MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare ಮೂಲಕ ಮನಗೆದ್ದ ಭೂಮಿಕಾ ಪುತ್ರ, ರಿಯಲ್​ ಅಪ್ಪನ ಜೊತೆ ಕ್ಯೂಟ್​ ಫೋಟೋಶೂಟ್​

Amruthadhaare ಮೂಲಕ ಮನಗೆದ್ದ ಭೂಮಿಕಾ ಪುತ್ರ, ರಿಯಲ್​ ಅಪ್ಪನ ಜೊತೆ ಕ್ಯೂಟ್​ ಫೋಟೋಶೂಟ್​

'ಅಮೃತಧಾರೆ' ಸೀರಿಯಲ್‌ನ ಆಕಾಶ್ ಪಾತ್ರಧಾರಿ ದುಷ್ಯಂತ್ ಚಕ್ರವರ್ತಿ, ಅದೇ ಸೀರಿಯಲ್‌ನಲ್ಲಿ ನಟಿಸುತ್ತಿರುವ ಆನಂದ್ ಕುಮಾರ್ ಅವರ ನಿಜವಾದ ಮಗ. ದುಷ್ಯಂತ್ ಈಗಾಗಲೇ 'ಮದಗಜ' ಸಿನಿಮಾ, 'ನನ್ನಮ್ಮ ಸೂಪರ್‌ಸ್ಟಾರ್' ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದಾರೆ ನಟ ಆನಂದ್.  

2 Min read
Suchethana D
Published : Oct 11 2025, 04:08 PM IST
Share this Photo Gallery
  • FB
  • TW
  • Linkdin
  • Whatsapp
18
ತರ್ಲೆ ಆಕಾಶ್​
Image Credit : Dushyanth Chakravarthis Instagram

ತರ್ಲೆ ಆಕಾಶ್​

ಅಮೃತಧಾರೆ (Amruthadhaare ) ಸೀರಿಯಲ್​ನಲ್ಲಿ ಗೌತಮ್​ ಮತ್ತು ಭೂಮಿಕಾ ಪುತ್ರ ತರ್ಲೆ ಆಕಾಶ್ ಎಲ್ಲರ ಗಮನ ಸೆಳೆಯುತ್ತಿದ್ದಾನೆ. ಅಷ್ಟಕ್ಕೂ ಈಗ ರಿಯಲ್​ ಆಗಿ ಇದೇ ಸೀರಿಯಲ್​​ನ ಗೌತಮ್​ ಸ್ನೇಹಿತ ಆನಂದ್​ ಅವರ ರಿಯಲ್​ ಪುತ್ರ ​ದುಷ್ಯಂತ್‌ ಚಕ್ರವರ್ತಿ. ಆನಂದ್‌ ಪಾತ್ರಧಾರಿಯಾಗಿರುವ ನಟನ ಹೆಸರು ರಿಯಲ್​ ಆಗಿಯೂ ಆನಂದ್‌ ಕುಮಾರ್‌. ಇದೀಗ ರಿಯಲ್​ ಅಪ್ಪ-ಮಗ ಕ್ಯೂಟ್​ ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ.

28
ಸೂಪರ್​ಸ್ಟಾರ್​ ದುಷ್ಯಂತ್​
Image Credit : zee5

ಸೂಪರ್​ಸ್ಟಾರ್​ ದುಷ್ಯಂತ್​

ಅಷ್ಟಕ್ಕೂ, ದುಷ್ಯಂತ್‌ ಇದಾಗಲೇ ಸೂಪರ್‌ಸ್ಟಾರ್‌ ಆಗಿದ್ದಾನೆ. ಇದಾಗಲೇ ಕೆಲವು ಸೀರಿಯಲ್‌ಗಳಲ್ಲಿ ಈತ ನಟಿಸಿದ್ದು, ಈಗಲೂ ನಟನಾ ವೃತ್ತಿ ಮುಂದುವರೆಸಿದ್ದಾನೆ. ಈ ಹಿಂದೆ ದುಷ್ಯಂತ್‌, ಶ್ರೀಮುರಳಿ ನಟನೆಯ ‘ಮದಗಜ’ ಸಿನಿಮಾದಲ್ಲಿ ಬಾಲನಟನಾಗಿ ದುಷ್ಯಂತ್ ನಟಿಸಿದ್ದ.

Related Articles

Related image1
ಹೆಬ್ಬಾವಿನ ಜೊತೆ Naa Ninna Bidalaare ಪುಟಾಣಿ ಮಹಿತಾ ಸರಸ: ವಿಡಿಯೋ ನೋಡಿ ಸಾಮಾನ್ಯದವಳಲ್ಲ ಕಣಮ್ಮ ಎಂದ ಫ್ಯಾನ್ಸ್​
Related image2
Amruthadhaare ತರ್ಲೆ ಆಕಾಶ್​ ಕ್ಯೂಟ್​ ವಿಡಿಯೋ ವೈರಲ್​: ಮರಿ ಡುಮ್ಮಣ್ಣನ ಡಾನ್ಸ್​ ನೋಡಿ....
38
ಅಪ್ಪು ಜೊತೆಯೂ ಇದ್ದ ಬಾಲಕ
Image Credit : our own

ಅಪ್ಪು ಜೊತೆಯೂ ಇದ್ದ ಬಾಲಕ

ಅಷ್ಟೇ ಅಲ್ಲದೆ ಪುನೀತ್ ರಾಜ್‌ಕುಮಾರ್ ನಟನೆಯ ‘ರಾಜಕುಮಾರ’ ಸೆಟ್‌ನಲ್ಲಿ ಅಪ್ಪು ಜೊತೆಗೆ ದುಷ್ಯಂತ್ ಒಂದಷ್ಟು ಸಮಯ ಕಳೆದಿದ್ದ. ಅದು ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿತ್ತು. 'ನನ್ನಮ್ಮ ಸೂಪರ್‌ಸ್ಟಾರ್ ಸೀಸನ್ 3' ರಿಯಾಲಿಟಿ ಶೋನಲ್ಲಿ ದುಷ್ಯಂತ್ ರನ್ನರ್ ಅಪ್ ಸ್ಥಾನ ಗಳಿಸಿದ್ದಾನೆ. ಈಗ ಆತ, ದಿವ್ಯಾ ಉರುಡುಗ, ರಿತ್ವಿಕ್ ಮಠದ್ ನಟನೆಯ ‘ನಿನಗಾಗಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾನೆ.

48
ಸಿನಿಮಾದಲ್ಲಿಯೂ ನಟನೆ
Image Credit : Instagram

ಸಿನಿಮಾದಲ್ಲಿಯೂ ನಟನೆ

ಈ ಹಿಂದೆ ದುಷ್ಯಂತ್‌, ಶ್ರೀಮುರಳಿ ನಟನೆಯ ‘ಮದಗಜ’ ಸಿನಿಮಾದಲ್ಲಿ ಬಾಲನಟನಾಗಿ ದುಷ್ಯಂತ್ ನಟಿಸಿದ್ದ. ಅಷ್ಟೇ ಅಲ್ಲದೆ ಪುನೀತ್ ರಾಜ್‌ಕುಮಾರ್ (Puneeth Rajkumar) ನಟನೆಯ ‘ರಾಜಕುಮಾರ’ ಸೆಟ್‌ನಲ್ಲಿ ಅಪ್ಪು ಜೊತೆಗೆ ದುಷ್ಯಂತ್ ಒಂದಷ್ಟು ಸಮಯ ಕಳೆದಿದ್ದ. ಅದು ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿತ್ತು. 'ನನ್ನಮ್ಮ ಸೂಪರ್‌ಸ್ಟಾರ್ ಸೀಸನ್ 3' ರಿಯಾಲಿಟಿ ಶೋನಲ್ಲಿ (Nannamma Superstar reality show) ದುಷ್ಯಂತ್ ರನ್ನರ್ ಅಪ್ ಸ್ಥಾನ ಗಳಿಸಿದ್ದಾನೆ.

58
ಕಿರುತೆರೆಯಲ್ಲಿಯೂ ಫೇಮಸ್​
Image Credit : Instagram

ಕಿರುತೆರೆಯಲ್ಲಿಯೂ ಫೇಮಸ್​

ಈಗ ಆತ, ದಿವ್ಯಾ ಉರುಡುಗ, ರಿತ್ವಿಕ್ ಮಠದ್ ನಟನೆಯ ‘ನಿನಗಾಗಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾನೆ. ಇವನ ಸಂಭಾಷಣೆ ವೀಕ್ಷಕರಿಗೆ ತುಂಬ ಇಷ್ಟ ಆಗಿದೆ. ಮಕ್ಕಳ ಜೊತೆ ಶೂಟಿಂಗ್ ಮಾಡೋದು ಮತ್ತೊಂದು ಖುಷಿ ಎಂದು ದಿವ್ಯಾ ಉರುಡುಗ, ರಿತ್ವಿಕ್ ಮಠದ್ ಕೂಡ ಈ ಹಿಂದೆ ಹೇಳಿದ್ದರು. ದುಷ್ಯಂತ್‌ ಇದಾಗಲೇ ಅಪ್ಪ ಆನಂದ್‌ ಜೊತೆಗೂಡಿ ಹಲವು ರೀಲ್ಸ್‌ಗೆ ಸ್ಟೆಪ್‌ ಹಾಕಿದ್ದಾನೆ.

68
ನಟ ಆನಂದ್​ ಕುರಿತು...
Image Credit : Instagram

ನಟ ಆನಂದ್​ ಕುರಿತು...

ಇನ್ನು ನಟ ಆನಂದ್‌ ಕುರಿತು ಹೇಳುವುದಾದರೆ, ಆನಂದ್​ ಅವರು ಪತ್ನಿ ಚೈತ್ರಾ ಜೊತೆಗೆ 'ಜೋಡಿ ನಂ 1 ಸೀಸನ್ 2' ಶೋನಲ್ಲಿ ಭಾಗವಹಿಸಿದ್ದರು. ತೆರೆ ಮೇಲೆ ಎಲ್ಲರನ್ನೂ ಹಾಸ್ಯದ ಕಡಲಿನಲ್ಲಿ ತೇಲಿಸುವ ಅದೆಷ್ಟೋ ನಟರ ಬಾಳಲ್ಲಿ ನೋವಿನ ಸರಮಾಲೆಗಳೇ ಇರುತ್ತವೆ. ಎಷ್ಟೋ ನಟರು ಹಿಂದೊಮ್ಮೆ ತುತ್ತು ಅನ್ನಕ್ಕೂ ಪರದಾಡಿದ್ದು ಇದೆ. ಇನ್ನು ಕೆಲವರು ಬಾಲ್ಯದಿಂದಲೂ ನೋವನ್ನೇ ಹೊತ್ತು ಬಂದಿದ್ದರೆ, ಮತ್ತೆ ಕೆಲವರಿಗೆ ಕಹಿ ಘಟನೆಗಳಿಂದ ಜೀವನ ತತ್ತರಿಸಿ ಹೋಗಿರುವುದೂ ಉಂಟು.

78
ಏಳು-ಬೀಳುಗಳ ಬದುಕು
Image Credit : Instagram

ಏಳು-ಬೀಳುಗಳ ಬದುಕು

ಬಹುತೇಕ ಎಲ್ಲರ ಬಾಳಿನಲ್ಲಿಯೂ ಈ ಏಳು-ಬೀಳುಗಳು ಸಹಜವೇ. ಅದೇ ರೀತಿ ಎಲ್ಲರನ್ನೂ ನಗಿಸುವ ಆನಂದ್​ ಅವರ ಜೀವನದಲ್ಲಿಯೂ ಬಹು ದೊಡ್ಡ ಆಘಾತವೇ ನಡೆದಿತ್ತು. ಪತ್ನಿ ಕೊರೋನಾ ಸಂದರ್ಭದಲ್ಲಿ ಸಾವು ಬದುಕಿನ ಬಗ್ಗೆ ಹೋರಾಟ ಮಾಡಿದ್ದರು. ಅದನ್ನು ಆನಂದ್​ ಈ ಹಿಂದೆ ನೆನಪಿಸಿಕೊಂಡಿದ್ದರು. ಇದೇ ವೇಳೆ, ನಿಜ ಜೀವನದಲ್ಲಿ ಏಳುಬೀಳು ಕಂಡವರು ಆನಂದ್​ ಮತ್ತು ಚೈತ್ರಾ.

88
ಮಕ್ಕಳಾಗಲ್ಲ ಎನ್ನಲಾಗಿತ್ತು
Image Credit : Instagram

ಮಕ್ಕಳಾಗಲ್ಲ ಎನ್ನಲಾಗಿತ್ತು

ಚೈತ್ರಾ ಅವರು ದಪ್ಪ ಇರುವ ಕಾರಣದಿಂದ ಅವರಿಗೆ ಮಕ್ಕಳಾಗುವುದಿಲ್ಲ ಎಂದು ಆನಂದ್​ ಅವರ ಮನೆಯವರು ಮದುವೆಗೆ ಒಪ್ಪದಿದ್ದರೆ, ಅವರು ಕಲಾವಿದ ಎಂದು ತಮ್ಮ ಮನೆಯಲ್ಲಿ ಮದುವೆಗೆ ಒಪ್ಪದನ್ನು ನೆನೆದು ಚೈತ್ರಾ ಕಣ್ಣೀರು ಹಾಕಿದ್ದರು. ಅವರಿಗೆ ಈಗ ಕ್ಯೂಟ್​ ಮಗ ಹುಟ್ಟಿದ್ದಾನೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ
ಸಂಬಂಧಗಳು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved