MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಹಳ್ಳಿಯ ಈ ಪದ್ಧತಿ ವಿರುದ್ಧ ಸಿಡಿದೆದ್ದ Bigg Boss ಸ್ಪರ್ಧಿಗಳು; ಬದಲಾಯಿಸಿಕೊಳ್ರೀ ಎಂದ ಕಿಚ್ಚ ಸುದೀಪ್

ಹಳ್ಳಿಯ ಈ ಪದ್ಧತಿ ವಿರುದ್ಧ ಸಿಡಿದೆದ್ದ Bigg Boss ಸ್ಪರ್ಧಿಗಳು; ಬದಲಾಯಿಸಿಕೊಳ್ರೀ ಎಂದ ಕಿಚ್ಚ ಸುದೀಪ್

Bigg Boss Kannada 12: ಹಳ್ಳಿ ಪದ್ಧತಿ ಬಗೆ ಚರ್ಚೆ ಆಗಿತ್ತು. ಈ ಹಿಂದೆ ಎಪಿಸೋಡ್‌ವೊಂದರಲ್ಲಿ ನಮ್ಮ ಹಳ್ಳಿಯಲ್ಲಿ ಪುರುಷರು ಅಡುಗೆ ಕೆಲಸ ಮಾಡೋದಿಲ್ಲ, ಅಡುಗೆ ಕೆಲಸ ಮಾಡಿದರೆ ಹೆಂಡ್ತಿ ಗುಲಾಮ ಅಂತ ಕರೆಯುತ್ತಾರೆ ಎಂದು ಹೇಳುತ್ತಾರೆ ಎಂದಿದ್ದರು. ಈಗ ಸಂಡೇ ವಿಥ್‌ ಸುದೀಪ ಶೋನಲ್ಲಿ ಚರ್ಚೆಯಾಗಿತ್ತು.  

1 Min read
Padmashree Bhat
Published : Oct 05 2025, 10:42 PM IST
Share this Photo Gallery
  • FB
  • TW
  • Linkdin
  • Whatsapp
15
ಹೆಂಡ್ತಿ ಗುಲಾಮ ಯಾರು?
Image Credit : Asianet News

ಹೆಂಡ್ತಿ ಗುಲಾಮ ಯಾರು?

ಮಾಳು ನಿಪನಾಳ ಅವರು ಉತ್ತರ ಕರ್ನಾಟಕದವರು, ಅಲ್ಲಿಯ ಪದ್ಧತಿಗೂ, ಸಿಟಿಗೂ ತುಂಬ ವ್ಯತ್ಯಾಸವಿದೆ. ಹೀಗೊಮ್ಮೆ ಮಾಳು ಅವರು, ನಮ್ಮ ಕಡೆ ಪುರುಷರು ಅಡುಗೆ ಮಾಡಿದರೆ ಹೆಂಡ್ತಿ ಗುಲಾಮ ಅಂತ ಹೇಳ್ತಾರೆ, ಪುರುಷರು ಅಡುಗೆ ಮಾಡೋದಿಲ್ಲ ಎಂದು ಹೇಳಿದ್ದರು. ಇದನ್ನು ಅನೇಕರು ತಿರಸ್ಕಾರ ಮಾಡಿದ್ದರು.

25
ಮತ್ತೊಮ್ಮೆ ಚರ್ಚೆ
Image Credit : colors kannada facebook

ಮತ್ತೊಮ್ಮೆ ಚರ್ಚೆ

ಈಗ ಮತ್ತೆ ಸಂಡೇ ವಿಥ್‌ ಸುದೀಪ ಶೋನಲ್ಲಿ ಕೂಡ ಈ ಬಗ್ಗೆ ಚರ್ಚೆಯಾಗಿದೆ. ಮಾಳು ನಿಪನಾಳ ಹಾಗೂ ಮಲ್ಲಮ್ಮ ಬಿಟ್ಟು ಉಳಿದವರು ಈ ಪದ್ಧತಿಯನ್ನು ವಿರೋಧಿಸಿದ್ದಾರೆ. 

Related Articles

Related image1
ತೆಲುಗಿನಲ್ಲಿ ಸಾಧನೆಯ ಏಣಿ ಹತ್ತಿದ Bigg Boss Kannada ಶೋಭಾ ಶೆಟ್ಟಿ! ಇದಪ್ಪಾ ಸಾಧನೆ ಅಂದ್ರೆ..!
Related image2
Bigg Bossನಲ್ಲಿ ಟ್ವಿಸ್ಟೋ ಟ್ವಿಸ್ಟ್​: ವೈಲ್ಡ್​ ಕಾರ್ಡ್​ ಸುದ್ದಿಯ ನಡುವೆಯೇ ಸೀರಿಯಲ್​ ತಾರೆಯರ ಎಂಟ್ರಿ!
35
ಮಂಜುಭಾಷಿಣಿ ಏನಂದ್ರು?
Image Credit : colors kannada facebook

ಮಂಜುಭಾಷಿಣಿ ಏನಂದ್ರು?

ಮಂಜುಭಾಷಿಣಿ ಅವರು, “ನಾವು ನಗರದಲ್ಲಿ ಬೆಳೆದಿದ್ದೇವೆ, ನಮಗೆ ಈ ಪದ್ಧತಿ ಸರಿ ಅನಿಸಿಲ್ಲ. ನಾವು ಇದನ್ನು ವಿರೋಧಿಸುತ್ತೇವೆ. ಗಂಡಿಗಿಂತ ಹೆಣ್ಣು ದೈಹಿಕವಾಗಿ ಅಷ್ಟು ಸ್ಟ್ರಾಂಗ್‌ ಅಲ್ಲ ಎಂದು ಹೇಳುತ್ತಾರೆ, ಹೀಗಾಗಿ ಗಂಡು ಹೊರಗಡೆ ದುಡಿಯೋಕೆ ಹೋಗ್ತಾರೆ, ಹೆಣ್ಣು ಮನೆಯಲ್ಲಿ ಇರ್ತಾರೆ” ಎಂದು ಹೇಳಿದ್ದರು.

45
ಮಾಳು ನಿಪನಾಳ ಏನಂದ್ರು?
Image Credit : colors kannada facebook

ಮಾಳು ನಿಪನಾಳ ಏನಂದ್ರು?

ಮಾಳು ನಿಪನಾಳ ಅವರು, “ನಮ್ಮ ಹಳ್ಳಿಯಲ್ಲಿ ಇದೇ ಪದ್ಧತಿ ಇದೆ, ಇದನ್ನೇ ನಾವು ಅನುಸರಿಸಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದ್ದರು.

55
ಕಿಚ್ಚ ಸುದೀಪ್‌ ನೀಡಿದ ಸಲಹೆ ಏನು?
Image Credit : Asianet News

ಕಿಚ್ಚ ಸುದೀಪ್‌ ನೀಡಿದ ಸಲಹೆ ಏನು?

ಕಿಚ್ಚ ಸುದೀಪ್‌ ಅವರು, “ನಾನು ನಿಮ್ಮ ಪದ್ಧತಿ ತಪ್ಪು ಅಂತ ಹೇಳುತ್ತಿಲ್ಲ. ಈಗ ಹಳ್ಳಿಗಳು ಕೂಡ ಸುಧಾರಿಸಿಕೊಂಡಿವೆ, ಕರೆಂಟ್‌ ಅಥವಾ ಇನ್ನಿತರ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ನಮಗೆ ಬದಲಾಗಬೇಕು ಎನ್ನೋ ಮನಸ್ಥಿತಿಯಿದ್ದರೆ ಮಾತ್ರ ಬದಲಾವಣೆ ಆಗುವುದು. ಈಗ ಈ ವಿಚಾರದಲ್ಲಿ ಕೂಡ ಬದಲಾವಣೆ ಮಾಡಿಕೊಳ್ಳಿ” ಎಂದು ಹೇಳಿದ್ದರು.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಿಚ್ಚ ಸುದೀಪ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved