ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದ ಪೇಜಾವರಶ್ರೀ
ಬಳಿಕ ಶ್ರೀಗಳು ರಾಯರ ಮೂಲ ಬೃಂದಾವಣಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಪೂಜೆ ಬಳಿಕ ಮಠದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಿದ ಶ್ರೀಗಳು. ಈ ವೇಳೆ ಮಠದ ಸಿಬ್ಬಂದಿ ಸಹ ಶ್ರೀಗಳ ಜೊತೆ ಇದ್ದು ಸಾಥ್ ನೀಡಿದರು.

ಉಡುಪಿ ಕೃಷ್ಣಮಠದ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಇಂದು ಮಂತ್ರಾಲಯದ ಶ್ರೀರಾಘವೇಂದ್ರ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.
ಮಂತ್ರಾಲಯಕ್ಕೆ ಆಗಮಿಸಿದ ಉಡುಪಿ ಶ್ರೀಗಳಿಗೆ ಮಠದವತಿಯಿಂದ ಅದ್ದೂರಿ ಸ್ವಾಗತ ದೊರೆಯಿತು. ಪೇಜಾವರ ಶ್ರೀಗಳು ಮಂತ್ರಾಲಯ ಮಠದ ಪ್ರವೇಶ ದ್ವಾರ ತಲುಪುತ್ತಲೇ ಶ್ರೀಗಳನ್ನು ಸನ್ಮಾನಿಸಿ ಸ್ವಾಗತಿಸಿದರು.
ಶ್ರೀ ಗುರುರಾಘವೇಂದ್ರ ಸ್ವಾಮಿಗಳಿಗೆ ಮಂಗಳಾರತಿ ಮಾಡುವ ಮೂಲಕ ವಿಶೇಷವಾಗಿ ಪೂಜೆ ಸಲ್ಲಿಸಿದ ಶ್ರೀಗಳು. ಶ್ರೀಗಳ ಆಗಮಿಸುವಿಕೆ ಮೊದಲೇ ತಿಳಿದಿದ್ದರಿಂದ ಗುರುರಾಘವೇಂದ್ರ ಮಠ ಸಿಬ್ಬಂದಿ ಸಕಲ ವ್ಯವಸ್ಥೆ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ