- Home
- Entertainment
- TV Talk
- Annayya Serial: ಮತ್ತೊಮ್ಮೆ ನಡೆಯಿತು ಮಾಕಾಳವ್ವನ ಪವಾಡ… ವೀಕ್ಷಕರು ಕಾಯುತ್ತಿದ್ದ ಆ ಗಳಿಗೆ ಬಂದೇ ಬಿಡ್ತು!
Annayya Serial: ಮತ್ತೊಮ್ಮೆ ನಡೆಯಿತು ಮಾಕಾಳವ್ವನ ಪವಾಡ… ವೀಕ್ಷಕರು ಕಾಯುತ್ತಿದ್ದ ಆ ಗಳಿಗೆ ಬಂದೇ ಬಿಡ್ತು!
Annayya Serial: ಅಣ್ಣಯ್ಯ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಇಲ್ಲಿವರೆಗೆ ವೀಕ್ಷಕರು ಅಮ್ಮ -ಮಗ ಯಾವಾಗ ಒಂದಾಗೋದು ಎಂದು ಕಾಯುತ್ತಿದ್ದರು. ಇದೀಗ ಆ ಗಳಿಗೆ ಬಂದೇ ಬಿಟ್ಟಿದೆ. ಮಾಕಾಳವ್ವನ ಪವಾಡದಿಂದ ಮಗನೇ ಅಮ್ಮನನ್ನು ಮನೆಗೆ ಕರೆದುಕೊಂಡು ಬಂದಿದ್ದಾನೆ.

ಅಣ್ಣಯ್ಯ ಧಾರಾವಾಹಿ
ಜೀ ಕನ್ನಡದಲ್ಲಿ ಪ್ರಸಾರವಾಗುವ ಅಣ್ಣಯ್ಯ ಧಾರಾವಾಹಿ ದಿನಕ್ಕೊಂದು ಟ್ವಿಸ್ಟ್ ಟರ್ನ್ ಗಳನ್ನು ನೀಡುತ್ತಾ ವೀಕ್ಷಕರಿಗೆ ಪ್ರತಿದಿನವೂ ಮನರಂಜನೆಯನ್ನು ಉಣಬಡಿಸುತ್ತಾ ಬರುತ್ತಿದೆ. ಇದೀಗ ವೀಕ್ಷಕರು ಹಲವು ತಿಂಗಳುಗಳಿಂದ ಕಾಯುತ್ತಿದ್ದ ಆ ಅಮೃತ ಗಳಿಗೆ ಬಂದೇ ಬಿಟ್ಟಿದೆ.
ಏನಾಗ್ತಿದೆ ಕಥೆ?
ರಶ್ಮಿಗೆ ತೊಂದರೆ ನೀಡುವ ಮಗ ಸೀನಾಗೆ ಪಿಂಕಿ ಜೊತೆ ಮದುವೆ ಮಾಡಲು ತುದಿಗಾಲಲ್ಲಿ ನಿಂತಿರುವ ಲೀಲಾಗೆ, ಪ್ರತಿದಿನ ಶಾರದಮ್ಮ ಸೀರೆಯಲ್ಲಿ ಮುಖ ಮುಚ್ಚಿ ಸರಿಯಾಗಿ ಹೊಡೆಯುತ್ತಿದ್ದರು. ಲೀಲಾ ಇಷ್ಟು ದಿನ ಅದನ್ನ ಕೊಳ್ಳಿ ದೆವ್ವ ಎಂದುಕೊಂಡಿದ್ದಳು. ಇದೀಗ ಅದಕ್ಕೆಲ್ಲಾ ಕಾರಣ ಶಾರದಮ್ಮನೇ ಅನ್ನೋದು ಗೊತ್ತಾಗಿದೆ.
ಮನೆಯಿಂದ ಹೊರಹಾಕಿದ ಲೀಲಾ
ತನ್ನ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದುಕೊಂಡು, ನನಗೆ ಗೊತ್ತಾಗದೇ ಹೊಡೆಯುತ್ತಿರುವ ಶಾರದಮ್ಮನ ಮೇಲೆ ಕೋಪದಿಂದ ಲೀಲಾ ರಾತ್ರೋ ರಾತ್ರಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾಳೆ. ನಡು ರಾತ್ರಿಯಲ್ಲಿ ಎಲ್ಲಿ ಹೋಗಬೇಕೆಂದು ಅರಿಯದ ಶಾರದಮ್ಮ ಮಾಕಾಳವ್ವನೇ ಕಾಪಾಡಬೇಕೆಂದು ಬೇಡಿಕೊಳ್ಳುತ್ತಾಳೆ.
ಮಾಕಾಳವ್ವನನ್ನೇ ಪ್ರಶ್ನೆ ಮಾಡಿದ ಶಾರದಮ್ಮ
ಕಣ್ಣೀರಿಡುತ್ತಾ ಶಾರದಮ್ಮ ಮಾಕಾಳವ್ವನನ್ನೇ ಪ್ರಶ್ನೆ ಮಾಡಿ ನಗ್ತಿದ್ಯಾ ತಾಯಿ, ನನ್ನ ಗೂಡನ್ನು ನಾನು ಸೇರಿಕೊಳ್ಳಬೇಕು ಎಂದು ಬಂದಾಗ, ನನ್ನನ್ನೇ ಮನೆಯಿಂದ ಹೊರ ಹಾಕ್ತ್ಯಾ ಎನ್ನುತ್ತಾಳೆ. ಅಷ್ಟರಲ್ಲಿ ಮಾಕಾಳವ್ವನ ಸೈನ್ಯ ಶಾರದಮ್ಮನ ಪ್ರಶ್ನೆಗೆ ಉತ್ತರವಾಗಿ ಎದುರು ಬರುತ್ತಾರೆ.
ಶಾರದಮ್ಮನಿಗೆ ಜೊತೆಯಾದ ಶಿವು
ಕಗ್ಗತ್ತಲ ರಾತ್ರಿಯಲ್ಲಿ ಮಳೆ ಬರುತ್ತಿರುವಾಗ ಹೆಂಗಸೊಬ್ಬಳ ಬಳಿ ನಾಲ್ಕು ಜನ ಮುಸುಕುದಾರಿಗಳನ್ನು ನೋಡಿ ಶಿವು, ಅವರನ್ನು ಹೊಡೆದೋಡಿಸಿ, ಶಾರದಮ್ಮನನ್ನು ರಕ್ಷಿಸಲು ಮುಂದಾಗುತ್ತಾನೆ. ಆದರೆ ಯಾರೂ ಕೂಡ ಅವನ ಕೈಗೆ ಸಿಗೋದೆ ಇಲ್ಲ. ಕೊನೆಗೆ ಜೀವ ಕೊಟ್ಟಾದರೂ ನಿಮ್ಮನ್ನ ರಕ್ಷಿಸುತ್ತೇನೆ ಎನ್ನುತ್ತಾ, ತನ್ನ ಮನೆಗೆ ಕರೆದುಕೊಂಡು ಹೋಗುತ್ತಾನೆ.
ಬಲಗಾಲಿಟ್ಟು ಮನೆ ಪ್ರವೇಶಿಸಿದ ಶಾರದಮ್ಮ
ತಾನು ಕೈಹಿಡಿದು ತನ್ನ ಮನೆಗೆ ಕರೆದುಕೊಂಡು ಬಂದಿರೋದು ತನ್ನ ಅಮ್ಮ ಅನ್ನೋದು ಗೊತ್ತಿರದ ಶಿವು, ಮನೆಯೊಳಗೆ ಕಾಲಿಟ್ಟ ನಂತರ ಬೆಳಕಲ್ಲಿ ಅಮ್ಮನನ್ನು ನೋಡಿ ಶಾಕ್ ಆಗುತ್ತಾನೆ, ಜೊತೆಗೆ ಮನೆ ಮಂದಿ ಕೂಡ ಈ ದೃಶ್ಯವನ್ನು ನೋಡಿ ಅಚ್ಚರಿಗೊಳ್ಳುತ್ತಾರೆ.
ಶಿವು ಒಪ್ಪಿಕೊಳ್ಳುತ್ತಾನ?
ಇಲ್ಲಿವರೆಗೂ ಅಮ್ಮ ಅಂದರೇನೆ ದ್ವೇಷದ ಕಿಡಿ ಕಾರುತ್ತಿದ್ದ ಶಿವು, ಈವಾಗಲಾದರೂ ಅಮ್ಮನನ್ನು ಒಪ್ಪಿಕೊಳ್ಳುತ್ತಾನ? ವೀರಭದ್ರನ ನಿಜವಾದ ಮುಖವನ್ನು ಅರ್ಥಮಾಡಿಕೊಳ್ಳುತ್ತಾನ? ಅಥವಾ ಮತ್ತೆ ಅಮ್ಮನನ್ನು ಈ ಮನೆಯಿಂದ ಹೊರಹಾಕುತ್ತಾನ? ಏನಾಗುತ್ತೆ ಅನ್ನೋದನ್ನು ಕಾದು ನೋಡಬೇಕು.
ಮೈ ಜುಂ ಅಂತು ಎಂದ ವೀಕ್ಷಕರು
ಮಾಂಕಾಳವ್ವನ ಪವಾಡದ ಈ ಅಣ್ಣಯ್ಯ ಪ್ರೊಮೊ ನೋಡಿ ವೀಕ್ಷಕರು ಖುಷಿ ಪಟ್ಟಿದ್ದಾರೆ. ಹೀಗೂ ಪವಾಡ ನಡೆಯುವುದನ್ನು ನೋಡಿ ಮೈ ಜುಂ ಅಂತು ಎಂದಿದ್ದಾರೆ ವೀಕ್ಷಕರು. ಅಷ್ಟೇ ಅಲ್ಲದೇ ಕೊನೆಗೂ ತಾವು ಕಾಯುತ್ತಿದ್ದ ಗಳಿಗೆ ಬಂದೇ ಬಿಟ್ಟಿತು ಎಂದು ಖುಷಿ ಪಟ್ಟಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

