MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಹೆಸರು ಬದಲಿಸಿಕೊಂಡ 'ಅಂತರಪಟ' ನಟಿ ತನ್ವಿ: ದಿಢೀರ್​ ಏಕೀ ನಿರ್ಧಾರ? ನಟಿ ಹೇಳಿದ್ದೇನು?

ಹೆಸರು ಬದಲಿಸಿಕೊಂಡ 'ಅಂತರಪಟ' ನಟಿ ತನ್ವಿ: ದಿಢೀರ್​ ಏಕೀ ನಿರ್ಧಾರ? ನಟಿ ಹೇಳಿದ್ದೇನು?

'ಅಂತರಪಟ' ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟಿ ತನ್ವಿಯಾ ಬಾಲರಾಜ್ ತಮ್ಮ ಹೆಸರನ್ನು ರಾಧ್ಯಾ ರಾಜ್ ಎಂದು ಬದಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡ ಅವರು, ವಿಶೇಷ ಕಾರಣಗಳಿಂದ ಈ ನಿರ್ಧಾರ ಕೈಗೊಂಡಿದ್ದು, ತಮ್ಮ ಹೊಸ ಪಯಣಕ್ಕೆ ಎಲ್ಲರ ಬೆಂಬಲ ಕೋರಿದ್ದಾರೆ.

1 Min read
Author : Suchethana D
Published : Jan 25 2026, 12:56 PM IST
Share this Photo Gallery
  • FB
  • TW
  • Linkdin
  • Whatsapp
16
ಅಂತರಪಟದಿಂದ ಹೃದಯ ಕದ್ದ ನಟಿ
Image Credit : Social Media

ಅಂತರಪಟದಿಂದ ಹೃದಯ ಕದ್ದ ನಟಿ

ಕಲರ್ಸ್​ ಕನ್ನಡದಲ್ಲಿ ಪ್ರಸಾರ ಆಗ್ತಿದ್ದ ಅಂತರಪಟ ಸೀರಿಯಲ್​ನ ಆರಾಧನಾ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದು ಬೀಗಿದವರು ನಟಿ ತನ್ವಿಯಾ ಬಾಲರಾಜ್​. ಅವರನ್ನು ತನ್ವಿ ಬಾಲರಾಜ್​ ಎಂದೇ ಹಲವರು ಕರೆಯುವುದು ಉಂಟು. ಈ ಸೀರಿಯಲ್​ನಲ್ಲಿ ಸ್ವಾಭಿಮಾನಿ ಮಗಳ ಪಾತ್ರದಲ್ಲಿ ಕಾಣಿಸಿಕೊಂಡು ಎಲ್ಲರ ಹೃದಯ ಗೆದ್ದವರು ನಟಿ ತನ್ವಿಯಾ.

26
ಹೆಸರು ಬದಲಾವಣೆ
Image Credit : Social Media

ಹೆಸರು ಬದಲಾವಣೆ

ಇದೀಗ ಅವರು, ತಮ್ಮ ಹೆಸರನ್ನೇ ಬದಲಿಸಿಕೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಇದೀಗ ಅವರು ತಮ್ಮ ಹೆಸರನ್ನು ರಾಧ್ಯಾ ರಾಜ್​ ಎಂದು ಬದಲಿಸಿಕೊಂಡಿದ್ದು, ಈ ಬಗ್ಗೆ ಪೋಸ್ಟ್​ ಹಾಕುವ ಮೂಲಕ ಇನ್ನು ಮುಂದೆ ತಮ್ಮನ್ನು ರಾಧ್ಯಾ ರಾಜ್​ ಎಂಬ ಹೆಸರಿನಲ್ಲಿ ಕರೆಯುವಂತೆ ಕೋರಿಕೊಂಡಿದ್ದಾರೆ.

Related Articles

Related image1
ಚಿನ್ನದ ಸರವನ್ನು ನಂಗೇ ಕೊಟ್ಟಿದ್ದು ಅಂದ್ಕೊಂಡುಬಿಟ್ಟಿದ್ದೆ, ಆದ್ರೆ ಆಗಿದ್ದೇ ಬೇರೆ: ಗಿಲ್ಲಿ ನಟನ ಬೇಸರ ನುಡಿ
Related image2
ದುಡ್ಡಿಲ್ಲದೇ ಹೂವು ಮಾರ್ತಿದ್ದೆ: ಬಡತನದ ದಿನ ನೆನೆದು ವೇದಿಕೆ ಮೇಲೆ ಬಿಕ್ಕಿಬಿಕ್ಕಿ ಅತ್ತ Bhargavi LLB
36
ನಟಿ ಹೇಳಿದ್ದೇನು?
Image Credit : Social Media

ನಟಿ ಹೇಳಿದ್ದೇನು?

ನನ್ನ ಪ್ರೀತಿಯ ಸ್ನೇಹಿತರೇ, ಕುಟುಂಬದವರೇ ಹಾಗೂ ನನ್ನ ಹಿತೈಷಿಗಳೇ.... ಕೃತಜ್ಞತೆ ತುಂಬಿದ ಹೃದಯದೊಂದಿಗೆ, ನನ್ನ ಜೀವನದ ಪಯಣದಲ್ಲಿ ಹೊಸ ಅಧ್ಯಾಯವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನನಗೆ ಅಪಾರ ಸಂತೋಷವಾಗಿದೆ. ಹೊಸ ಕನಸುಗಳು ಹಾಗೂ ಆಶಯಗಳೊಂದಿಗೆ ಮುಂದಕ್ಕೆ ಸಾಗುತ್ತಿರುವ ಈ ಸಂದರ್ಭದಲ್ಲಿ,ಕೆಲವು ವಿಶೇಷ ಕಾರಣಗಳಿಂದ ನಾನು ಹೊಸ ಹೆಸರನ್ನು ಸ್ವೀಕರಿಸುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಪೋಸ್ಟ್​ನಲ್ಲಿ ನಟಿ ತಿಳಿಸಿದ್ದಾರೆ.

46
ನನಗೆ ಪ್ರೇರಣೆ
Image Credit : Social Media

ನನಗೆ ಪ್ರೇರಣೆ

ನಿಮ್ಮ ನಿರಂತರ ಬೆಂಬಲ ಮತ್ತು ಪ್ರೋತ್ಸಾಹ ಪ್ರತಿದಿನವೂ ನನಗೆ ಪ್ರೇರಣೆಯಾಗಿವೆ. ಈ ಸುಂದರ ಪಯಣವನ್ನು ನೊಮ್ಮೊಡನೆ ಜೊತೆಯಾಗಿಯೇ ಮುಂದುವರೆಸಲು ನಾನು ಎದುರು ನೋಡುತ್ತಿದ್ದೇನೆ. ಸ ಉಂದರವಾದ ಆರಂಭಗೊಂದಿಗೆ, ನಿಮ್ಮ ಪ್ರೀತಿಯ ರಾಧ್ಯಾ ರಾಜ್​ ಎಂದು ನಟಿ ಹೇಳಿದ್ದಾರೆ.

56
ಹೊಸ ಪಯಣಕ್ಕೆ...
Image Credit : our own

ಹೊಸ ಪಯಣಕ್ಕೆ...

ಈ ಮೂಲಕ ಹೊಸ ಪಯಣಕ್ಕೆ ತಾವು ಮುನ್ನುಡಿ ಬರೆಯುತ್ತಿರುವುದಾಗಿ ಹೇಳಿದ್ದು, ಹೆಸರು ಕಾರಣದ ಬಗ್ಗೆ ಸ್ಪಷ್ಟ ಕಾರಣವನ್ನು ಅವರು ನೀಡಲಿಲ್ಲ.

66
ಬ್ಯಾಕ್ ಸ್ಟೇಜ್ ಡಾನ್ಸರ್
Image Credit : our own

ಬ್ಯಾಕ್ ಸ್ಟೇಜ್ ಡಾನ್ಸರ್

ಅಂದಹಾಗೆ, ತನ್ವಿಯಾ ಉರ್ಫ್​ ರಾಧ್ಯಾ ರಾಜ್ ಅವರು ಇದೀಗ 'ಎನ್ನಾಲೋ ವೆಚ್ಚಿನ ಹೃದಯಂ' ಎಂಬ ತೆಲುಗು ಕಿರುತೆರೆ ಪ್ರೇಕ್ಷಕರಿಗೂ ಪರಿಚಯವಾಗುತ್ತಿದ್ದಾರೆ. ಈ ಬಗ್ಗೆಯೂ ಈಚೆಗೆ ಅವರು ತಿಳಿಸಿದ್ದರು. ಬ್ಯಾಕ್ ಸ್ಟೇಜ್ ಡಾನ್ಸರ್ ಆಗಿ ಪಯಣ ಆರಂಭಿಸಿರುವ ರಾಧ್ಯಾ, ಹಲವಾರು ರಿಯಾಲಿಟಿ ಶೋ ಗಳಲ್ಲಿ, ಅವಾರ್ಡ್ ಫಂಕ್ಷನ್ ಗಳಲ್ಲಿ ಕಾಣಿಸಿಕೊಂಡವರು. ಬಳಿಕ ಅವರಿಗೆ ಅಂತರಪಟ ಸೀರಿಯಲ್​ನಲ್ಲಿ ಅವಕಾಶ ಸಿಕ್ಕಿತು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಕಲರ್ಸ್ ಕನ್ನಡ
ಕನ್ನಡ ಧಾರಾವಾಹಿ
ಮನರಂಜನಾ ಸುದ್ದಿ
ಟಿವಿ ಶೋ

Latest Videos
Recommended Stories
Recommended image1
ಚಿನ್ನದ ಸರವನ್ನು ನಂಗೇ ಕೊಟ್ಟಿದ್ದು ಅಂದ್ಕೊಂಡುಬಿಟ್ಟಿದ್ದೆ, ಆದ್ರೆ ಆಗಿದ್ದೇ ಬೇರೆ: ಗಿಲ್ಲಿ ನಟನ ಬೇಸರ ನುಡಿ
Recommended image2
ತನ್ನ ಯಶಸ್ಸಿನ ಹಿಂದಿನ ರೂವಾರಿಯನ್ನು ಪರಿಚಯಿಸಿದ ಬಿಗ್ಬಾಸ್ ರಕ್ಷಿತಾ ಶೆಟ್ಟಿ
Recommended image3
Sri Raghavendra Mahathme TV Serial: ವೈಭವದಿಂದ ನೆರವೇರಿದ ವೆಂಕಟನಾಥ, ಸರಸ್ವತಿಯ ವಿವಾಹ ಮಹೋತ್ಸವ!
Related Stories
Recommended image1
ಚಿನ್ನದ ಸರವನ್ನು ನಂಗೇ ಕೊಟ್ಟಿದ್ದು ಅಂದ್ಕೊಂಡುಬಿಟ್ಟಿದ್ದೆ, ಆದ್ರೆ ಆಗಿದ್ದೇ ಬೇರೆ: ಗಿಲ್ಲಿ ನಟನ ಬೇಸರ ನುಡಿ
Recommended image2
ದುಡ್ಡಿಲ್ಲದೇ ಹೂವು ಮಾರ್ತಿದ್ದೆ: ಬಡತನದ ದಿನ ನೆನೆದು ವೇದಿಕೆ ಮೇಲೆ ಬಿಕ್ಕಿಬಿಕ್ಕಿ ಅತ್ತ Bhargavi LLB
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved