MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಸತತ ಮೂರನೇ ವರ್ಷವೂ ರಾಜ್ಯದ ಶ್ರೀಮಂತ ದೇವಸ್ಥಾನ ಎನಿಸಿದ ಕುಕ್ಕೆ, ಟಾಪ್‌-10ನಲ್ಲಿ ಉತ್ತರ ಕರ್ನಾಟಕದ 2 ದೇವಸ್ಥಾನ!

ಸತತ ಮೂರನೇ ವರ್ಷವೂ ರಾಜ್ಯದ ಶ್ರೀಮಂತ ದೇವಸ್ಥಾನ ಎನಿಸಿದ ಕುಕ್ಕೆ, ಟಾಪ್‌-10ನಲ್ಲಿ ಉತ್ತರ ಕರ್ನಾಟಕದ 2 ದೇವಸ್ಥಾನ!

Top 10 Richest Temples in Karnataka 2024-25: Kukke Leads Again ಧಾರ್ಮಿಕ ದತ್ತಿ ಇಲಾಖೆಯ ಪ್ರಕಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಸತತ ಮೂರನೇ ಬಾರಿಗೆ ರಾಜ್ಯದ ಅತ್ಯಂತ ಶ್ರೀಮಂತ ದೇಗುಲವಾಗಿ ಹೊರಹೊಮ್ಮಿದೆ.  

1 Min read
Author : Santosh Naik
Published : Jan 03 2026, 12:09 PM IST
Share this Photo Gallery
  • FB
  • TW
  • Linkdin
  • Whatsapp
111
ರಾಜ್ಯದ ಶ್ರೀಮಂತ ದೇವಸ್ಥಾನಗಳ ಲಿಸ್ಟ್‌
Image Credit : X

ರಾಜ್ಯದ ಶ್ರೀಮಂತ ದೇವಸ್ಥಾನಗಳ ಲಿಸ್ಟ್‌

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳ ಪೈಕಿ ಸತತ ಮೂರನೇ ವರ್ಷವೂ ದಕ್ಷಿಣ ಕನ್ನಡದ ಪುರಾಣ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದ ಶ್ರೀಮಂತ ದೇವಸ್ಥಾನ ಎನಿಸಿಕೊಂಡಿದೆ. ಟಾಪ್‌-10 ಶ್ರೀಮಂತ ದೇವಸ್ಥಾನಗಳ ಪೈಕಿ ಉತ್ತರ ಕರ್ನಾಟಕದ ಎರಡು ದೇವಸ್ಥಾನಗಳು ಸ್ಥಾನ ಪಡೆದುಕೊಂಡಿವೆ.

211
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
Image Credit : X

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ

ನಂಬರ್‌ 1 ಸ್ಥಾನದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವಿದೆ. 2024-25ರಲ್ಲಿ ಈ ದೇವಸ್ಥಾನದ ಆದಾಯ 155 ಕೋಟಿ ರೂಪಾಯಿ. ಅದಕ್ಕೂ ಹಿಂದಿನ ವರ್ಷ ಅಂದರೆ 2023-24ರಲ್ಲಿ 146 ಕೋಟಿ ರೂಪಾಯಿ, 2022-23ರಲ್ಲಿ 123 ಕೋಟಿ ಆದಾಯ ಗಳಿಸಿತ್ತು.

Related Articles

Related image1
ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಭಾಗಿ: ತೆಂಗಿನ ಕಾಯಿ ಅರ್ಪಣೆ
Related image2
2010ರ ಬಳಿಕ ಮೊದಲ ಬಾರಿಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ: ಸೆ.1ರಿಂದ ಜಾರಿಗೆ
311
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ
Image Credit : X

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವಿದ್ದು, 2024-25ರಲ್ಲಿ 71 ಕೋಟಿ ರೂಪಾಯಿ ಆದಾಯ ಗಳಿಸಿದೆ.

411
ಚಾಮುಂಡೇಶ್ವರಿ ದೇವಸ್ಥಾನ
Image Credit : X

ಚಾಮುಂಡೇಶ್ವರಿ ದೇವಸ್ಥಾನ

ಮೈಸೂರಿನ ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನ ಮೂರನೇ ಸ್ಥಾನದಲ್ಲಿದ್ದು, ಕಳೆದ ವರ್ಷ ಒಟ್ಟು 50 ಕೋಟಿ ರೂಪಾಯಿ ಆದಾಯ ಮಾಡಿದೆ.

511
ಶ್ರೀಕಂಠೇಶ್ವರ ದೇವಸ್ಥಾನ
Image Credit : X

ಶ್ರೀಕಂಠೇಶ್ವರ ದೇವಸ್ಥಾನ

ಮೈಸೂರು ಜಿಲ್ಲೆಯ ಇನ್ನೊಂದು ಪ್ರಸಿದ್ಧ ದೇವಸ್ಥಾನವಾದ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ ನಾಲ್ಕನೇ ಸ್ಥಾನದಲ್ಲಿದ್ದು 36 ಕೋಟಿ ರೂಪಾಯಿ ಆದಾಯ ಗಳಿಸಿದೆ.

611
ರೇಣುಕಾ ಯಲ್ಲಮ್ಮ
Image Credit : X

ರೇಣುಕಾ ಯಲ್ಲಮ್ಮ

ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನ ಐದನೇ ಸ್ಥಾನದಲ್ಲಿದ್ದು, 30 ಕೋಟಿ ಆದಾಯ ಗಳಿಸಿದೆ. ಉತ್ತರ ಕರ್ನಾಟಕದ ಶ್ರೀಮಂತ ದೇವಸ್ಥಾನ ಎನಿಸಿಕೊಂಡಿದೆ.

711
ಸಿದ್ಧಲಿಂಗೇಶ್ವರ ದೇವಸ್ಥಾನ
Image Credit : X

ಸಿದ್ಧಲಿಂಗೇಶ್ವರ ದೇವಸ್ಥಾನ

ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಎಡೆಯೂರಿನಲ್ಲಿರುವ ಸಿದ್ದಲಿಂಗೇಶ್ವರ ದೇವಸ್ಥಾನ ಆರನೇ ಸ್ಥಾನದಲ್ಲಿದ್ದು, 29 ಕೋಟಿ ರೂಪಾಯಿ ಆದಾಯ ಸಂಪಾದಿಸಿದೆ.

811
ಹುಲಿಗೆಮ್ಮೆ ದೇವಸ್ಥಾನ
Image Credit : X

ಹುಲಿಗೆಮ್ಮೆ ದೇವಸ್ಥಾನ

ಕೊಪ್ಪಳ ಜಿಲ್ಲೆಯಲ್ಲಿರುವ ಮತ್ತೊಂದು ಪುರಾಣ ಪ್ರಸಿದ್ಧ ಹುಲಿಗೆಮ್ಮ ದೇವಾಲಯ, 2024-25ರಲ್ಲಿ 17 ಕೋಟಿ ರೂಪಾಯಿ ಆದಾಯ ಗಳಿಸಿದೆ.

911
ದುರ್ಗಾಪರಮೇಶ್ವರಿ ದೇವಸ್ಥಾನ
Image Credit : X

ದುರ್ಗಾಪರಮೇಶ್ವರಿ ದೇವಸ್ಥಾನ

ಉಡುಪಿಯ ಬ್ರಹ್ಮಾವರದ ಮುಂದಾರ್ತಿಯಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನ 8ನೇ ಸ್ಥಾನದಲ್ಲಿದ್ದು, 16 ಕೋಟಿ ರೂಪಾಯಿ ಆದಾಯ ಗಳಿಸಿದೆ.

1011
ಘಾಟಿ ಸುಬ್ರಹ್ಮಣ್ಯ
Image Credit : X

ಘಾಟಿ ಸುಬ್ರಹ್ಮಣ್ಯ

ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ 9ನೇ ಸ್ಥಾನದಲ್ಲಿದ್ದು 13 ಕೋಟಿ ಆದಾಯ ಗಳಿಸಿದೆ.

1111
ಬನಶಂಕರಿ
Image Credit : X

ಬನಶಂಕರಿ

ಬೆಂಗಳೂರಿನ ಬನಶಂಕರಿ ದೇವಸ್ಥಾನದೊಂದಿಗೆ ರಾಜ್ಯದ ಟಾಪ್‌-10 ಶ್ರೀಮಂತ ದೇವಸ್ಥಾನಗಳ ಲಿಸ್ಟ್‌ ಕೊನೆಯಾಗಿದೆ. 2024-25ರಲ್ಲಿ ಬನಶಂಕರಿ ದೇವಸ್ಥಾನ 11 ಕೋಟಿ ಆದಾಯ ಗಳಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕರ್ನಾಟಕ ಸುದ್ದಿ
ದೇವಸ್ಥಾನ
ಹಬ್ಬ
ಸುದ್ದಿ
ವ್ಯವಹಾರ
ವ್ಯಾಪಾರ ಸುದ್ದಿ

Latest Videos
Recommended Stories
Recommended image1
ಕನ್ನಡಿಗ IAS ಅಧಿಕಾರಿ ದಿ. ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಚಿವ ಸಂಪುಟದ ಮಹತ್ವದ ತೀರ್ಮಾನ
Recommended image2
Employees Rights: ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ: ಹೈಕೋರ್ಟ್
Recommended image3
Menstrual Leave: ಇನ್ಮುಂದೆ ವಿದ್ಯಾರ್ಥಿನಿಯರಿಗೂ ಸಿಗುತ್ತಾ ಋತುಚಕ್ರದ ರಜೆ? ಸಚಿವರು ಹೇಳಿದ್ದೇನು?
Related Stories
Recommended image1
ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಭಾಗಿ: ತೆಂಗಿನ ಕಾಯಿ ಅರ್ಪಣೆ
Recommended image2
2010ರ ಬಳಿಕ ಮೊದಲ ಬಾರಿಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ: ಸೆ.1ರಿಂದ ಜಾರಿಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved