MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Travel
  • ಈ ನಿಗೂಢ ದೇವಾಲಯದಲ್ಲಿ ಶ್ರೀಕೃಷ್ಣ-ರಾಧಾ ಸ್ವತಃ ಗ್ರಾಮಕ್ಕೆ ತೆರಳಿ ಜನರ ಸಮಸ್ಯೆ ಪರಿಹರಿಸ್ತಾರಂತೆ

ಈ ನಿಗೂಢ ದೇವಾಲಯದಲ್ಲಿ ಶ್ರೀಕೃಷ್ಣ-ರಾಧಾ ಸ್ವತಃ ಗ್ರಾಮಕ್ಕೆ ತೆರಳಿ ಜನರ ಸಮಸ್ಯೆ ಪರಿಹರಿಸ್ತಾರಂತೆ

ಈ ವಿಶಿಷ್ಟ ಮಂದಿರದಲ್ಲಿ ಶ್ರೀ ಕೃಷ್ಣ ಮತ್ತು ರಾಧಾ ರಾಣಿಯ ವಿಗ್ರಹವನ್ನು ಸ್ಥಾಪಿಸಲಾಗಿದೆ. ನಂಬಿಕೆಯ ಪ್ರಕಾರ, ಕೃಷ್ಣ ಮತ್ತು ರಾಧಾರಾಣಿ ಗ್ರಾಮದ ಜನರ ಸಮಸ್ಯೆಗಳನ್ನು ಕೇಳಲು ದೇವಾಲಯದಿಂದ ಹೊರಬರುತ್ತಾರೆ ಎನ್ನಲಾಗುತ್ತದೆ. ಇದು ಅನೇಕ ವರ್ಷಗಳಿಂದ ನಡೆಯುತ್ತಿದೆ.

2 Min read
Author : Pavna Das
Published : Feb 20 2024, 03:51 PM IST
Share this Photo Gallery
  • FB
  • TW
  • Linkdin
  • Whatsapp
17

ಭಾರತದ ದೇಶವನ್ನು ಆಧ್ಯಾತ್ಮಿಕ ಅಭ್ಯಾಸ ಮತ್ತು ಆಧ್ಯಾತ್ಮಿಕತೆಯ ಕೇಂದ್ರವೆಂದು (spiritual center) ಪರಿಗಣಿಸಲಾಗಿದೆ. ಇಲ್ಲಿ ಅನೇಕ ರಹಸ್ಯಗಳನ್ನು ಹೊಂದಿದ, ದೈವೀಕವಾದ ಸುಂದರ ದೇವಾಲಯವನ್ನು ಕಾಣಬಹುದು. ದೇವರ ಇರುವಿಕೆಯ ಕಾರಣದಿಂದಾಗಿ ಅನೇಕ ದೇವಾಲಯಗಳು ಇಂದಿಗೂ ಜನಪ್ರಿಯತೆಯನ್ನು ಪಡೆದುಕೊಂಡಿವೆ. ಇವುಗಳಲ್ಲಿ ಒಂದು ದೇವಾಲಯ ಬಿಹಾರಿ ಜು ದೇವಾಲಯ, ಇದು ತುಂಬಾ ನಿಗೂಢವಾಗಿದೆ.

27

ಬಿಹಾರಿ ಜು ದೇವಾಲಯವು (Bihari Ju Mandir) ಛತ್ತರ್ಪುರ್ ಜಿಲ್ಲಾ ಕೇಂದ್ರದಿಂದ 17 ಕಿ.ಮೀ ದೂರದಲ್ಲಿದೆ. ಬಿಹಾರಿ ಜು ಮಂದಿರದಲ್ಲಿ ಶ್ರೀ ಕೃಷ್ಣ ಮತ್ತು ರಾಧಾ ರಾಣಿಯ ವಿಗ್ರಹವನ್ನು ಸ್ಥಾಪಿಸಲಾಗಿದೆ. ನಂಬಿಕೆಯ ಪ್ರಕಾರ, ಕೃಷ್ಣ ಮತ್ತು ರಾಧಾರಾಣಿ ಗ್ರಾಮದ ಜನರ ಸಮಸ್ಯೆಗಳನ್ನು ಕೇಳಲು ದೇವಾಲಯದಿಂದ ಹೊರಬರುತ್ತಾರೆ ಎನ್ನಲಾಗುತ್ತದೆ. ಇದು ಅನೇಕ ವರ್ಷಗಳಿಂದ ನಡೆಯುತ್ತಿದೆ.

37

ಶ್ರೀ ಕೃಷ್ಣ ಮತ್ತು ರಾಧಾ ರಾಣಿಯನ್ನು ಗ್ರಾಮಕ್ಕೆ ಕರೆತರಲಾಗುತ್ತದೆ: ಮಹಾರಾಜ್ಗಂಜ್ ಮತ್ತು ಶ್ಯಾಮರಿ ಪೂರ್ವಾ ಗ್ರಾಮಗಳ ಜನರು ವರ್ಷಕ್ಕೊಮ್ಮೆ ಬಿಹಾರಿ ಜೂ ದೇವಾಲಯಕ್ಕೆ ಡೋಲು ಬಾರಿಸುವ ಮೂಲಕ ಹೋಗುತ್ತಾರೆ ಮತ್ತು ಶ್ರೀ ಕೃಷ್ಣ ಮತ್ತು ರಾಧಾ ರಾಣಿಯನ್ನು (Shri Krishna and Radha Rani) ಪಲ್ಲಕ್ಕಿಗಳಲ್ಲಿ ಕೂರಿಸಿ ಗ್ರಾಮಕ್ಕೆ ಕರೆತರುತ್ತಾರೆ. ಭಗವಂತನ ಪಲ್ಲಕ್ಕಿ ಹೋಗುವ ದಾರಿಯಲ್ಲಿ, ಗ್ರಾಮದ ಜನರು ಶಂಖ ಮತ್ತು ಡೋಲುಗಳು ಇತ್ಯಾದಿ ವಾದ್ಯಗಳನ್ನು ನುಡಿಸುತ್ತಾರೆ.
 

47

ಪಲ್ಲಕಿಯ ಮೇಲೆ ಹೊತ್ತು ತಂದ ಶ್ರೀ ಕೃಷ್ಣ ಮತ್ತು ರಾಧಾ ರಾಣಿಯನ್ನು ಗ್ರಾಮದಲ್ಲಿ ದೊಡ್ಡ ವೇದಿಕೆಯ ಮೇಲೆ ಕೂರಿಸಲಾಗುತ್ತದೆ. ಇದರ ನಂತರ, ದೇವರು ಜನರ ತೊಂದರೆಗಳನ್ನು ಕೇಳುತ್ತಾನೆ ಎಂದು ನಂಬಲಾಗಿದೆ. ಮರುದಿನ ಬೆಳಿಗ್ಗೆ, ದೇವರ ಮೂರ್ತಿಗಳನ್ನು ಮತ್ತೆ ದೇವಾಲಯದಲ್ಲಿ ಇರಿಸಲಾಗುತ್ತದೆ.
 

57

ಈ ಅಭ್ಯಾಸವು ವರ್ಷಗಳಿಂದ ನಡೆಯುತ್ತಿದೆ: ನಂಬಿಕೆಯ ಪ್ರಕಾರ ನೂರಾರು ವರ್ಷಗಳ ಹಿಂದೆ ಮಹಾರಾಜ್ಗಂಜ್ ಮತ್ತು ಶ್ಯಾಮರಿ ಪೂರ್ವಾ ಗ್ರಾಮಗಳ ಜನರು ಹೆಚ್ಚಿನ ತೊಂದರೆಗಳನ್ನು ಎದುರಿಸುತ್ತಿದ್ದರಂತೆ. ಈ ಸಮಯದಲ್ಲಿ, ದೇವಾಲಯದ ಅರ್ಚಕರ ಜೊತೆಗೆ ಮಾತನಾಡಿ ಜನರು ಬಿಹಾರಿ ಜೂ ದೇವಾಲಯದಿಂದ ಶ್ರೀ ಕೃಷ್ಣ ಮತ್ತು ರಾಧಾ ರಾಣಿಯನ್ನು ತಮ್ಮ ಗ್ರಾಮಕ್ಕೆ ತರುವ ಬಗ್ಗೆ ನಿರ್ಧರಿಸಿದರು. ದೇವರೇ ಜನರ ಸಮಸ್ಯೆಗಳನ್ನು(people problem) ನೋಡುತ್ತಾನೆ ಎನ್ನುವುದು ಜನರ ನಂಬಿಕೆಯಾಗಿತ್ತು. ಹಳ್ಳಿಗರು ಅದನ್ನೇ ಮಾಡಿದರು. ಅಂದಿನಿಂದ, ಈ ಅಭ್ಯಾಸವು ನಡೆಯುತ್ತಿದೆ.

67

ಸಮಸ್ಯೆಗಳೆಲ್ಲಾ ದೂರ: ಜನರ ನಂಬಿಕೆಯ ಪ್ರಕಾರ ಯಾವಾಗಿನಿಂದ ದೇವರನ್ನು ಊರಿಗೆ ಕರೆದು ತಂದು ಸಮಸ್ಯೆಗಳನ್ನು ದೇವರ ಎದುರು ಹೇಳುವ ಪದ್ಧತಿ ಆರಂಭವಾಯಿತೋ, ಅಂದಿನಿಂದ ಜನರ ಕಷ್ಟ ಕಡಿಮೆಯಾಗುತ್ತಾ ಬಂತಂತೆ. ಹಾಗಾಗಿ ಜನರು ಇಂದಿಗೂ ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. 

77

ದೇವಾಲಯವನ್ನು ತಲುಪುವುದು ಹೇಗೆ?: ನೀವು ಬಿಹಾರಿ ಜೂ ದೇವಾಲಯಕ್ಕೆ ಭೇಟಿ ನೀಡಲು ಬಯಸಿದರೆ, ರಸ್ತೆಯ ಮೂಲಕ ಹೋಗಬಹುದು. ಇದಲ್ಲದೆ, ಇಂದೋರ್ ವಿಮಾನ ನಿಲ್ದಾಣ (Airport) ಮತ್ತು ಖಜುರಾಹೊ ವಿಮಾನ ನಿಲ್ದಾಣವೂ ಇದೆ, ಇದರ ಮೂಲಕ ನೀವು ಸುಲಭವಾಗಿ ದೇವಾಲಯವನ್ನು ತಲುಪಬಹುದು.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

PD
Pavna Das
ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ . ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ . ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ. ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ . ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ಬರವಣಿಗೆ ಇಷ್ಟ.
ದೇವಸ್ಥಾನ

Latest Videos
Recommended Stories
Recommended image1
ಇಂದಿನಿಂದ ಬೆಂಗಳೂರಿನಲ್ಲಿ ಲಂಡನ್‌ ಮಾದರಿ ಡಬಲ್‌ ಡೆಕ್ಕರ್‌ ಬಸ್‌ ಸಂಚಾರ: ಟಿಕೆಟ್ ಬೆಲೆ ಎಷ್ಟು?
Recommended image2
ಯಾವುದೇ ಪಾಸ್‌ಪೋರ್ಟ್ ಇಲ್ಲದೆ ಜಗತ್ತು ಸುತ್ತಬಲ್ಲ ಟಾಪ್- 3 ವ್ಯಕ್ತಿಗಳಿವರು!
Recommended image3
ರಾಜಸ್ಥಾನದ ಈ ಜನಾಂಗದಲ್ಲಿ ಮದುವೆಗೂ ಮುನ್ನ Live in Relationship ಕಾಮನ್, ಮಗು ಆದ್ರೇನೆ ಮದುವೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved