MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕೃಷಿ ತಳಿ ಸಂರಕ್ಷಕ ದೇವರಾವ್‌ಗೆ ಒಲಿದ ರಾಷ್ಟ್ರೀಯ ಪ್ರಶಸ್ತಿಯ ಗೌರವ! ಫೋಟೊ ಜೊತೆಗೆ ಸಾಧನೆ ವಿವರ ಇಲ್ಲಿದೆ

ಕೃಷಿ ತಳಿ ಸಂರಕ್ಷಕ ದೇವರಾವ್‌ಗೆ ಒಲಿದ ರಾಷ್ಟ್ರೀಯ ಪ್ರಶಸ್ತಿಯ ಗೌರವ! ಫೋಟೊ ಜೊತೆಗೆ ಸಾಧನೆ ವಿವರ ಇಲ್ಲಿದೆ

ಕೃಷಿಕನೇ ದೇಶದ ಬೆನ್ನೆಲುಬು. ಹವಾಮಾನ ವೈಪರಿತ್ಯ, ಕಾಡು ಪ್ರಾಣಿಗಳ ಉಪಟಳ, ನುರಿತ ಕಾರ್ಮಿಕರ ಕೊರತೆ ಮೊದಲಾದ ಹಲವಾರು ಸಮಸ್ಯೆಗಳು ರೈತರನ್ನು ಕಾಡುತ್ತಿದ್ದರೂ ಕೆಲ ರೈತರು ನಾನಾ ಸಾಧನೆಗಳ ಮೂಲಕ ಕೃಷಿಯಲ್ಲಿ ಹೊಸತನವನ್ನು ಕಂಡುಕೊಳ್ಳುತ್ತಿದ್ದಾರೆ. ಅಪರೂಪದ ತಳಿಗಳನ್ನು ಸಂಗ್ರಹಿಸಿ ಬೆಳೆಸುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ಕೃಷಿಲೋಕಕ್ಕೆ ನೀಡುತ್ತಿದ್ದಾರೆ.

2 Min read
Ravi Janekal
Published : Sep 13 2023, 11:23 AM IST
Share this Photo Gallery
  • FB
  • TW
  • Linkdin
  • Whatsapp
16

ಇದಕ್ಕೆ ಉತ್ತಮ ನಿದರ್ಶನ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ರೈತ ಅಮೈ ಬಿ.ಕೆ. ದೇವ ರಾವ್. ಭತ್ತ ಹಾಗೂ ಇತರ ಹಲವಾರು ಕೃಷಿ ಸಂಬಂಧಿ ಸಸ್ಯಗಳ ನೂರಾರು ತಳಿಗಳನ್ನು ಸಂಗ್ರಹಿಸಿ, ಬೆಳೆಸಿರುವ ಇವರಿಗೆ ‘ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ 2020- 21’ ಒಲಿದು ಬಂದಿದೆ. 

26

 ಮಂಗಳವಾರ, ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,  ರೈತ ಅಮೈ ಬಿ.ಕೆ. ದೇವ ರಾವ್ ಅವರಿಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ 2020- 21’ ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರ ಕೃಷಿ ಮಂತ್ರಿ ನರೇಂದ್ರ ಸಿಂಗ್‌ ತೋಮರ್‌ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕ ಧೋತಿ, ಮುಠಾಳೆ ಹಾಗು ಹಸಿರು ಶಾಲು ಧರಿಸಿ ಪ್ರಶಸ್ತಿ ಸ್ವೀಕರಿಸಿದ ದೇವ ರಾವ್‌ ಅವರು ಗಮನ ಸೆಳೆದಿದ್ದಾರೆ. ದೇಶದ 10 ಮಂದಿ, ರಾಜ್ಯದ ಇಬ್ಬರಿಗೆ ಈ ಪ್ರಶಸ್ತಿ ಸಿಕ್ಕಿದ್ದು, ಪ್ರಶಸ್ತಿಯು ಒಂದೂವರೆ ಲಕ್ಷ ರು. ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಫಲಕ ಹೊಂದಿದೆ.

36

ನೂರಾರು ತಳಿಗಳ ನಂಟು:

ದೇಶದ ಹಲವಾರು ಜಾತಿಯ ಭತ್ತದ ತಳಿಗಳು ಇವರಲ್ಲಿದ್ದು ಕರ್ನಾಟಕದ 117, ಕೇರಳದ 25, ತಮಿಳುನಾಡಿನ 10, ಪಶ್ಚಿಮ ಬಂಗಾಳದ 5 ಮಹಾರಾಷ್ಟ್ರದ 2, ಆಂಧ್ರ, ಉತ್ತರ ಪ್ರದೇಶ, ಗುಜರಾತ್, ಛತ್ತಿಸ್ ಗಡ, ಮಣಿಪುರ, ದೆಹಲಿ,ಜಾರ್ಖಂಡ್, ಅಸ್ಸಾಂ,ಮಧ್ಯಪ್ರದೇಶ ಮೊದಲಾದ ರಾಜ್ಯಗಳ ಹಲವಾರು ಭತ್ತದ ತಳಿಗಳು ಇವರ ಸಂಗ್ರಹದಲ್ಲಿವೆ.

ಇವರ ಪುತ್ರ ಬಿ.ಕೆ. ಪರಮೇಶ್ವರ್ ರಾವ್ ಅವರು ತಂದೆಯ ಸಾಧನೆಗೆ ಬೆನ್ನೆಲುಬಾಗಿದ್ದು ಬೀಜ ಬ್ಯಾಂಕ್ ಸ್ಥಾಪಿಸಿ, ಬೇಡಿಕೆ ಇಡುವ ರೈತರಿಗೆ ತಮ್ಮ ತಂದೆಯ ಸಂಗ್ರಹದಲ್ಲಿರುವ ಭತ್ತದ ತಳಿಯ ಒಂದು ಮುಷ್ಟಿ ಭತ್ತ ನೀಡುವ ಯೋಜನೆ ಕೈಗೊಂಡಿದ್ದಾರೆ. ಒಂದು ಮುಷ್ಟಿ ಭತ್ತ ಒಯ್ಯುವ ರೈತ ಇದರ ಬೆಳೆ ಬೆಳೆದ ಬಳಿಕ ಎರಡು ಮುಷ್ಟಿ ಭತ್ತವನ್ನು ಇವರಿಗೆ ನೀಡಬೇಕು. ಇದರಿಂದ ಭತ್ತದ ತಳಿಗಳು ಹೆಚ್ಚು ಕಡೆ ಬೆಳೆಯಲು ಹಾಗೂ ಬೇಡಿಕೆ ಸಲ್ಲಿಸುವವರಿಗೆಲ್ಲ ನೀಡಲು ಸಹಕಾರಿಯಾಗುತ್ತದೆ.

46

ಬಿ.ಕೆ.ದೇವರಾವ್ ಪರಿಚಯ:

79ರ ಹರೆಯದ ಬಿ.ಕೆ. ದೇವರಾಯ ಉತ್ಸಾಹದ ಚಿಲುಮೆ. 1967 ರಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ ಇವರು ಅಂದಿನಿಂದಲೂ ತಮ್ಮ 5 ಎಕರೆ ಜಾಗವನ್ನು ಗದ್ದೆ ಬೇಸಾಯಕ್ಕೆ ಮೀಸಲಿಟ್ಟು 170ಕ್ಕೂ ಅಧಿಕ ತಳಿಯ ಭತ್ತದ ಎರಡು ಬೆಳೆಗಳನ್ನು ಬೆಳೆಯುತ್ತಾ ಬಂದಿದ್ದಾರೆ. ಆರಂಭದ ಕೆಲವು ವರ್ಷಗಳಲ್ಲಿ ರಾಸಾಯನಿಕಗಳನ್ನು ಬಳಕೆ ಮಾಡಿದರು. ಬಳಿಕ ರಾಸಾಯನಿಕ, ಕೀಟನಾಶಕಗಳನ್ನು ಬಳಸದೆ ಬೇಸಾಯ ಮಾಡುತ್ತಾ ಬಂದಿದ್ದಾರೆ.

ಪಶು ಸಾಕಣೆಯನ್ನು ಮಾಡುವ ಇವರು ಹಟ್ಟಿಗೊಬ್ಬರ ಹಾಗೂ ತರಗೆಲೆಗಳನ್ನು ಸಂಗ್ರಹಿಸಿ ಗದ್ದೆಗಳಿಗೆ ನೀಡುತ್ತಾರೆ. ಪಿಯುಸಿ ವಿದ್ಯಾಭ್ಯಾಸ ಮಾಡಿರುವ ಇವರು ಸ್ವತಃ ಉಳುಮೆಯನ್ನು ಮಾಡಿಕೊಂಡು ಬಂದವರು. ಭತ್ತದ ತಳಿಗಳ ಸಂಗ್ರಹದ ಜತೆ 80ಕ್ಕೂ ಮಿಕ್ಕಿದ ಕಾಡುಮಾವು, ಐದರಿಂದ ಆರು ತಳಿಯ ಅಡಕೆ ಗಿಡ, 50 ತಳಿಯ ಹಲಸು, 5 ಬಗೆಯ ಜಾಯಿಕಾಯಿ, 4 ವಿಧದ ಕಾಳುಮೆಣಸು, 25 ಜಾತಿಯ ಭಾರತೀಯ ಗೆಣಸು, 6 ಬಗೆಯ ಮರಗೆಣಸು ಹಾಗೂ 100ಕ್ಕೂ ಮಿಕ್ಕಿದ ಔಷಧೀಯ ಸಸ್ಯಗಳ ತಳಿಗಳನ್ನು ಸಂಗ್ರಹಿಸಿದ್ದಾರೆ.

56

ಇವರ ಈ ವಿಶಿಷ್ಟ ಸಾಧನೆಯನ್ನು ಗುರುತಿಸಿ 2017ರಲ್ಲಿ ರಾಷ್ಟ್ರ ಪತಿ ಭವನದಲ್ಲಿ ಸೃಷ್ಟಿ ಸಮ್ಮಾನ್, 2018ರಲ್ಲಿ ಸೂಪರ್ ಸ್ಟಾರ್ ರೈತ, 2019ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕೇರಳದಲ್ಲಿ ವೀಕ್ ಆಫ್ ದಿ ರೈಸ್ ಆಕ್ಷನ್ ಸೇರಿದಂತೆ ಹಲವು ಪ್ರಶಸ್ತಿಗಳು ಸಿಕ್ಕಿವೆ. 50ಕ್ಕೂ ಮಿಕ್ಕಿದ ಸಂಘ ಸಂಸ್ಥೆಗಳು ಇವರ ವಿಶಿಷ್ಟ ಸಾಧನೆಯನ್ನು ಗುರುತಿಸಿ ಪ್ರಶಸ್ತಿ, ಪುರಸ್ಕಾರ ನೀಡಿ ಗೌರವಿಸಿವೆ.

66

ರಾಷ್ಟ್ರಪತಿಗಳಿಂದ 150ಕ್ಕೂ ಅಧಿಕ ದೇಶಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸುವುದು ಸಂತಸ ತಂದಿದೆ .ಈ ಪ್ರಶಸ್ತಿ ಕುರಿತು ಅಗತ್ಯ ಮಾಹಿತಿ ನೀಡಿದ ಮಂಗಳೂರು ಕೆವಿಕೆಯ ವಿಜ್ಞಾನಿ ಡಾ.ಮಲ್ಲಿಕಾರ್ಜುನ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿ.ವಿ.ಯ ಅಧಿಕಾರಿ ವರ್ಗ,ಕುಂದಾಪುರ ಮೂಲದ ಬಿಹಾರದ ರಾಜ್ಯಸಭಾ ಸದಸ್ಯ ಅನಿಲ ಹೆಗಡೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕೃಷಿಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬನು ಪ್ರಯತ್ನಿಸಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತಳಿಗಳ ಸಂಗ್ರಹ ಹಾಗೂ ಅವುಗಳನ್ನು ಬೆಳೆಸುವ ಕೆಲಸ ಮಾಡುವ ಉತ್ಸಾಹ ಹೊಂದಿದ್ದೇನೆ"

-ಬಿ.ಕೆ.ದೇವರಾವ್, ಸಾಧಕ ಕೃಷಿಕ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ದಕ್ಷಿಣ ಕನ್ನಡ

Latest Videos
Recommended Stories
Recommended image1
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
Recommended image2
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
Recommended image3
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved