MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Travel
  • ನೇರಳೆ ಮಾರ್ಗದ ಮೆಟ್ರೊ ನಾಳೆ 2 ಗಂಟೆ ಸಂಚರಿಸಲ್ಲ: ಯಾವೆಲ್ಲಾ ಮಾರ್ಗ? ಫುಲ್​ ಡಿಟೇಲ್ಸ್​ ಇಲ್ಲಿದೆ

ನೇರಳೆ ಮಾರ್ಗದ ಮೆಟ್ರೊ ನಾಳೆ 2 ಗಂಟೆ ಸಂಚರಿಸಲ್ಲ: ಯಾವೆಲ್ಲಾ ಮಾರ್ಗ? ಫುಲ್​ ಡಿಟೇಲ್ಸ್​ ಇಲ್ಲಿದೆ

ಮೇ 17ರ ಭಾನುವಾರದಂದು, ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿಯಿಂದಾಗಿ ಮೆಟ್ರೋ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ. ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸೇವೆ ಸ್ಥಗಿತಗೊಳ್ಳಲಿದೆ.

1 Min read
Author : Suchethana D
Published : May 16 2026, 03:43 PM IST
Share this Photo Gallery
  • FB
  • TW
  • Linkdin
  • Whatsapp
15
ಕಾಮಗಾರಿ ಹಿನ್ನೆಲೆ ಭಾಗಶಃ ರದ್ದು
Image Credit : x

ಕಾಮಗಾರಿ ಹಿನ್ನೆಲೆ ಭಾಗಶಃ ರದ್ದು

ನಮ್ಮ ಮೆಟ್ರೊದಲ್ಲಿ ದಿನನಿತ್ಯ ಲಕ್ಷಾಂತರ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಇದಕ್ಕಾಗಿ ಮೆಟ್ರೊ ವಿಸ್ತರಣೆ ನಡೆಯುತ್ತಿದೆ. ಇದರ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ನಾಳೆ ಅರ್ಥಾತ್​ ಮೇ 17ರ ಭಾನುವಾರ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದಾಗಿ ಹೊಸಹಳ್ಳಿ-ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಅವಧಿಗೆ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

Add Asianetnews Kannada as a Preferred SourcegooglePreferred
25
ಯಾವೆಲ್ಲಾ ಮಾರ್ಗ?
Image Credit : Getty

ಯಾವೆಲ್ಲಾ ಮಾರ್ಗ?

ತುರ್ತು ನಿರ್ವಹಣಾ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಾಲ್ಕು ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ 2 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ. ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಸಂಚಾರ ಇರುವುದಿಲ್ಲ. ಈ ಮಾರ್ಗದಲ್ಲಿ ಓಡಾಡುವ ಪ್ರಯಾಣಿಕರಿಗೆ ಸಂಚಾರ ಅಡಚರಣೆ ಎದುರಾಗಲಿದೆ. ಬದಲಾವಣೆ ನೋಡಿಕೊಂಡು ಪ್ರಯಾಣಿಕರು ಪ್ರಯಾಣ ಯೋಜಿಸುವಂತೆ ತಿಳಿಸಲಾಗಿದೆ.

Related Articles

Related image1
ಪ್ರಧಾನಿ ಕರೆಗೆ ಓಗೊಟ್ಟ ಸಿದ್ದರಾಮಯ್ಯ ಸಲಹೆಗಾರ ಪೊನ್ನಣ್ಣ: ಬಹು ದೊಡ್ಡ ನಿರ್ಧಾರ- ಪತ್ರ ವೈರಲ್​
Related image2
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಯಾರೇ ನೀ ಮೋಹಿನಿ' ಸೀರಿಯಲ್​ ನಟಿ ಭಾರತಿ: ಕ್ಯೂಟ್​ ಫೋಟೋಸ್​ ಇಲ್ಲಿವೆ
35
ಹಸಿರು, ಹಳದಿ ಮಾರ್ಗಕ್ಕೆ ತೊಂದರೆ ಇಲ್ಲ
Image Credit : Social Media

ಹಸಿರು, ಹಳದಿ ಮಾರ್ಗಕ್ಕೆ ತೊಂದರೆ ಇಲ್ಲ

ಹೊಸಹಳ್ಳಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ, ಹಸಿರು, ಹಳದಿ ಮಾರ್ಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಬೆಳಗ್ಗೆ 9:00 ಗಂಟೆಯ ನಂತರ ಈ ಮಾರ್ಗದಲ್ಲಿ ಎಂದಿನಂತೆ ರೈಲುಗಳು ಸಂಚರಿಸಲಿವೆ. ಪರ್ಯಾಯ ಮಾರ್ಗಗಳಲ್ಲಿ ಎಂದಿನಂತೆ ಸಂಚಾರ ಲಭ್ಯವಿರುತ್ತದೆ.

45
 ಉಳಿದ ರೈಲ್ವೆ ಸೇವೆ ಲಭ್ಯ
Image Credit : Google

ಉಳಿದ ರೈಲ್ವೆ ಸೇವೆ ಲಭ್ಯ

ಇನ್ನುಳಿದ ಮಾರ್ಗಗಳಲ್ಲಿ ಬೆಳಗ್ಗೆ 7 ರಿಂದ ರೈಲು ಸೇವೆಗಳು ಲಭ್ಯವಿರಲಿವೆ. ಚಲ್ಲಘಟ್ಟದಿಂದ ವಿಜಯನಗರದವರೆಗೆ ಮತ್ತು ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್‌ (ಕಾಡುಗೋಡಿ) ನಿಲ್ದಾಣಗಳ ನಡುವೆ ರೈಲುಗಳು ಎಂದಿನ ವೇಳಾಪಟ್ಟಿಯಂತೆ ಚಲಿಸಲಿವೆ. ಮಾದಾವರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ (ಹಸಿರು ಮಾರ್ಗ) ನಡುವಿನ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ (ಹಳದಿ ಮಾರ್ಗ) ನಡುವಿನ ಮೆಟ್ರೋ ರೈಲುಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ.

55
 ಚಿಕ್ಕದಾಗಿ ಫುಲ್​ ಡಿಟೇಲ್ಸ್ ಇಲ್ಲಿದೆ
Image Credit : Asianet News

ಚಿಕ್ಕದಾಗಿ ಫುಲ್​ ಡಿಟೇಲ್ಸ್ ಇಲ್ಲಿದೆ

* ಚಲ್ಲಘಟ್ಟ - ವಿಜಯನಗರವರೆಗೆ ಸಂಚಾರ ಎಂದಿನಂತೆ ಇರಲಿದೆ.

* ಎಂ.ಜಿ. ರಸ್ತೆ -ವೈಟ್‌ಫೀಲ್ಡ್ (ಕಾಡುಗೋಡಿ) ವರೆಗೆ ಸೇವೆ ಲಭ್ಯವಿದೆ.

* ಆ‌ರ್.ವಿ. ರಸ್ತೆ - ಬೊಮ್ಮಸಂದ್ರ ಹಳದಿ ಮಾರ್ಗದಲ್ಲಿ ಸೇವೆ ಇರಲಿದೆ.

* ಹಸಿರು ಮಾರ್ಗದಲ್ಲಿ ಸಂಚಾರ ಇರಲಿದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ನಮ್ಮ ಮೆಟ್ರೋ
ಬೆಂಗಳೂರು
ಕರ್ನಾಟಕ ಸರ್ಕಾರ
ಪ್ರವಾಸ

Latest Videos
Recommended Stories
Recommended image1
ಯಶವಂತಪುರ-ಗದಗ ಬೈಪಾಸ್-ವಿಜಯಪುರ ರೈಲಿಗೆ ವಿರೋಧ; 500 ರೂಪಾಯಿ ಯಾರ್ ಕೊಡ್ತಾರೆ ಸ್ವಾಮಿ?
Recommended image2
ಬೆಂಗಳೂರಿನಿಂದ ಊಟಿಗೆ ಹೋಗ್ತಿದ್ದೀರಾ? ಇಲ್ಲಿದೆ ನೋಡಿ ನಮ್ಮ ಸಾರಿಗೆ ಬಸ್‌ಗಳ ಮಾಹಿತಿ
Recommended image3
ಮಂಗಳೂರು: ಬಂಟ್ವಾಳ, ವಿಟ್ಲ ಆಗಸದಲ್ಲಿ ಭೂಮಿಗೆ ಅತ್ಯಂತ ಸಮೀಪ 8 ಸುತ್ತು ಗಿರಕಿ ಹೊಡೆದ ಏರ್‌ಇಂಡಿಯಾ, ಗಾಬರಿಬಿದ್ದ ಜನ!
Related Stories
Recommended image1
ಪ್ರಧಾನಿ ಕರೆಗೆ ಓಗೊಟ್ಟ ಸಿದ್ದರಾಮಯ್ಯ ಸಲಹೆಗಾರ ಪೊನ್ನಣ್ಣ: ಬಹು ದೊಡ್ಡ ನಿರ್ಧಾರ- ಪತ್ರ ವೈರಲ್​
Recommended image2
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಯಾರೇ ನೀ ಮೋಹಿನಿ' ಸೀರಿಯಲ್​ ನಟಿ ಭಾರತಿ: ಕ್ಯೂಟ್​ ಫೋಟೋಸ್​ ಇಲ್ಲಿವೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved