೆಯ ಕಾಲಡಿ ಸಿಲುಕಿದ ಅಥವಾ ದಾಳಿಗೆ ಒಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

45
ಸ್ಥಳದಲ್ಲಿ ಆಕ್ರಂದನ
Image Credit : Asianet News

ಸ್ಥಳದಲ್ಲಿ ಆಕ್ರಂದನ

ದುರ್ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಮೃತ ಜಿನ್ನು ಅವರ ಮೃತದೇಹವನ್ನು ತಕ್ಷಣವೇ ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರ್ತಾಂಡ ಆನೆಯ ಮಾವುತ ಗೌಸ್ ಹಾಗೂ ಕಂಜನ್ ಆನೆಯ ಮಾವುತ ವಿಜಯ ಅವರು ಆನೆಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರೂ ಅಷ್ಟರಲ್ಲೇ ಅನಾಹುತ ಸಂಭವಿಸಿತ್ತು.

55
ಪ್ರವಾಸಿಗರ ಸುರಕ್ಷತೆ ಬಗ್ಗೆ ಆತಂಕ
Image Credit : Asianet News

ಪ್ರವಾಸಿಗರ ಸುರಕ್ಷತೆ ಬಗ್ಗೆ ಆತಂಕ

ದುಬಾರೆ ಸಾಕಾನೆ ಶಿಬಿರಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಅದರಲ್ಲೂ ಆನೆಗಳಿಗೆ ಸ್ನಾನ ಮಾಡಿಸುವ ದೃಶ್ಯವನ್ನು ಹತ್ತಿರದಿಂದ ನೋಡಲು ಜನರು ಮುಗಿಬೀಳುತ್ತಾರೆ. ಇಂತಹ ಸಂವೇದನಾಶೀಲ ಸಂದರ್ಭದಲ್ಲಿ ಪ್ರವಾಸಿಗರು ಮತ್ತು ಆನೆಗಳ ನಡುವೆ ಇರಬೇಕಾದ ಸುರಕ್ಷಿತ ಅಂತರದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಂದರ ಪ್ರವಾಸವೊಂದು ಹೀಗೆ ಮಸಣದ ಹಾದಿಯಾಗಿರುವುದು ಮೃತರ ಕುಟುಂಬದವರಲ್ಲಿ ಮತ್ತು ಪ್ರವಾಸಿಗರಲ್ಲಿ ಮೌನ ಆವರಿಸುವಂತೆ ಮಾಡಿದೆ.

Tragic scenes from Dubare Elephant Camp in Kodagu.

A clash between Dasara elephants Kanjan and Jai Marthanda triggered panic among tourists at the Cauvery river bathing point, leading to the death of a tourist from Chennai.

Serious questions are now being raised over tourist… pic.twitter.com/lC9wIbE1ay

— Akshay Gowda (@akshay_gowda_pv) May 18, 2026

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಆನೆಗಳು
ಪ್ರವಾಸೋದ್ಯಮ
ಕೊಡಗು

Latest Videos
Recommended Stories
Recommended image1
ಕೆಪಿಸಿಸಿ ಕಚೇರಿಯಲ್ಲಿ 'ಕೈ' ಕಾರ್ಯಕರ್ತರ ರಣರಂಗ: ಯೂತ್ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಗದ್ದಲ, ತಳ್ಳಾಟ-ನೂಕಾಟ!
Recommended image2
ಕರಾವಳಿ, ಮಲೆನಾಡನ್ನೂ ಮೀರಿಸಿದ ಗದಗ ಮಳೆ ಅಬ್ಬರ: ಭಾನುವಾರ ಜಿಲ್ಲಾವಾರು ಎಷ್ಟು ಮಳೆಯಾಗಿದೆ ವಿವರ ನೋಡಿ!
Recommended image3
ಬಿಡದಿ ಟೌನ್‌ಶಿಪ್ ವಿವಾದ:ಭೂ ಮಾಫಿಯಾ ಖಂಡಿಸಿ ಹೋರಾಟಕ್ಕಿಳಿದ ಹೆಚ್‌ಡಿಡಿ, ಸೋನಿಯಾ ಗಾಂಧಿ, ರಾಹುಲ್‌ಗೆ ದೇವೇಗೌಡ ಪತ್ರ
Related Stories
Recommended image1
ಕೊಡಗು ಪ್ರವಾಸಿಗರ ಗಮನಕ್ಕೆ: ಮೇ 6 ರಂದು ವಿಶ್ವಪ್ರಸಿದ್ಧ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವೇಶ ಬಂದ್!
Recommended image2
ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved