MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  •  ಕೆ ಗುಡಿ ಯಿಂದ ಬೂದಿಪಡಗಕ್ಕೆ ಸಾಕಾನೆ ಶಿಬಿರ ಸ್ಥಳಾಂತರ; ಹೊಸ ಸಫಾರಿ ಕೇಂದ್ರ ಆರಂಭಕ್ಕೂ ಚಿಂತನೆ

 ಕೆ ಗುಡಿ ಯಿಂದ ಬೂದಿಪಡಗಕ್ಕೆ ಸಾಕಾನೆ ಶಿಬಿರ ಸ್ಥಳಾಂತರ; ಹೊಸ ಸಫಾರಿ ಕೇಂದ್ರ ಆರಂಭಕ್ಕೂ ಚಿಂತನೆ

 ಚಾಮರಾಜನಗರ ಅಂದ್ರೆ ಅತಿ ಹೆಚ್ಚು ಕಾಡು ಹಾಗೂ ವನ್ಯ ಪ್ರಾಣಿಗಳನ್ನು ಹೊಂದಿರುವ ಏಕೈಕ ಪ್ರದೇಶ. ಇಲ್ಲಿಯವರೆಗೂ ಕೂಡ ಜಿಲ್ಲೆಯಲ್ಲಿ ಒಂದೇ ಸಾಕಾನೆ ಶಿಬಿರವಿತ್ತು. ಆದ್ರೆ ಇದೀಗಾ ಅರಣ್ಯ ಇಲಾಖೆ ಶೀಘ್ರದಲ್ಲೇ ಮತ್ತೊಂದು ಆನೆ ಶಿಬಿರವನ್ನು ನಿರ್ಮಾಣ ಮಾಡ್ತಿದೆ. ಇದರ ಜೊತೆಗೆ ಸಫಾರಿ ಕೇಂದ್ರವನ್ನು ತೆರೆಯುವ ಸಿದ್ದತೆ ನಡೆಸ್ತಿದೆ. ಈ ಮೂಲಕ ಪ್ರವಾಸಿಗರನ್ನು ಸೆಳೆಯುವ ಪ್ಲ್ಯಾನ್ ಮಾಡಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ.. 

2 Min read
Author : Suvarna News
Published : Jul 04 2024, 10:33 PM IST
Share this Photo Gallery
  • FB
  • TW
  • Linkdin
  • Whatsapp
15

ಚಾಮರಾಜನಗರ (Chamarajanagar) ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ(Biligirirangana betta) ಹುಕಿಸಂರಕ್ಷಿತಾರಣ್ಯದಲ್ಲಿ ಹೊಸದಾಗಿ ಆನೆ ಕ್ಯಾಂಪ್(Elephant Camp) ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ. ಶೀಘ್ರದಲ್ಲೇ ಚಾಮರಾಜನಗರ ತಾಲೂಕಿನ ಬೂದಿಪಡಗ ವಲಯದಲ್ಲಿ ಹೊಸ ಆನೆ ಕ್ಯಾಂಪ್ ಸ್ಥಾಪನೆಯಾಗಲಿದೆ. ಚಾಮರಾಜನಗರ ತಾಲೂಕಿನ ಕೆ ಗುಡಿಯಲ್ಲಿ ಆನೆ ಶಿಬಿರವಿತ್ತು. ವಿಕೇಂಡ್ ಬಂದ್ರೆ ಸಾಕು ಸಾವಿರಾರು ಪ್ರವಾಸಿಗರ ದಂಡೆ ಕೆ.ಗುಡಿ ಗೆ ಹರಿದು ಬರುತ್ತೆ. ಆದರೆ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೂದಿಪಡಗದಲ್ಲಿ ಸಾಕಾನೆ ಶಿಬಿರ ನಿರ್ಮಾಣ ಸಂಬಂಧ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು.

25

ನಾಲ್ಕು  ವರ್ಷದ  ತರುವಾಯ ಉದ್ಘಾಟನೆಗೆ ಸಾಕಾನೆ ಶಿಬಿರ ಸಜ್ಜಾಗಿದೆ. ಕೆ ಗುಡಿ ಹುಲಿ ಸಂರಕ್ಷಿತಾರಣ್ಯದ ಕೋರ್ ವಲಯದಲ್ಲಿದೆ. ಈ ಹಿನ್ನಲೆ ಅದನ್ನು ಹೊರಭಾಗಕ್ಕೆ ಶಿಪ್ಟ್ ಮಾಡುವಂತೆ ಒತ್ತಾಯ ಕೇಳಿಬಂದಿತ್ತು. ಇದೀಗಾ ಚಾಮರಾಜನಗರ ಜಿಲ್ಲೆಯಲ್ಲಿ ಎರಡನೇ ಸಾಕಾನೆ ಶಿಬಿರ ಬೂದಿಪಡಗದಲ್ಲಿ ನಿರ್ಮಾಣವಾಗ್ತಿದೆ. ದುಬಾರೆ ಮಾದರಿಯಂತೆ ಆನೆ ಶಿಬಿರ ನಿರ್ಮಾಣದ ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಿಕೊಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈಗಾಗ್ಲೇ ಕೆ ಗುಡಿಯಲ್ಲಿ ಒಂದು ಸಾಕಾನೆ ಇದ್ದು, ಇನ್ನೂ ಎರಡು ಅಥವಾ ಮೂರು ಆನೆಗಳನ್ನು ಬೇರೆ ಶಿಬಿರದಿಂದ ಕರೆತಂದು ಒಟ್ಟು ನಾಲ್ಕು ಆನೆಗಳೊಂದಿಗೆ ಸಾಕಾನೆ  ಶಿಬಿರ ಆರಂಭಿಸಲು ಚಿಂತಿಸಿದೆ.
 

35

ಇನ್ನೂ ಬರೀ ಸಾಕಾನೆ ಶಿಬಿರವಷ್ಟೇ ಅಲ್ಲ ಪ್ರವಾಸಿಗರಿಗಾಗಿ ಹೊಸ ಸಫಾರಿ ಕೇಂದ್ರ ಕೂಡ ಆರಂಭಿಸುವ ಚಿಂತನೆ ಕೂಡ ನಡೆಸಿದ್ದಾರೆ. ಸರ್ಕಾರ ಹಾಗೂ ಎನ್ ಟಿಸಿಎ  ಅನುಮತಿಗಾಗಿ ಸರ್ಕಾರಕ್ಕೆ ಪ್ರಸ್ತಾವಣೆ ಕೂಡ ಸಲ್ಲಿಸಿದ್ದಾರೆ. ಸಫಾರಿ ಕೇಂದ್ರ ಆರಂಬಿಸುವ ಮೂಲಕ ಪ್ರವಾಸಿಗರನ್ನು ಬಿಆರ್ ಟಿ ಹುಲಿ ಸಂರಕ್ಷಿತಾರಣ್ಯದತ್ತ ಸೆಳೆಯುವ ಪ್ಲ್ಯಾನ್ ಮಾಡಿದೆ. 
 

45

ಏಕೆಂದರೆ ಬೂದಿಪಡಗ ಪ್ರದೇಶ ಚಾಮರಾಜನಗರ ದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪ ಬರುವುದರಿಂದ ರಾಜ್ಯದ ವಿವಿಧ ಜಿಲ್ಲೆಗಳ ಜೊತೆಗೆ ಹೊರರಾಜ್ಯದ  ಪ್ರವಾಸಿಗರು ಕೂಡ ವೀಕ್ಷಣೆ ಮಾಡಲೂ ಅವಕಾಶವಾಗುತ್ತದೆ. ಆ ಮೂಲಕ ಪ್ರವಾಸೋದ್ಯಮ ಚಟುವಟಿಕೆ ಜೊತೆಗೆ ಸಾಕಾನೆ ಶಿಬಿರದಲ್ಲಿ ಆನೆಗಳ ಚಟುವಟಿಕೆ ನೋಡಲೂ ಅವಕಾಶ ಕಲ್ಪಿಸಿದಂತಾಗುತ್ತದೆ ಎಂಬ ಪ್ಲ್ಯಾನ್ ಮಾಡಿದೆ.

55

ಒಟ್ನಲ್ಲಿ ಚಾಮರಾಜನಗರ ಜಿಲ್ಲೆಯ ಬಂಡೀಪುರದ ರಾಮಪುರದಲ್ಲಿ ಆನೆ ಶಿಬಿರವಿದೆ. ಈ ಆನೆ ಶಿಬಿರಕ್ಕೆ ಪ್ರವಾಸಿಗರ ನಿರ್ಬಂಧವಿದೆ. ಇದೀಗಾ ಬಿಆರ್ ಟಿಯ ಬೂದಿಪಡಗದಲ್ಲಿ ಎರಡನೇ ಆನೆ ಕ್ಯಾಂಪ್ ನಿರ್ಮಿಸಿ ದುಬಾರೆ ಶಿಬಿರದಂತೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡುವ ಚಿಂತನೆ ನಡೆಸಿದೆ..

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ವನ್ಯಜೀವಿ

Latest Videos
Recommended Stories
Recommended image1
ಧಾರವಾಡ ಹೋರಾಟ ಬೆನ್ನಲ್ಲೇ 56,432 ಹುದ್ದೆ ನೇಮಕಾರಿಗೆ ಸರ್ಕಾರ ಗ್ರೀನ್ ಸಿಗ್ನಲ್; ಆದ್ರೆ ಎಸ್ಸಿ ಒಳಮೀಸಲಾತಿ ಗೋವಿಂದ!
Recommended image2
BGS ಕಾಲೇಜು ವಿದ್ಯಾರ್ಥಿಯ ಅದ್ಭುತ ಸಂಶೋಧನೆ: 'HybridEcoISA' ತಂತ್ರಜ್ಞಾನಕ್ಕೆ ಪ್ರತಿಷ್ಠಿತ ಡಾ. ಎಸ್. ಕೆ. ಶಿವಕುಮಾರ್ ಪ್ರಶಸ್ತಿ!
Recommended image3
Internal Reservation Row: ಸಿಎಂ ನೇತೃತ್ವದಲ್ಲಿ ದಲಿತ ಸಚಿವರ ಮಹತ್ವದ ಸಭೆ, ಮೂರು ಮಹತ್ವದ ನಿರ್ಧಾರ, ರಾಜಭವನಕ್ಕೆ ಸಚಿವರ ನಿಯೋಗ ದೌಡು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved