MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Raksha Bandhan Wishes
Yash Toxic 2 Days Collections
MLA Vinay Kulkarni
BJP Leaders Meet Siddaramaiah
Nepal Floods Death Toll
Teachers Suspended RSS Pathsanchalan
CM DK Shivakumar
Koppal Urban Development Authority
Toxic Movie Analysis
Nepal-tibet Floods
New Financial Rules September
  • Home
  • News
  • State
  • ಟ್ರಯಲ್ ಕೋರ್ಟ್‌ನಲ್ಲಿ ವೃತ್ತಿ ಆರಂಭಿಸಿ: ಯುವ ವಕೀಲರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಸಲಹೆ

ಟ್ರಯಲ್ ಕೋರ್ಟ್‌ನಲ್ಲಿ ವೃತ್ತಿ ಆರಂಭಿಸಿ: ಯುವ ವಕೀಲರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಸಲಹೆ

ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ಬೆಳ್ಳಿ‌ ಮಹೋತ್ಸವವು ಸ್ಥಿರತೆ, ಬಾಂಧವ್ಯ, ಬದ್ಧತೆ ಮತ್ತು ಸಾಧನೆಯ ಪ್ರತೀಕ" ಎಂದು ಹೇಳಿದರು

1 Min read
Author : Ravi Janekal
Published : Oct 26 2025, 03:26 PM IST
Share this Photo Gallery
  • FB
  • TW
  • Linkdin
  • Whatsapp
14
ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಉದ್ಘಾಟಿಸಿದ ಡಿಸಿಎಂ
Image Credit : Asianet News

ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಉದ್ಘಾಟಿಸಿದ ಡಿಸಿಎಂ

ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ಬೆಳ್ಳಿ‌ ಮಹೋತ್ಸವವು ಸ್ಥಿರತೆ, ಬಾಂಧವ್ಯ, ಬದ್ಧತೆ ಮತ್ತು ಸಾಧನೆಯ ಪ್ರತೀಕವಾಗಿದೆ" ಎಂದು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ
Image Credit : Asianet News

ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ

ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ ನೀಡಿದರು.

ನನ್ನ ವೃತ್ತಿ ಜೀವನ ಆರಂಭ ಆಗಿದ್ದು ವಕೀಲರ ಸಹಕಾರಿ ಸಂಘದಲ್ಲಿ. ನನ್ನ ಎಲ್ಲಾ ಸಾಧನೆಯೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ಸಹಕಾರಿ ಬ್ಯಾಂಕ್‌ಗೆ ಸಲ್ಲುತ್ತದೆ" ಎಂದರು. "ವಕೀಲ ವೃತ್ತಿ ಆರಂಭಿಸುವವರಿಗೆ ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಎಂದು ನಾನು ಸಲಹೆ ನೀಡುತ್ತೇನೆ. ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು. ವಕೀಲರು ಸಮಾಜ ಬದಲಾಯಿಸುವ ವೈದ್ಯರಿದ್ದಂತೆ. ಸಮಾಜ ಮತ್ತು ದೇಶವನ್ನೇ ಬದಲಾಯಿಸುವ ಶಕ್ತಿ‌ ಮತ್ತು ಸಾಮರ್ಥ್ಯ ವಕೀಲರಿಗೆ ಇದೆ" ಎಂದು ತಾವು ವಕೀರಾಗಲು ಕಾರಣವಾದ ಹಿನ್ನಲೆಯನ್ನು ಹಂಚಿಕೊಂಡರು.

Related Articles

Related image1
15 ಸಾವಿರ ಶಿಕ್ಷಕರ ನೇಮಕ ಭವಿಷ್ಯ ಕೆಎಸ್‌ಎಟಿ ಕೈನಲ್ಲಿ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಅಸ್ತು
Related image2
ಕೋರ್ಟುಗಳಲ್ಲಿ 8.82 ಲಕ್ಷ ಜಾರಿ ಅರ್ಜಿ ಬಾಕಿ : ಸುಪ್ರೀಂ ಅತೃಪ್ತಿ
34
ವಕೀಲರಿಗೆ ಸುಸಜ್ಜಿತ ಸಮುದಾಯ ಭವನ
Image Credit : Asianet News

ವಕೀಲರಿಗೆ ಸುಸಜ್ಜಿತ ಸಮುದಾಯ ಭವನ

ವಕೀಲರಿಗಾಗಿ ವಸತಿ ನಿವೇಶನಗಳನ್ನು ದೊಡ್ಡ ಪ್ರಮಾಣದಲ್ಲಿ  ಮಂಜೂರು ಮಾಡುವಂತೆ ಮತ್ತು ವಕೀಲರಿಗೆ ಒಂದು ಸಮುದಾಯ ಭವನ ನಿರ್ಮಾಣ ಮಾಡಲು ಅಗತ್ಯ ಇರುವ ಭೂಮಿ ನೀಡುವಂತೆ" ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್. ಅರವಿಂದ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

44
ಕಾರ್ಯಕ್ರಮದ ಉಪಸ್ಥಿತರು
Image Credit : Asianet News

ಕಾರ್ಯಕ್ರಮದ ಉಪಸ್ಥಿತರು

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿನ ನ್ಯಾಯ ಮಿತ್ರ ಸಹಕಾರಿ ಬ್ಯಾಂಕ್ ಬೆಳ್ಳಿಮಹೋತ್ಸವ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಳಾದ ಅರವಿಂದ ಕುಮಾರ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯತಿರಾಜ್, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗೌಡ, ಕರ್ನಾಟಕ ಬಾರ್ ಅಸೋಸಿಯೇಷನ್ ಅಧ್ಯಕ್ಷ ಮಿಟ್ಟಲ್ ಕೋಡ್ ಸಿದ್ದಲಿಂಗಪ್ಪ ಶೇಖರಪ್ಪ, ನಂಜಪ್ಪ ಕಾಳೇಗೌಡ, ಮಂಜುನಾಥ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಬೆಂಗಳೂರು
ಡಿ.ಕೆ. ಶಿವಕುಮಾರ್
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ರಾಜ್ಯದ 101 ಬರಪೀಡಿತ ತಾಲೂಕು ಘೋಷಣೆ ಮಾಡಿದ ಸರ್ಕಾರ; ನಿಮ್ಮ ತಾಲೂಕಿದೆಯಾ ಚೆಕ್ ಮಾಡಿ, ಪರಿಹಾರ ಪಡೆಯಿರಿ!
Recommended image2
ಕನ್ನಡಿಗರ ಕುಡಿಯುವ ಕಾವೇರಿ ನೀರು ಕಿತ್ತುಕೊಂಡು, ರೈತರ ಬೆಳೆಗಳಿಗೆ ನೀರು ಹರಿಸುತ್ತಿರುವ ತಮಿಳುನಾಡು ಸರ್ಕಾರ!
Recommended image3
ಮೇಕೆದಾಟು ಜಲಾಶಯಕ್ಕೆ 8 ತಿಂಗಳಲ್ಲಿ ಶಂಕುಸ್ಥಾಪನೆ; ತಮಿಳುನಾಡು ಮನವೊಲಿಸಲು ನಾನೇ ಹೋಗ್ತೀನಿ-ಚಲುವರಾಯಸ್ವಾಮಿ
Related Stories
Recommended image1
15 ಸಾವಿರ ಶಿಕ್ಷಕರ ನೇಮಕ ಭವಿಷ್ಯ ಕೆಎಸ್‌ಎಟಿ ಕೈನಲ್ಲಿ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಅಸ್ತು
Recommended image2
ಕೋರ್ಟುಗಳಲ್ಲಿ 8.82 ಲಕ್ಷ ಜಾರಿ ಅರ್ಜಿ ಬಾಕಿ : ಸುಪ್ರೀಂ ಅತೃಪ್ತಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved