MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ರೋಹಿಣಿಗೆ ಹೋದಲೆಲ್ಲಾ ವಿವಾದವೇ 'ಸಿಂಧೂರ'!

ರೋಹಿಣಿಗೆ ಹೋದಲೆಲ್ಲಾ ವಿವಾದವೇ 'ಸಿಂಧೂರ'!

ಅದೇನೋ ಗೊತ್ತಿಲ್ಲ..ರೋಹಿಣಿ ಸಿಂಧೂರಿ ಹೋದಲ್ಲೆಲ್ಲಾ ಒಂದಲ್ಲಾ ಒಂದು ವಿವಾದ ಕಾದಿರುತ್ತದೆ. ಒಂದೋ ಆ ಪ್ರದೇಶದ ರಾಜಕಾರಣಿ ಅಥವಾ ಇನ್ಯಾರಿಂದಲೋ ಅವರ ಹೆಸರು ವಿವಾದದಲ್ಲಿ ಚರ್ಚೆಯಲ್ಲಿರುತ್ತದೆ. 2015ರಲ್ಲಿ ಡಿಕೆ ರವಿ ಆತ್ಮಹತ್ಯೆ ಕೇಸ್‌ ಬಳಿಕ ರಾಜ್ಯದಲ್ಲಿ ಯಾರಾದರೊಬ್ಬರು ಆಡಳಿತಾಧಿಕಾರಿಯ ಹೆಸರು ಚರ್ಚೆಯಲ್ಲಿ ಇದೆ ಎಂದರೆ ಅದು ರೋಹಿಣಿ ಸಿಂಧೂರಿ ಅವರದು ಮಾತ್ರ. ಈಗ ಹೊಸತೊಂದು ವಿವಾದದಲ್ಲಿ ಅವರು ಸಿಲುಕಿಕೊಂಡಿದ್ದಾರೆ. ಅದಕ್ಕೂ ಮುನ್ನ ಅವರ ವಿವಾದಗಳ ಹಿಂದಿನ ಹಿಸ್ಟರಿ ಇಲ್ಲಿದೆ. 

2 Min read
Santosh Naik
Published : Feb 19 2023, 10:27 PM IST
Share this Photo Gallery
  • FB
  • TW
  • Linkdin
  • Whatsapp
110

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ರೋಹಿಣಿ ಸಿಂಧೂರಿ ನಡುವಿನ ವಿವಾದ ತಾರಕಕ್ಕೇರಿದೆ. ರೋಹಿಣಿ ಸಿಂಧೂರಿಯವರ ಖಾಸಗಿ ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟ ಮಾಡಿದ ರೂಪಾ ಮೌದ್ಗಿಲ್‌, ರೋಹಿಣಿ ಇಂಥ ಚಿತ್ರಗಳನ್ನು ಪುರುಷ ಅಧಿಕಾರಿಗಳಿಗೆ ಕಳಿಹಿಸುತ್ತಿದ್ದಾರೆ ಎಂದಿ ಆರೋಪಿಸಿದ್ದಾರೆ. ಇದರ ನಡುವೆ ರೋಹಿಣಿ ಸಿಂಧೂರಿ ಹೆಸರು ಮತ್ತೆ ಮುನ್ನಲೆಗೆ ಬಂದಿದೆ.

210

ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಅವರು ಕಲ್ಯಾಣ ಮಂಟಪದ ಸಮೀಪದ ಸ್ಥಳ ಒತ್ತುವರಿಯಾಗಿದೆ ಎಂದು ಕೆ.ಆರ್‌.ನಗರ ಶಾಸಕ ಸಾ.ರಾ. ಮಹೇಶ್‌ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ತಾರಕಕ್ಕೇರಿತ್ತು. ಈ ನಡುವೆ ಇಬ್ಬರ ನಡುವೆ ಸಂಧಾನ ನಡೆದಿದೆ. ಎನ್ನಲಾಗಿದೆ. ಶಾಸಕರೊಬ್ಬರ ಬಳಿ ಡಿಸಿ ಆಗಿರುವವರು ಕ್ಷಮೆ ಕೇಳಿರುವ ಬಗ್ಗೆಯೂ ರೂಪಾ ಮೌದ್ಗಿಲ್‌ ಪ್ರಶ್ನೆ ಮಾಡಿದ್ದಾರೆ.

310

ಇನ್ನು ರೋಹಿಣಿ ಸಿಂಧೂರಿ ಹಾಸನದ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಎಚ್‌ಡಿ ರೇವಣ್ಣ ಅವರೊಂದಿಗೆ ವಿವಾದ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಪ್ರತಿ ದಿನವೂ ರೇವಣ್ಣ ಹಾಗೂ ಸಿಂಧೂರಿ ನಡುವಿನ ಜಟಾಜಟಿ ವರದಿಯಾಗುತ್ತಿತ್ತು. ಕೊನೆಗೆ ರೋಹಿಣಿ ಸಿಂಧೂರಿ ವರ್ಗಾವಣೆ ಆದಾಗ ರೇವಣ್ಣ ನಿಟ್ಟುಸಿರು ಬಿಟ್ಟಿದ್ದರು.

410

ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹ ಜೊತೆ 37 ಕೋಟಿ ರೂಪಾಯಿ ಕೋವಿಡ್‌ ಪರಹಾರ ನಿಧಿ ವಿಚಾರವಾಗಿ ಸುದ್ದಿಯಾಗಿದ್ದರು. 16 ಖಾಸಗಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಬಂದ್‌ ಮಾಡಿಸಿದ ಜಿಲ್ಲಾಧಿಕಾರಿ ವಿರುದ್ಧ ತನಿಖೆ ನಡೆಸುವಂತೆ ಪ್ರತಾಪ್‌ ಸಿಂಹ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು.

510

ಇನ್ನು ರೋಹಿಣಿ ಸಿಂಧೂರಿ ಅವರ ಪತಿ ಸತೀಶ್‌ ರೆಡ್ಡಿ ವಿರುದ್ಧ ಹಿಂದಿಯ ಪ್ರಖ್ಯಾತ ಹಾಸ್ಯನಟ ಮೊಹಮದ್‌ ಅಲಿ ಅವರ ಪುತ್ರ ಪ್ರಖ್ಯಾತ ಗಾಯಕ ಲಕ್ಕಿ ಅಲಿ ಭೂ ಕಬಳಿಕೆ ಆರೋಪ ಮಾಡಿದ್ದರು.ಯಲಹಂಕ ಬಳಿ ಇರುವ ಕೆಂಚೇನಹಳ್ಳಿ ಬಳಿಯ ಲಕ್ಕಿ ಆಲಿ ಅವರ ಜಾಗವನ್ನು ತಮ್ಮ ಪತ್ನಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಯವರ ಸಹಾಯದಿಂದ ಒತ್ತುವರಿ ಮಾಡಲಾಗಿದೆ ಎಂದು ಅವರು ಆರೋಪ ಮಾಡಿದ್ದರು.

610

ಇನ್ನು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ರೋಹಿಣಿ ಸಿಂಧೂರಿ ಅವರು ಆಡಳಿತ ತರಬೇತಿ ಕೇಂದ್ರದ ಅತಿಥಿ ಗೃಹದಿಂದ 12 ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗಿದ್ದರು. ಅವುಗಳನ್ನು ವಾಪಾಸ್‌ ಮಾಡುವಂತೆ ಆಡಳಿತ ತರಬೇತಿ ಕೇಂದ್ರದ ಅಧಿಕಾರಿಗಳು ಪತ್ರ ಬರೆದಿದ್ದರು. ಟೆಲಿಫೋನ್‌ ಟೇಬಲ್‌, ಬೆತ್ತದ ಚೇರ್‌ಗಳು,ಟಿಪಾಯಿ ಹಾಗೂ ಮೈಕ್ರೋಓವನ್‌ಗಳನ್ನು ಅವರು ಹೊತ್ತೊಯ್ದಿದ್ದರು.

710

ಇನ್ನು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ, ಕಚೇರಿಯ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. 'ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು 5 ವರ್ಷಗಳ ಹಿಂದಿನ ಯೋಜನೆ ಆಗಿತ್ತು. ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ' ಎಂದು ಆ ಸಮಯದಲ್ಲಿ ಸ್ಪಷ್ಟನೆ ನೀಡಿದ್ದರು. ಸರ್ಕಾರ ಕೂಡ ಈ ಕುರಿತು ತನಿಖೆಗೆ ಆದೇಶಿಸಿತ್ತು.

810

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ರೋಹಿಣಿ ಸಿಂಧೂರಿ ಅವರು ಕರ್ತವ್ಯ ನಿರ್ವಹಣೆಯಲ್ಲಿ ತಮಗೆ ಕಿರುಕುಳ ನೀಡುತ್ತಿದ್ದಾರೆ, ಅವರು ನೀಡುತ್ತಿರುವ ಕಿರುಕುಳ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ರಾಜೀನಾಮೆ ಘೋಷಿಸಿದ್ದರು. ಇದರ ಬೆನ್ನಲ್ಲೇ ಶಿಲ್ಪಾ ನಾಗ್‌ ಅವರು ಸಿಎಸ್‌ಆರ್‌ ಅನುದಾನ ಬಳಕೆಯ ಲೆಕ್ಕ ನೀಡಿಲ್ಲ, ಕೊರೋನಾ ಕೇಂದ್ರಗಳನ್ನು ಸ್ಥಾಪಿಸಲು ಕೆಲಸ ಮಾಡಿಲ್ಲ. ಈ ಬಗ್ಗೆ ಕೇಳಿದ್ದಕ್ಕೆ ಅನಗತ್ಯ ವಿವಾದ ಮಾಡುತ್ತಿದ್ದಾರೆ ಎಂದು ರೋಹಿಣಿ ಸಿಂಧೂರಿ ದೂರಿದ್ದರು. ಇದು ಕೂಡ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

910

ಚಾಮರಾಜನಗರ ಆಕ್ಸಿಜನ್‌ ದುರಂತದ ಸಮಯದಲ್ಲೂ ರೋಹಿಣಿ ಸಿಂಧೂರಿ ಹೆಸರು ಕೇಳಿಬಂದಿತ್ತು.ಚಾ.ನಗರದ ದುರಂತಕ್ಕೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರೇ ಕಾರಣ. ಚಾಮರಾಜನಗರಕ್ಕೆ ಆಕ್ಸಿಜನ್‌ ನೀಡಬೇಡಿ ಎಂದು ಅವರು ಮೌಖಿಕ ಆದೇಶ ನೀಡಿದ್ದರು. ಹೀಗಾಗಿ ಘಟನೆ ದಿನ ಔಷಧ ನಿಯಂತ್ರಕಾಧಿಕಾರಿಯೊಬ್ಬರು ಪರಿ ಪರಿಯಾಗಿ ಆಕ್ಸಿಜನ್‌ ಕೇಳಿದರೂ ಕೊಡಲಿಲ್ಲಎಂದು ಆರೋಪಿಸಿದ್ದಾರೆ. ಅದಕ್ಕೆ ಪೂರಕವಾಗಿ ಅವರು ಕೆಲ ಆಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿದ್ದಾರೆ ಬಿಜೆಪಿಯ ಮುಖಂಡ ಮಲ್ಲೇಶ್‌ ಬಿಡುಗಡೆ ಮಾಡಿದ್ದರು.

1010

ರೋಹಿಣಿ ಸಿಂಧೂರಿ ಮೂಲತಃ ತೆಲಂಗಾಣದವರು. ಓದಿದ್ದು ಕೆಮಿಕಲ್ ಎಂಜಿನಿಯರಿಂಗ್. ರೋಹಿಣಿ ಸಿಂಧೂರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಪಡೆದದ್ದು 43ನೇ ರ‍್ಯಾಂಕ್. ರೋಹಿಣಿ ಪತಿ ಸುಧೀರ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಐಎಎಸ್
ಭಾರತೀಯ ಪೊಲೀಸ್ ಸೇವೆ

Latest Videos
Recommended Stories
Recommended image1
ಉಡುಪಿ: ಬಿಜೆಪಿ ದೇಶ ಕಟ್ಟುವ ಬದಲು ಧರ್ಮ ಕಟ್ಟುತ್ತಿದ್ದಾರೆ: ಕಿಮ್ಮಾನೆ ರತ್ನಾಕರ್
Recommended image2
ಶಾಂತಿ ಮಾಡೋಕೆ ಕೋಳಿ ಬಲಿ ಕೊಟ್ಟಿರೋದೇ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಬದಲಾವಣೆಯಾಗೊಲ್ಲ-ಕೆ.ಎನ್. ರಾಜಣ್ಣ
Recommended image3
'ಹತ್ತು ಬಾರಿ ಸಿಎಂ ಆದರೂ ಒಂದು ದಿನ ಬಿಡಲೇಬೇಕಲ್ಲ..' ಅಧಿಕಾರದ ಬಗ್ಗೆ ಸಿಎಂ ವೈರಾಗ್ಯದ ಮಾತಿಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved