MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ನಟ ದರ್ಶನ್ ಬಿಡುಗಡೆಗೆ ಅಲಾಯಿ ದೇವರ ಮೊರೆ ಹೋದ ಅಭಿಮಾನಿಗಳು!

ನಟ ದರ್ಶನ್ ಬಿಡುಗಡೆಗೆ ಅಲಾಯಿ ದೇವರ ಮೊರೆ ಹೋದ ಅಭಿಮಾನಿಗಳು!

ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗುವಂತೆ ಅಭಿಮಾನಿಗಳೂ ಮೊಹರಂ ಹಬ್ಬದ ಅಲಾಯಿ ದೇವರಿಗೆ ಹರಕೆ ಹೊತ್ತು ದರ್ಶನ್ ಫೋಟೊ ಎತ್ತಿ ಕುಣಿದಿರುವುದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

1 Min read
Ravi Janekal
Published : Jul 15 2024, 12:30 PM IST| Updated : Jul 15 2024, 12:45 PM IST
Share this Photo Gallery
  • FB
  • TW
  • Linkdin
  • Whatsapp
15

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ತಿಂಗಳು ಸಮೀಪಿಸಿದೆ. ಆದರೂ ಜೈಲಿನ ಮುಂಭಾಗ ಅಭಿಮಾನಿಗಳು ಬರುವುದು ಕಣ್ಣೀರಿಡುತ್ತಿರುವುದು ನಿಲ್ಲುತ್ತಿಲ್ಲ. ಸಾಲದ್ದಕ್ಕೆ ದರ್ಶನ್ ಬಿಡುಗಡೆಗೆ ದೇವರ ಬಳಿ ವಿಚಿತ್ರ ಹರಕೆ ಹೊರುತ್ತಿರುವ ಅಭಿಮಾನಿಗಳು. ಇದೀಗ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗುವಂತೆ ಅಭಿಮಾನಿಗಳೂ ಮೊಹರಂ ಹಬ್ಬದ ಅಲಾಯಿ ದೇವರಿಗೆ ಹರಕೆ ಹೊತ್ತು ದರ್ಶನ್ ಫೋಟೊ ಎತ್ತಿ ಕುಣಿದಿರುವುದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

25

ಹೌದು ಯಾದಗಿರಿ ಜಿಲ್ಲೆಯ ಅರಕೇರಾ(ಕೆ) ಗ್ರಾಮದಲ್ಲಿ ಅಭಿಮಾನಿಗಳು ಇಂತದ್ದೊಂದು ಹರಕೆ ಹೊತ್ತು ನಟ ದರ್ಶನ್ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. 

35

ನೂರಾರು ಜನರು ನೆರೆದಿದ್ದ ಮೊಹರಂ ಹಬ್ಬದ ವೇಳೆ ಭರ್ಜರಿ ಹಲಾಯ್ ಕುಣಿದ ದರ್ಶನ್ ಅಭಿಮಾನಿಗಳು. ಸ್ಟಾರ್ ಸ್ಟಾರ್ ಚಾಲೆಂಜಿಂಗ್ ಸ್ಟಾರ್, ಡಿಬಾಸ್ ಡಿಬಾಸ್ ಎಂದು ಘೋಷಣೆ ಕೂಗುತ್ತಾ ಕುಣಿದಿದ್ದಾರೆ. ಬಳಿಕ ದೇವರ ಬಳಿಯೂ ದರ್ಶನ್‌ಗಾಗಿ ಪ್ರಾರ್ಥನೆ ಮಾಡಿದ್ದಾರೆ. ಶೀಘ್ರವಾಗಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುವಂತೆ ದೇವರಿಗೆ ಪ್ರಾರ್ಥಿಸಿದ್ದಾರೆ. 

45

ರೇಣುಕಾ ಸ್ವಾಮಿ ಕೊಲೆ ಕೇಸ್‌ಲ್ಲಿ ಜೈಲು ಸೇರಿದಾಗಿಂದ ಕಣ್ಣೀರು ಹಾಕುತ್ತಿರುವ ದರ್ಶನ್, ಜೈಲೂಟಕ್ಕೆ ಹೊಂದಿಕೊಳ್ಳುತ್ತಿಲ್ಲ, ಕಣ್ಣಿಗೆ ನಿದ್ದೆಯೂ ಹತ್ತುತ್ತಿಲ್ಲ. ಕೆಲದಿಗಳಿಂದ ವಾಂತಿ ಭೇದಿಯಾಗಿ ಅನಾರೋಗ್ಯಗೊಂಡಿದ್ದಾರೆ. ಇತ್ತ ಪ್ರೇಯಸಿ ಪವಿತ್ರಾ ಗೌಡಗೂ ಅನಾರೋಗ್ಯ ಕಾಡುತ್ತಿದೆ. 

55

ದರ್ಶನ್ ತಪ್ಪು ಮಾಡಿಲ್ಲ, ಯಾರದೋ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ ಎನ್ನುತ್ತಿರುವ ಅಭಿಮಾನಿಗಳು. ರಾಜ್ಯಾದ್ಯಂತ ಹಲವಾರು ಅಭಿಮಾನಿಗಳು ದೇವರ ಬಳಿ ವಿಚಿತ್ರ ಹರಕೆ ಹೊತ್ತಿದ್ದಾರೆ. ತಿರುಪತಿ ತಿಮ್ಮಪ್ಪನಿಂದ ಇಡಿದು, ಊರಲ್ಲಿನ ದೇವರುಗಳಿಗೆ ಹರಕೆ ಹೊತ್ತಿದ್ದಾರೆ. ಇದೀಗ ಯಾದಗಿರಿ ಜಿಲ್ಲೆಯ ಅರಕೇರಾ ಗ್ರಾಮದ ದರ್ಶನ್ ಅಭಿಮಾನಿಗಳು ಮೊಹರಂ ದೇವರ ಮೊರೆ ಹೋಗಿರುವುದು ಎಲ್ಲರ ಗಮನ ಸೇಳೆದಿದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved