MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ನೀಲಿ ಡ್ರೆಸ್‌ ತೊಟ್ಟು ಕವಿತೆ ಬರೆದ Anushree: ಆ್ಯಂಕರಿಂಗ್ ಬಿಟ್ಟು ಕವಿಯಾಗ್ರಿ ಎಂದ ಫ್ಯಾನ್ಸ್‌!

ನೀಲಿ ಡ್ರೆಸ್‌ ತೊಟ್ಟು ಕವಿತೆ ಬರೆದ Anushree: ಆ್ಯಂಕರಿಂಗ್ ಬಿಟ್ಟು ಕವಿಯಾಗ್ರಿ ಎಂದ ಫ್ಯಾನ್ಸ್‌!

ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇವರು ಜೀ ಕನ್ನಡದ ಫೇಮಸ್ ನಿರೂಪಕಿ. ಹಲವು ವರ್ಷಗಳಿಂದ ಜೀ ಕನ್ನಡದಲ್ಲಿ ನಿರೂಪಣೆ ಮಾಡ್ತಾ ಇದ್ದಾರೆ. ಇದೀಗ ಅನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ.

1 Min read
Govindaraj S
Published : Oct 13 2023, 01:30 AM IST
Share this Photo Gallery
  • FB
  • TW
  • Linkdin
  • Whatsapp
17

ಚಂದನವನದ ಬ್ಯೂಟಿ, ನಾಟಿ ಅನುಶ್ರೀ ಅವರು ಸದ್ಯ ಕಿರುತೆರೆ ರಿಯಾಲಿಟಿ ಶೋನ ನಿರೂಪಣೆಯ ಮೂಲಕ ಅಭಿಮಾನಿಗಳನ್ನ ಹೆಚ್ಚೆಚ್ಚು ಗಮನ ಸೆಳೆಯುತ್ತಿದ್ದಾರೆ. ಸ್ಟಾರ್ ನಟರ ಸಿನಿಮಾ ಕಾರ್ಯಕ್ರಮಗಳಿಗೆ ಇವರ ನಿರೂಪಣೆನೇ ಬೇಕು ಎಂಬಷ್ಟರ ಮಟ್ಟಿಗೆ ಡಿಮ್ಯಾಂಡ್ ಕ್ರಿಯೆಟ್ ಮಾಡಿದ್ದಾರೆ.

27

ಅನುಶ್ರೀ ನೀಲಿ ಬಣ್ಣದ ಡ್ರೆಸ್‌ ತೊಟ್ಟು ವಿವಿಧ ಭಂಗಿಗಳಲ್ಲಿ ಕ್ಯಾಮೆರಾಗೆ ಭರ್ಜರಿ ಪೋಸ್ ನೀಡಿದ್ದಾರೆ. ಜೊತೆಗೆ 'ನೀಲಿ ನಿಲುವು ನನ್ನ ಒಲವು' ಹೆಂಗೆ ಕವಿತೆ ಎಂದು ಬರೆದುಕೊಂಡಿದ್ದಾರೆ.

37

ಅನುಶ್ರೀ ನೋಡಿದ ನೆಟ್ಟಿಗರು ಸಹ ಪೈಪೋಟಿಗೆ ಬಿದ್ದವರಂತೆ, 'ಚಂದಕಿಂತ ಚಂದ ನೀನೇ ಸುಂದರ', 'ಪುಟಾಣಿ ನೀಲಿ ಹಕ್ಕಿ ನೀಲಾಕಾಶವಾಗಿದೆ ರೆಕ್ಕೆ ಬಿಚ್ಚಿ', 'ನೀಲಿ ನಿಲುವು ನಿಮ್ಮ ಒಲವು ನಮ್ಮ ಕುಡ್ಲದ ಚೆಲುವು ಸಾಗಲಿ ಹೀಗೆ ಸಾಗರದಾಚೆ ನಿಮ್ಮ ಗೆಲುವು', 'ನೀವ್ ಬಿಡ್ರಿ ಸಾಹುಕಾರ ಮಂದಿ', 'ಆ್ಯಂಕರಿಂಗ್ ಬಿಟ್ಟು ಕವಿಯಾಗ್ರಿ' ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ. 

47

ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು 'ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು.

57

ಈ ಟಿವಿ ಕನ್ನಡ ವಾಹಿನಿಯ 'ಡಿಮಾಂಡಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು. ನಂತರ 'ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.

67

ಜೀ ಕನ್ನಡದ 'ಸರಿಗಮಪ' ರಿಯಾಲಿಟಿ ಶೋ ಕಾರ್ಯಕ್ರಮದ ಹಲವು ಸೀಸನ್‌ಗಳನ್ನು ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ. ಆಗಾಗ ಪ್ರವಾಸಗಳಿಗೆ ಹೋಗ್ತಾ ಇರ್ತಾರೆ. ಯೂಟ್ಯೂಬ್ ಚಾನೆಲ್ ಸಹ ನಡೆಸುತ್ತಾರೆ.

77

ಜೀ ಕನ್ನಡದ 'ಸರಿಗಮಪ' ರಿಯಾಲಿಟಿ ಶೋ ಕಾರ್ಯಕ್ರಮದ ಹಲವು ಸೀಸನ್‌ಗಳನ್ನು ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ. ಆಗಾಗ ಪ್ರವಾಸಗಳಿಗೆ ಹೋಗ್ತಾ ಇರ್ತಾರೆ. ಯೂಟ್ಯೂಬ್ ಚಾನೆಲ್ ಸಹ ನಡೆಸುತ್ತಾರೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಆಂಕರ್ ಅನುಶ್ರೀ
ಸ್ಯಾಂಡಲ್‌ವುಡ್
ಸಾಮಾಜಿಕ ಮಾಧ್ಯಮ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved