MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ

ವಿಶ್ವವಿಖ್ಯಾತ ಮೈಸೂರು ಅರಮನೆಯ ವರಹ ಗೇಟ್‌ನ ಮೇಲ್ಛಾವಣಿ ಕುಸಿದು, ನಿರ್ವಹಣೆಯ ನಿರ್ಲಕ್ಷ್ಯವನ್ನು ಮತ್ತೊಮ್ಮೆ ಬಯಲು ಮಾಡಿದೆ.  ಈ ಹಿಂದೆ ದರ್ಬಾರ್ ಹಾಲ್ ಸೋರಿಕೆಯಂತಹ ಘಟನೆಗಳು ನಡೆದಿದ್ದು, ಐತಿಹಾಸಿಕ ಕಟ್ಟಡದ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ.

2 Min read
Sathish Kumar KH
Published : Dec 11 2025, 06:45 PM IST
Share this Photo Gallery
  • FB
  • TW
  • Linkdin
  • Whatsapp
16
ಮೈಸೂರು ಅರಮನೆ ವರಾಹ ದ್ವಾರ
Image Credit : Asianet News

ಮೈಸೂರು ಅರಮನೆ ವರಾಹ ದ್ವಾರ

ವಿಶ್ವವಿಖ್ಯಾತ ಮೈಸೂರು ಅರಮನೆಯ ನಿರ್ವಹಣೆ ಕುರಿತು ನಿರ್ಲಕ್ಷ್ಯ ಮುಂದುವರೆದಿರುವುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಮೈಸೂರು ಅರಮನೆಯ ಪ್ರಮುಖ ಪ್ರವೇಶ ದ್ವಾರಗಳಲ್ಲಿ ಒಂದಾದ ವರಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿಯು ದಿಢೀರ್ ಕುಸಿತಗೊಂಡಿದ್ದು, ಈ ದ್ವಾರದ ಮೂಲಕ ಓಡಾಡುವ ಪ್ರವಾಸಿಗರ ಗೈರಿನಿಂದ ಭಾರೀ ಅನಾಹುತವೊಂದು ಸದ್ಯಕ್ಕೆ ತಪ್ಪಿದೆ.

ಘಟನೆ ನಡೆದ ಸ್ಥಳದಲ್ಲಿ ಸಿಬ್ಬಂದಿ ನಿಲ್ಲಿಸಿದ್ದ ಒಂದು ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಅರಮನೆಯ ಕಟ್ಟಡಗಳ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.

26
ಬೈಕ್ ಜಖಂ, ತಪ್ಪಿದ ಪ್ರಾಣಾಪಾಯ
Image Credit : Asianet News

ಬೈಕ್ ಜಖಂ, ತಪ್ಪಿದ ಪ್ರಾಣಾಪಾಯ

ಸಾರ್ವಜನಿಕರು ಮತ್ತು ಪ್ರವಾಸಿಗರು ಅರಮನೆಗೆ ಆಗಮಿಸುವ ಪ್ರಮುಖ ಗೇಟ್‌ಗಳಲ್ಲಿ ಈ ವರಹ ಗೇಟ್ ಕೂಡ ಒಂದು. ಘಟನೆ ನಡೆದ ಸಂದರ್ಭದಲ್ಲಿ ಪ್ರವಾಸಿಗರು ಆ ಭಾಗದಲ್ಲಿ ಓಡಾಟ ಮಾಡದ ಕಾರಣ ದೊಡ್ಡ ಪ್ರಾಣಾಪಾಯವನ್ನು ತಪ್ಪಿಸಿದಂತಾಗಿದೆ. ಕುಸಿದ ಮೇಲ್ಛಾವಣಿಯ ಮಣ್ಣು ಮತ್ತು ಕಲ್ಲುಗಳು ಗೇಟ್‌ನ ಕೆಳಗೆ ನಿಲ್ಲಿಸಿದ್ದ ಅರಮನೆ ಸಿಬ್ಬಂದಿಗೆ ಸೇರಿದ ಬೈಕ್‌ನ ಮೇಲೆ ಬಿದ್ದಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ.

Related Articles

Related image1
ಮೈಸೂರು ಅರಮನೆ ಹೊತ್ತಿ ಉರಿದಾಗ ಉಳಿದದ್ದು ಆತ್ಮವಿಲಾಸ ಗಣಪನೊಬ್ಬನೇ! ಈ ರೋಚಕ ಸ್ಟೋರಿ ಕೇಳಿ..
Related image2
ಮೈಸೂರು ಅರಮನೆ ಜಮೀನು ವಿವಾದ: ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!
36
ಬ್ಯಾರಿಕೇಡ್‌ಗಳನ್ನು ಅಳವಡಿಕೆ
Image Credit : Asianet News

ಬ್ಯಾರಿಕೇಡ್‌ಗಳನ್ನು ಅಳವಡಿಕೆ

ಘಟನೆ ನಡೆದ ತಕ್ಷಣ ಅರಮನೆ ಆಡಳಿತ ಮಂಡಳಿ ಕಾರ್ಯಪ್ರವೃತ್ತರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಗೇಟ್ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಸ್ವಚ್ಛತಾ ಸಿಬ್ಬಂದಿಯು ಕುಸಿದು ಬಿದ್ದಿದ್ದ ಮಣ್ಣು ಮತ್ತು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಂಡರು.

46
ನಿರ್ವಹಣೆಯ ನಿರ್ಲಕ್ಷ್ಯಕ್ಕೆ ಕನ್ನಡಿ
Image Credit : Asianet News

ನಿರ್ವಹಣೆಯ ನಿರ್ಲಕ್ಷ್ಯಕ್ಕೆ ಕನ್ನಡಿ

ಮೈಸೂರು ಅರಮನೆಯ ನಿರ್ವಹಣೆಯಲ್ಲಿನ ಈ ನಿರ್ಲಕ್ಷ್ಯ ಇದೇ ಮೊದಲಲ್ಲ. ಇತ್ತೀಚೆಗೆ ಅರಮನೆಯ ಮುಖ್ಯ ಕಟ್ಟಡದ ದರ್ಬಾರ್ ಹಾಲ್‌ನ ಮೇಲ್ಛಾವಣಿಯೂ ಸೋರುತ್ತಿರುವ ಬಗ್ಗೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಮಳೆ ನೀರಿನಿಂದ ಕಟ್ಟಡಕ್ಕೆ ಹಾನಿಯಾಗುವುದನ್ನು ತಡೆಯಲು ಅರಮನೆ ಆಡಳಿತ ಮಂಡಳಿಯು ದುರಸ್ತಿ ಕಾರ್ಯಕ್ಕೆ ಮುಂದಾಗುವ ಬದಲು, ತಾತ್ಕಾಲಿಕವಾಗಿ ಮೇಲ್ಛಾವಣಿಗೆ ಟಾರ್ಪಲ್ ಹೊದಿಕೆ ಹಾಕಿ ನಿರ್ವಹಣೆ ಮುಂದುವರೆಸಿತ್ತು.

56
ಮಳೆನೀರು ಸೋರಿಕೆ ತಡೆಯಲು ಟಾರ್ಪಲ್ ಹೊದಿಸಿದ್ದ ಸಿಬ್ಬಂದಿ
Image Credit : Asianet News

ಮಳೆನೀರು ಸೋರಿಕೆ ತಡೆಯಲು ಟಾರ್ಪಲ್ ಹೊದಿಸಿದ್ದ ಸಿಬ್ಬಂದಿ

ಸುದ್ದಿ ಪ್ರಸಾರಗೊಂಡ ನಂತರವೂ ಕಾಯಂ ಪರಿಹಾರ ಕಂಡುಕೊಳ್ಳದೆ ಟಾರ್ಪಲ್ ಮೂಲಕವೇ ನಿರ್ವಹಣೆಯನ್ನು ಮುಂದುವರೆಸಿರುವ ಅರಮನೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಇದೀಗ ವರಹ ದ್ವಾರದ ಮೇಲ್ಛಾವಣಿ ಕುಸಿತದ ರೂಪದಲ್ಲಿ ಗೋಚರಿಸಿದೆ.

66
ಪ್ರವಾಸಿಗರ ಭದ್ರತೆಗೆ ಆತಂಕ
Image Credit : Asianet News

ಪ್ರವಾಸಿಗರ ಭದ್ರತೆಗೆ ಆತಂಕ

ಹೊಯ್ಸಳ ಮತ್ತು ಇಂಡೋ-ಸಾರ್ಸೆನಿಕ್ ವಾಸ್ತುಶೈಲಿಯ ಸಮ್ಮಿಲನದಿಂದ ನಿರ್ಮಿಸಲಾದ ಶತಮಾನಗಳ ಇತಿಹಾಸವಿರುವ ಮೈಸೂರು ಅರಮನೆಯು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲು ಯೋಗ್ಯವಾಗಿದೆ. ಇಂತಹ ಐತಿಹಾಸಿಕ ಕಟ್ಟಡದ ನಿರ್ವಹಣೆಯಲ್ಲಿನ ಈ ನಿರ್ಲಕ್ಷ್ಯವು ಅರಮನೆಯ ಭದ್ರತೆ ಮತ್ತು ಸುರಕ್ಷತೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. 

ಕೂಡಲೇ ಅರಮನೆ ಆಡಳಿತ ಮಂಡಳಿ ಕೇವಲ ತಾತ್ಕಾಲಿಕ ರಿಪೇರಿ ಮಾಡದೆ, ಶಾಶ್ವತ ಮತ್ತು ಸಮಗ್ರ ನಿರ್ವಹಣೆಗೆ ಮುಂದಾಗಬೇಕು ಎಂದು ಪ್ರವಾಸಿಗರು ಮತ್ತು ಇತಿಹಾಸಕಾರರು ಒತ್ತಾಯಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಮೈಸೂರು
ಮೈಸೂರು ಅರಮನೆ
ಪ್ರವಾಸೋದ್ಯಮ

Latest Videos
Recommended Stories
Recommended image1
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!
Recommended image2
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!
Recommended image3
ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?
Related Stories
Recommended image1
ಮೈಸೂರು ಅರಮನೆ ಹೊತ್ತಿ ಉರಿದಾಗ ಉಳಿದದ್ದು ಆತ್ಮವಿಲಾಸ ಗಣಪನೊಬ್ಬನೇ! ಈ ರೋಚಕ ಸ್ಟೋರಿ ಕೇಳಿ..
Recommended image2
ಮೈಸೂರು ಅರಮನೆ ಜಮೀನು ವಿವಾದ: ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved