MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಮುಂಗಾರು ಆಗಮನ ಬೆನ್ನಲ್ಲೇ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; 6 ಜಿಲ್ಲೆಗಳಿಗೆ 'ರೆಟ್ ಅಲರ್ಟ್' ಘೋಷಣೆ!

ಮುಂಗಾರು ಆಗಮನ ಬೆನ್ನಲ್ಲೇ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; 6 ಜಿಲ್ಲೆಗಳಿಗೆ 'ರೆಟ್ ಅಲರ್ಟ್' ಘೋಷಣೆ!

ನೈಋತ್ಯ ಮುಂಗಾರು ಕರ್ನಾಟಕ ಪ್ರವೇಶಿಸಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ. ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದಾಗಿ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅತಿ ಭೀಕರ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.

2 Min read
Author : Sathish Kumar KH
Published : Jun 07 2026, 03:28 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : Asianet News

ಬೆಂಗಳೂರು (ಜೂ.07): ನೈಋತ್ಯ ಮುಂಗಾರು (Southwest Monsoon) ಕರ್ನಾಟಕದ ಹಲವು ಭಾಗಗಳಿಗೆ ಯಶಸ್ವಿಯಾಗಿ ಪ್ರವೇಶಿಸಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಜೂನ್ 8 ರಿಂದ ಜೂನ್ 10 ರ ಅವಧಿಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅತ್ಯಂತ ಭೀಕರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ತೀವ್ರ ಮುನ್ನೆಚ್ಚರಿಕೆ (Red/Orange Alert) ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
Image Credit : Asianet News

ಮುಂಗಾರು ಪ್ರಗತಿ ಮತ್ತು ಹವಾಮಾನ ವೈಪರೀತ್ಯ:

ಹವಾಮಾನ ಇಲಾಖೆಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಎನ್. ಪುವಿಯರಸನ್ ಅವರು ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ನೈಋತ್ಯ ಮುಂಗಾರು ಈಗ ದೇವಗಢ, ಕೊಪ್ಪಳ, ಅನಂತಪುರ ಮತ್ತು ಚೆನ್ನೈ ಮಾರ್ಗವಾಗಿ ಮುನ್ನಡೆಯುತ್ತಿದೆ. ಮುಂದಿನ 2 ರಿಂದ 3 ದಿನಗಳಲ್ಲಿ ಇದು ಸಮಗ್ರ ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದ ಇನ್ನು ಕೆಲವು ಭಾಗಗಳಿಗೆ ವ್ಯಾಪಿಸಲು ವಾತಾವರಣ ಪೂರಕವಾಗಿದೆ. 

ಪ್ರಸ್ತುತ ದಕ್ಷಿಣ ಕೊಂಕಣ ಕರಾವಳಿಯ ಅರಬ್ಬೀ ಸಮುದ್ರದಲ್ಲಿ 5.8 ಕಿಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ (Cyclonic Circulation) ಸೃಷ್ಟಿಯಾಗಿದೆ. ಇದರೊಂದಿಗೆ ಕರಾವಳಿ ಕರ್ನಾಟಕದಿಂದ ಕರಾವಳಿ ಆಂಧ್ರಪ್ರದೇಶದವರೆಗೆ ಬಲವಾದ ವಾಯುಭಾರ ಕುಸಿತದ ರೇಖೆ (Trough) ಗೋಚರಿಸುತ್ತಿರುವುದರಿಂದ ಮಳೆಯ ತೀವ್ರತೆ ಹೆಚ್ಚಾಗಲಿದೆ.

Related Articles

Related image1
Monsoon: ರಾಜ್ಯದ 11 ಜಿಲ್ಲೆಯಲ್ಲಿ ಮುಂಗಾರು ಅಬ್ಬರದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ
Related image2
ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ
37
Image Credit : Asianet News

ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಮುನ್ನೆಚ್ಚರಿಕೆ:

ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ.

ಜೂನ್ 7 (ಇಂದು): ಕರಾವಳಿಯಾದ್ಯಂತ ಗಂಟೆಗೆ 30-40 ಕಿಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜೂನ್ 8 ಮತ್ತು 9: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 'ಅತ್ಯಂತ ಭೀಕರ ಮಳೆ' (Extremely Heavy Rainfall) ಬೀಳಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಎರಡು ದಿನಗಳಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಯಿದೆ.

ಜೂನ್ 10: ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅತಿ ಹೆಚ್ವು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

47
Image Credit : Asianet News

ಉತ್ತರ ಒಳನಾಡು: ಸಿಡಿಲು-ಗಾಳಿ ಸಹಿತ ಮಳೆ:

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 7 ರಿಂದ ಜೂನ್ 10 ರವರೆಗೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.

ಜೂನ್ 7: ಬೆಳಗಾವಿ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಾಪುರ ಮತ್ತು ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಜೂನ್ 10: ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ತಾರಕಕ್ಕೇರಲಿದ್ದು, ಅತ್ಯಂತ ಭಾರೀ ಮಳೆಯಾಗುವ ಆರೆಂಜ್ ಅಲರ್ಸ್ ಮುನ್ಸೂಚನೆ ಇದೆ.

57
Image Credit : Asianet News

ದಕ್ಷಿಣ ಒಳನಾಡು ಹಾಗೂ ಬೆಂಗಳೂರು ಹವಾಮಾನ ವರದಿ:

ದಕ್ಷಿಣ ಒಳನಾಡಿನ ಮಲೆನಾಡು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಜೂನ್ 9 ಮತ್ತು 10 ರಂದು ವರುಣನ ಅಬ್ಬರ ಜೋರಾಗಿರಲಿದೆ. ಮಲೆನಾಡು ಭಾಗ: ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್ 9 ಮತ್ತು 10 ರಂದು ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಾಸನ, ಕೊಡಗು ಮತ್ತು ದಾವಣಗೆರೆ ಜಿಲ್ಲೆಗಳೂ ಕೂಡ ಭಾರೀ ಮಳೆಗೆ ಸಾಕ್ಷಿಯಾಗಲಿವೆ.

67
Image Credit : Asianet News

ಸಿಲಿಕಾನ್ ಸಿಟಿ ಬೆಂಗಳೂರು

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ನಗರದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-40 ಕಿಮೀ ವೇಗದಲ್ಲಿ ತಂಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಹವಾಮಾನ ಹಿತಕರವಾಗಿರಲಿದೆ.

77
Image Credit : Asianet News

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮುಂಜಾನೆಯಿಂದ ಎಡಬಿಡದೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯ ಆರ್ಭಟಕ್ಕೆ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದೆ. ಶಿರಸಿ ಮತ್ತು ಶಿರಸಿ ಗ್ರಾಮೀಣ ಭಾಗದಲ್ಲಿ ತೀವ್ರ ಮಳೆಯಾಗಿದೆ. ಭಾರಿ ಮಳೆಯಿಂದ ರಸ್ತೆ ಮೇಲೆಲ್ಲ ನೀರು ತುಂಬಿದ್ದು ವಾಹನ‌ಸವಾರರು ಸಂಚಾರಕ್ಕೆ ವ್ಯತೆ ಪಡುವಂತಾಗಿದೆ. ನಿರಂತರ ಮಳೆಯಿಂದ ಶಿರಸಿ ಜನ ಕಂಗೆಟ್ಟಿದ್ದಾರೆ. ಕಳೆದ ಎರಡು ದಿನ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಸುರಿದ ಮಳೆ ಇವತ್ತು ಮಲೆನಾಡಲ್ಲೂ ತನ್ನ ಆರ್ಭಟ ಶುರುಮಾಡಿಕೊಂಡಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಮಳೆ
ಮಳೆ
ಹವಾಮಾನ ಮುನ್ಸೂಚನೆ
ಕರ್ನಾಟಕ ಹವಾಮಾನ
Latest Videos
Recommended Stories
Recommended image1
ಸಿಇಟಿ ಫಲಿತಾಂಶ: ಟಾಪ್‌ 1000 ರ್‍ಯಾಂಕ್‌ನಲ್ಲಿ ಕನ್ನಡ ಮಾಧ್ಯಮದವರು ಬರೀ 9 ವಿದ್ಯಾರ್ಥಿಗಳು
Recommended image2
ಸ್ವಕ್ಷೇತ್ರದ 20 ಗ್ರಾಪಂಗೆ ಇಂದು ಡಿಕೆ - ಸಿಎಂ ಕನಸು ನನಸು ಮಾಡಿದ ತವರಿಗೆ ಜನರಿಗೆ ಕೃತಜ್ಞತೆ ಸಲ್ಲಿಕೆ
Recommended image3
Monsoon: ರಾಜ್ಯದ 11 ಜಿಲ್ಲೆಯಲ್ಲಿ ಮುಂಗಾರು ಅಬ್ಬರದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ
Related Stories
Recommended image1
Monsoon: ರಾಜ್ಯದ 11 ಜಿಲ್ಲೆಯಲ್ಲಿ ಮುಂಗಾರು ಅಬ್ಬರದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ
Recommended image2
ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved