MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಪವಿತ್ರಾ ಗೌಡಗೆ ಹುಟ್ಟುಹಬ್ಬದ ದಿನವೇ ಜೈಲಾಧಿಕಾರಿಗಳ ಶಾಕ್: 'ಮನೆ ಊಟ' ಕೊಡಲೊಪ್ಪದೇ ಹೈಕೋರ್ಟ್ ಮೊರೆ!

ಪವಿತ್ರಾ ಗೌಡಗೆ ಹುಟ್ಟುಹಬ್ಬದ ದಿನವೇ ಜೈಲಾಧಿಕಾರಿಗಳ ಶಾಕ್: 'ಮನೆ ಊಟ' ಕೊಡಲೊಪ್ಪದೇ ಹೈಕೋರ್ಟ್ ಮೊರೆ!

ಜೈಲಲ್ಲಿರುವ ನಟಿ ಪವಿತ್ರಾ ಗೌಡಗೆ ಮನೆ ಊಟ ನೀಡಲು ಕೋರ್ಟ್ ಆದೇಶವನ್ನು ಜೈಲಾಧಿಕಾರಿಗಳು ಪ್ರಶ್ನಿಸಿದ್ದಾರೆ. ಕಾರಾಗೃಹ ಕಾಯ್ದೆ, ಭದ್ರತೆ ಮತ್ತು ಸಮಾನತೆಯ ಕಾರಣಗಳನ್ನು ಮುಂದಿಟ್ಟು, ಈ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದು, ಇದು ಪವಿತ್ರಾ ಜನ್ಮದಿನದಂದೇ ಅವರಿಗೆ ಆಘಾತ ನೀಡಿದೆ.

2 Min read
Author : Sathish Kumar KH
Published : Jan 07 2026, 11:14 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : X

ಬೆಂಗಳೂರು (ಜ.07): ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಅವರಿಗೆ ಜೈಲಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಪವಿತ್ರಾ ಗೌಡ ಅವರ ಜನ್ಮದಿನದಂದೇ (Birthday) ಅವರಿಗೆ ಮನೆ ಊಟದ ಸೌಲಭ್ಯ ತಪ್ಪಿಸಲು ಕಾರಾಗೃಹ ಇಲಾಖೆ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದೆ.

26
Image Credit : Google

ಇತ್ತೀಚೆಗಷ್ಟೇ ಪವಿತ್ರಾ ಗೌಡ ಪರ ವಕೀಲರು, 'ಜೈಲಿನ ಊಟ ಸರಿಯಿಲ್ಲ, ಅದು ಪವಿತ್ರಾ ಅವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ' ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯವು, ಅವರಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅವಕಾಶ ನೀಡಿ ಆದೇಶಿಸಿತ್ತು. 

ಆದರೆ, ಈ ಆದೇಶ ಜಾರಿಗೆ ತರಲು ಜೈಲಾಧಿಕಾರಿಗಳು ಆರಂಭದಿಂದಲೂ ಹಿಂದೇಟು ಹಾಕುತ್ತಿದ್ದರು. ಈಗ ಈ ಆದೇಶವನ್ನೇ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

Related Articles

Related image1
ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!
Related image2
Now Playing
ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
36
Image Credit : Instagram

ಜೈಲಾಧಿಕಾರಿಗಳ ಆಕ್ಷೇಪಕ್ಕೆ ಕಾರಣಗಳೇನು? ಪವಿತ್ರಾ ಗೌಡ ಅವರಿಗೆ ಮನೆ ಊಟ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಪ್ರಬಲವಾದ ಕಾರಣಗಳನ್ನು ಮುಂದಿಟ್ಟಿದ್ದಾರೆ:

ಕಾಯ್ದೆಯ ಅಡ್ಡಿ: ಕಾರಾಗೃಹ ಇಲಾಖೆ ಕಾಯ್ದೆ 13ರ ಅಡಿಯಲ್ಲಿ ವಿಚಾರಣಾಧೀನ ಕೈದಿಗಳಿಗೆ ವಿಶೇಷವಾಗಿ ಮನೆ ಊಟ ನೀಡಲು ಅವಕಾಶವಿಲ್ಲ.

ಊಟದ ಗುಣಮಟ್ಟ: ಕೇಂದ್ರ ಹಾಗೂ ರಾಜ್ಯ ಆರೋಗ್ಯ ಇಲಾಖೆಗಳು ಈಗಾಗಲೇ ಜೈಲಿನ ಊಟವನ್ನು ಪರಿಶೀಲಿಸಿದ್ದು, ಅದು ‘ಉತ್ತಮ ಗುಣಮಟ್ಟ’ದಿಂದ ಕೂಡಿದೆ ಎಂದು ವರದಿ ನೀಡಿವೆ.

46
Image Credit : our own

ಸಮಾನತೆಯ ಪ್ರಶ್ನೆ: ಪವಿತ್ರಾ ಗೌಡ ಒಬ್ಬರಿಗೆ ಮನೆ ಊಟಕ್ಕೆ ಅವಕಾಶ ನೀಡಿದರೆ, ಜೈಲಿನಲ್ಲಿರುವ ಉಳಿದ ಸಾವಿರಾರು ಕೈದಿಗಳು ಕೂಡ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇರುತ್ತದೆ.

ಭದ್ರತಾ ಸವಾಲು: ಮನೆಯಿಂದ ಪ್ರತಿ ಬಾರಿ ಊಟ ತಂದಾಗ ಅದನ್ನು ಸೂಕ್ಷ್ಮವಾಗಿ ತಪಾಸಣೆ ಮಾಡಬೇಕಾಗುತ್ತದೆ. ಇದು ಜೈಲಿನ ಭದ್ರತೆಗೆ ದೊಡ್ಡ ಸವಾಲು.

56
Image Credit : our own

ಸಿಬ್ಬಂದಿ ಕೊರತೆ: ಪ್ರತಿ ಕೈದಿಯ ಮನೆ ಊಟ ಪರಿಶೀಲಿಸಲು ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಬೇಕಾಗುತ್ತದೆ, ಇದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ.

ಸಮಯದ ವ್ಯಯ: ಭದ್ರತಾ ಸಿಬ್ಬಂದಿಯ ಅಮೂಲ್ಯ ಸಮಯ ಕೇವಲ ಊಟದ ತಪಾಸಣೆಗೆ ವಿನಿಯೋಗವಾಗುತ್ತದೆ.

ಕೈದಿಗಳ ಮನವಿ: ಈಗಾಗಲೇ ಹಲವು ಸಜಾ ಮತ್ತು ವಿಚಾರಣಾಧೀನ ಕೈದಿಗಳು ತಮಗೂ ಮನೆ ಊಟ ಬೇಕೆಂದು ಪಟ್ಟು ಹಿಡಿದಿದ್ದಾರೆ.

66
Image Credit : our own

ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಜೈಲಾಧಿಕಾರಿಗಳು ಇಂದು ಮಧ್ಯಾಹ್ನ ಅಥವಾ ನಾಳೆಯೊಳಗೆ ಹೈಕೋರ್ಟ್‌ನಲ್ಲಿ ಆಕ್ಷೇಪಣೆ ಅರ್ಜಿ ಸಲ್ಲಿಸಲಿದ್ದಾರೆ. ಎಲ್ಲ ಕೈದಿಗಳನ್ನು ಸಮಾನವಾಗಿ ಕಾಣಬೇಕೆಂಬ ತತ್ವದ ಅಡಿಯಲ್ಲಿ ಈ ಹೋರಾಟ ನಡೆಸಲು ಇಲಾಖೆ ಮುಂದಾಗಿದೆ. ಹುಟ್ಟುಹಬ್ಬದ ಸಂಭ್ರಮದ ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ, ಜೈಲಾಧಿಕಾರಿಗಳ ಈ ನಡೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಪವಿತ್ರಾ ಗೌಡ
ರೇಣುಕಾಸ್ವಾಮಿ ಪ್ರಕರಣ
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ಜ.10 & ಜ.11ರಂದು ಮಂಗಳೂರು ಲಿಟ್ ಫೆಸ್ಟ್; ರಾಜ್ಯಸಭಾ ಸದಸ್ಯೆ ಮೀನಾಕ್ಷಿ ಜೈನ್ ಅವರಿಗೆ ವಿಶೇಷ ಪ್ರಶಸ್ತಿ
Recommended image2
ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗೆ ಸಂತಸದ ಸುದ್ದಿ ನೀಡಿದ್ರು ರಾಮಲಿಂಗಾ ರೆಡ್ಡಿ
Recommended image3
.ರಾಜ್ಯದ ಕಾಂಗ್ರೆಸ್‌ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ
Related Stories
Recommended image1
ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!
Recommended image2
Now Playing
ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved