MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಮಜಾ ಟಾಕೀಸ್‌ನ ಒನ್ ಆಂಡ್ ಓನ್ಲಿ ವರು ಧ್ವನಿ ಇನ್ನು ಕೇಳೋಕೆ‌ ಸಿಗದು..‌ ಜೇನಿನಂತೆ‌ ಕನ್ನಡ‌ ಮಾತಾಡ್ತಿದ್ದ ಅಪರ್ಣಾ ‌ಇನ್ನು ನೆನಪು!

ಮಜಾ ಟಾಕೀಸ್‌ನ ಒನ್ ಆಂಡ್ ಓನ್ಲಿ ವರು ಧ್ವನಿ ಇನ್ನು ಕೇಳೋಕೆ‌ ಸಿಗದು..‌ ಜೇನಿನಂತೆ‌ ಕನ್ನಡ‌ ಮಾತಾಡ್ತಿದ್ದ ಅಪರ್ಣಾ ‌ಇನ್ನು ನೆನಪು!

ನಟಿ ಅಪರ್ಣಾ ಅವರನ್ನು ನಟಿ ಎಂಬುದಕ್ಕಿಂತ ಹೆಚ್ಚಾಗಿ ಜನ ಗುರುತಿಸಿದ್ದು ಅಚ್ಚಗನ್ನಡದ ನಿರೂಪಕಿಯಾಗಿ.  

2 Min read
Govindaraj S
Published : Jul 11 2024, 11:03 PM IST| Updated : Jul 11 2024, 11:13 PM IST
Share this Photo Gallery
  • FB
  • TW
  • Linkdin
  • Whatsapp
115

ಬೆಂಗಳೂರು ಮೆಟ್ರೋದಲ್ಲಿ ಕಿವಿಗೆ ಬೀಳುವ ಅಚ್ಚಗನ್ನಡದ ಮುದ್ರಿತ ಧ್ವನಿ ಅಪರ್ಣಾ ಅವರದು ಎಂಬುದು ಬಹಳಷ್ಟು ಮಂದಿಗೆ ಗೊತ್ತಿಲ್ಲ. 
 

215

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಇಂದು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.  

315

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

415

ಇದಕ್ಕಿಂತಲೂ ಹೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿದ್ದು ಮಜಾ ಟಾಕೀಸ್ ಶೋ. ಇದರಲ್ಲಿ ಒನ್ ಅಂಡ್ ಒನ್ಲಿ ವರಲಕ್ಷ್ಮಿಯಾಗಿ ಅಪರ್ಣಾ ಕಿರುತೆರೆ ವೀಕ್ಷಕರಿಗೆ ಚಿರಪರಿಚಿತ. 

515

ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಮಸಣದ ಹೂವು' ಧಾರಾವಾಹಿ ಮೂಲಕ ಬೆಳ್ಳಿಪರದೆಗೆ ಅಡಿಯಿಟ್ಟ ಅಪರ್ಣಾ ಅವರು ಬಳಿಕ ಇನ್ಸ್‌ಪೆಕ್ಟರ್ ವಿಕ್ರಂ, ನಮ್ಮೂರ ರಾಜ, ಒಂದಾಗಿ ಬಾಳು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 

615

ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗಿದ್ದರು. 1989ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ ಅಪರ್ಣಗೆ ಆ ಸಮಯದಲ್ಲಿ ಮಧ್ಯಮ ಕ್ಷೇತ್ರ ಹೊಸತು.

715

ನನಗೆ ಇವತ್ತಿಗೂ ಹೆಮ್ಮೆ ಏನೆಂದರೆ ಕರ್ನಾಟಕದಲ್ಲಿ ದೂರದರ್ಶನ ಆರಂಭವಾದಗಿನಿಂದಲೂ ಇವತ್ತಿನವರೆಗೂ ದೂರದರ್ಶನ ಜೊತೆಗಿನ ನನ್ನ ನಂಟು ಬಿಗಿಯಾಗಿದೆ. ಆಗಾಗಿ ಟೆಲಿವಿಷನ್ ಅಂದ್ರೆ ನನಗೆ ತುಂಬಾ ಅಭಿಮಾನ ಎಂದು ತಿಳಿಸಿದ್ದರು.

815

ಒಬ್ಬ ಕಲಾವಿದನಿಗೆ ಎಲ್ಲವೂ ಇಷ್ಟ. ಯಾವುದು ಮೇಲು ಕೀಳು ಎಂಬ  ಪ್ರಶ್ನೆಯೇ ಬರುವುದಿಲ್ಲ. ಪ್ರೀತಿ ಹಾಗೂ ಶ್ರದ್ಧೆಯಿಂದ ಮಾಡುವ ಪ್ರತಿಯೊಂದು ಕೆಲಸವೂ ಉತ್ತಮ ಪ್ರತಿಫಲ ಕೊಡುತ್ತದೆ. 

915

ಹಾಗೆನೇ ನನಗೆ ಬರೆಯುವುದು, ಹಾಡು ಕೇಳುವುದು, ಓದುವುದು, ನಿರೂಪಣೆ, ನಟನೆ ಜೊತೆಗೆ ಮನೆ ಕೆಲಸ ಮಾಡುವುದು ಕೂಡ ಮನಸ್ಸಿಗೆ ಸಂತೋಷವನ್ನು ಕೊಡುತ್ತದೆ ಎಂದಿದ್ದರು.

1015

ನಮ್ಮ ಭಾಷೆಯನ್ನ ಗೌರವಿಸಿ ಪ್ರೀತಿಸಿದಾಗ ಭಾಷೆಯು ನಮ್ಮನ್ನು ಪ್ರೀತಿಸುತ್ತದೆ. ಭಾಷೆಯನ್ನ ಸ್ಪಷ್ಟವಾಗಿ ಮಾತನಾಡುತ್ತಾ ಕೇಳುತ್ತಾ ಓದುತ್ತಾ ಇದಷ್ಟು ಸಹಜವಾಗಿ ಭಾಷೆಯಲ್ಲಿ ಹಿಡಿತ ಬರುತ್ತದೆ. 

1115

ಪದಗಳಿಗಾಗಿ ತಡಕಾಡುವ ಪ್ರಮೇಯ ಬರುವುದಿಲ್ಲ. ನಾವು ಯಾವ ಕೆಲಸ ಮಾಡಿದರು ನಿಷ್ಠೆಯಿಂದ ಮಾಡುವ ಪ್ರತಿಯೊಂದು ಕೆಲಸವು ನಮ್ಮಗೆ ಯಶಸ್ಸನ್ನ ತಂದುಕೊಡುತ್ತದೆ ಎಂದು ಹೇಳಿದ್ದರು.

1215

ಮೊದಲು ನಾನು ಬೆಂಗಳೂರಿನಲ್ಲಿ ದೂರದರ್ಶನಕ್ಕೆ ಪಾದಾರ್ಪಣೆ ಗೊಂಡಿದ್ದು. ಡ್ರಾಮಾ ಆಡಿಷನ್ ಮೂಲಕ ಕಲಾವಿದೆಯಾಗಬೇಕೆಂಬ ಕನಸನ್ನ ಹೊತ್ತು ಸಾಗಿದ ಸಂದರ್ಭ ಕನಸ್ಸಿನ ಹಕ್ಕಿಗೆ ರೆಕ್ಕೆ ಕಟ್ಟಿ ಹಾರುವಂತೆ ಸಹಾಯ ಮಾಡಿದವರು ಶ್ರೀನಿವಾಸ ಪ್ರಭು ಅವರು. 

1315

ಭಯ ಪ್ರತಿಯೊಬ್ಬ ವ್ಯಕ್ತಿಯು ವೇದಿಕೆ ಮೆಟ್ಟಿಲೇರಿದಾಗ ಆಗುವುದು ಸಹಜ. ಭಯ ಆಗಬೇಕು! ಆವಾಗ ಮಾತ್ರ ತಪ್ಪು ಮಾಡಬಾರದು ಎಂಬ ಯೋಚನೆ ತಲೆಗೆ ಬರುವುದು ಪದ ಬಳಕೆ ಸ್ಪಷ್ಟವಾಗಿರುತ್ತದೆ, ಆತ್ಮ ವಿಶ್ವಾಸ ಹೆಚ್ಚಾಗುತ್ತದೆ ಎಂದು ಅಪರ್ಣ ತಿಳಿಸಿದ್ದರು.

1415

1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. 

1515

ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ಬಿಗ್ ಬಾಸ್: ಮೇಕಪ್ ಮಾಡ್ಕೊಳ್ಳೋ ಗ್ಯಾಪ್‌ನಲ್ಲಿ ಕಾವ್ಯಾಗೆ 'ಲವ್ ಪ್ರಪೋಸ್' ಮಾಡೇಬಿಟ್ಟ ಗಿಲ್ಲಿ ನಟ!
Recommended image2
Bigg Boss: ಅಬ್ಬಬ್ಬಾ! ಗಿಲ್ಲಿ ಮೇಲೆ ಅಶ್ವಿನಿಗೆ ಇದೆಂಥ ಲವ್​? ನನ್ನ ಮನಸ್ಸು ಪರಿವರ್ತಿಸಿದ್ದೂ ಇವನೇ ಅಂದ ಧ್ರುವಂತ್​
Recommended image3
Yajamana BTS: ಝಾನ್ಸಿಗೆ ಆ್ಯಕ್ಸಿಡೆಂಟ್​ ಆದಾಗ ಏನಾಯ್ತು? ಝುಂ ಎನ್ನೋ ಶಾಕಿಂಗ್​ ವಿಡಿಯೋ ವೈರಲ್​
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved