MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • 3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ರಾಜ್ಯಾದ್ಯಂತ ಬಿಜೆಪಿ ಹಿಂದೂಪರ ಕಾರ್ಯಕರ್ತರಿಂದ ವಿಶೇಷ ಪೂಜೆ, ಹರಕೆ!

3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ರಾಜ್ಯಾದ್ಯಂತ ಬಿಜೆಪಿ ಹಿಂದೂಪರ ಕಾರ್ಯಕರ್ತರಿಂದ ವಿಶೇಷ ಪೂಜೆ, ಹರಕೆ!

ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಕಲಬುರಗಿ, ವಿಜಯಪುರ, ಹುಬ್ಬಳ್ಳಿ,ರಾಯಚೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ನಡೆಸಿದರು. 

1 Min read
Ravi Janekal
Published : Jun 09 2024, 01:05 PM IST
Share this Photo Gallery
  • FB
  • TW
  • Linkdin
  • Whatsapp
14

ಕಲಬುರಗಿ ನಗರದ ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದರು. ಈ ವೇಳೆ ಭಾರತ್ ಮಾತಾ, ಜೈಶ್ರೀರಾಮ್, ಜೈನರೇಂದ್ರ ಮೋದಿ ಎಂದು ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿ ಕೇಸರಿ ಬಣ್ಣ ಎರಚಿ ಸಂಭ್ರಮಾಚರಣೆ ಮಾಡಿದರು. 
 

24

ವಿಜಯನಗರದಲ್ಲಿ ಮೋದಿಗಾಗಿ ವಿಶೇಷ ಪೂಜೆ

ವಿಜಯನಗರ ಜಿಲ್ಲೆಯ ಹೊಸಪೇಟೆ ಗಣೇಶ್ ದೇವಾಲಯದಲ್ಲಿ ನರೇಂದ್ರ ಮೋದಿಯವರ ಆರೋಗ್ಯವೃದ್ಧಿಗಾಗಿ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗಣೇಶ ದೇಗುಲದಲ್ಲಿ ಪಂಚಾಮೃತ ಅಭಿಷೇಕ, ಪಷ್ಪಾಭಿಷೇಕ ಮಾಡಿದರು. ಈ ವೇಳೆ ಮಾಜಿ ಸಚಿವ ಆನಂದ್ ಸಿಂಗ್ ಪುತ್ರ(ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿ) ಸಿದ್ಧಾರ್ಥ್ ಸಿಂಗ್ ನೇತೃತ್ವದಲ್ಲಿ ನಡೆಯಿತು.

34

ದಾವಣಗೆರೆಯಲ್ಲಿ ಲಾಡು ತಯಾರಿಸಿ ಮನೆಮನೆಗೆ ವಿತರಿಸಿದ ಬಿಜೆಪಿ ಕಾರ್ಯಕರ್ತರು. ನಿನ್ನೆ ರಾತ್ರಿಯೆಲ್ಲ ಬಾಣಸಿಗರಿಂದ ಲಾಡು ತಯಾರಿಸಿದ್ದಾರೆ. ಇಂದು ಬೆಳಗ್ಗೆಯಿಂದ ಮನೆಮನೆಗೆ ಸಿಹಿ ವಿತರಿಸುತ್ತಿರುವ ಬಿಜೆಪಿ ಕಾರ್ಯಕರ್ತರು. ದಾವಣಗೆರೆ ಸೇರಿದಂತೆ ಅವರಗೆರೆ ಗ್ರಾಮದಲ್ಲೂ ಲಾಡು ವಿತರಣೆ. ಈ ವೇಳೆ ಜೈ ಶ್ರೀರಾಮ, ಜೈ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು.

44

101 ಈಡುಗಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿ

ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಬೇಕು, ಬೊಮ್ಮಾಯಿ ಗೆಲ್ಲಬೇಕು ಎಂದು ಹರಕೆ ಹೊತ್ತಿದ್ದ ಮುಂಡರಗಿ ಪಟ್ಟಣದ ಶಾಮರಾಜ್ ಎಂಬ ಅಭಿಮಾನಿ ಇದೀಗ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಲಕ್ಷ್ಮೀಕನಕ ನರಸಿಂಹ ದೇವರಿಗೆ 101 ಈಡುಗಾಯಿ ಒಡೆದು ಹರಕೆ ತೀರಿಸಿದ್ದಾನೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ನರೇಂದ್ರ ಮೋದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved