MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • India General Elections 2024: ಕರ್ನಾಟಕದಲ್ಲಿ ಮತ ಹಾಕಿ ಹಕ್ಕು ಚಲಾಯಿಸಿದ ಮಠಾಧೀಶರು

India General Elections 2024: ಕರ್ನಾಟಕದಲ್ಲಿ ಮತ ಹಾಕಿ ಹಕ್ಕು ಚಲಾಯಿಸಿದ ಮಠಾಧೀಶರು

ಬೆಂಗಳೂರು(ಏ.25):  ದೇಶದ ವಿವಿಧೆಡೆ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು(ಶುಕ್ರವಾರ) ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ದಕ್ಷಿಣ ಭಾಗದ 14 ಜಿಲ್ಲೆಗಳಲ್ಲಿ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಜನರು ಬಹಳ ಉತ್ಸಾಹದಿಂದ ಬಂದು ಮತ ಹಾಕಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ನು ನಾಡಿನ ವಿವಿಧ ಮಠಗಳ ಮಠಾಧೀಶರೂ ಕೂಡ ಮತದಾನ ಮಾಡಿದ್ದಾರೆ.   

1 Min read
Girish Goudar
Published : Apr 26 2024, 11:29 AM IST
Share this Photo Gallery
  • FB
  • TW
  • Linkdin
  • Whatsapp
16

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುತ್ತೂರು ಶ್ರೀಗಳು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 191 ರಲ್ಲಿ ಮತ ಚಲಾಯಿಸಿದ್ದಾರೆ. 

26

ಅವಧೂತ ದತ್ತ ಪೀಠಾಧಿಪತಿ, ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬೂತ್ ನಂಬರ್ 237ರಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.

36

ಇನ್ನು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಗಳು ಕೂಡ ಮತದಾನ ಮಾಡಿದ್ದಾರೆ. 

46

ಮಂಡ್ಯ ಕ್ಷೇತ್ರದ ಬಜೆಪಿ-ಜೆಡಿಎಸ್ ಮೈತ್ರಿ(ಎನ್‌ಡಿಎ) ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಜತೆ ಮತ ಚಲಾವಣೆಗೂ ಮುನ್ನ ಬೆಂಗಳೂರಿನ ರಾಜರಾಜೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. 

56

ರಾಜರಾಜೇಶ್ವರಿ ದೇಗುಲದಲ್ಲಿ ಪತ್ನಿ ಜೊತೆ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಗೆ ತೆರಳಿ ಮತ ಚಲಾಯಿಸಲಿದ್ದಾರೆ. 

66

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ. ಸುರೇಶ್‌, ಬಿಜೆಪಿಯಿಂದ ಡಾ. ಸಿ.ಎನ್‌. ಮಂಜುನಾಥ್‌ ಅವರು ಸ್ಪರ್ಧಿಸಿದ್ದಾರೆ. ಡಾ. ಸಿ.ಎನ್‌. ಮಂಜುನಾಥ್‌ ಅವರು ಕುಮಾರಸ್ವಾಮಿ ಅವರ ಮಾವನವರಾಗಿದ್ದಾರೆ. 

About the Author

GG
Girish Goudar
ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಮ್‌ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಎಲೆಕ್ಟ್ರಾನಿಕ್‌ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್‌, ವೇ ಟು ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್‌ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved