MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನ ಬಲಿ ಪಡೆದಿದ್ದ ನೀರಾನೆ 'ಹಂಸಿನಿ'ಯೂ ಸಾವು! ಕಾರಣವೇನು ಗೊತ್ತಾ?

ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನ ಬಲಿ ಪಡೆದಿದ್ದ ನೀರಾನೆ 'ಹಂಸಿನಿ'ಯೂ ಸಾವು! ಕಾರಣವೇನು ಗೊತ್ತಾ?

ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ 12 ವರ್ಷದ ಹಂಸಿನಿ ಎಂಬ ನೀರಾನೆ ಸಾವನ್ನಪ್ಪಿದೆ. ಈ ಹಿಂದೆ ಎರಡು ಬಾರಿ ಮರಿಗಳನ್ನು ಕಳೆದುಕೊಂಡಿದ್ದ ಹಂಸಿನಿಯ ಸಾವು ಮೃಗಾಲಯಕ್ಕೆ ನಷ್ಟವಾಗಿದೆ.

2 Min read
Author : Sathish Kumar KH
Published : Apr 14 2026, 06:12 PM IST
Share this Photo Gallery
  • FB
  • TW
  • Linkdin
  • Whatsapp
16
ಶಿವಮೊಗ್ಗ ಹಂಸಿನಿ ನೀರಾನೆಯೂ ಸಾವು
Image Credit : Asianet News

ಶಿವಮೊಗ್ಗ ಹಂಸಿನಿ ನೀರಾನೆಯೂ ಸಾವು

ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣವಾದ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ (Tyavarekoppa Safari) ಕಳೆದ ಕೆಲವು ದಿನಗಳ ಹಿಂದೆ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ನೀರಾನೆ ಕೂಡ ಇಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) ಹಂಸಿನಿಯ ಗರ್ಭದಲ್ಲೇ ಮರಿ ಸಾವನ್ನಪ್ಪಿದ ಪರಿಣಾಮ ಉಂಟಾದ ಗಂಭೀರ ಸೋಂಕಿನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

26
ಮೂರನೇ ಬಾರಿಯೂ ಮಗು ಕಳೆದುಕೊಂಡ ಹಂಸಿನಿ:
Image Credit : Asianet News

ಮೂರನೇ ಬಾರಿಯೂ ಮಗು ಕಳೆದುಕೊಂಡ ಹಂಸಿನಿ:

ಹಂಸಿನಿಯ ಜೀವನದ ಕಥೆ ಒಂದು ನೋವಿನ ಇತಿಹಾಸದಂತಿದೆ. 12 ವರ್ಷದ ಈ ನೀರಾನೆ ಈ ಹಿಂದೆ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ಆ ಎರಡೂ ಮರಿಗಳು ಹುಟ್ಟಿದ ಕೆಲವೇ ದಿನಗಳಲ್ಲಿ ಸಾವನ್ನಪ್ಪಿದ್ದವು. ಈ ಬಾರಿ ಹಂಸಿನಿ ಮೂರನೇ ಬಾರಿಗೆ ಗರ್ಭ ಧರಿಸಿದ್ದಳು.

Related Articles

Related image1
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಬಲಿ
Related image2
ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆ ಕೀರ್ತನಾ ಮಂಗಳೂರಿನಲ್ಲಿ ಆತ್ಮಹ*ತ್ಯೆ!
36
ಹಂಸಿನಿಯ ಬಗ್ಗೆ ವಿಶೇಷ ಕಾಳಜಿ
Image Credit : Asianet News

ಹಂಸಿನಿಯ ಬಗ್ಗೆ ವಿಶೇಷ ಕಾಳಜಿ

ಮೃಗಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಸಿನಿಯ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದರು. ಆದರೆ, ದುರದೃಷ್ಟವಶಾತ್ ಈ ಬಾರಿಯೂ ಮರಿ ಭೂಮಿಗೆ ಬರುವ ಮೊದಲೇ ಗರ್ಭದಲ್ಲೇ ಸಾವನ್ನಪ್ಪಿದೆ.

46
ಸಾವಿಗೆ ಕಾರಣವಾದ ಗರ್ಭಾಶಯದ ಸೋಂಕು
Image Credit : Asianet News

ಸಾವಿಗೆ ಕಾರಣವಾದ ಗರ್ಭಾಶಯದ ಸೋಂಕು

ಗರ್ಭದಲ್ಲೇ ಮರಿ ಮೃತಪಟ್ಟಿದ್ದರಿಂದ ಹಂಸಿನಿಯ ಗರ್ಭಾಶಯದಲ್ಲಿ ತೀವ್ರವಾದ ಸೋಂಕು (Uterine Infection) ಕಾಣಿಸಿಕೊಂಡಿತ್ತು. ಇದು ಕ್ರಮೇಣ ರಕ್ತಕ್ಕೆ ಹರಡಿ 'ಸೆಪ್ಟಿಸೇಮಿಯಾ' ಎಂಬ ಸ್ಥಿತಿಗೆ ತಲುಪಿತ್ತು. ಇದರಿಂದಾಗಿ ಹಂಸಿನಿಯ ದೇಹದ ಬಹು ಅಂಗಾಂಗಗಳು ವೈಫಲ್ಯಗೊಂಡು (Multiple Organ Failure) ಅದು ಸಾವನ್ನಪ್ಪಿದೆ. ಏಪ್ರಿಲ್ 10 ರಂದು ಹಂಸಿನಿಯ ಗರ್ಭಾಶಯದ ದ್ರವ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಗರ್ಭದಲ್ಲಿ ಭ್ರೂಣ ಮೃತಪಟ್ಟಿದ್ದು, ಅದರಿಂದ ಸೋಂಕು ಇಡೀ ದೇಹಕ್ಕೆ ಹರಡಿದೆ ಎಂಬುದು ದೃಢಪಟ್ಟಿತ್ತು.

56
ಪಶುವೈದ್ಯೆಯ ಬಲಿ ಪಡೆದಿದ್ದ ಹಂಸಿನಿ
Image Credit : Asianet News

ಪಶುವೈದ್ಯೆಯ ಬಲಿ ಪಡೆದಿದ್ದ ಹಂಸಿನಿ

ಇದೇ ನೀರಾನೆ ಹಂಸಿನಿ ಕಳೆದ ಮಾರ್ಚ್ ತಿಂಗಳಿನಲ್ಲಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಮಾರ್ಚ್ 19 ರಂದು ಮಧ್ಯರಾತ್ರಿ ಹಂಸಿನಿಗೆ ಚಿಕಿತ್ಸೆ ನೀಡಲು ಹೋದಾಗ, ಅದು ದಿಢೀರನೆ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ದಾಳಿ ಮಾಡಿತ್ತು. ಈ ಭೀಕರ ದಾಳಿಯಲ್ಲಿ ಡಾ. ಸಮೀಕ್ಷಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಆ ಘಟನೆಯ ನಂತರ ಮೃಗಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದರು. ಡಾ. ಸಮೀಕ್ಷಾ ಅವರ ಸಾವಿನ ನಂತರ ಹಂಸಿನಿಯ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು.

66
ಮೃಗಾಲಯಕ್ಕೆ ದೊಡ್ಡ ನಷ್ಟ
Image Credit : Asianet News

ಮೃಗಾಲಯಕ್ಕೆ ದೊಡ್ಡ ನಷ್ಟ

ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ ಹಂಸಿನಿ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿತ್ತು. ಅದರ ಸಾವಿನಿಂದಾಗಿ ಮೃಗಾಲಯದ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಈಗಾಗಲೇ ಡಾ. ಸಮೀಕ್ಷಾ ಅವರ ಸಾವಿನ ನೋವಿನಲ್ಲಿದ್ದ ಮೃಗಾಲಯಕ್ಕೆ, ಈಗ ಹಂಸಿನಿಯ ಸಾವು ಮತ್ತೊಂದು ದೊಡ್ಡ ನಷ್ಟ ತಂದಿದೆ. ಮೃತ ನೀರಾನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ವನ್ಯಜೀವಿ ನಿಯಮದಂತೆ ಅಂತ್ಯಕ್ರಿಯೆ ನೆರವೇರಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಶಿವಮೊಗ್ಗ
ಪ್ರಾಣಿ

Latest Videos
Recommended Stories
Recommended image1
ವಿಜಯಪುರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಗ್ರಾಮ ಪಂಚಾಯತ್ ಸದಸ್ಯನ ಭೀಕರ ಹತ್ಯೆ
Recommended image2
ಸುಡು ಬಿಸಿಲಿಗೆ ಬೆಂದ ಕರ್ನಾಟಕ: ದಾಖಲೆ ಬರೆದ ತಾಪಮಾನ, ಕಲಬುರಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್!
Recommended image3
ದಾವಣಗೆರೆ ಹರಿಹರ ಪೀಠ ಸಮರ: ವಚನಾನಂದ ಶ್ರೀಗಳ ವಿರುದ್ಧ 'ಮಸಾಜ್‌ ಪ್ರಿಯ' ಆರೋಪ; ಪೊಕ್ಸೊ ಕೇಸ್‌ ಭೀತಿ!
Related Stories
Recommended image1
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಬಲಿ
Recommended image2
ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆ ಕೀರ್ತನಾ ಮಂಗಳೂರಿನಲ್ಲಿ ಆತ್ಮಹ*ತ್ಯೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved