ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿದ್ದರೂ ನಿಲ್ಲದ ಶ್ರೀಗಳ ವ್ರತ, ಪೂಜೆ
ಇತಿಹಾಸ ಪ್ರಸಿದ್ಧ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು ತಗುಲಿದ್ದು, ಸದ್ಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಜೊತೆಗೆ ತಮ್ಮ ವ್ರತ, ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ.

<p>ಪುತ್ತಿಗೆ ಸ್ವಾಮೀಜಿಗೆ ಕೊರೊನಾ ಸೋಂಕು ಹರಡಿದ್ದು, ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>
ಪುತ್ತಿಗೆ ಸ್ವಾಮೀಜಿಗೆ ಕೊರೊನಾ ಸೋಂಕು ಹರಡಿದ್ದು, ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
<p>ಚಿಕಿತ್ಸೆ ಪಡೆಯುತ್ತಿರುವ ಸ್ವಾಮೀಜಿ ವಿಶ್ರಾಂತಿಯ ಜೊತೆಗೆ ನಿರಂತರ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ.</p>
ಚಿಕಿತ್ಸೆ ಪಡೆಯುತ್ತಿರುವ ಸ್ವಾಮೀಜಿ ವಿಶ್ರಾಂತಿಯ ಜೊತೆಗೆ ನಿರಂತರ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ.
<p>ಅನುಷ್ಠಾನಗಳನ್ನು ಮಾಡುತ್ತಿದ್ದಾರೆ. ಆaಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಗಮನಸೆಳೆದಿದೆ. </p>
ಅನುಷ್ಠಾನಗಳನ್ನು ಮಾಡುತ್ತಿದ್ದಾರೆ. ಆaಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಗಮನಸೆಳೆದಿದೆ.
<p>ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು ದೇಶಗಳಲ್ಲಿ ತಮ್ಮ ಶಾಖಾಮಠಗಳನ್ನು ಹೊಂದಿರುವ ಸ್ವಾಮೀಜಿ ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವೃತ ಕೈಗೊಂಡಿದ್ದರು.</p>
ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು ದೇಶಗಳಲ್ಲಿ ತಮ್ಮ ಶಾಖಾಮಠಗಳನ್ನು ಹೊಂದಿರುವ ಸ್ವಾಮೀಜಿ ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವೃತ ಕೈಗೊಂಡಿದ್ದರು.
<p>ಚಾತುರ್ಮಾಸ್ಯಕ್ಕೆ ಸಂಕಲ್ಪ ಮಾಡಿದ್ದ ಸಮಯದಲ್ಲಿ ಜ್ವರ ಮತ್ತು ಶೀತದ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಬಂದಿತ್ತು.</p>
ಚಾತುರ್ಮಾಸ್ಯಕ್ಕೆ ಸಂಕಲ್ಪ ಮಾಡಿದ್ದ ಸಮಯದಲ್ಲಿ ಜ್ವರ ಮತ್ತು ಶೀತದ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಬಂದಿತ್ತು.
<p>ಬಳಿಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಚಿಕಿತ್ಸೆಯ ವೇಳೆ ಸ್ವಾಮೀಜಿ ಪೂಜೆ ಜಪ ಅನುಷ್ಠಾನಗಳಲ್ಲಿ ತೊಡಗಿರುವ ಫೋಟೋ ಭಕ್ತರಿಗೆ ಕೊಂಚ ನೆಮ್ಮದಿ ನೀಡಿದೆ.</p>
ಬಳಿಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಚಿಕಿತ್ಸೆಯ ವೇಳೆ ಸ್ವಾಮೀಜಿ ಪೂಜೆ ಜಪ ಅನುಷ್ಠಾನಗಳಲ್ಲಿ ತೊಡಗಿರುವ ಫೋಟೋ ಭಕ್ತರಿಗೆ ಕೊಂಚ ನೆಮ್ಮದಿ ನೀಡಿದೆ.
<p>ಪಿಪಿಇ ಕಿಟ್ ಧರಿಸಿಕೊಂಡೇ ಶ್ರೀಗಳ ಶಿಷ್ಯವೃಂದ ಸ್ವಾಮೀಜಿಯ ಪೂಜೆಗೆ ಸಹಕರಿಸುತ್ತಿದ್ದಾರೆ. ಆರೈಕೆ ಮಾಡುವ ಸಂದರ್ಭ ಕೂಡ ಕಿಟ್ ತೊಟ್ಟಿರುವುದು ಫೋಟೋದಲ್ಲಿ ಕಾಣಿಸುತ್ತಿದೆ.</p>
ಪಿಪಿಇ ಕಿಟ್ ಧರಿಸಿಕೊಂಡೇ ಶ್ರೀಗಳ ಶಿಷ್ಯವೃಂದ ಸ್ವಾಮೀಜಿಯ ಪೂಜೆಗೆ ಸಹಕರಿಸುತ್ತಿದ್ದಾರೆ. ಆರೈಕೆ ಮಾಡುವ ಸಂದರ್ಭ ಕೂಡ ಕಿಟ್ ತೊಟ್ಟಿರುವುದು ಫೋಟೋದಲ್ಲಿ ಕಾಣಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ