MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಬೆಂಗಳೂರಿನಲ್ಲಿ ಮದುವೆ ಮನೆ ಸೃಷ್ಟಿ; Just Married ಎಂದ ಶೈನ್‌ ಶೆಟ್ಟಿ, ಅಂಕಿತಾ ಅಮರ್‌ಗೆ ಶುಭವಾಗಲಿ!

ಬೆಂಗಳೂರಿನಲ್ಲಿ ಮದುವೆ ಮನೆ ಸೃಷ್ಟಿ; Just Married ಎಂದ ಶೈನ್‌ ಶೆಟ್ಟಿ, ಅಂಕಿತಾ ಅಮರ್‌ಗೆ ಶುಭವಾಗಲಿ!

ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತಾ ಅಮರ್ ನಟಿಸಿರುವ ʼಜಸ್ಟ್ ಮ್ಯಾರೀಡ್‌ʼ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.

2 Min read
Padmashree Bhat
Published : Aug 13 2025, 06:14 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ ಆರ್ ಬಾಬಿ ನಿರ್ದೇಶನದ ಸಿನಿಮಾವಿದು. ನಟ ರಿಷಬ್ ಶೆಟ್ಟಿ ಅವರು ಆನ್‌ಲೈನ್ ಮೂಲಕ ಟ್ರೇಲರ್ ರಿಲೀಸ್‌ ಮಾಡಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮದುವೆ ಮನೆ ವಾತಾವರಣ ನಿರ್ಮಾಣವಾಗಿತ್ತು. ಮುಂಭಾಗಲಿನಲ್ಲೇ ಮಂಗಳದ್ರವ್ಯಗಳನ್ನು ನೀಡಿ ಮುತ್ತಿನ ಹಾರ ಹಾಕಿ ಬಂದ ಅತಿಥಿಗಳನ್ನು ಸ್ವಾಗತಿಸಲಾಯಿತು. ಹೆಣ್ಣುಮಕ್ಕಳು ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದದ್ದು ಅಲ್ಲಿ ಕಂಡು ಬಂತು. ಚಿತ್ರತಂಡದರು ಮದುವೆಗೆ ಹೋಗುವಾಗ‌‌ ಸಿದ್ದವಾಗುವ ಹಾಗೆ ʼಜಸ್ಟ್ ಮ್ಯಾರೀಡ್ʼ ಟ್ರೇಲರ್ ಬಿಡುಗಡೆ ಸಮಾರಂಭಕ್ಕೂ ಬಂದಿದ್ದು ವಿಶೇಷವಾಗಿತ್ತು.

25
Image Credit : Asianet News

“ಸಿಆರ್ ಬಾಬಿ ಅವರಿಗೆ ಸಿನಿಮಾ ನಿರ್ದೇಶನ ಮಾಡಬೇಕೆಂಬ ಆಸೆ ಇತ್ತು. ನಾನು ಕೂಡ ಸಿನಿಮಾ ನಿರ್ದೇಶನ ಮಾಡಿ ಅಂತ ಹೇಳುತ್ತಿದ್ದೆ. ಆದರೆ ಈಗ ಕಾಲ ಕೂಡಿ ಬಂದಿದೆ. ಸಿನಿಮಾ ಆರಂಭವಾದ ದಿನದಿಂದಲೂ ನನಗೆ ಚಿತ್ರತಂಡ ನೀಡುತ್ತಿರುವ ಸಹಕಾರ ಅಪಾರ. ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ವಿಕೆ ಫಿಲಂಸ್ ಮೂಲಕ ನಮ್ಮ ಸಿನಿಮಾವನ್ನು ವಿತರಣೆ ಮಾಡುತ್ತಿದ್ದಾರೆ. ಆಗಸ್ಟ್ 22 ರಂದು ನಮ್ಮ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆʼ ಎಂದು ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ತಿಳಿಸಿದರು.

Related Articles

Related image1
ಶೈನ್‌ ಶೆಟ್ಟಿ, ಅಂಕಿತಾ ಅಮರ್‌ 'Just Married'‌ ಸಿನಿಮಾ ರಿಲೀಸ್‌ ದಿನಾಂಕ ರಿವೀಲ್
Related image2
Coolie Movie Review: ರಜನಿಕಾಂತ್‌ 'ಕೂಲಿ' ಸಿನಿಮಾ ನೋಡಿದವ್ರು ಏನಂದ್ರು? ಹೇಗಿದೆ 'ತಲೈವಾ' ಅಬ್ಬರ?
35
Image Credit : Asianet News

“ನಿರ್ದೇಶಕರು ನನ್ನ ಪಾತ್ರವನ್ನು ಗೌಪ್ಯವಾಗಿಟ್ಟಿದ್ದಾರೆ. ಹಾಗಾಗಿ ಪಾತ್ರದ ಬಗ್ಗೆ ಹೇಳುವ ಹಾಗಿಲ್ಲ. ಆದರೆ ಶೂಟಿಂಗ್ ಅನುಭವ ಹೇಳಬಹುದು. ಖಂಡಿತವಾಗಿಯೂ ಇದು ಸಿ‌ ಆರ್ ಬಾಬಿ ಅವರ ಮೊದಲ ನಿರ್ದೇಶನದ ಸಿನಿಮಾ ಅಂತ ಹೇಳಲು ಸಾಧ್ಯವಿಲ್ಲ. ಅನುಭವಿ ನಿರ್ದೇಶಕರ ಹಾಗೆ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ. ಹೀಗಾಗಿ ಮಹಿಳೆಯೊಬ್ಬರಿಗೆ ನಿರ್ದೇಶನ ನೀಡಲು ಅವಕಾಶ ನೀಡಿದ ಅಜನೀಶ್ ಲೋಕನಾಥ್ ಅವರಿಗೆ ಅಭಿನಂದನೆ ತಿಳಿಸುತ್ತೇನೆ” ಎಂದರು ನಟಿ ಮಾಳವಿಕ ಅವಿನಾಶ್.

45
Image Credit : Asianet News

ಆಗಷ್ಟೇ ಕಾಂತಾರ ಸಿನಿಮಾ ಬಿಡುಗಡೆಯಾಗಿತ್ತು. ಆ ಸಮಯದಲ್ಲಿ ಅಜನೀಶ್ ನನಗೆ ಫೋನ್‌ ಮಾಡಿ ನಾನೊಂದು ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ನೀವು ನಾಯಕನಾಗಿ ನಟಿಸಬೇಕು ಎಂದರು. ಆನಂತರ ಸಿ‌ ಆರ್ ಬಾಬಿ, ಅಜನೀಶ್ ಅವರು ಈ ಚಿತ್ರದ ಕಥೆ ಹೇಳುತ್ತಾರೆ. ನನಗಂತೂ ಕಥೆ ಬಹಳ ಇಷ್ಟವಾಯ್ತು. ನಂತರ ಶೂಟಿಂಗ್ ಪ್ರಾರಂಭವಾಗುತ್ತದೆ‌” ಎಂದರು ನಾಯಕ ಶೈನ್ ಶೆಟ್ಟಿ.

55
Image Credit : Asianet News

“ನಾನು ಈ ಸಿನಿಮಾ ಜರ್ನಿಯ ಮೂರು ಅಂಶಗಳ ಬಗ್ಗೆ ಮಾತನಾಡುತ್ತೇನೆ. ಅದು ಕನಸು, ಕೆಲಸ ಹಾಗೂ ಕಥೆ. ಚಿಕ್ಕಂದಿನಿಂದಲೂ ನನಗೆ ನಟನೆಯಲ್ಲಿ ಆಸಕ್ತಿ. ಟಿವಿ ಅಥವಾ ದೊಡ್ಡ ಪರದೆಯಲ್ಲಿ ತಾರೆಯರನ್ನು ನೋಡಿದಾಗ ಇವರೆಲ್ಲಾ ಇಷ್ಟು ಚೆನ್ನಾಗಿ ಹೇಗೆ ಅಭಿನಯಿಸುತ್ತಾರೆ. ಹೀಗೆ, ಸಾಕಷ್ಟು ಪ್ರಶ್ನೆಗಳು ಮೂಡುತ್ತಿದ್ದವು. ಇದು ನನ್ನ ಎರಡನೇ ಚಿತ್ರ. ಎರಡನೇ ಚಿತ್ರದಲ್ಲೇ ಇಂತಹ ಮಹಾನ್ ತಾರೆಗಳ ಜೊತೆಗೆ ನಟಿಸುವ ಅವಕಾಶ ಒದಗಿ ಬಂತು‌. ಈ ಅವಕಾಶ ನೀಡಿದ ಸಿ.ಆರ್ ಬಾಬಿ ಹಾಗೂ ಅಜನೀಶ್ ಅವರಿಗೆ ಅನಂತ ಧನ್ಯವಾದ” ಎಂದರು ಅಂಕಿತಾ ಅಮರ್.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಸಿನಿಮಾ
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್

Latest Videos
Recommended Stories
Recommended image1
Gowri Shankara: ಬಿಗ್ ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಖಡಕ್ ಡಿಸಿ ಆಗಿ ಎಂಟ್ರಿ ಕೊಟ್ಟ ಅಶ್ವಿನಿ
Recommended image2
‘ರಾಜಕುಮಾರಿ’ ಧಾರಾವಾಹಿ ನಟಿ ಗಗನ ಭಾರಿ ನಟನೆಯ ಕುರಿತು ವೀಕ್ಷಕರ ಅಸಮಾಧಾನ
Recommended image3
ದೊಡ್ಮನೆ ಮೂಲ ನಿಯಮ ಉಲ್ಲಂಘಿಸಿದ ಕ್ಯಾಪ್ಟನ್‌ ಕಾವ್ಯಾ ಕುಟುಂಬ, ಎಚ್ಚರಿಕೆ ನೀಡಿ ಹೊರಕಳಿಸಿದ್ರಾ ಬಿಗ್‌ಬಾಸ್‌ ?
Related Stories
Recommended image1
ಶೈನ್‌ ಶೆಟ್ಟಿ, ಅಂಕಿತಾ ಅಮರ್‌ 'Just Married'‌ ಸಿನಿಮಾ ರಿಲೀಸ್‌ ದಿನಾಂಕ ರಿವೀಲ್
Recommended image2
Coolie Movie Review: ರಜನಿಕಾಂತ್‌ 'ಕೂಲಿ' ಸಿನಿಮಾ ನೋಡಿದವ್ರು ಏನಂದ್ರು? ಹೇಗಿದೆ 'ತಲೈವಾ' ಅಬ್ಬರ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved