MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಕೊಲ್ಲಿ ಯುದ್ಧದಿಂದ ಡಾಂಬರ್‌ ದರ ದುಪ್ಪಟ್ಟು ದುಬಾರಿ: ಕರ್ನಾಟಕದ ಹಲವು ಕಡೆ ರಸ್ತೆ ಕೆಲಸ ಸ್ಥಗಿತ

ಕೊಲ್ಲಿ ಯುದ್ಧದಿಂದ ಡಾಂಬರ್‌ ದರ ದುಪ್ಪಟ್ಟು ದುಬಾರಿ: ಕರ್ನಾಟಕದ ಹಲವು ಕಡೆ ರಸ್ತೆ ಕೆಲಸ ಸ್ಥಗಿತ

ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಡಾಂಬರ್ ಬೆಲೆ ಪ್ರತಿ ಟನ್‌ಗೆ ₹45 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆಯಾಗಿದೆ. ಇದರಿಂದ ಹೂವಿನಹಡಗಲಿ ತಾಲೂಕಿನ ಹಲವು ರಸ್ತೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ, ಗುತ್ತಿಗೆದಾರರು ಜೆಲ್ಲಿಕಲ್ಲು ಹಾಕಿ ಕಾಮಗಾರಿ ನಿಲ್ಲಿಸಿದ್ದಾರೆ.

2 Min read
Author : Gowthami K
Published : Jun 15 2026, 04:29 PM IST
Share this Photo Gallery
  • FB
  • TW
  • Linkdin
  • Whatsapp
14
₹45 ಸಾವಿರದಿಂದ ₹ 1 ಲಕ್ಷಕ್ಕೆ ಏರಿಕೆ
Image Credit : Asianet News

₹45 ಸಾವಿರದಿಂದ ₹ 1 ಲಕ್ಷಕ್ಕೆ ಏರಿಕೆ

ವರದಿ: ಚಂದ್ರು ಕೊಂಚಿಗೇರಿ

ಹೂವಿನಹಡಗಲಿ: ಮಧ್ಯಪ್ರಾಚ್ಯದ ಯುದ್ಧದ ಈಗ ರಸ್ತೆ ಮೇಲೂ ಪರಿಣಾಮ ಬೀರಿದೆ. ಪ್ರತಿ ಟನ್‌ ಡಾಂಬರ್‌ ಬೆಲೆ ₹45 ಸಾವಿರದಿಂದ ₹ 1 ಲಕ್ಷಕ್ಕೆ ಏರಿಕೆಯಾಗಿದೆ. ಇದರಿಂದ ರಸ್ತೆ ಅಭಿವೃದ್ಧಿಗೂ ಕುತ್ತು ಬಂದಿದೆ. ಟೆಂಡರ್‌ ಪಡೆದ ಗುತ್ತಿಗೆದಾರರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಯುದ್ಧಕ್ಕೂ ಮುನ್ನವೇ ಕಾಮಗಾರಿ ಗುತ್ತಿಗೆ ಪಡೆದ ಗುತ್ತಿಗೆದಾರರು ಒಪ್ಪಂದದ ಪ್ರಕಾರ ವಿಧಿ ಇಲ್ಲದೇ ಕಾಮಗಾರಿ ಪೂರ್ಣಗೊಳಿಸಬೇಕಿದೆ. ಈಗ ಡಾಂಬರ್‌ ಖರೀದಿಸಲು ಹೋದರೆ ಸಿಕ್ಕಾಪಟ್ಟೆ ಬೆಲೆ ಏರಿಕೆಯಾಗಿದೆ. ಇನ್ನು ಸ್ವಲ್ಪ ದಿನ ತಡೆದರೆ ಬೆಲೆ ಇಳಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿರುವ ಗುತ್ತಿಗೆದಾರರು, ಹೂವಿನಹಡಗಲಿಯ ಹಲವು ರಸ್ತೆಗಳ ಮೇಲೆ ಜೆಲ್ಲಿ ಕಲ್ಲು ಹಾಕಿ ಬಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಧೂಳು ಮೆತ್ತಿಕೊಂಡು ಹೋಗುವ ವಾಹನ
Image Credit : Google

ಧೂಳು ಮೆತ್ತಿಕೊಂಡು ಹೋಗುವ ವಾಹನ

ಹೌದು, ತಾಲೂಕಿನ ಮೈಲಾರ-ತೋರಣಗಲ್ಲು, ಅರಭಾವಿ-ಚಳಕೇರಿ ರಾಜ್ಯ ಹೆದ್ದಾರಿ ಸೇರಿದಂತೆ ಇನ್ನಿತರ ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಟೆಂಡರ್‌ ಕರೆದು, ಕಾಮಗಾರಿ ಆದೇಶ ನೀಡಿದೆ. ಗುತ್ತಿಗೆದಾರರು ಟೆಂಡರ್‌ ನಿಯಮಗಳಂತೆ ಕಾಮಗಾರಿ ಆರಂಭಿಸಿ, ರಸ್ತೆಗೆ ಇನ್ನು ಡಾಂಬರೀಕರಣ ಹಾಕಬೇಕು ಎನ್ನುವಷ್ಟರಲ್ಲಿ ಮಧ್ಯಪ್ರಾಚ್ಯ ಯುದ್ಧ ಶುರುವಾಗಿತ್ತು. ಇದರ ಪರಿಣಾಮದಿಂದ ಡಾಂಬರ್‌ ಬೆಲೆ ಗಗನಕ್ಕೇರಿದೆ. ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಯನ್ನು ಆಯ್ದ ಮೂರು ಕಡೆಗಳಲ್ಲಿ ಹಾಳಾಗಿರುವ ರಸ್ತೆಯನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಕಲ್ಲಿನ ಪುಡಿ ಮಿಶ್ರಿತ ಜೆಲ್ಲಿ ಕಲ್ಲು ಹಾಕಿದ್ದಾರೆ. ವಾಹನಗಳ ಓಡಾಟದಿಂದ ರಸ್ತೆಗೆ ಹಾಕಿದ್ದ ಜೆಲ್ಲಿ ಕಲ್ಲು ಕಿತ್ತು ಹೋಗುತ್ತಿವೆ. ಜತೆಗೆ ರಸ್ತೆ ತುಂಬೆಲ್ಲ ಧೂಳು ಎಗರುತ್ತಿದೆ. ದೊಡ್ಡ ವಾಹನಗಳ ಹಿಂದೆ ಬೈಕ್‌ ಸವಾರರು ಧೂಳು ಮೆತ್ತಿಕೊಂಡು ಹೋಗುವ ಸ್ಥಿತಿ ಇದೆ.

Related Articles

Related image1
ಯುದ್ಧದ ನಿರ್ಬಂಧ ಮೀರಿ ಯುಎಇಯಿಂದ ಕಾರವಾರ ತಲುಪಿದ ಕಚ್ಚಾ ಡಾಂಬರ್ ತುಂಬಿದ ಹಡಗು
Related image2
ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಕಾರವಾರಕ್ಕೆ ಬರ್ತಿದ್ದ ಡಾಂಬರ್ ಕೂಡ ಬಂದ್; ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ!
34
ಗುತ್ತಿಗೆದಾರರಿಗೆ ತೊಂದರೆ
Image Credit : Asianet News

ಗುತ್ತಿಗೆದಾರರಿಗೆ ತೊಂದರೆ

ತಾಲೂಕಿನ ಉತ್ತಂಗಿ ಬಳಿ ಅರಭಾವಿ-ಚಳಕೇರಿ ರಾಜ್ಯ ಹೆದ್ದಾರಿ ಅಭಿವೃದ್ಧಿ ನಡೆಯುತ್ತಿದೆ. ರಸ್ತೆಗೆ ಜೆಲ್ಲಿಕಲ್ಲು ಹಾಕಿದ್ದಾರೆ. ಸಾಕಷ್ಟು ಕಡೆ ಕಲ್ಲು ಕಿತ್ತು ಹೋಗಿ ಗುಂಡಿಗಳಾಗಿವೆ. ಕಾಮಗಾರಿ ಪ್ರಗತಿಯಲ್ಲಿ ಇರುವಾಗಲೇ ರಸ್ತೆ ಕಿತ್ತು ಹೋಗಿದೆ. ಈ ರಾಜ್ಯ ಹೆದ್ದಾರಿಯಲ್ಲಿ ಒಂದೇ ತಿಂಗಳಿನಲ್ಲಿ ಮೂರು ರಸ್ತೆ ಅಪಘಾತಗಳು ಉಂಟಾಗಿವೆ. ತಾಲೂಕಿನಲ್ಲಿ ಒಟ್ಟಾರೆ 10 ಕಿ.ಮೀ. ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಎಲ್ಲ ಕಡೆಗೂ ಪರಿಸ್ಥಿತಿ ಹೀಗೆ ಇದೆ. ರಸ್ತೆ ಧೂಳು ಮುಕ್ತ ಮಾಡಲು ತಿಳಿದಾಗೊಮ್ಮೆ ನೀರು ಸಿಂಪರಣೆ ಮಾಡುತ್ತಾರೆ.

ರಾಜ್ಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಡಾಂಬರ್‌ ಬೆಲೆ ಏರಿಕೆಯಿಂದ ಗುತ್ತಿಗೆದಾರರಿಗೆ ತೊಂದರೆಯಾಗಿದೆ. ಅಗ್ರಿಮೆಂಟ್‌ ಪ್ರಕಾರ ಅವರೇ ಕೆಲಸ ಪೂರ್ಣಗೊಳಿಸಬೇಕು. ಧೂಳು ಮುಕ್ತ ಮಾಡಲು ನೀರು ಸಿಂಪರಣೆ ಮಾಡಲಾಗುತ್ತಿದೆ.

-ನಾಗೇಶ, ಲೋಕೋಪಯೋಗಿ ಇಲಾಖೆಯ ಎಇಇ

44
ರಸ್ತೆ ತುಂಬಾ ಧೂಳು
Image Credit : Kannada Prabha

ರಸ್ತೆ ತುಂಬಾ ಧೂಳು

ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಗೆ ಕಲ್ಲಿನ ಪುಡಿ, ಜೆಲ್ಲಿ ಕಲ್ಲು ಹಾಕಿದ್ದಾರೆ. ಮೈಲಾರಕ್ಕೆ ಬರುವ ಭಕ್ತರು ಧೂಳು ಮೆತ್ತಿಕೊಂಡೇ ಬರುತ್ತಾರೆ. ದೊಡ್ಡ ವಾಹನದ ಹಿಂದೆ ಹೋದರೆ ದಾರಿಯೇ ಕಾಣುತ್ತಿಲ್ಲ. ಅಷ್ಟೊಂದು ಧೂಳು ಇದೆ. ಸಂಬಂಧ ಪಟ್ಟವರು ಬೇಗನೆ ಕಾಮಗಾರಿ ಪೂರ್ಣಗೊಳಿಸಲಿ.

-ಮೈಲಾರ ಗ್ರಾಮಸ್ಥರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕರ್ನಾಟಕ ಸುದ್ದಿ
ಬೆಲೆ ಏರಿಕೆ
ಸುದ್ದಿ
ವ್ಯವಹಾರ

Latest Videos
Recommended Stories
Recommended image1
ಜಮೀರ್‌ಗೆ ಡಿಸಿಎಂ ಪಟ್ಟಕ್ಕಾಗಿ ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ, ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ವಶಕ್ಕೆ!
Recommended image2
ಗೃಹಲಕ್ಷ್ಮೀ ಆಯ್ತು ಗೃಹ ಜ್ಯೋತಿ ಯೋಜನೆಗೆ ಸರ್ಕಾರದ ಮೇಜರ್ ಸರ್ಜರಿ, ಉಚಿತ ವಿದ್ಯುತ್ ಪಡೆಯುವಲ್ಲಿಯೂ ಗೋಲ್ ಮಾಲ್!
Recommended image3
ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್‌, 'ಸಸ್ಪೆಂಡ್‌ ಮಾಡಿದ್ದೀವಿ' ಎಂದ ಪ್ರಿಯಾಂಕ್‌ ಖರ್ಗೆ
Related Stories
Recommended image1
ಯುದ್ಧದ ನಿರ್ಬಂಧ ಮೀರಿ ಯುಎಇಯಿಂದ ಕಾರವಾರ ತಲುಪಿದ ಕಚ್ಚಾ ಡಾಂಬರ್ ತುಂಬಿದ ಹಡಗು
Recommended image2
ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಕಾರವಾರಕ್ಕೆ ಬರ್ತಿದ್ದ ಡಾಂಬರ್ ಕೂಡ ಬಂದ್; ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved