MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಅಡಕೆ ಕ್ಯಾನ್ಸರ್‌ಕಾರಕ ಪಟ್ಟಿಗೆ ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆ ಚಿಂತನೆ!

ಅಡಕೆ ಕ್ಯಾನ್ಸರ್‌ಕಾರಕ ಪಟ್ಟಿಗೆ ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆ ಚಿಂತನೆ!

ವಿಶ್ವ ಆರೋಗ್ಯ ಸಂಸ್ಥೆಯ ವೆಬಿನಾರ್‌ನಲ್ಲಿ ಅಡಕೆಯನ್ನು ಕ್ಯಾನ್ಸರ್‌ಕಾರಕ ಎಂದು ಪರಿಗಣಿಸಿ ನಿಷೇಧಿಸುವ ಬಗ್ಗೆ ಚರ್ಚಿಸಲಾಗಿದೆ. ಆದರೆ,ಭಾರತೀಯ ತಜ್ಞರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು,ಅಡಕೆಯ ಆಯುರ್ವೇದ ಬಳಕೆ, ಆರ್ಥಿಕ ಅವಲಂಬನೆ ಮತ್ತು ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.

2 Min read
Author : Gowthami K
Published : Jan 31 2026, 05:23 PM IST
Share this Photo Gallery
  • FB
  • TW
  • Linkdin
  • Whatsapp
16
ಕ್ಯಾನ್ಸರ್‌ಕಾರಕ ಬ್ಯಾನ್ ಗೆ ಚಿಂತನೆ
Image Credit : our own

ಕ್ಯಾನ್ಸರ್‌ಕಾರಕ -ಬ್ಯಾನ್ ಗೆ ಚಿಂತನೆ

ಮಂಗಳೂರು: ದೆಹಲಿಯಲ್ಲಿ ಶುಕ್ರವಾರ ನಡೆದ ‘ಅರೆಕಾನಟ್ ಚಾಲೆಂಜ್: ಟರ್ನಿಂಗ್ ಪಾಲಿಸಿ ಇನ್‌ಟು ಇಂಪ್ಯಾಕ್ಟ್ ಇನ್ ದ ಸೌತ್ ಈಸ್ಟ್ ಏಷ್ಯಾ ರೀಜನ್’ ಎಂಬ ವೆಬಿನಾರ್‌ನಲ್ಲಿ ಕ್ಯಾನ್ಸರ್‌ಕಾರಕ ಉತ್ಪನ್ನಗಳಾದ ಮದ್ಯ ಪಾನೀಯ, ತಂಬಾಕು ಮುಂತಾದ ಉತ್ಪನ್ನಗಳ ಪಟ್ಟಿಗೆ ಸೇರಿರುವ ಅಡಕೆಯ ಬಳಕೆ ತಡೆಯುವುದನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಉತ್ಸುಕವಾಗಿದೆ ಎಂಬ ಆಘಾತಕಾರಿ ವಿಚಾರ ಚಿಂತನ ಮಂಥನದಲ್ಲಿ ಹೊರಹೊಮ್ಮಿದೆ.

26
ಅಡಕೆ ಚಟ ನಿಯಂತ್ರಿಸಲು ಸಾಧ್ಯವಿಲ್ಲ
Image Credit : our own

ಅಡಕೆ ಚಟ ನಿಯಂತ್ರಿಸಲು ಸಾಧ್ಯವಿಲ್ಲ

ಆದರೆ ವಿಜ್ಞಾನಿಗಳ ಪ್ರಕಾರ ಅಡಕೆಯನ್ನು ಒಂದು ಚಟವಾಗಿ ಬಳಸಲಾಗುತ್ತಿದ್ದು, ಇದನ್ನು ಅಷ್ಟು ಸುಲಭವಾಗಿ ನಿಯಂತ್ರಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಗಳು ಸೂಕ್ತ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆಯಂತೆ ಕೈಗೊಳ್ಳಬೇಕು. ಇದಕ್ಕಾಗಿ ಅಗತ್ಯ ಪ್ರಚಾರ ಮತ್ತು ತಿಳುವಳಿಕೆಯನ್ನು ಸಮಾಜದಲ್ಲಿ ಕೈಗೊಳ್ಳಬೇಕು ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.

Related Articles

Related image1
ಅಡಕೆ ಬೆಳೆಗಾರರ ಸಹಾಯಧನಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ: ಸಂಸದ ಬಿ.ವೈ.ರಾಘವೇಂದ್ರ
Related image2
ಶೀಘ್ರದಲ್ಲೇ ಬರಲಿದೆ ಹಳದಿ ಎಲೆ ರೋಗ ಮುಕ್ತ ಅಡಕೆ ಸಸಿ
36
ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಕೆ
Image Credit : our own

ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಕೆ

ವೆಬಿನಾರ್‌ನಲ್ಲಿ ಭಾಗವಹಿಸಿದ ಕ್ಯಾಂಪ್ಕೋ ನಿರ್ದೇಶಕ ಮುರಳಿಕೃಷ್ಣ ಅವರು, ಸರಿಯಾದ ಕ್ಲಿನಿಕಲ್ ಪರೀಕ್ಷೆಗಳು ನಡೆಸದೆ ಕೇವಲ ಶೈಕ್ಷಣಿಕ ಸಂಶೋಧನೆಗಳ ಮೂಲಕ ಕೈಗೊಂಡ ಫಲಿತಾಂಶಗಳ ಆಧಾರದ ಮೇಲೆ ಆತುರದ ನಿರ್ಧಾರಕ್ಕೆ ಬರಬಾರದು. ಬದಲಾಗಿ ದೊಡ್ಡ ಪ್ರಮಾಣದಲ್ಲಿ ಕ್ಲಿನಿಕಲ್ ಪರೀಕ್ಷೆ ನಡೆಸಿ ತೀರ್ಮಾನಕ್ಕೆ ಬರಬೇಕು. ಇದನ್ನು ಸಾರ್ವಜನಿಕರ ಮುಂದಿಡಬೇಕು, ಈ ವಿಚಾರವನ್ನು ಪ್ರತಿಯೊಂದು ರಾಜ್ಯ ಸರ್ಕಾರಗಳ ಮುಂದಿಡಬೇಕು ಎಂದರು. ಇದರೊಂದಿಗೆ ಅಡಕೆಯನ್ನು ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಕೆ ಮಾಡುತ್ತಿರುವ ಕಾರಣ ಅಂತಿಮ ತೀರ್ಮಾನಕ್ಕೆ ಬರುವ ಮೊದಲು ಈ ಬಗ್ಗೆ ಗಮನಹರಿಸಬೇಕು ಎಂದು ಪ್ರಶ್ನೆ ಮೂಲಕ ಗಮನ ಸೆಳೆದರು.

46
ಬರೇ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ:
Image Credit : our own

ಬರೇ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ:

ವೆಬಿನಾರ್‌ನಲ್ಲಿ ಭಾಗವಹಿಸಿದ ಆರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ಅಡಕೆ ಬೆಳೆಯುವ, ಬಳಕೆ ಮಾಡುವ ಮತ್ತಿತರ ಅವಲಂಬಿತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ಗಮನದಲ್ಲಿ ಇರಿಸಿಕೊಂಡು ಅಂತಿಮ ನಿರ್ಧಾರಕ್ಕೆ ಬರುವುದು ಸೂಕ್ತ. ಅಡಕೆಗೆ ಧಾರ್ಮಿಕ ಮೌಲ್ಯಗಳಿವೆ. ದಂತ ವೈದ್ಯರು ನೀಡುವ ಮಾಹಿತಿಗಳ ಪ್ರಕಾರ ಬಾಯಿಯ ಕ್ಯಾನ್ಸರ್‌ಗೆ ಮೂಲ ಕಾರಣ ರಾಸಾಯನಿಕಗಳಿಂದ ಮಿಶ್ರಿತವಾದ ಉತ್ಪನ್ನವೇ ಹೊರತು ಬರೇ ಅಡಕೆಯಲ್ಲ. ಆದ್ದರಿಂದ ಈ ದೃಷ್ಟಿಯಿಂದ ಇನ್ನಷ್ಟು ಅಧ್ಯಯನಗಳಾಗಬೇಕು ಎಂದು ಪ್ರತಿಪಾದಿಸಿದರು.

56
ಕಾರ್ಯಾಗಾರ ನಡೆಯಲಿ:
Image Credit : our own

ಕಾರ್ಯಾಗಾರ ನಡೆಯಲಿ:

ಈ ಎಲ್ಲ ದೃಷ್ಟಿಯಿಂದ ಮೊತ್ತ ಮೊದಲು ಅಡಕೆಯ ಅವಲಂಬಿತರಿಗೆ ಸೂಕ್ತ ಮಾಹಿತಿಯನ್ನು ಒದಗಿಸಲು ಪ್ರಾದೇಶಿಕ ಮಟ್ಟದಲ್ಲಿ ಕಾರ್ಯಾಗಾರಗಳು ಹಾಗೂ ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಅಂತಿಮ ತೀರ್ಮಾನಕ್ಕೆ ಮುಂದಾಗಬೇಕು ಎಂದಾಗ ಇದಕ್ಕೆ ವೆಬಿನಾರ್‌ ಆಯೋಜಕರು ಸಹಮತ ವ್ಯಕ್ತಪಡಿಸಿದರು. ಮಾತ್ರವಲ್ಲದೆ ಅಂತಿಮ ತೀರ್ಮಾನಕ್ಕೆ ಬರುವ ಮೊದಲು ವಿಶ್ವ ಆರೋಗ್ಯ ಸಂಸ್ಥೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಅಲ್ಪಕಾಲೀನ ಮತ್ತು ಒಂದು ದೀರ್ಘ ಕಾಲೀನ ಯೋಜನೆಗಳನ್ನು ಹಮ್ಮಿಕೊಂಡು ಅವನ್ನು ಅಡಕೆಯ ಅವಲಂಬಿತರಿಗೆ ತಿಳಿಹೇಳಬೇಕು ಎಂದು ಡಾ.ವಿಘ್ನೇಶ್ವರ ವರ್ಮುಡಿ ಸಲಹೆ ನೀಡಿದರು.

66
ಮುಂದುವರಿದ ಭಾಗದ ವೆಬಿನಾರ್ ಫೆಬ್ರವರಿಯಲ್ಲಿ
Image Credit : our own

ಮುಂದುವರಿದ ಭಾಗದ ವೆಬಿನಾರ್ ಫೆಬ್ರವರಿಯಲ್ಲಿ

ಅಡಕೆ ಬೆಳೆಗಾರರ ಪರವಾಗಿ ಮುರಳಿಕೃಷ್ಣ ಮತ್ತು ಡಾ. ವಿಘ್ನೇಶ್ವರ ವರ್ಮುಡಿ ಅವರು ಸುಮಾರು 25 ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಈ ವೆಬಿನಾರ್‌ನಲ್ಲಿ ಭಾರತವೂ ಸೇರಿದಂತೆ ಇತರ ರಾಷ್ಟ್ರಗಳ ಸುಮಾರು 150ಕ್ಕೂ ಅಧಿಕ ಮಂದಿ ತಜ್ಞರು ಭಾಗವಹಿಸಿದ್ದರು. ಇದರ ಮುಂದುವರಿದ ಭಾಗದ ವೆಬಿನಾರ್ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಆರೋಗ್ಯ
ವ್ಯವಹಾರ
ಕ್ಯಾನ್ಸರ್
ಸುದ್ದಿ
ದಕ್ಷಿಣ ಕನ್ನಡ
ಮಂಗಳೂರು
ಶಿವಮೊಗ್ಗ

Latest Videos
Recommended Stories
Recommended image1
ಜೈಲು ಅಕ್ರಮ ತಡೆಯಲು ಸೆಂಟ್ರಲ್ ಕಮಾಂಡ್ ಸೆಂಟರ್, ಬೆಂಗಳೂರಿನಿಂದಲೇ ಕಂಟ್ರೋಲ್!
Recommended image2
ಬೆಂಗಳೂರು ಉದ್ಯಮಿ ಸಿಜೆ ರಾಯ್ ಸಾವಿಗಿದೆಯಾ ಕೇರಳ ಎಲೆಕ್ಷನ್ ಲಿಂಕ್? ಸ್ಫೋಟಕ ತಿರುವು
Recommended image3
ಉದ್ಯಮಿ ಸಿ ಜೆ ರಾಯ್ ವಿರುದ್ಧ ಐಟಿ ಅಧಿಕಾರಿಗಳು ಯಾವ ವಿಚಾರಕ್ಕೆ ಹಿಂದೆ ಬಿದ್ರು? ಅವರ ಮೇಲಿನ ಆರೋಪ ಏನು ಗೊತ್ತಾ?
Related Stories
Recommended image1
ಅಡಕೆ ಬೆಳೆಗಾರರ ಸಹಾಯಧನಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ: ಸಂಸದ ಬಿ.ವೈ.ರಾಘವೇಂದ್ರ
Recommended image2
ಶೀಘ್ರದಲ್ಲೇ ಬರಲಿದೆ ಹಳದಿ ಎಲೆ ರೋಗ ಮುಕ್ತ ಅಡಕೆ ಸಸಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved