MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • Constitution: ಅಂಬೇಡ್ಕರ್‌ಗೆ ಪ್ರಧಾನಿ ಮೋದಿ ನೈಜ ಗೌರವ: ಸಚಿವ ಕಾರಜೋಳ

Constitution: ಅಂಬೇಡ್ಕರ್‌ಗೆ ಪ್ರಧಾನಿ ಮೋದಿ ನೈಜ ಗೌರವ: ಸಚಿವ ಕಾರಜೋಳ

ಬೆಂಗಳೂರು(ನ.27):  ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌(Dr BR Ambedkar) ಅವರಿಗೆ ಸೇರಿದ ಸ್ಥಳಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ನೈಜ ಗೌರವ ಸಲ್ಲಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ(Govind Karjol) ಅಭಿಪ್ರಾಯಪಟ್ಟಿದ್ದಾರೆ. 

1 Min read
Kannadaprabha News | Asianet News
Published : Nov 27 2021, 07:58 AM IST| Updated : Nov 27 2021, 08:04 AM IST
Share this Photo Gallery
  • FB
  • TW
  • Linkdin
  • Whatsapp
14

ಮಲ್ಲೇಶ್ವರದ ಬಿಜೆಪಿ(BJP) ಕಚೇರಿಯಲ್ಲಿ ಶುಕ್ರವಾರ ರಾಜ್ಯ ಎಸ್‌ಸಿ ಮೋರ್ಚಾ ವತಿಯಿಂದ ನಡೆದ ಸಂವಿಧಾನ(Constitution) ಗೌರವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೆ ಡಾ. ಅಂಬೇಡ್ಕರ್‌ ಅವರ ಸಂವಿಧಾನ ಸಮರ್ಪಣೆ ದಿನಾಚರಣೆ ನಡೆಸಲಾಗಿದೆ. ಅವರ ಅತ್ಯಮೂಲ್ಯ ಕಾರ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಡಾ. ಅಂಬೇಡ್ಕರ್‌ ಅವರು ಹುಟ್ಟಿಬೆಳೆದ ಮನೆ, ನೆಲೆಸಿದ್ದ ನಿವಾಸ, ಅವರ ಕಾರ್ಯಾಲಯ, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶದಲ್ಲಿ ವಾಸವಿದ್ದ ಮನೆಯನ್ನೂ ಖರೀದಿಸಿ ಅಭಿವೃದ್ಧಿಪಡಿಸಿದ್ದಾರೆ. ಅಲ್ಲದೇ, ಸಮಾಧಿ ಸ್ಥಳವನ್ನೂ ಸಹ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದ ಕಾರಜೋಳ
 

24

ಅಸ್ಪೃಶ್ಯತೆ(Untouchability) ದೂರವಾಗಬೇಕು, ದೀನದಲಿತರ(Dalit) ಕಲ್ಯಾಣವಾಗಬೇಕು ಎಂಬ ಆಶಯ ಅಂಬೇಡ್ಕರ್‌ ಅವರದಾಗಿತ್ತು. ದೀನದಲಿತರು ಸ್ವಾವಲಂಬಿ ಆಗಬೇಕೆಂಬ ಚಿಂತನೆ ಇತ್ತು. ಇದಕ್ಕಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕರೆ ನೀಡಿದ್ದರು. ದೀನದಲಿತರು ವಿದ್ಯಾವಂತರಾಗುತ್ತಿದ್ದಂತೆ ಕಾಂಗ್ರೆಸ್‌ನಿಂದ ದೂರವಾಗುತ್ತಿದ್ದಾರೆ. ದೇಶದಲ್ಲಿ ಶೇ.90ರಷ್ಟು ಕಾಂಗ್ರೆಸ್‌(Congress) ಮುಕ್ತವಾಗಿದೆ. ಇನ್ನು, ಶೇ.10ರಷ್ಟು ಮಾತ್ರ ಉಳಿದಿದೆ. ಸ್ವಾತಂತ್ರ್ಯ(Freedom) ಬಂದ ಬಳಿಕ ಕಾಂಗ್ರೆಸ್‌ ಪಕ್ಷದ ಅಗತ್ಯ ಇಲ್ಲ ಎಂದು ಸ್ವತಃ ಮಹಾತ್ಮ ಗಾಂಧಿಯವರು ತಮ್ಮ ಪತ್ರಿಕೆಯಲ್ಲಿ ಅಭಿಪ್ರಾಯಪಟ್ಟಿದ್ದರು. ಆ ಪಕ್ಷ ವಿಸರ್ಜನೆಗೆ ಸಲಹೆ ನೀಡಿದ್ದರು. ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ರಚಿಸಿದ ಸಂಘಟನೆಯಲ್ಲಿ ಕಳ್ಳಕಾಕರು ಸೇರಿ ಸಂಘಟನೆ ಹೆಸರು ಕೆಡದಿರಲಿ ಎಂದಿದ್ದರು ಎಂದ ತಿಳಿಸಿದ ಸಚಿವ ಕಾರಜೋಳ

34

ಇನ್ನು ಮುಂದೆ ಕಾಂಗ್ರೆಸ್‌ನ ಮೋಸದಾಟ ನಡೆಯದು. ದೀನದಲಿತರು ಕಾಂಗ್ರೆಸ್‌ನ ಒತ್ತೆಯಾಳುಗಳೆಂದು ತಿಳಿದುಕೊಂಡಿದ್ದಾರೆ. ಅಲ್ಪಸಂಖ್ಯಾತರು ಕಾಂಗ್ರೆಸ್‌ನ ಗುಲಾಮರೆಂದು ಭಾವಿಸಿದ್ದಾರೆ. ಆ ಕಾಲ ಹೋಗಿದೆ. ಜಾತಿ-ಜಾತಿಯ ಮಧ್ಯೆ ಮತ್ತು ಧರ್ಮಗಳ ನಡುವೆ ವೈಷಮ್ಯ ಹುಟ್ಟಿಸುವ ಕಾರ್ಯವನ್ನು ಕಾಂಗ್ರೆಸ್‌ನವರು ಮಾಡಿದರು. ಕಾಂಗ್ರೆಸ್‌ ಈಗ ಹತಾಶೆಗೊಳಗಾಗಿದೆ. ಹೊಟ್ಟೆಪಾಡಿಗಾಗಿ ಬಿಜೆಪಿ ಗುಳೆ ಹೋದವರು ಎಂದು ಹೇಳಿರುವುದು ದೀನದಲಿತರಿಗೆ ಮಾಡಿದ ಅವಮಾನ ಎಂದು ಟೀಕಾಪ್ರಹಾರ ನಡೆಸಿದ ಸಚಿವರು

44

ಸಂಸದ ಎಸ್‌.ಮುನಿಸ್ವಾಮಿ, ಶಾಸಕ ಪಿ.ರಾಜೀವ್‌, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ಎಸ್‌ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಿಜೆಪಿ
ಬೆಂಗಳೂರು
ಸಂವಿಧಾನ
ಗೋವಿಂದ ಕಾರಜೋಳ
ನರೇಂದ್ರ ಮೋದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved