MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ರಾಜ್ಯದಲ್ಲಿ ಇನ್ನೂ 1 ವಾರ ಮಳೆ ಸಾಧ್ಯತೆ; ಏಪ್ರಿಲ್ 17, 18ಕ್ಕೆ ಹೆಚ್ಚಿನ ಮಳೆಯ ನಿರೀಕ್ಷೆ

ರಾಜ್ಯದಲ್ಲಿ ಇನ್ನೂ 1 ವಾರ ಮಳೆ ಸಾಧ್ಯತೆ; ಏಪ್ರಿಲ್ 17, 18ಕ್ಕೆ ಹೆಚ್ಚಿನ ಮಳೆಯ ನಿರೀಕ್ಷೆ

Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆಯು ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ಸಾವಿರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ರೈತರಿಗೆ ನಷ್ಟ ಉಂಟಾಗಿದೆ.

2 Min read
Kannadaprabha News
Published : Apr 13 2025, 02:26 PM IST| Updated : Apr 13 2025, 02:33 PM IST
Share this Photo Gallery
  • FB
  • TW
  • Linkdin
  • Whatsapp
18

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. 

28

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಸೋಮವಾರದಿಂದ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಗುರುವಾರದಿಂದ ಶನಿವಾರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

38

ಮೇನಲ್ಲಿ ಮಳೆ ಬಂದರೆ ಮುಂಗಾರಿಗೆ ತೊಂದರೆ

ಏಪ್ರಿಲ್‌ ಅವಧಿಯಲ್ಲಿ ಮಳೆ ಬಂದರೆ ಮುಂಗಾರು ಅವಧಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಮೇ ಕೊನೇ ವಾರದಲ್ಲಿ ಚಂಡಮಾರುತ, ವಾಯುಭಾರ ಕುಸಿತದಂಥ ಸ್ಥಿತಿ ಉಂಟಾದರೆ ಮುಂಗಾರು ಆರಂಭಕ್ಕೆ ಸಮಸ್ಯೆಯಾಗಲಿದೆ. ಉಳಿದಂತೆ ಮುಂಗಾರು ಅವಧಿಯಲ್ಲಿ ಈ ಬಾರಿಯೂ ರಾಜ್ಯದಲ್ಲಿ ವಾಡಿಕೆ ಮಳೆಯಾಗುವ ಲಕ್ಷಣ ಕಂಡು ಬಂದಿವೆ ಎಂದು ಹವಾಮಾನ ತಜ್ಞ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

48

ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ವರದಿ ಪ್ರಕಾರ, ಮಂಗಳೂರಿನಲ್ಲಿ ಅತಿ ಹೆಚ್ಚು 4 ಸೆಂ.ಮೀ. ಮಳೆಯಾಗಿದೆ. ಯಾದಗಿರಿಯ ಕಕ್ಕೇರಿ, ಸೈದಾಪುರ ಹಾಗೂ ಶೋರಾಪುರ, ಬೀದರ್‌, ರಾಯಚೂರಿನ ಜಾಲಹಳ್ಳಿ ಹಾಗೂ ಗಬ್ಬೂರಿನಲ್ಲಿ ತಲಾ 3, ಬೆಂಗಳೂರಿನ ಟಿ.ಜೆ.ಹಳ್ಳಿ, ಕೋಟಾ, ಕೆಂಭಾವಿ, ಮುದ್ದೇಬಿಹಾಳ, ಗಂಗಾವತಿ, ಸೋಮವಾರಪೇಟೆಯಲ್ಲಿ ತಲಾ 2, ಪಣಂಬೂರು, ಹುಣಸಗಿ, ಶಹಾಪುರ, ಕೊಪ್ಪಳ, ಬಾಗೇವಾಡಿ, ನಾಗಮಂಗಲದಲ್ಲಿ ತಲಾ 1 ಸೆಂ.ಮೀ. ಮಳೆಯಾದ ವರದಿಯಾಗಿದೆ.

58

ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ 

ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ. ಕೊಪ್ಪಳ ಜಿಲ್ಲೆಯೊಂದರಲ್ಲೇ ಅಂದಾಜು 10 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. 

68

ಕೊಪ್ಪಳ ಜಿಲ್ಲೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಕಟಾವಿಗೆ ಬಂದಿದ್ದ 8-9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿ ಸಂಪೂರ್ಣ ನೀರು ಪಾಲಾಗಿದೆ. ಹ್ಯಾಟಿ, ಮುದ್ದಾಬಳ್ಳಿ, ಡೊಂಬರಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಬೆಳೆದಿದ್ದ ಬಾಳೆ ಬೆಳೆ ಬಿರುಗಾಳಿಗೆ ನೆಲಕ್ಕೆ ಬಿದ್ದಿದ್ದು ಅಪಾರ ಹಾನಿ ಸಂಭವಿಸಿದೆ. 

78
RAIN

RAIN

ಮಾಗಡಿಯಲ್ಲಿ ಭಾರಿ ಮಳೆ

ಶನಿವಾರ ಸಂಜೆ 4 ಗಂಟೆಗೆ ಮಾಗಡಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವು ಕಂಬಗಳು ಧರೆಗುಳಿದಿವೆ. ಒಂದು ಗಂಟೆಗೂ ಹೆಚ್ಚು ಕಾಲ ತಾಲೂಕಾದ್ಯಂತ ಉತ್ತಮ ಮಳೆ ಸುರಿದಿದೆ. ಜೊತೆಗೆ ಬಿರುಗಾಳಿ ಸಹಿತ ಮಳೆ ಬಂದದ್ದರಿಂದ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

88

ಮಾಗಡಿ ಪಟ್ಟಣದ ಹೊಸಪೇಟೆಯಲ್ಲಿ ನೀಲಗಿರಿ ಮರ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ಮುರಿದು ಬಿದ್ದು ಪಟ್ಟಣದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮಳೆ
ಬೆಂಗಳೂರು ಮಳೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved