MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Bigg Boss Kannada 12: ತಂಗಿ ಅಂಥ ಕರೆದು ಕಾವ್ಯ ಶೈವಗೆ ಕಳಂಕ ತರೋ ಮಾತಾಡಿದ ಚಂದ್ರಪ್ರಭ; ಇದೇನಿದು?

Bigg Boss Kannada 12: ತಂಗಿ ಅಂಥ ಕರೆದು ಕಾವ್ಯ ಶೈವಗೆ ಕಳಂಕ ತರೋ ಮಾತಾಡಿದ ಚಂದ್ರಪ್ರಭ; ಇದೇನಿದು?

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಕಾವ್ಯ ಶೈವ ಹಾಗೂ ಗಿಲ್ಲಿ ನಟ ಅವರು ಪರಸ್ಪರ ಬೆಂಬಲ ಕೊಟ್ಟುಕೊಂಡು ಆಟ ಆಡುತ್ತಿದ್ದಾರೆ. ದೊಡ್ಮನೆಗೆ ಬರುವ ಮುನ್ನ ಈ ಹಿಂದೆಯೇ ಇವರಿಬ್ಬರು ಒಂದು ಶೋನಲ್ಲಿ ಕಾಣಿಸಿಕೊಂಡಿದ್ದರು. ಈಗ ಕಾವ್ಯ ಶೈವ, ಗಿಲ್ಲಿ ನಟ ಬಗ್ಗೆ ಚಂದ್ರಪ್ರಭ ಮಾತನಾಡಿದ್ದಾರೆ.

1 Min read
Padmashree Bhat
Published : Nov 04 2025, 06:37 AM IST
Share this Photo Gallery
  • FB
  • TW
  • Linkdin
  • Whatsapp
15
ಕಪ್ಪು ಮಸಿ ಬಳಿಯಬೇಕು
Image Credit : Asianet News

ಕಪ್ಪು ಮಸಿ ಬಳಿಯಬೇಕು

ಯಾರು ಈ ಮನೆಯಲ್ಲಿ ಇರೋಕೆ ಅರ್ಹರಲ್ಲವೋ ಅವರಿಗೆ ಕಪ್ಪು ಮಸಿ ಬಳಿಯಬೇಕು ಎಂದು ಬಿಗ್‌ ಬಾಸ್‌ ಹೇಳಿದ್ದರು. ಆಗ ಚಂದ್ರಪ್ರಭ ಅವರು ಗಿಲ್ಲಿ ನಟ, ಕಾವ್ಯ ಶೈವ ಅವರ ಸ್ನೇಹವನ್ನು ಟಾರ್ಗೆಟ್‌ ಮಾಡಿ ಮಾತನಾಡಿದ್ದಾರೆ.

25
ಕಾವ್ಯ ಶೈವ ದಾರಿ ತಪ್ಪಿದಳು
Image Credit : Asianet News

ಕಾವ್ಯ ಶೈವ ದಾರಿ ತಪ್ಪಿದಳು

“ಎಲ್ಲ ವಿಚಾರದಲ್ಲಿಯೂ ನನ್ನ ತಂಗಿ ಕಾವ್ಯ ಶೈವ ಕರೆಕ್ಟ್‌ ಆಗಿ ಹೋಗ್ತಿದ್ದಾಳೆ ಅಂತ ನಾನು ಅಂದುಕೊಂಡಿದ್ದೆ. ಹಂಸ್, ಗುಂಡಿ ಎಲ್ಲಿ ಸಿಗ್ತಿದೆಯೋ ಅಲ್ಲಿ ಕರೆಕ್ಟ್‌ ಆಗಿ ಹೋಗ್ತಿದ್ದಾಳೆ ಅಂತ ಅಂದುಕೊಂಡಿದ್ದೆ. ಒಳ್ಳೆಯ ದಾರಿಯಲ್ಲಿ ಹೋಗ್ತಿದ್ದವಳಿಗೆ, ಗಾಡಿ ಓಡಿಸ್ಕೊಂಡು ಬರೋನು ಚೋಕ್‌ ಕೊಟ್ಟ ಅಂತ ಅವಳು ದಾರಿ ತಪ್ಪಿದಳು ಅಂತ ಅನಿಸುತ್ತದೆ” ಎಂದು ಚಂದ್ರಪ್ರಭ ಹೇಳಿದ್ದಾರೆ.

Related Articles

Related image1
Kiccha Sudeep ಮಗಳು ಹೀಗಿದ್ರೆ ಅವ್ರು ಸುಮ್ನೆ ಇರ್ತಿದ್ರಾ? BBK ರಕ್ಷಿತಾ ಶೆಟ್ಟಿ ವಿರುದ್ಧ ಸಿಡಿದೆದ್ದ ನಟಿ
Related image2
BBK 12: ಒಂದಾದ್ಮೇಲೆ ಒಂದು ಕಂಪ್ಲೇಂಟ್‌ ಮಾಡಿದ ರಾಶಿಕಾಗೆ ಮುಖಭಂಗ; Kiccha Sudeep ಮುಂದೆ ಆ ಘಟನೆ ನಡೀತು
35
ಮದುವೆಗೆ ಸಮಸ್ಯೆ ಆಗುತ್ತದೆ
Image Credit : Asianet News

ಮದುವೆಗೆ ಸಮಸ್ಯೆ ಆಗುತ್ತದೆ

“ಇಲ್ಲಿ ಇರುವವರಿಗೆ ಲವ್‌ ಎನ್ನೋದು ಓಕೆ, ತಮಾಷೆ ಅಂತ ಅಂದುಕೊಳ್ತೀವಿ. ಆದರೆ ಸಮಾಜದಲ್ಲಿ ಇರುವ ಜನರು ಇದನ್ನು ಎಲ್ಲರೂ ಅಲ್ಲ, ಕೆಲವರು ರಿಯಲ್‌ ಅಂತ ಅಂದುಕೊಂಡಾಗ ನನ್ನ ತಂಗಿಗೆ ಕಳಂಕ ತರುತ್ತದೆ. ನಾಳೆ ಮದುವೆ ವಿಷಯ ಬಂದಾಗ ಸಮಸ್ಯೆ ಆಗುವುದು. ಎಲ್ಲೋ ಓಡಾಡಿದ್ದಾರೆ, ಸುತ್ತಾಡಿದ್ದಾರೆ ಅಂತ ಜನರು ಅಂದುಕೊಳ್ತಾರೆ. ಬದಲಾಗಬೇಕು ಎನ್ನೋದು ಪ್ರಪಂಚ ಅಲ್ಲ, ನೀನು ಬದಲಾಗಬೇಕು” ಎಂದು ಚಂದ್ರಪ್ರಭ ಹೇಳಿದ್ದಾರೆ.

45
ಕಾವ್ಯಗೆ ಬೇಸರ
Image Credit : Asianet News

ಕಾವ್ಯಗೆ ಬೇಸರ

“ನಿಮ್ಮ ಮಾತಿಗೆ ನಾನು ನಗಬೇಕೋ, ಅಳಬೇಕೋ ಗೊತ್ತಾಗ್ತಿಲ್ಲ. ಕಾವ್ಯ ಎನ್ನೋ ಹೆಸರಿಗೆ ನೀವು ಮಸಿ ಬಳಿದಿದ್ದೀರಿ. ಯಾವಾಗಲೂ ನೀವು ನಮ್ಮ ಜೊತೆ ಇರ್ತೀರಿ, ಗಿಲ್ಲಿ ಜೊತೆ ಇರ್ತೀರಿ. ನಮ್ಮಿಬ್ಬರ ಜೊತೆ ಯಾರು ಏನು ಅಂದುಕೊಳ್ತಾರೋ ಏನೋ. ನೀವು ಮಾತ್ರ ಲವ್‌ ಎನ್ನೋ ಟೈಟಲ್‌ ಕೊಟ್ರಿ. ಈ ರೀತಿ ಇಲ್ಲ ಎನ್ನೋದು ನಿಮಗೆ ಗೊತ್ತಿದೆ, ಆದರೆ ನೀವು ಹೀಗೆ ಹೇಳಿದ್ದು ಬೇಸರ ತಂದಿದೆ. ನಾನು ರಾಖಿ ಕಟ್ಟಿ, ಅಣ್ಣಾ ಅಂತ ಕರೆದಿದ್ದೀನಿ, ನಾನು, ಗಿಲ್ಲಿ ಹೇಗಿದೀವಿ ಅಂತ ಇಬ್ಬರಿಗೂ ಗೊತ್ತಿದೆ” ಎಂದು ಕಾವ್ಯ ಶೈವ ಹೇಳಿದ್ದಾರೆ.

55
ಗಿಲ್ಲಿ ನಟಗೂ ಸಿಟ್ಟು ಬಂತು
Image Credit : Asianet News

ಗಿಲ್ಲಿ ನಟಗೂ ಸಿಟ್ಟು ಬಂತು

ಚಂದ್ರಪ್ರಭ ಮಾತು ಕೇಳಿ ಗಿಲ್ಲಿ ನಟ ಅವರಿಗೆ ಸಿಟ್ಟು ಬಂದಿದೆ. ಆಗ ಅವರು, “ನೀನು ಏನು ಮಾಡಿದ್ಯಾ? ಸಂಸ್ಥಾರಸ್ಥರೇ? ನೀವು ಎಷ್ಟು ಮುಖಕ್ಕೆ ಮಸಿ ಬಳಿಯುತ್ತೀರೋ, ಅದಿಕ್ಕಿಂತ ಜಾಸ್ತಿ ನಿಮ್ಮ ಕೈ ಕಲರ್‌ ಆಗುತ್ತದೆ” ಎಂದು ಹೇಳಿದ್ದಾರೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಲರ್ಸ್ ಕನ್ನಡ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved