MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಮಾಲೆ ಹಾಕೊಂಡು ಶಬರಿಮಲೆ ಭಕ್ತಾದಿಗಳನ್ನು ಅವಮಾನಿಸಿದ್ರಾ ಬಿಗ್‌ಬಾಸ್ ಮಾಜಿ ಸ್ಪರ್ಧಿ ಧನರಾಜ್ ?

ಮಾಲೆ ಹಾಕೊಂಡು ಶಬರಿಮಲೆ ಭಕ್ತಾದಿಗಳನ್ನು ಅವಮಾನಿಸಿದ್ರಾ ಬಿಗ್‌ಬಾಸ್ ಮಾಜಿ ಸ್ಪರ್ಧಿ ಧನರಾಜ್ ?

ಬಿಗ್‌ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಧನರಾಜ್ ಆಚಾರ್, ಶಬರಿಮಲೆ ಯಾತ್ರೆಯ ವೇಳೆ ಮಾಡಿದ ವಿಡಿಯೋವೊಂದು ವಿವಾದಕ್ಕೆ ಕಾರಣವಾಗಿದೆ. ಮಾಲೆ ಧರಿಸಿದ್ದ ಇನ್ನೊಬ್ಬ ಸ್ವಾಮಿಯ ದೊಡ್ಡ ಘಂಟೆಯ ಬಗ್ಗೆ ತಮಾಷೆಯಾಗಿ ಮಾತನಾಡಿದ್ದು ನೆಟ್ಟಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2 Min read
Author : Mahmad Rafik
Published : Jan 13 2026, 12:44 PM IST
Share this Photo Gallery
  • FB
  • TW
  • Linkdin
  • Whatsapp
15
ಧನರಾಜ್ ಆಚಾರ್ ವಿಡಿಯೋ
Image Credit : Dhanraj Achar FB

ಧನರಾಜ್ ಆಚಾರ್ ವಿಡಿಯೋ

ಬಿಗ್‌ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಯಾಗಿದ್ದ ಧನರಾಜ್ ಆಚಾರ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಾಲೆ ಧರಿಸಿಕೊಂಡು ಶಬರಿಮಲೆಗೆ ತೆರಳುವ ಮಾರ್ಗ ಮಧ್ಯೆ ಧನರಾಜ್ ಆಚಾರ್ ವಿಡಿಯೋ ಮಾಡಿದ್ದರು. ಇದೀಗ ಈ ವಿಡಿಯೋಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

25
ವೈರಲ್ ವಿಡಿಯೋದಲ್ಲಿ ಏನಿದೆ?
Image Credit : Dhanraj Achar FB

ವೈರಲ್ ವಿಡಿಯೋದಲ್ಲಿ ಏನಿದೆ?

ಸಾಮಾನ್ಯವಾಗಿ ಮೂರು ವರ್ಷದ ನಂತರ ಸ್ವಾಮಿಗಳಿಗೆ ಘಂಟೆಯನ್ನು ಕಟ್ಟುತ್ತಾರೆ. ನಾನು ಚಿಕ್ಕ ಘಂಟೆ ಕಟ್ಟೋದನ್ನು ನೋಡಿದ್ದೇನೆ. ಆದ್ರೆ ಈ ಸ್ವಾಮಿ ಅವರಿಗೆ ಇಷ್ಟು ದೊಡ್ಡ ಘಂಟೆಯನ್ನು ಕಟ್ಟಿದ್ದಾರೆ ಎಂದು ಧನರಾಜ್ ತೋರಿಸುತ್ತಾರೆ. ಘಂಟೆ ಕಟ್ಟಿಸಿಕೊಂಡಿರುವ ಸ್ವಾಮಿ ಸಹ ವಿಡಿಯೋದಲ್ಲಿ ಮಾತನಾಡಿದ್ದಾರೆ.

Related Articles

Related image1
BBK 12: ಫಿನಾಲೆ ವಾರದಲ್ಲಿ ಗಿಲ್ಲಿಯ ಅಚ್ಚರಿ ನಡೆ; ಕಾವ್ಯಾಳನ್ನು ಬಿಟ್ಟುಕೊಟ್ಟು ಭಾವುಕನಾಗಿ ಮಾತಾಡಿದ ನಟ
Related image2
BBK12: ರಕ್ಷಿತಾ ಹೇಳಿದ ಮೂರು ಬೇಡಿಕೆಗೆ ಕರುನಾಡಿನ ಜನತೆ ಫಿದಾ; ಇದು ಪ್ರಬುದ್ಧತೆ ಅಂದ್ರು!
35
ದೊಡ್ಡ ಘಂಟೆ
Image Credit : Dhanraj Achar FB

ದೊಡ್ಡ ಘಂಟೆ

ನಾನು ಗುರುಸ್ವಾಮಿ ಅವರಿಗೆ ಹೆಚ್ಚು ಉಪದ್ರ ಮಾಡುತ್ತೇನೆ ಎಂದು ದೊಡ್ಡ ಘಂಟೆಯನ್ನು ಕಟ್ಟಿದ್ದಾರೆ. ಈ ಘಂಟೆ ಸುಮಾರು 1 ಕೆಜಿ ತೂಕವಿದೆ. ತಾವು ಬಾಗಲಕೋಟೆ ಜಿಲ್ಲೆಯವರು ಎಂದು ಹೇಳಿದ್ದಾರೆ. ಧನರಾಜ್ ಆಚಾರ್ ಈ ವಿಡಿಯೋವನ್ನು ಜನವರಿ 11ರಂದು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿದ್ದು, ಈವರೆಗೆ 10 ಲಕ್ಷಕ್ಕೂ ಅಧಿಕ ವ್ಯೂವ್ ಮತ್ತು ನೂರಕ್ಕೂ ಅಧಿಕ ಕಮೆಂಟ್‌ಗಳು ಬಂದಿವೆ.

45
ನೆಟ್ಟಿಗರಿಂದ ಅಸಮಾಧಾನ
Image Credit : Dhanraj Achar FB

ನೆಟ್ಟಿಗರಿಂದ ಅಸಮಾಧಾನ

ಧನರಾಜ್ ಆಚಾರ್ ಅವರ ವಿಡಿಯೋಗೆ ಬಹುತೇಕರು ಅಸಮಾಧಾನ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ. ಈ ವಿಡಿಯೋಗೆ ಬಂದಿರುವ ಕೆಲವು ಕಮೆಂಟ್‌ಗಳನ್ನು ಇಲ್ಲಿ ನೀಡಲಾಗಿದೆ. ಅಯ್ಯಪ್ಪಗೆ ಹೋಗಿದ್ದೆ ಇಲ್ಲ ಶೋಕಿ ಮಡೋಕೆ ಹೋಗಿದ್ಯಾ ಮಾಲೆ ಹಾಕೊಂಡು ಇದೆಲ್ಲ ಬೇಡ ಎಂದು ಸಲಹೆ ನೀಡಿದ್ದಾರೆ. ಮಾಲೆ ಹಾಕಿಕೊಂಡು ಬೇರೆಯೊಬ್ಬ ಸ್ವಾಮಿಯನ್ನು ತಮಾಷೆ ಮಾಡೋದು ತಪ್ಪು ಎಂಬ ಕಮೆಂಟ್‌ಗಳು ಬಂದಿವೆ.

ಇದನ್ನೂ ಓದಿ: Bigg Boss Kannada: ಮೊದಲ ಬಾರಿ ಗಿಲ್ಲಿ ಬಾಯಲ್ಲಿ ರಕ್ಷಿತಾ ಹೆಸರು, ಭಾವುಕಳಾದ ವಂಶದ ಕುಡಿ

55
ಕಮೆಂಟ್, ಲೈಕ್‌ಗೋಸ್ಕರ ಏನೆಲ್ಲಾ ಮಾಡ್ತೀರಿ?
Image Credit : Dhanraj Achar FB

ಕಮೆಂಟ್, ಲೈಕ್‌ಗೋಸ್ಕರ ಏನೆಲ್ಲಾ ಮಾಡ್ತೀರಿ?

ನಿಮಗೂ ಹಾಗೂ ಶಬರಿಮಲೆಗೆ ಮಹಿಳೆಯರು ಹೋಗ್ತೀವಿ ಅಂತ ಹೇಳುವವರಿಗೂ ಯಾವುದೇ ವ್ಯತ್ಯಾಸ ಇಲ್ಲ. ಮಾಲೆ ಹಾಕಿದಾಗ ಇವೆಲ್ಲಾ ಬೇಕಿತ್ತಾ? ಯಾವುದಕ್ಕೂ ಒಂದು ಮಿತಿ ಬೇಕು? ರೀ ಸ್ವಾಮಿ ಕಮೆಂಟ್, ಲೈಕ್‌ಗೋಸ್ಕರ ಏನೆಲ್ಲಾ ಮಾಡ್ತೀರಿ? ಮನೆಯಲ್ಲಿ ಯಾರಾದ್ರು ಸತ್ತರೆ, ಅಲ್ಲಿ ಹೋಗಿ ಯಾಕೆ ಇಷ್ಟೊಂದು ಅಳ್ತಾ ಇದ್ದೀರಿ ಎಂದು ವಿಡಿಯೋ ಮಾಡಿದ್ರೆ ಹೇಗಿರುತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: BBK 12: ಬಿಡುಗಡೆಯಾದ ಬಿಗ್‌ಬಾಸ್ ಪ್ರೋಮೋಗೆ 'ಇದಲ್ಲ, ಅದು' ಬೇಕೆಂದ ಫ್ಯಾನ್ಸ್; ಅಂತಿಮ ಸುತ್ತಿನ ಟ್ವಿಸ್ಟ್

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ವೈರಲ್ ವಿಡಿಯೋ

Latest Videos
Recommended Stories
Recommended image1
'ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯೋಕೆ ಬರಲ್ಲ..' ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಆದ ಅಶ್ವಿನಿ ಗೌಡ
Recommended image2
Bigg Boss Kannada: ಮೊದಲ ಬಾರಿ ಗಿಲ್ಲಿ ಬಾಯಲ್ಲಿ ರಕ್ಷಿತಾ ಹೆಸರು, ಭಾವುಕಳಾದ ವಂಶದ ಕುಡಿ
Recommended image3
BBK 12: ತಣ್ಣೀರು ಸ್ನಾನ, ಉರುಳು ಸೇವೆ; ಚಾಮುಂಡೇಶ್ವರಿ ತಾಯಿಗೆ ಹಸಿರು ಸೀರೆ ಅರ್ಪಿಸಿದ್ಯಾಕೆ ಮಲ್ಲಮ್ಮ?
Related Stories
Recommended image1
BBK 12: ಫಿನಾಲೆ ವಾರದಲ್ಲಿ ಗಿಲ್ಲಿಯ ಅಚ್ಚರಿ ನಡೆ; ಕಾವ್ಯಾಳನ್ನು ಬಿಟ್ಟುಕೊಟ್ಟು ಭಾವುಕನಾಗಿ ಮಾತಾಡಿದ ನಟ
Recommended image2
BBK12: ರಕ್ಷಿತಾ ಹೇಳಿದ ಮೂರು ಬೇಡಿಕೆಗೆ ಕರುನಾಡಿನ ಜನತೆ ಫಿದಾ; ಇದು ಪ್ರಬುದ್ಧತೆ ಅಂದ್ರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved