MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial: ಕರ್ಮ ಅಂದ್ರೆ ಇದೇ ಇರಬೇಕು; ಈ ರೀತಿ ಮಾತ್ರ ನೋಡೋಕೆ ಆಗ್ತಿಲ್ಲ ಎಂದ ವೀಕ್ಷಕರು!

Amruthadhaare Serial: ಕರ್ಮ ಅಂದ್ರೆ ಇದೇ ಇರಬೇಕು; ಈ ರೀತಿ ಮಾತ್ರ ನೋಡೋಕೆ ಆಗ್ತಿಲ್ಲ ಎಂದ ವೀಕ್ಷಕರು!

ಅಮೃತಧಾರೆ ಧಾರಾವಾಹಿ ಈಗ ಭರ್ಜರಿ ಟ್ವಿಸ್ಟ್‌ ಇರುವ ಎಪಿಸೋಡ್ ಪ್ರಸಾರ ಆಗ್ತಿದೆ. ಈ ಧಾರಾವಾಹಿಯಲ್ಲಿ ಭೂಮಿಗೆ ಆತ ತಾನೇ ಹುಟ್ಟಿದ ಹೆಣ್ಣು ಮಗಳನ್ನು, ಜಯದೇವ್‌ ಕದ್ದು, ಕಾಡಿನಲ್ಲಿ ಬಿಸಾಕಿದ್ದನು. ಈಗ ಅವನಿಗೆ ಮಗಳು ಸಿಕ್ಕಿದ್ದಾಳೆ. ಆದರೆ ಅವಳೇ ತನ್ನ ಮಗಳು ಎನ್ನೋದು ಅವನಿಗೆ ಅರಿವಾಗಿರಲಿಲ್ಲ. 

1 Min read
Author : Padmashree Bhat
Published : Oct 08 2025, 09:32 PM IST
Share this Photo Gallery
  • FB
  • TW
  • Linkdin
  • Whatsapp
15
ಮಗಳು ಸಿಕ್ಕಿದಳಾ?
Image Credit : zee5

ಮಗಳು ಸಿಕ್ಕಿದಳಾ?

ಮಲತಾಯಿ ಶಕುಂತಲಾಗೆ ಗೌತಮ್‌ ಎಲ್ಲ ಆಸ್ತಿಯನ್ನು ಬರೆದುಕೊಟ್ಟು ಈಗ ಸಾಮಾನ್ಯ ಕ್ಯಾಬ್‌ ಡ್ರೈವರ್‌ ಆಗಿ, ಮಾರುವೇಷ ಹಾಕಿಕೊಂಡು ಕೆಲಸ ಮಾಡುತ್ತಿದ್ದಾನೆ. ಒಮ್ಮೆ ಒಂದು ದಂಪತಿಯನ್ನು ಕ್ಯಾಬ್‌ನಲ್ಲಿ ಬೆಂಗಳೂರು ಏರ್‌ಪೋರ್ಟ್‌ಗೆ ಡ್ರಾಪ್‌ ಮಾಡಬೇಕಿತ್ತು. ಆಗ ಆ ಕಾರ್‌ನಲ್ಲಿ ಮಹಿಳೆ ಒಂದು ಬ್ಯಾಗ್‌ ಬಿಟ್ಟು ಹೋಗಿದ್ದಳು. ಆ ಬ್ಯಾಗ್‌ನ್ನು ಕೊಡಬೇಕು ಅಂತ ಅವನು ಆ ಮನೆಗೆ ಹೋದ. ಅಲ್ಲಿಗೆ ಅವನಿಗೆ ಪುಟ್ಟ ಬಾಲಕಿ ಇರೋದು ಗೊತ್ತಾಗಿತ್ತು.

25
ಅನಾಥಾಶ್ರಮದಲ್ಲಿ ಇರಲು ಒಪ್ಪದ ಮಗು
Image Credit : zee5

ಅನಾಥಾಶ್ರಮದಲ್ಲಿ ಇರಲು ಒಪ್ಪದ ಮಗು

ಪಾಲಕರು ಆ ಮಗುವನ್ನು ಬಿಟ್ಟು ಹೋದರು ಅಂತ ಪೊಲೀಸ್‌ ಠಾಣೆಗೆ ಬಂದು ಮಗುವನ್ನು ಒಪ್ಪಿಸಲು ನೋಡಿದ್ದಾನೆ. ಅಲ್ಲಿನ ಎಲ್ಲ ಕಾನೂನು ಪ್ರಕ್ರಿಯೆ ಮುಗಿಸಿ ಅನಾಥಾಶ್ರಮಕ್ಕೆ ಹೋಗಿದ್ದಾನೆ. ಅಲ್ಲಿ ಆ ಮಗುವನ್ನು ಬಿಡೋದು ಅವನ ಪ್ಲ್ಯಾನ್‌ ಆಗಿತ್ತು. ಆದರೆ ಆ ಮಗು ಮಾತ್ರ ಅಲ್ಲಿ ಇರೋಕೆ ರೆಡಿ ಆಗಲಿಲ್ಲ.

Related Articles

Related image1
Amruthadhaare Serial: ಆ ಸಿನಿಮಾದ ಕ್ಲೈಮ್ಯಾಕ್ಸ್‌ ಥರ ಅಮೃತಧಾರೆಯಲ್ಲೂ ಆಗಲಿದ್ಯಾ? ಸುಳಿವು ಸಿಗ್ತು!
Related image2
Amruthadhaare Serial: ಅಧರ್ಮಿಗಳಿಗೆ ಉಳಿಗಾಲವಿಲ್ಲ; ಶಕುಂತಲಾ, ಜೈಗೆ ಹೀಗ್‌ ಆಗ್ಬೇಕು, ಭೇಷ್‌ ಗೌತಮ್!
35
ಇದಪ್ಪಾ ದುರಂತ ಅಂದರೆ...
Image Credit : Instagram

ಇದಪ್ಪಾ ದುರಂತ ಅಂದರೆ...

ಆ ಮಗು ಗೌತಮ್‌ ಜೊತೆಯೇ ಉಳಿದುಕೊಳ್ತೀನಿ ಎಂದು ಸಂಜ್ಞೆಯಲ್ಲಿ ಹೇಳಿದೆ. ಆ ಮಗುವೇ ಗೌತಮ್‌ ಮಗಳು ಎನ್ನೋ ಥರ ಧಾರಾವಾಹಿ ಪ್ರೋಮೋದಲ್ಲಿ ತೋರಿಸಲಾಗಿದೆ. ದುರಂತ ಎಂದರೆ ಈ ವಿಷಯ ಗೌತಮ್‌ಗಾಗಲೀ, ಆ ಮಗುವಿಗಾಗಲೇ ಗೊತ್ತೇ ಇಲ್ಲ.

45
ಈ ರೀತಿ ನೋಡೋಕೆ ಆಗ್ತಿಲ್ಲ
Image Credit : Instagram

ಈ ರೀತಿ ನೋಡೋಕೆ ಆಗ್ತಿಲ್ಲ

ಬೇರೆ ವಿಧಿ ಇಲ್ಲದೆ ಗೌತಮ್‌ ಆ ಹೆಣ್ಣು ಮಗುವನ್ನು ತನ್ನ ಜೊತೆ ಇಟ್ಟುಕೊಂಡು ಸಾಕಬಹುದು. ನಾಳೆ ಅವಳ ಪಾಲಕರು ಬಂದರೆ ಆ ಮಗುವನ್ನು ಕಳಿಸಿಕೊಡೋಣ ಎಂದುಕೊಂಡಿರಬಹುದು. ಇನ್ನೊಂದು ಕಡೆ ತನ್ನ ಮಗಳು ಎಲ್ಲಿ ಅಂತ ಗೌತಮ್‌ ಹುಡುಕಾಟ ಮಾಡುತ್ತಿದ್ದಾನೆ. ಆಮೇಲೆ ನನ್ನ ಮಗಳು, ಈಗ ನನ್ನ ಜೊತೆಗೆ ಇರುವ ಈ ಮಗಳು ಇಬ್ಬರೂ ಒಂದೇ ಎಂದು ಗೊತ್ತಾಗಬಹುದು. ಆ ಮಗುವಿಗೆ ತಂದೆ-ತಾಯಿ ಇವರೇ ಎನ್ನೋದು ಗೊತ್ತಿಲ್ಲ, ಗೌತಮ್‌ಗೂ ಕೂಡ ಆ ಮಗು ನನ್ನ ಮಗು ಎನ್ನೋದು ಗೊತ್ತಿಲ್ಲ. ಇದು ದುರಂತವೇ ಸರಿ.

55
ಪಾತ್ರಧಾರಿಗಳು
Image Credit : Instagram

ಪಾತ್ರಧಾರಿಗಳು

ಗೌತಮ್‌ ದಿವಾನ್ ಪಾತ್ರದಲ್ಲಿ ರಾಜೇಶ್‌ ನಟರಂಗ, ಭೂಮಿಕಾ‌ ಸದಾಶಿವ ಪಾತ್ರದಲ್ಲಿ ಛಾಯಾ ಸಿಂಗ್‌ ನಟಿಸುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ

Latest Videos
Recommended Stories
Recommended image1
ಇಷ್ಟೊಂದು ಸುಂದರಿಯಾಗಿ ಕಂಡ್ರೆ ಹುಡುಗರ ಕಣ್ಣು ಬೀಳತ್ತೆ ನೋಡಪ್ಪಾ! ಮೋಡಿ ಮಾಡಿದ ನಟ ರಾಘವೇಂದ್ರ
Recommended image2
ನನ್ನನ್ನು Dim ಮಾಡೋಕೆ ಪ್ರಯತ್ನಿಸಿದ್ರು, ನಾನೇ Highlight ಆದೆ... Kavya Gowda ತಿರುಗೇಟು ಕೊಟ್ಟಿದ್ಯಾರಿಗೆ?
Recommended image3
Karna Serial: ಛೇ ಇದೇನಾಗ್ತಿದೆ ಇಲ್ಲಿ? ಕರ್ಣನ ಹೊಗಳಿ ಹೊಗಳಿ, ತನ್ನ ಹಳ್ಳ ತಾನೇ ತೋಡಿಕೊಳ್ತಾಳಾ ನಿಧಿ?
Related Stories
Recommended image1
Amruthadhaare Serial: ಆ ಸಿನಿಮಾದ ಕ್ಲೈಮ್ಯಾಕ್ಸ್‌ ಥರ ಅಮೃತಧಾರೆಯಲ್ಲೂ ಆಗಲಿದ್ಯಾ? ಸುಳಿವು ಸಿಗ್ತು!
Recommended image2
Amruthadhaare Serial: ಅಧರ್ಮಿಗಳಿಗೆ ಉಳಿಗಾಲವಿಲ್ಲ; ಶಕುಂತಲಾ, ಜೈಗೆ ಹೀಗ್‌ ಆಗ್ಬೇಕು, ಭೇಷ್‌ ಗೌತಮ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved