MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಗತಜನ್ಮದಿಂದ.. ಉತ್ತರಕಾಂಡದವರೆಗೆ ಎಸ್‌ಎಲ್‌ ಭೈರಪ್ಪ ಬರೆದ ಮಹೋನ್ನತ ಕಾದಂಬರಿಗಳು..

ಗತಜನ್ಮದಿಂದ.. ಉತ್ತರಕಾಂಡದವರೆಗೆ ಎಸ್‌ಎಲ್‌ ಭೈರಪ್ಪ ಬರೆದ ಮಹೋನ್ನತ ಕಾದಂಬರಿಗಳು..

SL Bhyrappa Novels List ಈ ಲೇಖನವು ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಸಮಗ್ರ ಪಟ್ಟಿಯನ್ನು ಒದಗಿಸುತ್ತದೆ. 1955ರ 'ಗತಜನ್ಮ'ದಿಂದ ಹಿಡಿದು 2017ರ 'ಉತ್ತರಕಾಂಡ'ದವರೆಗೆ, ಪ್ರತಿ ಕೃತಿಯ ಪ್ರಕಟಣೆಯ ವರ್ಷ, ಕಥಾವಸ್ತು ಮತ್ತು ಮರುಮುದ್ರಣದ ವಿವರಗಳನ್ನು ಇಲ್ಲಿ ನೀಡಲಾಗಿದೆ.

5 Min read
Author : Santosh Naik
Published : Sep 24 2025, 05:02 PM IST
Share this Photo Gallery
  • FB
  • TW
  • Linkdin
  • Whatsapp
125
ಗತಜನ್ಮ ಮತ್ತೆರಡು ಕಥೆಗಳು
Image Credit : SL Bhyrappa Website

ಗತಜನ್ಮ ಮತ್ತೆರಡು ಕಥೆಗಳು

1955ರಲ್ಲಿ ಎಸ್‌ಎಲ್‌ ಭೈರಪ್ಪ ತಮ್ಮ ಹೈಸ್ಕೂಲ್‌ ದಿನಗಳಲ್ಲಿಯೇ ಬರೆದ ಕಾದಂಬರಿ ಗತಜನ್ಮ ಮತ್ತೆರಡು ಕಥೆಗಳು. ಮೂರು ಬಾರಿ ಇದು ಮರುಮುದ್ರಿತವಾಗಿವೆ.

225
ಭೀಮಕಾಯ
Image Credit : SL Bhyrappa Website

ಭೀಮಕಾಯ

1958ರಲ್ಲಿ ಬರೆದ ಕಾದಂಬರಿ ಭೀಮಕಾಯ. 7 ಬಾರಿ ಮರುಮುದ್ರಿತವಾಗಿದೆ. ಕುಸ್ತಿಪಟುಗಳ ಬದುಕು ರೋಮಾಂಚಕಾರಿಯಾದಷ್ಟೇ ಗುಂಡಾಂತರ ಪೂರ್ವವೂ ಅಗಿದೆ. ಕುಸ್ತಿಪಟುವಿಗೆ ದೊರೆಯುವ ಮಾನಸಮ್ಮಾನದ ಹಿಂದೆ ಎಂತಹ ಸಂಯಮ ಬೇಕು ಎನ್ನುವುದು ಯಾರೂ ಆರಿಯರು. ಕುಸ್ತಿಕಣದ ನಿಕಟ ಸಂಪರ್ಕವಿರಿಸಿಕೊಂಡ ಈ ಕಾದಂಬರಿಕಾರರು ಕುಸ್ತಿಪಟುಗಳ ಜೀವನವನ್ನು ಸೌಹಾರ್ದತೆಯಿಂದ ಕಂಡಿದ್ದು ಈ ಕಾದಂಬರಿಯಲ್ಲಿದೆ.

Related Articles

Related image1
ಪ್ಲೇಗ್‌ನಿಂದ ಸಾವು ಕಂಡ ತಮ್ಮನ ಶವವನ್ನು ಹೆಗಲ ಮೇಲೆ ಹೊತ್ತು ಸ್ಮಶಾನಕ್ಕೆ ಸಾಗಿಸಿದ್ದರು ಎಸ್‌ಎಲ್‌ ಭೈರಪ್ಪ!
Related image2
ಎಸ್‌ಎಲ್‌ ಭೈರಪ್ಪ ಅವರ ಬದುಕಿನ ಅಪರೂಪದ ಚಿತ್ರಗಳು..
325
ಧರ್ಮಶ್ರೀ
Image Credit : X

ಧರ್ಮಶ್ರೀ

ಭಾರತೀಯ ಪರಂಪರೆಯಲ್ಲಿ ಧರ್ಮ, ಸಂಸ್ಕೃತಿ, ಎರಡೂ ಅವಿಭಿನ್ನವಾದ ರೂಪಗಳು. ಮತಾಂತರದಿಂದ ಸಂಭವಿಸುವ ಸಾಂಸ್ಕೃತಿಕ ಘರ್ಷಣೆಯ ಸ್ವರೂಪವೆಂತಹುದು ಎಂಬುದೇ ‘ಧರ್ಮಶ್ರೀ’ಯ ವಸ್ತು. 1961ರಲ್ಲಿ ಬರೆದ ಕಾದಂಬರಿ 17 ಬಾರಿ ಮರುಮುದ್ರಿತವಾಗಿವೆ.

425
ದೂರ ಸರಿದರು
Image Credit : SL Bhyrappa Website

ದೂರ ಸರಿದರು

ನಲವತ್ತೆಂಟು ವರ್ಷ ಕಳೆದರೂ ಪದೇ ಪದೇ ಮರುಮುದ್ರಣ ಕಾಣುತ್ತಾ ಸಾಗಿರುವ ದೂರ ಸರಿದರು ಕಾದಂಬರಿ ಸಶಕ್ತ ಸನ್ನಿವೇಶ, ಜೀವಂತ ಪಾತ್ರಚಿತ್ರಣ ಮೊದಲಾದ ಗುಣಗಳಿಂದ ನಮ್ಮನ್ನು ನೆನಪಿನಲ್ಲಿ ಮುಳುಗಿಸುತ್ತದೆ. 1962ರಲ್ಲಿ ಬಂದ ಕಾದಂಬರಿ ಇಲ್ಲಿಯವರೆಗೂ 16 ಬಾರಿ ಮರುಮುದ್ರಿತಗೊಂಡಿದೆ.

525
ವಂಶವೃಕ್ಷ
Image Credit : SL Bhyrappa Website

ವಂಶವೃಕ್ಷ

1965ರಲ್ಲಿ ಬರೆದ ಕಾದಂಬರಿ ಇಲ್ಲಿಯವರೆಗೂ 21 ಬಾರಿ ಮರುಮುದ್ರಿತಗೊಂಡಿದೆ. 'ಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ ಇದು. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿದೆ. ಬದುಕಿನ ಬೇರುಗಳನ್ನು ಶೋಧಿಸುವ ಈ ಸಾಹಿತ್ಯಕೃತಿಯನ್ನು ಓದುವುದೇ ಒಂದು ವಿಶಿಷ್ಟ ಅನುಭವ.

625
ಮತದಾನ
Image Credit : SL Bhyrappa Website

ಮತದಾನ

1965ರಲ್ಲಿ ಬರೆದ ಕಾದಂಬರಿ 14 ಬಾರಿ ಮರುಮುದ್ರಿತಗೊಂಡಿದೆ. ಎಮ್.ಬಿ.ಬಿ.ಎಸ್. ಮಾಡಿದ ಒಬ್ಬ ತರುಣ ತನ್ನ ಹಳ್ಳಿಯಲ್ಲಿ ಗಾಂಧಿಯ ಮಾರ್ಗದಲ್ಲಿ ಸೇವೆ ಮಾಡತೊಡಗಿ ಜನಾದರಣೆ ಗಳಿಸುತ್ತಾನೆ. ಅವನ ಜನಾದರಣೆಯನ್ನು ಬಳಸಿಕೊಳ್ಳುವ ತಂತ್ರ ಹೂಡಿ ಆಳುವ ಪಕ್ಷವು ಇನ್ನೂ ಹೆಚ್ಚು ಸೇವೆ ಮಾಡುವ ಅವಕಾಶಗಳು ದೊರೆಯುತ್ತವೆಂಬ ಆಮಿಷ ಹೂಡಿ ಅವನನ್ನು ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸುತ್ತದೆ. ಚುನಾವಣಾ ಓಡಾಟದಲ್ಲಿ ತೊಡಗಿದ ಅವನು ಒಬ್ಬ ರೋಗಿಗೆ ಗಮನಕೊಡದೆ ಆ ರೋಗಿ ಸಾಯುತ್ತಾನೆ. ವ್ಯೆದ್ಯನು ಚುನಾವಣೆಯಲ್ಲಿ ಸೋಲುತ್ತಾನೆ. ಮಂತ್ರಿಗಳ ಚುನಾವಣಾ ಫಂಡಿಗೆ ತನ್ನ ಆದಾಯದ ಮಿತಿ ಮೀರಿ ಸಾಲಮಾಡಿ ಹಣ ಒದಗಿಸಿದ ಒಬ್ಬ ಕಿರು ಕಂಟ್ರಾಕ್ಟರು ಕೊನೆಗೆ ತಾನು ನಿರೀಕ್ಷಿಸಿದ ಕಂಟ್ರಾಕ್ಟು ಸಿಕ್ಕದೆ ಸಾಲ ತೀರಿಸಲಾರದೆ ದೊಡ್ಡಕೆರೆಯ ತೂಬಿಗೆ ಕಲ್ಲು ಕಟ್ಟಿಕೊಂಡು ಮುಳುಗಿ ಸಾಯುತ್ತಾನೆ.

725
ಜಲಪಾತ
Image Credit : X

ಜಲಪಾತ

ಸೃಷ್ಟಿಶಕ್ತಿಯಿಂದ ವಿಜೃಂಭಿಸುವ ಜೀವನಪ್ರವೃತ್ತಿ ಮತ್ತು ಆ ಶಕ್ತಿಯನ್ನು ಹತ್ತಿಕ್ಕುವ ಜೀವನಪರಿಸ್ಥಿತಿಯ ತಾಕಲಾಟವೇ ‘ಜಲಪಾತ’ದ ಕಥಾವಸ್ತು. ನೀರು ಮತ್ತು ಮಣ್ಣಿನ ಶಕ್ತಿಯಿಂದ ಕಂಗೊಳಿಸುವ ವನಶ್ರೀ, ಗಂಡು ಹೆಣ್ಣುಗಳ ಮೂಲಶಕ್ತಿಯಾದ ಜೀವನವಿಕಾಸ, ಮತ್ತು ಬೌದ್ಧಿಕಸ್ತರದಲ್ಲಿ ಆವಿರ್ಭವಿಸುವ ಕಲಾಸೌಂದರ್ಯ-ಇವು ಮೂರು, ವಿವಿಧಸ್ತರಗಳಲ್ಲಿ ಪ್ರಕಟವಾಗುವ ಒಂದೇ ಮೂಲಶಕ್ತಿ ಎಂಬುದನ್ನು ಕಾದಂಬರಿಯ ಅಂಗಗಳಾಗಿ ಬೆಳೆದಿರುವ ಪ್ರತೀಕಗಳು ಎತ್ತಿತೋರಿಸುತ್ತವೆ. 1967ರಲ್ಲಿ ಬಂದ ಕಾದಂಬರಿ ಇಲ್ಲಿಯವರೆಗೂ 12 ಬಾರಿ ಮರುಮುದ್ರಿತವಾಗಿದೆ.

825
ತಬ್ಬಲಿಯು ನೀನಾದೆ ಮಗನೆ
Image Credit : SL Bhyrappa Website

ತಬ್ಬಲಿಯು ನೀನಾದೆ ಮಗನೆ

ಗೋವನ್ನು ಸರ್ವದೇವತೆಗಳ ಸ್ವರೂಪವೆಂದು ಪೂಜಿಸುವ ಕಾಳಿಂಗಜ್ಜ ಮತ್ತು ಅದು ಹಾಲು ಮಾಂಸಗಳನ್ನು ಕೊಡುವ ಪ್ರಾಣಿ ಮಾತ್ರ ಎಂದು ಭಾವಿಸುವ ಆಮೆರಿಕೆಯಿಂದ ಹಿಂತಿರುಗಿದ ಮೊಮ್ಮಗ, ಇವರ ಮೌಲ್ಯಸಂವೇದನೆಗಳ ನಡುವೆ ನಡೆಯುವ ತಿಕ್ಕಾಟವೇ ಈ ಕಾದಂಬರಿಯ ವಸ್ತು. ಪ್ರಾಯಶಃ ಭಾರತದ ಎಲ್ಲ ಭಾಷೆಗಳಲ್ಲೂ ಪ್ರಚಲಿತವಿರುವ ಗೋವಿನ ಹಾಡಿನ ಹಿನ್ನಲೆಯಲ್ಲಿ ಆರಂಭವಾಗುವ ಕಾದಂಬರಿಯು, ಭಾರತೀಯ ಸಂಸ್ಕೃತಿಯ ಮೂಲ ಬೇರುಗಳನ್ನು ಹಿನ್ನಲೆಯಲ್ಲಿ ಕಾಣಿಸುತ್ತದೆ. ಈ ಕೃತಿಯನ್ನಾಧರಿಸಿ ಕನ್ನಡ ಮತ್ತು ಹಿಂದಿಯಲ್ಲಿ ನಿರ್ಮಿಸಿರುವ ಚಲನ ಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ಪಡೆದಿವೆ. ಈ ಕಾದಂಬರಿಯ ಹಿಂದೀ ಅನುವಾದವೂ ಅಪಾರವಾದ ಮೆಚ್ಚುಗೆ ಪಡೆದಿದೆ. 1968ರಲ್ಲಿ ಬಂದ ಕಾದಂಬರಿ 13 ಬಾರಿ ಮರುಮುದ್ರಿತವಾಗಿದೆ.

925
ನಾಯಿ ನೆರಳು
Image Credit : SL Bhyrappa Website

ನಾಯಿ ನೆರಳು

ದೃಶ್ಯಜಗತ್ತಿನ ಒಂದು ವಾಸ್ತವ ಭಾಗವಾಗಿಯೂ ಕೂಡಾ ಇನ್ನೊಂದು ಮಟ್ಟದಲ್ಲಿ ಬೇರೊಂದು ಜಗತ್ತನ್ನೇ ದರ್ಶಿಸುವಂತೆ ಇಲ್ಲಿ ಮೂಡಿರುವ ಪ್ರತೀಕಗಳು ಅತ್ಯಂತ ಸಫಲವಾಗಿ ಅರ್ಥ ಸ್ಥರಗಳ ಒಂದು ಸೌಧವನ್ನು ನಿರ್ಮಿಸುತ್ತವೆ. ವಾಸ್ತವ ಶೈಲಿಯ ನಿರ್ದಿಷ್ಠತೆಯಿಂದಲೇ ಪುರಾಣಕ್ಕೆ ಸಾಧ್ಯವಾಗದ ಅತೀತತೆಯನ್ನು ಆಧುನಿಕ ಯುಗದ ಲೇಖಕರು ಮುಟ್ಟಬಹುದೆಂಬುದನ್ನು ಭೈರಪ್ಪನವರು ಈ ಕೃತಿಯಲ್ಲಿ ಸಾಧಿಸಿ ತೋರಿಸಿದ್ದಾರೆ. 1968ರಲ್ಲಿ ಬಂದ ಕಾದಂಬರಿ 17 ಬಾರಿ ಮರುಮುದ್ರಿತವಾಗಿದೆ.

1025
ಗೃಹಭಂಗ
Image Credit : SL Bhyrappa Website

ಗೃಹಭಂಗ

1970ರಲ್ಲಿ ಬಂದ ಕಾದಂಬರಿ, 16 ಬಾರಿ ಮರುಮುದ್ರಣವಾಗಿದೆ. ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ ‘ಗೃಹಭಂಗ’. ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುವ ಈ ಕಾದಂಬರಿ, ಬದುಕಿಗೆ ಬದುಕೇ ಬರೆದ ಭಾಷ್ಯ. ‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಎಲ್ಲ ಭಾಷೆಗಳ ಓದುಗರನ್ನು ಸೆರೆಹಿಡಿದು, ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಅಗ್ರಮಾನ್ಯತೆ ಪಡೆದಿದೆ.

1125
ನಿರಾಕಾರಣ
Image Credit : SL Bhyrappa Website

ನಿರಾಕಾರಣ

ಐದು ಪುಟ್ಟ ಮಕ್ಕಳನ್ನು ಸಾಕಲು ಮನೆಯಲ್ಲಿ ಹೆಣ್ಣು ದಿಕ್ಕಿಲ್ಲದ ತಂದೆಯು, ಅವರನ್ನೆಲ್ಲ ದತ್ತು ಕೊಡುವುದಾಗಿ ಮುಂಬೈಯ ಟೈಮ್ಸ್ ಪತ್ರಿಕೆಯಲ್ಲಿ ಜಾಹೀರಾತು ಮಾಡುತ್ತಾನೆ.ಕನ್ನಡ ಕಾದಂಬರೀ ಪ್ರಪಂಚದಲ್ಲಿ ಒಂದು ವಿನೂತನ ಕೃತಿ. 1971ರಲ್ಲಿ ಬರೆದ ಕೃತಿ 14 ಬಾರಿ ಮರುಮುದ್ರಿತಗೊಂಡಿದೆ.

1225
ಗ್ರಹಣ
Image Credit : SL Bhyrappa Website

ಗ್ರಹಣ

ಸನ್ಯಾಸಿಯ ಸತ್ಯಾನ್ವೇಷಣೆ ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ. 1972ರಲ್ಲಿ ಬಂದ ಕಾದಂಬರಿ ಇಲ್ಲಿಯವರೆಗೂ 11 ಬಾರಿ ಮರುಮುದ್ರಣವಾಗಿದೆ.

1325
ದಾಟು
Image Credit : SL Bhyrappa Website

ದಾಟು

‘ದಾಟು’ ಜಾತಿ ಸಮಸ್ಯೆಯನ್ನು ಕುರಿತು ಭಾರತೀಯ ಭಾಷೆಗಳಲ್ಲಿ ಬಂದಿರುವ ಕಾದಂಬರಿಗಳಲ್ಲೆಲ್ಲ ವಿಶಿಷ್ಟವಾದ ಕೃತಿ ಎಂದು ಪರಿಗಣಿತವಾಗಿದೆ. ಪಶ್ಚಿಮದಿಂದ ಎರವಲು ಪಡೆದ ಅಥವಾ ಸಮಕಾಲೀನ ರಾಜಕೀಯ ಒತ್ತಡದಿಂದ ಹುಟ್ಟಿದ ಸಿದ್ಧಾಂತಗಳನ್ನವಲಂಬಿಸದೆ ಸಾಂದ್ರವಾದ ಜೀವನಾನುಭವವನ್ನೊಳಗೊಂಡು ಭಾರತೀಯ ಸಾಮಾಜಿಕ ಪರಂಪರೆಯ ತಳಮುಟ್ಟುವ ವಿಶ್ಲೇಷಣೆಯನ್ನು ಸಾಧಿಸಿರುವ ಈ ಕೃತಿಯು ದಲಿತ ವಿಚಾರದ ಮೂಲನೆಲವಾದ ಮಹಾರಾಷ್ಟ್ರದಲ್ಲೂ ಅಪಾರ ಮನ್ನಣೆ ಪಡೆದಿದೆ. 1973ರಲ್ಲಿ ಬಂದ ಕಾದಂಬರಿ ಇಲ್ಲಿಯವರೆಗೂ 15 ಬಾರಿ ಮರುಮುದ್ರಣ ಕಂಡಿದೆ.

1425
ಅನ್ವೇಷಣ
Image Credit : SL Bhyrappa Website

ಅನ್ವೇಷಣ

1976ರಲ್ಲಿ ಬಂದ ಕಾದಂಬರಿ 13 ಬಾರಿ ಮರುಮುದ್ರಣಗೊಂಡಿದೆ. ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ ‘ಗೃಹಭಂಗ’ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ.

1525
ಪರ್ವ
Image Credit : SL Bhyrappa Website

ಪರ್ವ

ವ್ಯಾಸ ಮಹರ್ಷಿಗಳ ‘ಮಹಾಭಾರತ’ವನ್ನು ಆಧಾರವಾಗಿಟ್ಟುಕೊಂಡು ರಚಿತವಾಗಿರುವ ಕಾದಂಬರಿ ‘ಪರ್ವ’. ಇದು ಮರುಸೃಷ್ಟಿ. ಕಾವ್ಯ ಇತಿಹಾಸ ಪುರಾಣಗಳ ಮಿಶ್ರಣವಾದ ಪ್ರಾಚೀನ ಮಹಾಕೃತಿಯೊಂದನ್ನು ಆಧುನಿಕ ಸಾಹಿತ್ಯಪ್ರಕಾರವಾದ ಕಾದಂಬರಿಯನ್ನಾಗಿ ನಿರ್ಮಿಸುವ ಪ್ರಕ್ರಿಯೆಯಲ್ಲಿ, ಶ್ರೇಷ್ಠ ಕಾದಂಬರಿಕಾರರೊಬ್ಬರ ಪಕ್ವವಾದ ಮನಸ್ಸು ಕಾಲ ದೇಶಗಳನ್ನು ದಾಟಿ ಹೇಗೆ ಕೆಲಸ ಮಾಡಿದೆ ಎಂಬುದನ್ನು ಇಲ್ಲಿ ನೋಡಬಹುದು. ಸೃಜನಶೀಲ ಪ್ರತಿಭೆಯ ಸಾಹಸ ಈ ಬೃಹತ್ಕಾದಂಬರಿಯ ಪುಟಪುಟಗಳಲ್ಲಿ ಸ್ಫುಟಗೊಂಡಿದೆ. ಮೂಲಕೃತಿಯ ಅಲೌಕಿಕ ಅಂಶಗಳಿಂದ ಪಾರಾಗಿ, ಸಾಮಾನ್ಯರನ್ನೂ ಅಸಾಮಾನ್ಯರನ್ನೂ ಒಂದೇ ದೃಷ್ಟಿಯಿಂದ ನೋಡಿ, ಆದರ್ಶ ವಾಸ್ತವತೆಗಳನ್ನು ಮೇಳವಿಸಿ, ಯಾವುದೋ ಕಾಲದ ವ್ಯಕ್ತಿ ಸಂಗತಿಗಳು ನಮ್ಮ ಕಾಲದವಾಗಿ, ನಮಗೆ ತೀರ ಹತ್ತಿರದವಾಗಿ ಮಾರ್ಪಡುವ ಕಲಾಕೌಶಲವನ್ನು ಈ ಕಾದಂಬರಿ ತೋರಿಸುತ್ತದೆ. ಇದರ ‘ಪರ್ವ’ ನಮ್ಮ ಕಾಲದ ಒಂದು ಶ್ರೇಷ್ಠ ಕಲಾಕೃತಿ. 1979ರಲ್ಲಿ ಬಂದ ಈ ಕಾದಂಬರಿ ಇಲ್ಲಿಯವರೆಗೂ 18 ಬಾರಿ ಮರುಮುದ್ರಣವಾಗಿದೆ.

1625
ನೆಲೆ
Image Credit : SL Bhyrappa Website

ನೆಲೆ

1983ರಲ್ಲಿ ಬಂದ ಕಾದಂಬರಿ 11 ಬಾರಿ ಮರುಮುದ್ರಣವಾಗಿದೆ. ನೂರ ಎಂಬತ್ತೇಳು ಪುಟಗಳ ಸಂಕ್ಷಿಪ್ತಲಿ ‘ನೆಲೆ ‘ ಕಾದಂಬರಿಯು ಅರಗಿಸಿಕೊಂಡಿರುವ ಘಟನೆ ಶೋಧನೆ ಚಿಂತನೆಗಳ ಆಳವಿಸ್ತಾರಗಳು ಅದ್ಭುತವಾಗಿವೆ. ನಿರುದ್ವೇಗದಿಂದ ವಸ್ತುವನ್ನು,ಆ ಮೂಲಕ ಜೀವನವನ್ನು ಇಲ್ಲಿ ನೋಡಿರುವ ರೀತಿಯು ಮಾಗಿ ಪಕ್ವವಾದ ದೊಡ್ಡ ಕಲಾವಿದನಿಗೆ ಮಾತ್ರ ಸಾಧ್ಯವಾಗುವಂಥದು.ಮೃತ್ಯುವಿನ ಅಂಚಿಗೆ ಪ್ರಜ್ಞೆಯು ತಲುಪಿದಾಗ ಮಾತ್ರ ಜೀವನದ ನಿಜವಾದ ಮಾಪನವು ಸಾಧ್ಯವೆಂಬ ಮೂಲಭೂತ ಮಾತನ್ನು ಈ ಕೃತಿಯು ಸಾಕಾರಗೊಳಿಸಿಕೊಂಡಿದೆ.

1725
ಸಾಕ್ಷಿ
Image Credit : Asianet News

ಸಾಕ್ಷಿ

‘ಸಾಕ್ಷಿ’ಯು ಪುರಾಣ ಮತ್ತು ನಮ್ಮ ಈ ಇಂದ್ರಿಯ ವಾಸ್ತವ ಜಗತ್ತುಗಳನ್ನು ಜೋಡಿಸುವ ಮೂಲಕ ಮನುಷ್ಯನ ನೀತಿಯ ಬೇರುಗಳನ್ನು ಶೋಧಿಸುತ್ತದೆ. ನಿಜವೂ ನೀತಿಯ ನೆಲೆಯೋ, ನೀತಿಯು ನಿಜದ ನೆಲೆಯೋ ಎಂಬಂತಹ ಮೂಲಭೂತ ಪ್ರಶ್ನೆಗಳನ್ನು ಅರಗಿಸಿಕೊಂಡಿರುವ ಈ ಕಾದಂಬರಿಯ ಪಾತ್ರ ವೈಶಿಷ್ಟ್ಯ ರಚನಾ ವಿಧಾನ ಹಾಗು ಕಲಾತ್ಮಕ ಅನುಭವಗಳು ಭೈರಪ್ಪನವರ ಹಿಂದಿನ ಕಾದಂಬರಿಗಳಿಗಿಂತ ಮೂರು ಮೆಟ್ಟಿಲು ಮೇಲೆ ಹೋಗಿವೆ. 1986ರಲ್ಲಿ ಬಂದ ಕಾದಂಬರಿ 9 ಬಾರಿ ಮರುಮುದ್ರಣವಾಗಿದೆ.

1825
ಅಂಚು
Image Credit : SL Bhyrappa Website

ಅಂಚು

ತನ್ನನ್ನು ಅವಿಚಿಕೊಂಡ ಅನ್ಯಾಯಗಳನ್ನು ಎತ್ತಿ ಎಸೆಯುವ ಭಾವಶಕ್ತಿ ಇಲ್ಲದ ಮನಸ್ಸು ತನ್ನನ್ನು ತಾನೇ ನಾಶಮಾಡಿಕೊಳ್ಳುವ ತನ್ನನ್ನು ಪ್ರೀತಿಸುವವರ ಮೇಲೆ ಕ್ರೌರ್ಯವನ್ನು ಮಸೆಯುವ ವಿಕೃತಿಗೆ ತಿರುಗಿರುವುದೇ ‘ ಅಂಚು’ವಿನ ವಸ್ತುವಾಗಿದೆ. 1990ರಲ್ಲಿ ಬಂದ ಈ ಕಾದಂಬರಿ 10 ಬಾರಿ ಮರುಮುದ್ರಣವಾಗಿದೆ.

1925
ತಂತು
Image Credit : SL Bhyrappa Website

ತಂತು

ತನ್ನೂರು ಬಸವನಪುರದ ಚನ್ನಕೇಶವ ದೇವಾಲಯದಲ್ಲಿದ್ದ ದೊಡ್ಡ ಸರಸ್ವತಿ ವಿಗ್ರಹವನ್ನು ಕಳ್ಳಸಾಗಾಣೆದಾರರು ಮಾಯ ಮಾಡಿದ್ದಾರೆಂಬ ಸುದ್ದಿ ತಿಳಿದ ಪ್ರತ್ರಿಕಾ ಸಂಪಾದಕ ರವೀಂದ್ರ ಅಲ್ಲಿಗೆ ಹೋಗುತ್ತಾನೆ .ಅಲ್ಲಿಂದ ಆರಂಭವಾಗಿ ಇಡೀ ಸ್ವಾತಂತ್ರ್ಯೋತ್ತರ ಭಾರತದ ನಾಡಿಯ ಕಥೆಯು ಬೆಳೆಯುತ್ತದೆ. ಬೆಂಗಳೂರು, ಬಸವನಪುರ, ಜೋಗಿ ಹಳ್ಳಿ, ಮೈಸೂರು, ದಿಲ್ಲಿ, ಬನಾರಸ್, ಪಟ್ಣ, ಕಲ್ಕತ್ತಾ…., ಸಂಗೀತ , ಶಿಕ್ಷಣ, ವೃತ್ತಪತ್ರಿಕೆ, ಉದ್ಯಮ, ನಿರ್ಯಾತ, ಮೊದಲಾದ ವ್ಯಾಪ್ತಿಗಳಿಗೆ ಪಾತ್ರಗಳ ಸ್ವಂತ ಅನುಭವದ ಮೂಲಕ ಜೀವ ಕೊಟ್ಟು ಆಕಾರದ ಐಕ್ಯವನ್ನು ಸಾಧಿಸಿ ಈ ಕಾದಂಬರಿಯು ಸಮಕಾಲೀನ ವಸ್ತುವನ್ನು ಕಲೆಯಾಗಿಸುವ ನಿರ್ಲಿಪ್ತಿಯನ್ನು ಪಡೆದಿದೆ. 1993ರಲ್ಲಿ ಬಂದ ಕಾದಂಬರಿ 9 ಬಾರಿ ಮರುಮುದ್ರಣವಾಗಿದೆ.

2025
ಸಾರ್ಥ
Image Credit : SL Bhyrappa Website

ಸಾರ್ಥ

ಸಾರ್ಥದ ಮರ್ಮವನ್ನು ತಿಳಿಯಲು ಮನೆ ಮಾರು ಬಿಟ್ಟುಹೋದ ನಾಗಭಟ್ಟನು ತನ್ನ ಗುರಿಯಿಲ್ಲದ ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ ಹತ್ತಾರು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ ಪ್ರಭಾವಕ್ಕೊಳಗಾಗಿ ಆಚ್ಚರಿಯ ಜೀವನದರ್ಶನಕ್ಕೆ ಸಾಕ್ಷಿಯಾಗುತ್ತಾನೆ . ಭಾರತವು ಸತತವಾಗಿ ಎದುರಿಸುತ್ತಿರುವ ಧಾರ್ಮಿಕ ಸಂಘರ್ಷಗಳ ತಾತ್ತ್ವಿಕಬೇರುಗಳನ್ನು ‘ಸಾರ್ಥ’ ಸೃಜನಶೀಲವಾಗಿ ಅನ್ವೇಷಿಸುತ್ತದೆ. 1998ರಲ್ಲಿ ಬಂದ ಈ ಕಾದಂಬರಿ 12 ಬಾರಿ ಮರುಮುದ್ರಣವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಎಸ್. ಎಲ್. ಭೈರಪ್ಪ
ಕರ್ನಾಟಕ ಸುದ್ದಿ
ಸುದ್ದಿ
ಸಾಹಿತ್ಯ

Latest Videos
Recommended Stories
Recommended image1
Karnataka Rains: ಬಂಗಾಳಕೊಲ್ಲಿ ವಾಯುಭಾರ ಕುಸಿತ; ಉತ್ತರಕನ್ನಡದಲ್ಲಿ ಗುಡುಗು ಸಹಿತ ಮಳೆ, ಕಾಫಿನಾಡಲ್ಲೂ ವರ್ಷಧಾರೆ!
Recommended image2
ರೈಲ್ವೆ ರಕ್ಷಣೆ ತರಬೇತಿ ಕಲಿಯಲು ಬೆಂಗಳೂರಿನ ಭಾರತೀಯ ರೈಲ್ವೆ ವಿಭಾಗಕ್ಕೆ ಬಂದ ತಾಂಜೇನಿಯಾ ಸಿಬ್ಬಂದಿಗಳು
Recommended image3
ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಗೋರಖ್ಪುರ ರೈಲು ಸಂಚಾರದಲ್ಲಿ ಈ ಎರಡು ದಿನ ಅನಿರೀಕ್ಷಿತ ಮಾರ್ಗ ಬದಲಾವಣೆ!
Related Stories
Recommended image1
ಪ್ಲೇಗ್‌ನಿಂದ ಸಾವು ಕಂಡ ತಮ್ಮನ ಶವವನ್ನು ಹೆಗಲ ಮೇಲೆ ಹೊತ್ತು ಸ್ಮಶಾನಕ್ಕೆ ಸಾಗಿಸಿದ್ದರು ಎಸ್‌ಎಲ್‌ ಭೈರಪ್ಪ!
Recommended image2
ಎಸ್‌ಎಲ್‌ ಭೈರಪ್ಪ ಅವರ ಬದುಕಿನ ಅಪರೂಪದ ಚಿತ್ರಗಳು..
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved