MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕೆಎಸ್‌ಡಿಎಲ್‌ ವತಿಯಿಂದ 10 ಸಾವಿರ ಅರಣ್ಯ ರಕ್ಷಕರಿಗೆ ಸುರಕ್ಷಾ ಕಿಟ್ ವಿತರಣೆ!

ಕೆಎಸ್‌ಡಿಎಲ್‌ ವತಿಯಿಂದ 10 ಸಾವಿರ ಅರಣ್ಯ ರಕ್ಷಕರಿಗೆ ಸುರಕ್ಷಾ ಕಿಟ್ ವಿತರಣೆ!

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು.

2 Min read
Sathish Kumar KH
Published : Jun 02 2025, 07:19 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : stockPhoto

ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು.

25
Image Credit : Forest Department

ಕೆಎಸ್‌ಡಿಎಲ್ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 2 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಈ ವೇಳೆ ಅರಣ್ಯ ರಕ್ಷಕರಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

Related Articles

Related image1
Alamatti Dam: ಕಾನೂನು ತೊಡಕು ಇಲ್ಲದಿದ್ದರೆ ಆಲಮಟ್ಟಿ 1 ಮೀ. ಎತ್ತರ: ಸಚಿವ ಎಂ.ಬಿ.ಪಾಟೀಲ್
Related image2
ಶಿವಮೊಗ್ಗ ಏರ್ಪೋರ್ಟಲ್ಲಿ ಮೊದಲ ವಿಮಾನ ತರಬೇತಿ ಸಂಸ್ಥೆ ಸ್ಥಾಪನೆ: ಎಂ.ಬಿ.ಪಾಟೀಲ್‌
35
Image Credit : Forest Department

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೆಎಸ್ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರುಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ. ಕೆಎಸ್ಡಿಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ.

45
Image Credit : Forest Department

ಜೂ.4ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ ಈ‌ ಕಿಟ್ ವಿತರಿಸಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ, ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಉಳಿದೆಡೆಗಳ ಅರಣ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

55
Image Credit : Forest Department

ಕಿಟ್ ಸ್ವೀಕರಿಸುವ ಪ್ರತಿಯೊಬ್ಬರಿಂದ ಮೊದಲೇ ಅಳತೆ ತೆಗೆದುಕೊಂಡು, ಜರ್ಕಿನ್, ಶೂ ಖರೀದಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಖಾಯಂ ಸಿಬ್ಬಂದಿ ಯಾಗಿದ್ದು, ಮಿಕ್ಕವರು ತಾತ್ಕಾಲಿಕ ನೆಲೆಯಲ್ಲಿದ್ದಾರೆ. ಇವರೆಲ್ಲರ ಯೋಗಕ್ಷೇಮ ನಮ್ಮ ಹೊಣೆಯಾಗಿದೆ. 

ವನ್ಯಜೀವಿ ಮಂಡಳಿ ಸದಸ್ಯರೂ ಆದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಅಂಡ್ ಅನಿಮಲ್ಸ್ (ಎಸ್ ಪಿಪಿಎ) ಸಂಸ್ಥಾಪಕ ಧ್ರುವ ಪಾಟೀಲ ಅವರು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾಗಿದ್ದು, ಪ್ರತಿಕೂಲ ಸಂದರ್ಭಗಳಲ್ಲಿ ವನರಕ್ಷಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಕಿವಿಯಾಗಿ ಈ ಯೋಜನೆ ರೂಪಿಸಲು ನೆರವಾಗಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಎಂ. ಬಿ. ಪಾಟೀಲ್
ಈಶ್ವರ ಖಂಡ್ರೆ
ಅರಣ್ಯ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved