MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ವರುಣನ ಆರ್ಭಟಕ್ಕೆ ಕಂಗಾಲಾದ ಕರುನಾಡು: ಎಲ್ಲೆಲ್ಲೂ ನೀರೇ ನೀರು..!

ವರುಣನ ಆರ್ಭಟಕ್ಕೆ ಕಂಗಾಲಾದ ಕರುನಾಡು: ಎಲ್ಲೆಲ್ಲೂ ನೀರೇ ನೀರು..!

ಬೆಂಗಳೂರು(ಜು.24): ಕೆಳದ ಕೆಲವು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಸಾವಿವಾರು ಸಂಖ್ಯೆಯಲ್ಲಿ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುವಂತಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲೂ ಭಾರೀ ಮಳೆಯಾಗುತ್ತಿರವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಲಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೀಗಾಗಿ ಬೆಳೆದಿದ್ದ ಬೆಳೆಯೆಲ್ಲಾ ನೀರುಪಾಲಾಗಿದೆ. ಆದರೆ, ಇಂದು(ಶನಿವಾರ) ಬೆಳಿಗ್ಗೆಯಿಂದ ಕೊಂಚ ಮಟ್ಟಿಗೆ ವರುಣ ತಣ್ಣಗಾಗಿದ್ದಾನೆ ಎಂದು ತಿಳಿದು ಬಂದಿದೆ. 

1 Min read
Suvarna News | Asianet News
Published : Jul 24 2021, 12:59 PM IST| Updated : Jul 24 2021, 01:02 PM IST
Share this Photo Gallery
  • FB
  • TW
  • Linkdin
  • Whatsapp
18

ಯಾದಗಿ ಜಿಲ್ಲೆಯಲ್ಲಿರುವ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟ ಹಿನ್ನಲೆಯಲ್ಲಿ, ಕಲಬುರ್ಗಿ ಯಾದಗಿರಿ ರಾಯಚೂರು ಜಿಲ್ಲೆಗಳ ಸಂಪರ್ಕಿಸುವ, ರಾಜ್ಯ ಹೆದ್ದಾರಿಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಸೇತುವೆ ನೀರಿನಲ್ಲಿ ಮುಳುಗಿದೆ. 

28

3.5 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನಲೆಯಲ್ಲಿ, ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಸೇತುವೆ ಮೇಲಿನ ರಸ್ತೆ ಸಂಚಾರವನ್ನು ನಿನ್ನೆ(ಶುಕ್ರವಾರ) ಸಂಜೆಯಿಂದಲೇ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 

38

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕೊಠಡಿ ಕುಸಿದಿದೆ. ಕಳೆದೊಂದು ವಾರದಿಂದ ನೆನೆದಿದ್ದ ಕೊಠಡಿ ಇಂದು ಏಕಾಏಕಿ ಕುಸಿದಿದೆ. ಪಕ್ಕದ ಕೊಠಡಿಯಲ್ಲಿ ಮೂವರು ಮಹಿಳೆಯರಿದ್ದರು. ಸಧ್ಯ ಯಾವುದೇ ಅನಾಹುತ ಸಂಭವಿಸಿಲ್ಲ.

48

ಭಾರೀ ಮಳೆಯಿಂದಾಗಿ ನೀರಿನಲ್ಲಿ ನಿಂತ ಬೆಳೆ

58

ಕೊಚ್ಚಿ ಹೋದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಳ್ಳಾಪುರ ಸೇತುವೆ

68

ಹೆಗ್ಗಾರ್, ಕಲ್ಲೇಶ್ವರ, ಕೈಗಡಿ, ಕೊಂಕಿ, ಕನಕನಹಳ್ಳಿಗಳಿಗೆ ಸಂಪರ್ಕ ಕಡಿತ

78

ಇಂದು ಬೆಳಗ್ಗೆಯಿಂದಲೂ ಸ್ವಲ್ಪ ವಿರಾಮ ನೀಡಿದ ಮಳೆ, ನದಿಗಳ ಪ್ರವಾಹ ಸ್ಥಿತಿ ಸ್ವಲ್ಪ ಇಳಿಕೆ

88

ಮಳೆ ನೀರಿನಲ್ಲಿ ಅರ್ಧಭಾಗ ಮುಳುಗಿರುವ ದೇವಸ್ಥಾನ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved