MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial:‌ ಮತ್ತೆ ಅಪಾಯದಲ್ಲಿರೋ ಭೂಮಿಕಾಗೆ ಮಹಾ ಸತ್ಯ ಗೊತ್ತಾಗೋ ಟೈಮ್‌ ಬಂದಾಯ್ತು! ಹಬ್ಬ ಮಾಡ್ರೋ

Amruthadhaare Serial:‌ ಮತ್ತೆ ಅಪಾಯದಲ್ಲಿರೋ ಭೂಮಿಕಾಗೆ ಮಹಾ ಸತ್ಯ ಗೊತ್ತಾಗೋ ಟೈಮ್‌ ಬಂದಾಯ್ತು! ಹಬ್ಬ ಮಾಡ್ರೋ

Amruthadhaare Tv Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್‌ಗೆ 600 ಕೋಟಿ ರೂಪಾಯಿ ಸಾಲವನ್ನು ತೀರಿಸಲು ಈಗ ಗೌತಮ್‌ ಸಹಾಯ ಬೇಕಾಗಿದೆ. ಈಗ ಅವನು ಭೂಮಿಕಾಳನ್ನು ಟಾರ್ಗೆಟ್‌ ಮಾಡಿದ್ದಾನೆ. ಹಾಗಾದರೆ ಮುಂದೆ ಏನಾಗುವುದು? 

1 Min read
Padmashree Bhat
Published : Oct 23 2025, 01:32 PM IST
Share this Photo Gallery
  • FB
  • TW
  • Linkdin
  • Whatsapp
15
600 ಕೋಟಿ ರೂಪಾಯಿ ಸಾಲ ತೀರಿಸಬೇಕು
Image Credit : zee5

600 ಕೋಟಿ ರೂಪಾಯಿ ಸಾಲ ತೀರಿಸಬೇಕು

ಜಯದೇವ್‌, ಶಕುಂತಲಾ ಬಳಿ ಆಸ್ತಿಯಿದ್ದರೂ ಕೂಡ 600 ಕೋಟಿ ರೂಪಾಯಿ ಸಾಲ ಇದೆ. ತನ್ನ ಆಸ್ತಿಯನ್ನು ಮಾತ್ರ ಈ ಸಾಲಕ್ಕೆ ಕೊಡೋದಿಲ್ಲ ಎಂದು ಜಯದೇವ್‌ ಹೇಳಿದ್ದಾನೆ, ಇನ್ನೊಂದು ಕಡೆ ಭೂಮಿಕಾ ಹಾಗೂ ಅವನ ಮಗು ಸಹಿ ಹಾಕಿದರೆ ಮಾತ್ರ ಗೌತಮ್‌ ಆಸ್ತಿಯನ್ನು ಅವರು ಮಾರಾಟ ಮಾಡಬಹುದು.

25
ಭೂಮಿಕಾ, ಮಗ ಕಿಡ್ನ್ಯಾಪ್‌ ಆಗ್ತಾರಾ?
Image Credit : zee5

ಭೂಮಿಕಾ, ಮಗ ಕಿಡ್ನ್ಯಾಪ್‌ ಆಗ್ತಾರಾ?

ಐದು ವರ್ಷಗಳಿಂದ ಗೌತಮ್‌ ಎಲ್ಲಿದ್ದಾನೆ ಎಂದು ಹುಡುಕಿದರೂ ಕೂಡ ಸಿಕ್ಕಿರಲಿಲ್ಲ, ಆನಂದ್‌ ಕೂಡ ಸುಳಿವು ಕೊಟ್ಟಿರಲಿಲ್ಲ. ಈಗ ಗೌತಮ್‌ ಫೋನ್‌ ಸ್ವಿಚ್‌ ಆನ್‌ ಆಗಿದೆ. ಭೂಮಿಕಾ ಹಾಗೂ ಮಗುವನ್ನು ನಾವು ಕರೆದುಕೊಂಡು ಬಂದ್ರೆ, ಗೌತಮ್ ಬಂದೇ ಬರುತ್ತಾನೆ ಎಂದು ಜಯದೇವ್‌ ಪ್ಲ್ಯಾನ್‌ ಮಾಡಿದ್ದಾನೆ.

Related Articles

Related image1
Amruthadhaare Serial: ಭೂಮಿಕಾ ವಿರುದ್ಧವೇ ತಿರುಗಿಬಿದ್ದ ಗೌತಮ್‌; ಇದೆಲ್ಲ ದತ್ತುಪುತ್ರಿಯ ಅವಾಂತರ!
Related image2
Amruthadhaare ಭೂಮಿಕಾಗೆ ಉಪ್ಪಿ ಕಡೆಯಿಂದ ಸಿಕ್ಕಿತು ಗ್ರೀನ್​ ಸಿಗ್ನಲ್! ದಶಕಗಳ ಕನಸು ನನಸು- ಕುಣಿದಾಡಿದ ನಟಿ
35
ಲಕ್ಷ್ಮೀಕಾಂತ್‌ಗೆ ಪ್ಲ್ಯಾನ್‌ ಗೊತ್ತಾಯ್ತು
Image Credit : zee5

ಲಕ್ಷ್ಮೀಕಾಂತ್‌ಗೆ ಪ್ಲ್ಯಾನ್‌ ಗೊತ್ತಾಯ್ತು

ಜಯದೇವ್‌ ಪ್ಲ್ಯಾನ್‌ ಈಗ ಲಕ್ಷ್ಮೀಕಾಂತ್‌ ಮಾವನಿಗೆ ಗೊತ್ತಾಗಿದೆ. ಅವನು ಈ ವಿಷಯವನ್ನು ಹೇಗಾದರೂ ಮಾಡಿ ಗೌತಮ್‌ಗೆ ತಿಳಿಸಬೇಕು ಎಂದುಕೊಂಡಿದ್ದಾನೆ. ಹಾಗಾದರೆ ಭೂಮಿಕಾ ಹಾಗೂ ಅವನ ಮಗ ಸೇಫ್‌ ಆಗ್ತಾರಾ ಎಂಬ ಪ್ರಶ್ನೆ ಎದುರಾಗಿದೆ.

45
ಭೂಮಿಗೆ ಸತ್ಯ ಗೊತ್ತಾಗತ್ತಾ?
Image Credit : zee5

ಭೂಮಿಗೆ ಸತ್ಯ ಗೊತ್ತಾಗತ್ತಾ?

ಇನ್ನೊಂದು ಕಡೆ ಗೌತಮ್‌ ಜೊತೆಗಿರುವ ಆ ಮಗು, ಮಿಂಚು ಅಸಲಿಗೆ ಯಾರದ್ದು ಎನ್ನುವ ಪ್ರಶ್ನೆ ಕೂಡ ಎದುರಾಗಿದೆ. ಭೂಮಿ ಈ ಪ್ರಶ್ನೆಗೆ ಉತ್ತರ ಸಿಗದೆ ಒದ್ದಾಡುತ್ತಿದ್ದಾಳೆ. ಆಗ ಕಾವೇರಿ ಬಂದು “ನನಗೆ ಈ ಪ್ರಶ್ನೆಗೆ ಉತ್ತರ ಗೊತ್ತು” ಎಂದು ಹೇಳಿದ್ದಾಳೆ. ಹಾಗಾದರೆ ಗೌತಮ್‌, ದತ್ತು ತಗೊಂಡಿದ್ದಾನೆ ಎಂದು ಹೇಳುತ್ತಾಳೋ ಅಥವಾ ಅವಳಿಗೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಸಿಕ್ಕ ಮಗು ಎಂದು ಹೇಳುತ್ತಾಳೋ ಎಂದು ಕಾದು ನೋಡಬೇಕಿದೆ.

55
ಮುಂದೆ ಏನಾಗುವುದು?
Image Credit : zee5

ಮುಂದೆ ಏನಾಗುವುದು?

ಮಗ ಆಕಾಶ್‌, ಮಿಂಚುಳಿಂದ ಗೌತಮ್‌ ಹಾಗೂ ಭೂಮಿಕಾ ಹತ್ತಿರ ಆಗುವ ಸಾಧ್ಯತೆ ಜಾಸ್ತಿ ಇದೆ. ಇನ್ನೊಂದು ಕಡೆ ಜಯದೇವ್‌, ಶಕುಂತಲಾಳ ದುಷ್ಟತನಕ್ಕೆ ಭೂಮಿಕಾ ಹಾಗೂ ಗೌತಮ್‌ ಬಲಿ ಆಗ್ತಾರಾ ಎಂದು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಮುಂಬರುವ ಎಪಿಸೋಡ್‌ಗಳು ಭಾರೀ ಕುತೂಹಲದಿಂದ ಕೂಡಿವೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved