MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ತುಮಕೂರು ಸುಂದರಿಗೆ ಕಂಟಕವಾದ ರೀಲ್ಸ್; ಪ್ರೇಮಿಯ ಒಂದು ಮಾತಿಗೆ ಪ್ರಾಣವನ್ನೇ ಬಿಟ್ಟಳು!

ತುಮಕೂರು ಸುಂದರಿಗೆ ಕಂಟಕವಾದ ರೀಲ್ಸ್; ಪ್ರೇಮಿಯ ಒಂದು ಮಾತಿಗೆ ಪ್ರಾಣವನ್ನೇ ಬಿಟ್ಟಳು!

ಇನ್‌ಸ್ಟಾಗ್ರಾಮ್ ರೀಲ್ಸ್‌ನಿಂದ ಆರಂಭವಾದ ಪ್ರೇಮಿಗಳ ಜಗಳ ಯುವತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ತುಮಕೂರಿನಲ್ಲಿ ನಡೆದ ಈ ಘಟನೆಯಲ್ಲಿ ಚೈತನ್ಯ ಎಂಬ ಯುವತಿ ನೇಣಿಗೆ ಶರಣಾಗಿದ್ದಾಳೆ.

1 Min read
Sathish Kumar KH
Published : Jun 24 2025, 03:46 PM IST| Updated : Jun 24 2025, 03:57 PM IST
Share this Photo Gallery
  • FB
  • TW
  • Linkdin
  • Whatsapp
111
Image Credit : Instagram

ಇನ್‌ಸ್ಟಾಗ್ರಾಮ್ ರೀಲ್ಸ್‌ನಿಂದ ಪ್ರೇಮಿಗಳ ನಡುವೆ ಆರಂಭವಾದ ಜಗಳ, ಪ್ರೇಯಸಿಯ ದುರಂತ ಸಾವಿನಿಂದ ಅಂತ್ಯವಾಗಿದೆ. ಪ್ರಿಯಕರನ ಜೊತೆ ಜಗಳ ಮಾಡಿದ ಬಳಿಕ ಯುವತಿ ಚೈತನ್ಯ(22) ನೇಣಿಗೆ ಶರಣಾಗಿದ್ದಾಳೆ.

211
Image Credit : Instagram

ತುಮಕೂರು ಗ್ರಾಮಾಂತರ ತಾಲೂಕು ಹೊಸಹಳ್ಳಿ ನಿವಾಸಿ ಚೈತನ್ಯ. ನೆನ್ನೆ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತ ಯುವತಿ ಚೈತನ್ಯ ತಾಯಿ ಜೊತೆ ವಾಸವಿದ್ದಳು.

Related Articles

Related image1
ಲಾಲ್‌ಬಾಗ್‌ನಲ್ಲಿ ಫೋಟೋಶೂಟ್‌, ಚಿತ್ರೀಕರಣ, ರೀಲ್ಸ್ ಶೀಘ್ರದಲ್ಲೇ ನಿಷೇಧ!
Related image2
ಪೊಲೀಸ್ ಕಾರಿನ ಬಾನೆಟ್ ಮೇಲೆ ಕೂತು ಕೇಕ್ ಕತ್ತರಿಸಿ ಹುಟ್ಟುಹಬ್ಬ; ಡಿಎಸ್‌ಪಿ ಪತ್ನಿಯ ರೀಲ್ಸ್ ಹುಚ್ಚಿಗೆ ಸರ್ಕಾರಿ ವಾಹನ ದುರ್ಬಳಕೆ
311
Image Credit : Instagram

ಯುವತಿ ಚೈತನ್ಯ ಕಾಲೇಜಿನಲ್ಲಿ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಜೊತೆಗೆ ಮಾಡಲಿಂಗ್‌ನ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದಳು.

411
Image Credit : Instagram

ತಮ್ಮ ಪಕ್ಕದ ಊರಿನ ವಿಜಯ್ ಕುಮಾರ್ ಜೊತೆ ಪ್ರೀತಿಯಲ್ಲಿದ್ದಳು. ವಿಜಯ್ ಕುಮಾರ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದಾನೆ. ಕಳೆದ ಕೆಲವು ವರ್ಷಗಳಿಂದ ಮನೆಯವರಿಗೆ ಗೊತ್ತಾಗದಂತೆ ಕದ್ದು ಮುಚ್ಚಿ ಪ್ರೀತಿಸುತ್ತಿದ್ದರು.

511
Image Credit : Instagram

ಇನ್ನು ವಿಜಯ್ ಕುಮಾರ್ ಮತ್ತು ಚೈತನ್ಯಳ ಪ್ರೀತಿ ವಿಚಾರವನ್ನು ತಿಳಿದ ಯುವತಿಯ ಮಾವ ಆಕೆಗೆ ಎಚ್ಚರಿಕೆಯನ್ನು ನೀಡಿದ್ದರು. ನೀನು ಪ್ರೀತಿ-ಪ್ರೇಮ ಇದೆಲ್ಲ ಬಿಟ್ಟುಬಿಡುವಂತೆ ತಿಳಿಸಿದ್ದರು.

611
Image Credit : Instagram

ನಿನ್ನೆ ಚೈತನ್ಯ ರೀಲ್ಸ್ ವೊಂದನ್ನು ಸ್ಟೇಟಸ್ ನಲ್ಲಿ ಅಪ್ಲೋಡ್ ಮಾಡಿದ್ದಳು. ಇದೇ ವಿಚಾರವಾಗಿ ಪ್ರಶ್ನಿಸಲು ರಾತ್ರಿ ಚೈತನ್ಯ ಮನೆ ಬಳಿಗೆ ವಿಜಯ್ ಬಂದಿದ್ದನು.

711
Image Credit : Instagram

ಆಗ ಚೈತನ್ಯಳ ತಾಯಿ ಸೌಭಾಗ್ಯಮ್ಮ ಮನೆಯ ರೂಮಿನಲ್ಲಿದ್ದರು. ತಾಯಿ ಇದ್ದ ರೂಮಿನ ಬಾಗಿಲನ್ನು ಲಾಕ್ ಮಾಡಿ ಕಿಟಕಿಯ ಬಳಿ ಇಬ್ಬರೂ ಜಗಳ ಮಾಡಲಾರಂಭಿಸಿದ್ದಾರೆ.

811
Image Credit : Instagram

ವಿಜಯ್ ಕುಮಾರ್ ಜಗಳ ಮಾಡಿಕೊಂಡು ಹೋದ ಬಳಿಕ ಚೈತನ್ಯಾ ಸಾಯುವುದಾಗಿ ಕರೆ ಮಾಡಿ ಹೇಳಿದ್ದಾಳೆ. ಈ ವಿಚಾರವನ್ನು ವಿಜಯ್ ಕೂಡಲೇ ಚೈತನ್ಯಳ ಸಂಬಂಧಿಗೆ ಕರೆ ಮಾಡಿ ತಿಳಿಸಿದ್ದಾನೆ.

911
Image Credit : Instagram

ಚೈತನ್ಯಾ ಸಾವಿಗೆ ಪ್ರಯತ್ನಿಸುವ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಕರು ಬಂದು ನೋಡಿದಾಗ ಯುವತಿ ನೇಣಿಗೆ ಶರಣಾಗಿ ಮೃತಪಟ್ಟಿರುವುದು ಖಚಿತವಾಗಿದೆ.

1011
Image Credit : Instagram

ಈ ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚೈತನ್ಯಾಳ ಸಾವಿಗೆ ಆಕೆಯ ಪ್ರೇಮಿ ವಿಜಯ್ ಕುಮಾರ ಕಾರಣ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

1111
Image Credit : Instagram

ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ವಿಜಯ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ತುಮಕೂರು
ಇನ್‌ಸ್ಟಾಗ್ರಾಂ
ಜೀವನಶೈಲಿ
ಸಂಬಂಧಗಳು
ಪ್ರೀತಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved