MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ತಿರುಪತಿಗೆ 50 ಕೆಜಿ ತೂಕದ 2 ಬೃಹತ್ ಬೆಳ್ಳಿಯ ದೀಪ ನೀಡಿದ ಪ್ರಮೋದಾದೇವಿ ಒಡೆಯರ್

ತಿರುಪತಿಗೆ 50 ಕೆಜಿ ತೂಕದ 2 ಬೃಹತ್ ಬೆಳ್ಳಿಯ ದೀಪ ನೀಡಿದ ಪ್ರಮೋದಾದೇವಿ ಒಡೆಯರ್

ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಎರಡು ಬೃಹತ್ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಈ ದೀಪಗಳು ತಲಾ 50 ಕೆಜಿ ತೂಕ ಹೊಂದಿದ್ದು, 300 ವರ್ಷಗಳ ಹಿಂದೆ ಮೈಸೂರು ಮಹಾರಾಜರು ದೇವಸ್ಥಾನಕ್ಕೆ ದೀಪಗಳನ್ನು ದಾನ ಮಾಡಿದ್ದರು ಎಂದು ಟಿಟಿಡಿ ತಿಳಿಸಿದೆ.

1 Min read
Kannadaprabha News
Published : May 20 2025, 09:02 AM IST| Updated : May 20 2025, 09:05 AM IST
Share this Photo Gallery
  • FB
  • TW
  • Linkdin
  • Whatsapp
15

ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ 2 ಬೃಹತ್ ಬೆಳ್ಳಿಯ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸಮಿತಿ ತಿಳಿಸಿದೆ. 

25

ತಲಾ 50 ಕೇಜಿ ತೂಕದ 2 ಬೆಳ್ಳಿ ದೀಪಗಳನ್ನು ದೇವಸ್ಥಾನದ ರಂಗನಾಯಕಕುಲ ಮಂಟಪದಲ್ಲಿ ಟಿಟಿಡಿ ಅಧ್ಯಕ್ಷ ಬಿ.ಆರ್. ನದಿಯು ಮತ್ತು ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಯ್ಯ ಚೌಧರಿ ಅವರ ಸಮ್ಮುಖದಲ್ಲಿ ಪ್ರಮೋದಾದೇವಿ ಅವರು ಹಸ್ತಾಂತರಿಸಿದರು. 300 ವರ್ಷಗಳ ಹಿಂದೆಯೂ ಅಂದಿನ ಮೈಸೂರು ಮಹಾರಾಜರು ದೇವಸ್ಥಾನಕ್ಕೆ ದೀಪಗಳನ್ನು ದಾನ ಮಾಡಿದ್ದರು ಎಂದು ಟಿಟಿಡಿ ತಿಳಿಸಿದೆ.

Related Articles

Related image1
ಮೈಸೂರು ರಾಣಿ ಪತ್ರ: ಸಿದ್ದಯ್ಯನಪುರ ಗ್ರಾಮಸ್ಥರಿಗೆ ಟೆನ್ಷನ್ !
Related image2
ಚಾಮುಂಡೇಶ್ವರಿ ಪ್ರಾಧಿಕಾರ ಕಾಯ್ದೆಯಿಂದ ರಾಜಮನೆತನ ಕಡೆಗಣನೆ: ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಣಿ ಪ್ರಮೋದಾ ದೇವಿ!
35

2022ರಲ್ಲಿ ತಿರುಪತಿ ಹುಂಡಿಯಲ್ಲಿ 2.37 ಕೋಟಿ ಭಕ್ತರು ಭೇಟಿ ನೀಡಿದ್ದರು ಹಾಗೂ 1,450 ಕೋಟಿ ರು. ಸಂಗ್ರಹವಾಗಿತ್ತು. ಆದರೆ ಕಳೆದ ಸಲಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರೂ ಸುಮಾರು 50 ಕೋಟಿ ರು. ಕಮ್ಮಿ ಆದಾಯ ಬಂದಿದೆ.

45

2023ರ ಜುಲೈ ತಿಂಗಳಿನಲ್ಲಿಯೇ 129 ಕೋಟಿ ರು. ಆದಾಯ ಸಂಗ್ರಹವಾಗಿತ್ತು. ಇದು ವರ್ಷದ ಗರಿಷ್ಠವಾಗಿದೆ. ನವೆಂಬರ್‌ ತಿಂಗಳಿನಲ್ಲಿ 108 ಕೋಟಿ ರು. ಆದಾಯ ಗಳಿಕೆಯಾಗಿದ್ದು ಇದು ವರ್ಷದಲ್ಲೇ ಸಂಗ್ರಹವಾದ ಕಡಿಮೆ ಮೊತ್ತವಾಗಿದೆ

55

ಜಗತ್ತಿನ ಶ್ರೀಮಂತ ದೇಗುಲ ಎನ್ನಲಾಗುವ ತಿರುಪತಿ ವೆಂಕಟೇಶ್ವರ ದೇವಸ್ಥಾನದ ಹುಂಡಿಯ ಕಾಣಿಕೆ ಸಂಗ್ರಹದಲ್ಲಿಯೂ ದಾಳಲೆ ಬರೆಯುತ್ತದೆ. ಸಾಮಾನ್ಯವಾಗಿ ದಿನಕ್ಕೆ 3 ಕೋಟಿ ರು. ಅಥವಾ ಅದಕ್ಕಿಂತಲೂ ಹೆಚ್ಚು ಮೊತ್ತದ ಕಾಣಿಕೆ ಸಂಗ್ರಹವಾಗುತ್ತದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮೈಸೂರು
ತಿರುಪತಿ
ಪ್ರಮೋದಾ ದೇವಿ ಒಡೆಯರ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved