MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ರಾಘವೇಂದ್ರ ಮಠದ ಆಸ್ತಿ‌ ವಿವಾದ: ಮಧ್ಯರಾತ್ರಿ ಸುಬುಧೇಂದ್ರ ಶ್ರೀಗಳ ವಿರುದ್ಧ ಪ್ರತಿಭಟನೆ

ರಾಘವೇಂದ್ರ ಮಠದ ಆಸ್ತಿ‌ ವಿವಾದ: ಮಧ್ಯರಾತ್ರಿ ಸುಬುಧೇಂದ್ರ ಶ್ರೀಗಳ ವಿರುದ್ಧ ಪ್ರತಿಭಟನೆ

ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಬುಧವಾರ ಮಧ್ಯರಾತ್ರಿ ಏಕಾಏಕಿ ರಾಯರ ಮಠದ ಭಕ್ತರು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸಿದರು.

2 Min read
Author : Govindaraj S
| Updated : Mar 27 2025, 10:33 AM IST
Share this Photo Gallery
  • FB
  • TW
  • Linkdin
  • Whatsapp
16

ಕೊಪ್ಪಳ (ಮಾ.27): ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಬುಧವಾರ ಮಧ್ಯರಾತ್ರಿ ಏಕಾಏಕಿ ರಾಯರ ಮಠದ ಭಕ್ತರು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸಿದರು. ರಾಯರ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂತ್ರಾಲಯ ಶ್ರೀಗಳು ಬುಧವಾರ ಸಂಜೆ ರಾಯರ ಮಠಕ್ಕೆ ಆಗಮಿಸಿದ್ದರು‌. ಈ ವೇಳೆ ಭಕ್ತರನ್ನು ಉದ್ದೇಶಿಸಿ, ಆರ್ಶೀವಚನ ನೀಡುವಾಗ, ಕೊಪ್ಪಳ ರಾಯರ ಮಠ ಮಂತ್ರಾಲಯ ಮಠಕ್ಕೆ ಸೇರಿದ್ದು, ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿಯಿವೆ.

26

ಈಗಿನಂತೆಯೇ ಮುಂದಿನ ದಿನಗಳಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಿಕೊಂಡು ಹೋಗಲು ಮೇಲ್ವಿಚಾರಣಾ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಗೆ ಹೆಸರುಗಳನ್ನು ನೀವೆ ಕೊಡಿ ಎಂದು ಹೇಳಿದರು. ಇದರಿಂದ ಕೆರಳಿದ ರಾಯರ ಮಠದ ಭಕ್ತರು, ಶ್ರೀಗಳು ತೆರಳಿದ ನಂತರ, ಕೊಪ್ಪಳದ ರಾಯರ ಮಠ ಯಾರಿಗೂ ಸೇರಿದ್ದಲ್ಲ, ಐದು ದಶಕಗಳಿಂದ ಸ್ವತಂತ್ರವಾಗಿ ನಡೆದುಕೊಂಡು ಬಂದಿದೆ. ಕೊಪ್ಪಳದ ಜನರೇ ನಡೆಸಿಕೊಂಡು ಹೋಗುತ್ತಿದ್ದಾರೆ. ಮುಂದೆಯೂ ನಮಗೆ ಸಂಪೂರ್ಣ ಅಧಿಕಾರ ಕೊಡಬೇಕು. ಯಾರ ಹಸ್ತಕ್ಷೇಪ ಸರಿಯಲ್ಲ.

36

ಮಠದ ಅಭಿವೃದ್ಧಿಗೆ ಯಾರ ಅನುದಾನವು ಬೇಡ. ಸೇವಾ ಮನೋಭಾವದಿಂದ ಇಷ್ಟು ವರ್ಷಗಳ ಕಾಲ ಸೇವಾ ಮನೋಭಾವದಿಂದ ಕೆಲಸ ಮಾಡಿರುವ ಜಗನ್ನಾಥ ಹುಲಗುಂದ ಅವರಿಗೆ ಅಧಿಕಾರ ನೋಡಿಕೊಳ್ಳಲು ಬಿಡಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ಮಂತ್ರಾಲಯ ಪೀಠ ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯಿಸಿದರು. ಇದೆಲ್ಲವನ್ನು ಸುಬುಧೇಂದ್ರ ಶ್ರೀಗಳ ಗಮನಕ್ಕೆ ತರುವುದಕ್ಕಾಗಿ ಮಧ್ಯರಾತ್ರಿಯೇ ಘೋಷಣೆ ಕೂಗುತ್ತಾ, ಸ್ಥಳೀಯ ಭಕ್ತರ ಮನೆಯಲ್ಲಿ ತಂಗಿದ್ದ ಶ್ರೀಗಳತ್ತ ಭಕ್ತರು ನಡೆದರು. ಅಲ್ಲದೆ, ನಮ್ಮ ಮಠವನ್ನು ಈಗಿರುವಂತೆಯೇ ಸ್ವತಂತ್ರವಾಗಿ ನಡೆಸಿಕೊಂಡು ಹೋಗಲು ಬಿಡಿ, ಅನಗತ್ಯ ಹಸ್ತಕ್ಷೇಪ ಮಾಡಬೇಡಿ ಎಂದು ಒಕ್ಕೂರಲಿನಿಂದ ಆಗ್ರಹಿಸಿದರು. 

46

ಐದು ದಶಕಗಳಿಂದ ಮಠವನ್ನು ಸ್ವತಂತ್ರವಾಗಿ ನಡೆಸಿಕೊಂಡು ಬರಲಾಗುತ್ತಿದೆ. 1971 ರಲ್ಲಿ ಮಠವನ್ನು ಮಂತ್ರಾಲಯ ಮಠಕ್ಕೆ ಬಿಟ್ಟು ಕೊಡಲಾಗಿತ್ತು ಎನ್ನುವುದು ಅಪ್ರಸ್ತುತ ಎಂದು ಭಕ್ತರು ಶ್ರೀಗಳ ಎದುರು ವಾದಿಸಿದರು. ತಾವು ತಂಗಿದ್ದ ಸ್ಥಳಕ್ಕೆ ಬಂದ ವ್ಯವಸ್ಥಾಪಕ ಜಗನ್ನಾಥ ಹುನಗುಂದ, ಪ್ರಧಾನ ಅರ್ಚಕ ಕೊಪ್ಪಳ ರಾಯರ ಮಠದ ಪ್ರಧಾನ ಅರ್ಚಕ ರಘು ಪ್ರೇಮಾಚಾರ್ ಅವರೊಂದಿಗೆ ಬಂದ ಭಕ್ತರ ಬಳಗದೊಂದಿಗೆ ಮಾತನಾಡಿದ ಮಂತ್ರಾಲಯ ಶ್ರೀಗಳು, ಕೊಪ್ಪಳ ರಾಯರ ಮಠದ ಅಧಿಕಾರವನ್ನು 1971 ರಲ್ಲಿಯೇ ಮಂತ್ರಾಲಯ ಮಠಕ್ಕೆ ನೀಡಲಾಗಿದೆ. ಈ ಕುರಿತು ಸಮಗ್ರ ದಾಖಲೆಗಳು ನಮ್ಮ ಬಳಿಯಿವೆ. 

56

ಮಠ ಸುಸೂತ್ರವಾಗಿ ನಡೆದುಕೊಂಡು ಹೋಗಲು ಅಚ್ಚುಕಟ್ಡಾದ ವ್ಯವಸ್ಥೆ ಮಾಡಿಕೊಳ್ಳುವಂತೆ ಹೇಳಿದ್ದೇನೆ. ಇಷ್ಟಕ್ಕೆ ಕೊಪ್ಪಳ ರಾಯರ ಮಠವನ್ನು ಮಂತ್ರಾಲಯ ಮಠ ಅಪಹರಿಸಿಕೊಂಡು ಹೋಗುತ್ತಿದೆ ಎಂದು ಬಿಂಬಿಸುವುದು ಸರಿಯಲ್ಲ. ಈಗಿರುವ ವ್ಯವಸ್ಥಾಪಕ ಜಗನ್ನಾಥ ಹುನಗುಂದ ಅವರೇ ಮುಂದುವರಿಯಲಿ ಎಂದು ಹೇಳಿದರು. ಇದಾದ ಬಳಿಕ ಭಕ್ತರು ಸಮಾಧಾನಗೊಂಡು ಅಲ್ಲಿಂದ ಕಾಲ್ಕಿತ್ತರು.

66

ಕಾರ್ಯಕ್ರಮಗಳೆಲ್ಲ ರದ್ದು: ಇಂದು ನಡೆಬೇಕಿದ್ದ ರಾಯರ ಮಠದಲ್ಲಿಯ ಕಾರ್ಯಕ್ರಮಗಳೇ ಎಲ್ಲವನ್ನು ರದ್ದುಗೊಳಿಸಿ, ಮುಂದಿನ ದಿನದಲ್ಲಿ ಮತ್ತೊಮ್ಮೆ ಬಂದು ಕಾರ್ಯಕ್ರಮ ಮಾಡುವೆ ಎಂದು ರಾಯರ ಮಠದ ಒಳಗಡೆ ಬರದೆ ಹೊರಗೆ ಇರುವ ಹನುಮನ ದರ್ಶನ ಪಡೆದು ಮರಳಿ ತಮ್ಮ ವಾಹನವನ್ನು ಏರಿ ಹೊರಗಡೆ ನಡೆದ ಮಂತ್ರಾಲಯದ ಶ್ರೀಗಳು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಕರ್ನಾಟಕ ಸುದ್ದಿ

Latest Videos
Recommended Stories
Recommended image1
Karnataka News Live: ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹ ಎಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಪ್ರಕರಣ
Recommended image2
ಬೆಂಗಳೂರು ಆಸ್ಪತ್ರೆಗಳಲ್ಲಿಅಂಡಾಣು ಮಾರಾಟ ದಂಧೆ
Recommended image3
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಭುಗಿಲೆದ್ದ ಹೋರಾಟ - ನಿರುದ್ಯೋಗಿಗಳ ಸಿಟ್ಟು ಸ್ಫೋಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved