ರಾಷ್ಟ್ರಪತಿ ರಾಮನಾಥ್ ಕೋವಿಂದ್ 4 ದಿನಗಳ ರಾಜ್ಯ ಪ್ರವಾಸ ...
ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ 4 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಏರ್ ಪೋರ್ಟ್ ನಿಂದ ನೇರವಾಗಿ ರಾಜಭವನಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಅಗಮಿಸಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮ ನಡೆಯಲಿದ್ದು, ಇಂದು ರಾತ್ರಿ ರಾಜಭವನದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ರಾಷ್ಟ್ರಪತಿ ಕೋವಿಂದ್..

Ramnath Kovind
ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ 4 ದಿನಗಳ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ಏರ್ ಪೋರ್ಟ್ ನಿಂದ ನೇರವಾಗಿ ರಾಷ್ಟ್ರಪತಿಗಳು ರಾಜಭವನಕ್ಕೆ ಆಗಮಿಸಿದ್ದಾರೆ.
Ramnath Kovind
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಕ್ಕೆ ಸ್ವಾಗತಿಸಿದ್ದು, ಅಲ್ಲಿಂದ ರಾಜಭವನಕ್ಕೆ ಅಗಮಿಸಿರುವ ಅವರು ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ
Ramnath Kovind
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿವಿಧ ಕಾರ್ಯಕ್ರಮಗಳ ಬಳಿಕ ಇಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
Ramnath Kovind
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ರಾಜ್ಯ ಪ್ರವಾಸ ಇಂದಿನಿಂದ ಆರಂಭವಾಗಿದ್ದು, ನಾಳೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಬೆಳಗ್ಗೆ 9.30ಗಂಟೆಗೆ ಮೈಸೂರಿಗೆ ರಾಷ್ಟ್ರಪತಿಗಳು ಬೆಂಗಳೂರಿನಿಂದ ತೆರಳಲಿದ್ದಾರೆ.
Ramnath Kovind
ಗುರುವಾರ ಬೆಳಗ್ಗೆ 11. 30ಕ್ಕೆ ಬಿ.ಆರ್. ಹಿಲ್ಸ್ ನ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿರುವ ರಾಷ್ಟ್ರ ಪತಿ ರಾಮನಾಥ ಕೋವಿಂದ್ ಅವರು ಮಧ್ಯಾಹ್ನ 1.30ಕ್ಕೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ
Ramnath Kovind
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯಾಹ್ನ ನಾಳೆ 3.30ಕ್ಕೆ ಸಿಮ್ಸ್ ನಲ್ಲಿ 450 ಹಾಸಿಗೆಗಳ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5.15 ಕ್ಕೆ ಚಾಮರಾಜನಗರದಿಂದ ಮೈಸೂರು ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ
Ramnath Kovind
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಜೆ 6.10ಕ್ಕೆ ಮೈಸೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಲಿದ್ದು, ಗುರುವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶುಕ್ರವಾರ ಬೆಳಗ್ಗೆ 10 .30ಕ್ಕೆ ಮಂಗಳೂರಿನಿಂದ ಶೃಂಗೇರಿಗೆ ಪ್ರಯಾಣ ಮಾಡಲಿದ್ದು, ಶುಕ್ರವಾರ ಬೆಳಗ್ಗೆ 11.50ಕ್ಕೆ ಶೃಂಗೇರಿಯಲ್ಲಿ ಶಂಕರ ಅದ್ವೈತ ರಿಸರ್ಚ್ ಸೆಂಟರ್ ಗೆ ಭೇಟಿ ನೀಡಲಿದ್ದಾರೆ. ಶುಕ್ರವಾರ ಸಂಜೆ 3.15ಕ್ಕೆ ಶೃಂಗೇರಿಯಿಂದ ಮಂಗಳೂರಿಗೆ ಪ್ರಯಾಣ ಮಾಡಲಿದ್ದು ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿ ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ