MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Technology
  • Artificial Intelligence: ಉದ್ಯೋಗಾವಕಾಶ ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ ಪಾರ್ಕ್‌ಗೆ ಸಚಿವ ಅಶ್ವತ್ಥ ಚಾಲನೆ

Artificial Intelligence: ಉದ್ಯೋಗಾವಕಾಶ ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ ಪಾರ್ಕ್‌ಗೆ ಸಚಿವ ಅಶ್ವತ್ಥ ಚಾಲನೆ

ಬೆಂಗಳೂರು(ಮಾ.15):  ಗ್ರಾಮೀಣ ಪ್ರದೇಶದ ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ರೋಬೋಟಿಕ್‌ ತಂತ್ರಜ್ಞಾನ ಪಾರ್ಕನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ(CN Ashwathnarayan) ಅವರು ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸೋಮವಾರ ಉದ್ಘಾಟಿಸಿದರು.

1 Min read
Kannadaprabha News | Asianet News
Published : Mar 15 2022, 05:03 AM IST| Updated : Mar 15 2022, 05:04 AM IST
Share this Photo Gallery
  • FB
  • TW
  • Linkdin
  • Whatsapp
14

ಕೃತಕ ಬುದ್ಧಿಮತ್ತೆ ಆಧಾರಿತ ಅರ್ಥವ್ಯವಸ್ಥೆಯು 2030ರ ಹೊತ್ತಿಗೆ 15.7 ಟ್ರಿಲಿಯನ್‌ ಡಾಲರ್‌ ಸಾಮರ್ಥ್ಯವುಳ್ಳದ್ದಾಗಿದ್ದು, ದೇಶದ ಈಗಿನ ಜಿಡಿಪಿ ಮೊತ್ತಕ್ಕಿಂತ ಆರು ಪಟ್ಟು ಹೆಚ್ಚು ಶಕ್ತಿಯನ್ನು ತರಲಿದೆ. ಈ ಕೇಂದ್ರದ ಸ್ಥಾಪನೆಗೆ ‘ಎಐ ಫೌಂಡ್ರಿ’ ಕೂಡ ನೆರವು ನೀಡಿದೆ. ಆರ್ಟ್‌ ಪಾರ್ಕ್ನಲ್ಲಿ ನಡೆಯಲಿರುವ ಸಂಶೋಧನೆಗಳು ಆರೋಗ್ಯಸೇವೆ, ಶಿಕ್ಷಣ, ಸಂಪರ್ಕ, ಮೂಲಸೌಲಭ್ಯ, ಕೃಷಿ, ಚಿಲ್ಲರೆ ವ್ಯಾಪಾರ ಮತ್ತು ಸೈಬರ್‌ ಸೆಕ್ಯುರಿಟಿ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಅತ್ಯಾಧುನಿಕ ಕೌಶಲಗಳನ್ನು ಪೂರೈಸಲಿದೆ. ಈ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರವು .170 ಕೋಟಿ ಕೊಟ್ಟಿದ್ದು, ರಾಜ್ಯ ಸರಕಾರವು .60 ಕೋಟಿ ಗಳನ್ನು ಬೀಜಧನವಾಗಿ (Seed Capital) ನೀಡಿದೆ ಎಂದು ವಿವರಿಸಿದ ಅಶ್ವತ್ಥನಾರಾಯಣ

24

ಮಾಹಿತಿ ತಂತ್ರಜ್ಞಾನ ಮತ್ತು ಅದಕ್ಕೆ ಪೂರಕವಾಗಿ ಮುನ್ನೆಲೆಗೆ ಬಂದ ಬಿಪಿಒಗಳು(BPO)ತಮ್ಮ ಬೆಳವಣಿಗೆಯ ತುತ್ತತುದಿಯನ್ನು ಈಗಾಗಲೇ ತಲುಪಿವೆ. ಮುಂಬರುವ ದಿನಗಳೆಲ್ಲ ಕೃತಕ ಬುದ್ಧಿಮತ್ತೆಯನ್ನು ಆಧರಿಸಿರಲಿವೆ. ಇದು ಶಿಕ್ಷಣ ಮತ್ತು ಕೌಶಲಗಳ ನಡುವೆ ಇರುವ ಅಂತರವನ್ನು ತೊಡೆದು ಹಾಕಲಿದೆ. ಹೀಗಾಗಿಯೇ, ಆರ್ಟ್‌ ಪಾರ್ಕ್ ಸ್ಥಾಪನೆಗೆ ರಾಜ್ಯವು ಮುಂದಾಗಿದೆ ಎಂದು ಅವರು ಹೇಳಿದ ಸಚಿವರು 

34

ಸಮಾವೇಶವನ್ನು ಉದ್ದೇಶಿಸಿ ವರ್ಚುಯಲ್‌ ಮೂಲಕ ಮಾತನಾಡಿದ ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್‌ ಕುಮಾರ್‌, ಗ್ರಾಮೀಣ ಪ್ರದೇಶಗಳಲ್ಲಿ ಹುದುಗಿರುವ ಆರ್ಥಿಕ ಶಕ್ತಿಯನ್ನು ಗರಿಷ್ಠ ಮಟ್ಟದಲ್ಲಿ ಉಪಯೋಗಿಸಿಕೊಂಡರೆ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೆ ಏರಬಹುದು. ಈ ನಿಟ್ಟಿನಲ್ಲಿ ಅಟಲ್‌ ಇನ್ನೋವೇಶನ್‌ ಮಿಶನ್‌(Atal Innovation Mission) ಮತ್ತು ನವೋದ್ಯಮಗಳೊಂದಿಗೆ ಜತೆಗೂಡಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

44

ಕಾರ್ಯಕ್ರಮದಲ್ಲಿ ಆರ್ಟ್‌ ಪಾರ್ಕ್ ಸಿಇಒ ಉಮಾಕಾಂತ್‌ ಸೋನಿ, ನಿರ್ದೇಶಕ ಪ್ರೊ.ರಂಗರಾಜನ್‌, ಸಿಐಒ ಶುಭಶಿಶ್‌ ಬ್ಯಾನರ್ಜಿ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಎಸ್‌.ಚಂದ್ರಶೇಖರ್‌, ಸ್ಟಾರ್ಟಪ್‌ ವಿಷನ್‌ ಗ್ರೂಪ್‌ ಮುಖ್ಯಸ್ಥ ಪ್ರಶಾಂತ್‌ ಪ್ರಕಾಶ್‌, ಉದ್ಯಮಿ ವಿವೇಕ್‌ ರಾಘವನ್‌, ಮೋಹನ್‌ ದಾಸ್‌ ಪೈ ಮುಂತಾದವರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕೃತಕ ಬುದ್ಧಿಮತ್ತೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved