MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಅಪ್ಪ-ಅಮ್ಮನ ಮುಂಚೆ ನಾನೇ ಸಾಯಬೇಕೆಂದ ರಕ್ಷಿತಾ ಶೆಟ್ಟಿಗೆ ಮಲ್ಲಮ್ಮ ಫುಲ್ ಕ್ಲಾಸ್

ಅಪ್ಪ-ಅಮ್ಮನ ಮುಂಚೆ ನಾನೇ ಸಾಯಬೇಕೆಂದ ರಕ್ಷಿತಾ ಶೆಟ್ಟಿಗೆ ಮಲ್ಲಮ್ಮ ಫುಲ್ ಕ್ಲಾಸ್

Mallamma and Rakshitha Shetty conversation: ಮಕ್ಕಳ ಸಾವಿನ ಬಗ್ಗೆ ಪೋಷಕರಿಗಾಗುವ ನೋವಿನ ಕುರಿತು ಚರ್ಚೆ. ರಕ್ಷಿತಾ ಪದೇ ಪದೇ ಕೇಳಿದ ಪ್ರಶ್ನೆಯಿಂದ ಬೇಸರಗೊಂಡ ಮಲ್ಲಮ್ಮ, ಆಟವಾಡಲು ಬಂದ ಜಾಗದಲ್ಲಿ ಇಂತಹ ಮಾತುಗಳು ಬೇಡವೆಂದು ರಕ್ಷಿತಾಗೆ ಖಡಕ್ ಕ್ಲಾಸ್ ತೆಗೆದುಕೊಳ್ಳುತ್ತಾರೆ.

1 Min read
Author : Mahmad Rafik
Published : Oct 12 2025, 09:43 PM IST
Share this Photo Gallery
  • FB
  • TW
  • Linkdin
  • Whatsapp
15
ರಕ್ಷಿತಾ ಶೆಟ್ಟಿ ಮತ್ತು ಮಲ್ಲಮ್ಮ
Image Credit : Colors Kannada

ರಕ್ಷಿತಾ ಶೆಟ್ಟಿ ಮತ್ತು ಮಲ್ಲಮ್ಮ

ರಕ್ಷಿತಾ ಶೆಟ್ಟಿ, ಮಲ್ಲಮ್ಮ ಮತ್ತು ಧ್ರವಂತ್ ಮೂವರು ಡೈನಿಂಗ್ ಟೇಬಲ್‌ನಲ್ಲಿ ಕುಳಿತು ಮಾತನಾಡುತ್ತಿರುತ್ತಾರೆ. ಅಪ್ಪ ಮತ್ತು ಅಮ್ಮನ ಮುಂದೆ ಮಕ್ಕಳು ಸಾಯಬಾರದು. ಒಂದು ವೇಳೆ ಮಕ್ಕಳು ನಿಧನವಾದ್ರೆ ಅಪ್ಪ-ಅಮ್ಮನಿಗೆ ತುಂಬಾ ನೋವು ಆಗುತ್ತದೆ ಅಲ್ಲವಾ ಎಂದು ಮಲ್ಲಮ್ಮ ಅವರಿಗೆ ರಕ್ಷಿತಾ ಶೆಟ್ಟಿ ಹೇಳುತ್ತಾರೆ. ಈ ಮಾತುಗಳು ನಿಮಗೆ ಅರ್ಥವಾಯ್ತಾ ಎಂದು ಮಲ್ಲಮ್ಮ ಅವರನ್ನು ಪ್ರಶ್ನೆ ಮಾಡುತ್ತಾರೆ.

25
ರಕ್ಷಿತಾ ಮಾತುಗಳಿಗೆ ಮಲ್ಲಮ್ಮ ಬೇಸರ
Image Credit : Colors Kannada

ರಕ್ಷಿತಾ ಮಾತುಗಳಿಗೆ ಮಲ್ಲಮ್ಮ ಬೇಸರ

ರಕ್ಷಿತಾ ಶೆಟ್ಟಿ ಮಾತುಗಳಿಗೆ ಬೇಸರ ವ್ಯಕ್ತಪಡಿಸಿದ ಮಲ್ಲಮ್ಮ, ನೀನು ನನಗಿಂತ ದೊಡ್ಡವಳಾ? ನನಗೆ ಇದೆಲ್ಲಾ ಅರ್ಥವಾಗಲ್ಲವಾ? ಹೀಗೆ ಹೀಗೆ ಪದೇ ಪದೇ ಅರ್ಥ ಆಯ್ತು ಎಂದು ಕೇಳಿದ್ರೆ ನನಗೆ ಕೋಪ ಬರುತ್ತೆ ಎಂದು ಮಲ್ಲಮ್ಮ ಹೇಳುತ್ತಾರೆ. ಇವರಿಬ್ಬರ ಪಕ್ಕದಲ್ಲಿಯೇ ಕುಳಿತಿದ್ದ ಧ್ರವಂತ್, ಏನು ಮಾತಿದೆ? ಯಾಕೆ ಈ ಟಾಪಿಕ್ ಚರ್ಚೆ ಮಾಡುತ್ತಿರೋದು ಎಂದು ಇಬ್ಬರನ್ನು ಪ್ರಶ್ನೆ ಮಾಡುತ್ತಾರೆ.

Related Articles

Related image1
ಅಸುರನ ಹುಚ್ಚು ಬಿಡಿಸಿದ ಬಿಗ್‌ ಮನೆಯ ಪುಟ್ಟಿ: ಯಾವಳ್ಯಾವಳು ನಾಯಿ ಅಂದಿದ್ದು? ಅಶ್ವಿನಿ ಗೌಡ ಕೆಂಡ
Related image2
ದಿವ್ಯಾ ಉರುಡುಗ-ಅರವಿಂದ್ ಕೆಪಿಗೆ ಬಿಗ್‌ಬಾಸ್ ನೀಡಿದ ಕ್ಯೂಟ್ ಶಿಕ್ಷೆ ನೆನಪಿದೆಯಾ? ಚೆಂದದ ವಿಡಿಯೋ ವೈರಲ್
35
ನೋವು ತಡೆದುಕೊಳ್ಳುವ ಶಕ್ತಿ
Image Credit : Colors Kannada

ನೋವು ತಡೆದುಕೊಳ್ಳುವ ಶಕ್ತಿ

ತಂದೆ-ತಾಯಿಗಿಂತ ಮುಂಚೆ ಅಥವಾ ಅವರಿಗಿಂತ ಮೊದಲೇ ಮಕ್ಕಳು ಸತ್ತರೇ ಪೋಷಕರಿಗೆ ನೋವು ಆಗಲ್ಲವಾ ಎಂದು ನನಗೆ ಕೇಳುತ್ತಾಳೆ ಅಂತ ಮಲ್ಲಮ್ಮ ಹೇಳುತ್ತಾರೆ. ಮಕ್ಕಳ ಮುಂದೆ ಪೋಷಕರು ನಿಧನರಾದ್ರೆ ಅವರಿಗೆ ತಡೆದುಕೊಳ್ಳುವ ಶಕ್ತಿ ಇರುತ್ತೆ ಎಂದು ರಕ್ಷಿತಾ ಹೇಳುತ್ತಾರೆ. ಇಲ್ಲಿ ಸಾಯುವ ಮಾತುಗಳನ್ನಾಡಬಾರದು ಎಂದು ಮೇಜು ಕುಟ್ಟಿ ಮಲ್ಲಮ್ಮ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಇಲ್ಲಿ ಆಟ ಆಡಲು ಬಂದಿದ್ದೇವೆ. ಅಂತಹ ಮಾತುಗಳನ್ನು ಹೇಳಬಾರದು ಎಂದು ಮಲ್ಲಮ್ಮ ಹೇಳುತ್ತಾರೆ.

45
ಯಾರು ಈ ರಕ್ಷಿತಾ ಶೆಟ್ಟಿ?
Image Credit : Colors Kannada FB

ಯಾರು ಈ ರಕ್ಷಿತಾ ಶೆಟ್ಟಿ?

ತುಳುನಾಡಿನ ಮೂಲದವರಾದ ರಕ್ಷಿತಾ ಶೆಟ್ಟಿ, ತಮ್ಮ ಯುಟ್ಯೂಬ್ ವಿಡಿಯೋಗಳಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿರುವ ಪ್ರತಿಭೆ. ಮುಂಬೈನಲ್ಲಿ ಹುಟ್ಟಿ ಬೆಳೆದಿರುವ ರಕ್ಷಿತಾ ಶೆಟ್ಟಿ ಪೋಷಕರು ಉಡುಪಿಯವರು. ಹಾಗಾಗಿ ಮನೆಯಲ್ಲಿ ತುಳು ಮಾತನಾಡುತ್ತಾರೆ.

ಇದನ್ನೂ ಓದಿ: ಬಿಗ್‌ಬಾಸ್ ಮನೆ ಪುಟ್ಟಿಯ ಪ್ರಯತ್ನಕ್ಕೆ ವೀಕ್ಷಕರ ಮೆಚ್ಚುಗೆ; ಸುದೀಪ್ ಪ್ರಶ್ನೆಗೆ ರಕ್ಷಿತಾ ಶೆಟ್ಟಿ ತಬ್ಬಿಬ್ಬು

55
ನಾಮಿನೇಟ್‌ನಿಂದ ಸೇವ್ ಆಗಿರುವ ರಕ್ಷಿತಾ ಶೆಟ್ಟಿ
Image Credit : Colors Kannada

ನಾಮಿನೇಟ್‌ನಿಂದ ಸೇವ್ ಆಗಿರುವ ರಕ್ಷಿತಾ ಶೆಟ್ಟಿ

ಬಿಗ್‌ಬಾಸ್‌ಗೆ ಬಂದ ಮೊದಲ ದಿನವೇ ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿ ಸೀಕ್ರೆಟ್ ರೂಮ್ ಸೇರಿದ್ದರು. ಎರಡನೇ ವಾರ ರಕ್ಷಿತಾ ಶೆಟ್ಟಿ ಬಿಗ್‌ಬಾಸ್‌ಗೆ ಕಮ್ ಬ್ಯಾಕ್ ಮಾಡಿದ್ದರು. ಈ ವಾರ ನಾಮಿನೇಟ್ ಆಗಿದ್ದ ರಕ್ಷಿತಾ ಶೆಟ್ಟಿ ಶನಿವಾರದ ಸಂಚಿಕೆಯಲ್ಲಿಯೇ ಸೇವ್ ಆಗಿದ್ದಾರೆ.

ಇದನ್ನೂ ಓದಿ: ಬಿಗ್‌ಬಾಸ್ 7ರಲ್ಲಿ ದೀಪಿಕಾ ದಾಸ್ ತುಟಿಗೆ ಕಿಸ್ ಕೊಟ್ಟಿದ್ಯಾರು? ಅಚ್ಚರಿಯ ದೃಶ್ಯ ವೈರಲ್!

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ರಿಯಾಲಿಟಿ ಶೋ
ಮಲ್ಲಮ್ಮ
ಕಲರ್ಸ್ ಕನ್ನಡ
ಕಿಚ್ಚ ಸುದೀಪ್

Latest Videos
Recommended Stories
Recommended image1
ಯಾರ ದೃಷ್ಟಿ ಬಿತ್ತೋ ಏನೋ! 2.5 ವರ್ಷದ ಮುದ್ದಾದ ಮಗ, ಪತ್ನಿ ಬಿಟ್ಟು ಹೊರಟ ಕನ್ನಡ Social Media Influencer
Recommended image2
ಕಾವ್ಯಾ ಗೌಡ ಮನೆಯ ರಹಸ್ಯ: ಸಿಸಿಟಿವಿ ಹೇಳಿದ ಸತ್ಯ ಏನು? ಕ್ರೂರ ಮುಖಗಳು ಅಂತ ಹೇಳಿದ್ಯಾರಿಗೆ?
Recommended image3
ಹುಟ್ಟಿದ ದಿನದ ಹಚ್ಚೆ ನೋಡಿ ಲವ್​ನಲ್ಲಿ ಮೋಸ ಹೋದೆ, ನೀವು ಕೇರ್​ಫುಲ್​ ಆಗಿರಿ ಎಂದ ಉರ್ಫಿ ಜಾವೇದ್​
Related Stories
Recommended image1
ಅಸುರನ ಹುಚ್ಚು ಬಿಡಿಸಿದ ಬಿಗ್‌ ಮನೆಯ ಪುಟ್ಟಿ: ಯಾವಳ್ಯಾವಳು ನಾಯಿ ಅಂದಿದ್ದು? ಅಶ್ವಿನಿ ಗೌಡ ಕೆಂಡ
Recommended image2
ದಿವ್ಯಾ ಉರುಡುಗ-ಅರವಿಂದ್ ಕೆಪಿಗೆ ಬಿಗ್‌ಬಾಸ್ ನೀಡಿದ ಕ್ಯೂಟ್ ಶಿಕ್ಷೆ ನೆನಪಿದೆಯಾ? ಚೆಂದದ ವಿಡಿಯೋ ವೈರಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved