MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial: ವೀಕ್ಷಕರ ಊಹೆಗೂ ಮೀರಿದ ಟ್ವಿಸ್ಟ್‌ ಕೊಟ್ಟ ಭೂಮಿ-ಮಲ್ಲಿ! ಅಷ್ಟಕ್ಕೂ ಯಾರ್‌ ರಕ್ತ ಹೇಳಿ?

Amruthadhaare Serial: ವೀಕ್ಷಕರ ಊಹೆಗೂ ಮೀರಿದ ಟ್ವಿಸ್ಟ್‌ ಕೊಟ್ಟ ಭೂಮಿ-ಮಲ್ಲಿ! ಅಷ್ಟಕ್ಕೂ ಯಾರ್‌ ರಕ್ತ ಹೇಳಿ?

ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್‌ ವಿದೇಶಕ್ಕೆ ಹೊರಟಿದ್ದಾನೆ. ಅವನನ್ನು ಏರ್‌ಪೋರ್ಟ್‌ವರೆಗೂ ಬಿಟ್ಟು ಬರೋಕೆ ಭೂಮಿಕಾ ತನ್ನ ಮಗು ಜೊತೆ ಹೊರಟಿದ್ದಳು. ಅಲ್ಲಿ ಅವಳ ದಾರಿ ತಪ್ಪಿಸಿ ಕೊಲೆ ಮಾಡೋದು ಜಯದೇವ್‌, ಶಕುಂತಲಾ ಪ್ಲ್ಯಾನ್‌ ಆಗಿತ್ತು. 

1 Min read
Padmashree Bhat
Published : Sep 01 2025, 10:24 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : zee5

ಪದೇ ಪದೇ ಕಿಡ್ನ್ಯಾಪ್‌ ಮಾಡಿಸೋ ಎಪಿಸೋಡ್‌ ತೋರಸ್ತೀರಾ ಅಂತ ವೀಕ್ಷಕರು ಕೂಡ ಬೇಸರ ಮಾಡಿಕೊಂಡಿದ್ದರು. ಕಿಡ್ನ್ಯಾಪ್‌, ಕೊಲೆ ಬಿಟ್ಟು ಏನಾದರೂ ತೋರಿಸಿ ಅಂತ ಮನವಿ ಮಾಡಿದ್ದರು. ಈಗ ಸೀರಿಯಲ್‌ನಲ್ಲಿ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ.

25
Image Credit : zee5

ಜಯದೇವ್‌, ಶಕುಂತಲಾ ಪ್ಲ್ಯಾನ್‌ನಂತೆ ಭೂಮಿಕಾ ತನ್ನ ಮಗುವಿನ ಜೊತೆ ಕಾರ್‌ನಲ್ಲಿ ಹೊರಟಿದ್ದಾಳೆ. ಅವಳ ಕಾರ್‌ಗೆ ಪಾರ್ಥನೇ ಡ್ರೈವರ್.‌ ಪಾರ್ಥನನ್ನು ರೌಡಿಗಳು ಹೊಡೆದಾಗ ಭೂಮಿಕಾ ಮಗನನ್ನು ಕರೆದುಕೊಂಡು ಕಾಡಿನಲ್ಲಿ ಓಡಿದ್ದಾಳೆ. ಅಲ್ಲಿಗೆ ಪೊಲೀಸರು ಕೂಡ ಬಂದಿದ್ದಾರೆ.

Related Articles

Related image1
Amruthadhaare Serial: ಭೂಮಿಗೆ ಆ ರೀತಿ ಪಟ್ಟ ಕಟ್ಟಿದ ಗೌತಮ್; ಆ ಎಪಿಸೋಡ್‌ ನೋಡಿ ನಿಗಿ ನಿಗಿ ಕೆಂಡವಾದ ವೀಕ್ಷಕರು!
Related image2
Amruthadhaare ಸುಧಾಗೆ ಕಂಕಣಭಾಗ್ಯ: ಭಾವಿ ಪತಿಯ ವಿಶೇಷ ವಿಡಿಯೋ ಶೇರ್‌ ಮಾಡಿದ ನಟಿ ಮೇಘಾ ಶೆಣೈ
35
Image Credit : zee5

ಇನ್ನೊಂದು ಕಡೆ ಮಲ್ಲಿ ಕೂಡ ಬಂದೇ ಬಿಟ್ಟಳು. ಮಲ್ಲಿ, ಭೂಮಿಕಾ ಇಬ್ಬರೂ ಸೇರಿಕೊಂಡು ಜಯದೇವ್‌ ಎರಡನೇ ಪತ್ನಿ ದಿಯಾಳನ್ನು ಕಿಡ್ನ್ಯಾಪ್‌ ಮಾಡಿದ್ದಾರೆ. ಅಲ್ಲಿ ಅವರಿಬ್ಬರು ಕುಹಕ ನಗೆ ಬೀರಿದ್ದಾರೆ. ಇನ್ನೊಂದು ಕಡೆ ನನ್ನ ಮಗು ಎಲ್ಲಿ ಅಂತ ಹುಡುಕಿ ಎಂದು ಭೂಮಿ ಕೂಡ ಪೊಲೀಸರಿಗೆ ಹೇಳಿದ್ದಾಳೆ. ನಿಜಕ್ಕೂ ಭೂಮಿ ಮಗ ಕಳೆದುಹೋಗಿದ್ದು ನಿಜಾನಾ? ಅಥವಾ ಆ ಮಗುವನ್ನು ಮಲ್ಲಿಯೇ ಕರೆದುಕೊಂಡು ಹೋಗಿದ್ದಾಳಾ ಎಂದು ಕಾದು ನೋಡಬೇಕಿದೆ.

45
Image Credit : zee5

ದಿಯಾಳನ್ನು ಕಿಡ್ನ್ಯಾಪ್‌ ಮಾಡಿದ ಬಳಿಕ ಭೂಮಿ ವ್ಯಂಗ್ಯ ನಗೆ ಬೀರಿದ್ದು ನೋಡಿದರೆ, ಆ ಮಗು ಕಿಡ್ನ್ಯಾಪ್‌ ಆಗಿರೋದು ಡೌಟ್‌ ಎನ್ನಬಹುದು. ಈ ಬಾರಿ ಜಯದೇವ್‌ನನ್ನು ಟ್ರ್ಯಾಪ್‌ ಮಾಡಲು ಭೂಮಿ ದೊಡ್ಡ ಪ್ಲ್ಯಾನ್‌ ಮಾಡಿದ್ದಾಳೆ. ಒಟ್ಟಿನಲ್ಲಿ ಮುಂಬರುವ ಎಪಿಸೋಡ್‌ಗಳು ಏನಾಗಲಿವೆ ಎಂದು ಕಾದು ನೋಡಬೇಕಿದೆ.

55
Image Credit : zee5

ಜಯದೇವ್‌ ನಿಜವಾದ ಗುಣ ಏನು ಎಂದು ಈ ಬಾರಿ ಗೌತಮ್‌ ಮುಂದೆ ಭೂಮಿ ಸಾಕ್ಷಿ ಸಮೇತ ಹೇಳಲೂಬಹುದು. ಒಟ್ಟಿನಲ್ಲಿ ಜಯದೇವ್‌, ಶಕುಂತಲಾಗೆ ಈ ಬಾರಿ ದೊಡ್ಡ ಏಟು ಬೀಳಲಿದೆ. ಬಹು ದಿನಗಳಿಂದ ವೀಕ್ಷಕರು ಈ ರೀತಿ ಎಪಿಸೋಡ್‌ಗೋಸ್ಕರ ಕಾಯುತ್ತಲಿದ್ದರು. 

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಜೀ ಕನ್ನಡ
ಅಮೃತಧಾರೆ
ಕನ್ನಡ ಧಾರಾವಾಹಿ
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved