ಜಯಚಾಮರಾಜೇಂದ್ರ ಒಡೆಯರ್ 101ನೇ ಜನ್ಮದಿನಾಚರಣೆ: ನೇರಪ್ರಸಾರದಲ್ಲಿ ಉಪರಾಷ್ಟ್ರಪತಿ
ಮೈಸೂರು ರಾಜ ಸಂಸ್ಥಾನದ ಇಪ್ಪತ್ತೈದನೇ ಮಹಾರಾಜರು, ರಾಜಾಡಳಿತ ಹಾಗೂ ಪ್ರಜಾತಂತ್ರ ಎರಡನ್ನೂ ಅನುಭವಿಸಿದ ಜಯಚಾಮರಾಜೇಂದ್ರ ಒಡೆಯರ್ ಅವರ 101ನೇ ಜನ್ಮದಿನವನ್ನು ಇಂದು (ಜುಲೈ 18) ಮೈಸೂರು ಅರಮನೆಯಲ್ಲಿ ಆಚರಿಸಲಾಯಿತು. ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದು ಗೌರವ ಅರ್ಪಿಸಿ, ಅಂಬಾವಿಲಾಸ ಅರಮನೆಯಲ್ಲಿ ನಡೆದಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದರ ಫೋಟೋ ಝಲಕ್ ಇಲ್ಲಿದೆ.
ಮೈಸೂರು ರಾಜ ಸಂಸ್ಥಾನದ ಇಪ್ಪತ್ತೈದನೇ ಮಹಾರಾಜರು, ರಾಜಾಡಳಿತ ಹಾಗೂ ಪ್ರಜಾತಂತ್ರ ಎರಡನ್ನೂ ಅನುಭವಿಸಿದ ಜಯಚಾಮರಾಜೇಂದ್ರ ಒಡೆಯರ್ ಅವರ 101ನೇ ಜನ್ಮದಿನವನ್ನು ಇಂದು ಮೈಸೂರು ಅರಮನೆಯಲ್ಲಿ ಆಚರಿಸಲಾಯಿತು.
ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದು ಗೌರವ ಅರ್ಪಿಸಿ, ಅಂಬಾವಿಲಾಸ ಅರಮನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಯೂಟ್ಯೂಬ್ ಲೈವ್ ಸ್ಟ್ರೀಮಿಂಗ್ ನಲ್ಲಿ ನೇರ ಪ್ರಸಾರ ಕಾರ್ಯಕ್ರಮ ನಡೆದಿದೆ.
ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಸಿಎಂ ಬಿಎಸ್ ಯಡಿಯೂರಪ್ಪ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಲೈವ್ ಸ್ಟ್ರೀಮಿಂಗ್ ನಲ್ಲಿ ಉಪರಾಷ್ಟ್ರಪತಿ, ಕೇಂದ್ರ ಮಾಜಿ ಸಚಿವ ಡಾ.ಕರಣ್ ಸಿಂಗ್, ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.
ಅರಮೆಯಲ್ಲಿ ನೇರ ಪ್ರಸಾರದ ದೃಶ್ಯ